AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bihar: ಮೂರು ಅಂತಸ್ತಿನ ಕಟ್ಟಡದಲ್ಲಿ ಭಾರಿ ಸ್ಪೋಟ; 7 ಜನರ ದುರ್ಮರಣ

ಸ್ಫೋಟಕ್ಕೆ ಪ್ರಾಥಮಿಕ ಕಾರಣವೆಂದರೆ ಗನ್‌ಪೌಡರ್, ಅಕ್ರಮ ಪಟಾಕಿಗಳು ಮತ್ತು ಕಟ್ಟಡದಲ್ಲಿ ಸಂಗ್ರಹಿಸಲಾದ ದೇಶ ನಿರ್ಮಿತ ಬಾಂಬ್‌ಗಳು ಎಂದು ಭಾಗಲ್ಪುರ ರೇಂಜ್ ಡಿಐಜಿ ಸುಜಿತ್ ಕುಮಾರ್ ಹೇಳಿದ್ದಾರೆ.

Bihar: ಮೂರು ಅಂತಸ್ತಿನ ಕಟ್ಟಡದಲ್ಲಿ ಭಾರಿ ಸ್ಪೋಟ; 7 ಜನರ ದುರ್ಮರಣ
ಸ್ಪೋಟದಿಂದ ಕುಸಿದ ಮೂರು ಅಂತಸ್ತಿನ ಕಟ್ಟಡ
TV9 Web
| Updated By: ganapathi bhat|

Updated on:Mar 04, 2022 | 10:00 AM

Share

ಬಿಹಾರ: ಇಲ್ಲಿನ ಭಾಗಲ್ಪುರ್​ದಲ್ಲಿ ಗುರುವಾರ ರಾತ್ರಿ ಮೂರು ಅಂತಸ್ತಿನ ಕಟ್ಟಡದಲ್ಲಿ ಭಾರಿ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ 7 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಸ್ಥಳೀಯ ಪೊಲೀಸ್ ಠಾಣೆಯಿಂದ 100 ಮೀಟರ್ ದೂರದಲ್ಲಿರುವ ಜಿಲ್ಲೆಯ ಕಜ್ವಾಲಿಚಕ್ ಪ್ರದೇಶದ ಅನಾಥಾಶ್ರಮದ ಪಕ್ಕದಲ್ಲಿ ಈ ಘಟನೆ ನಡೆದಿದೆ. ಪೊಲೀಸರು ಮತ್ತು ತುರ್ತು ಸೇವೆಗಳು ತಕ್ಷಣವೇ ಘಟನಾ ಸ್ಥಳಕ್ಕೆ ಧಾವಿಸಿ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಯನ್ನು ಪ್ರಾರಂಭಿಸಿವೆ.

ಕುಸಿದ ಕಟ್ಟಡದ ಅವಶೇಷಗಳಡಿ ಸುಮಾರು 10 ರಿಂದ 15 ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಗಾಯಾಳುಗಳನ್ನು ಮಾಯಗಂಜ್‌ನ ಜೆಎಲ್‌ಎನ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಅಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ನಾಲ್ಕು ಜನರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಉಳಿದವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಬಲ ಸ್ಫೋಟದಲ್ಲಿ ಅಕ್ಕಪಕ್ಕದ ಎರಡರಿಂದ ಮೂರು ಮನೆಗಳಿಗೂ ಹಾನಿಯಾಗಿದೆ.

ಮೊಹಮ್ಮದ್ ಯೂಸುಫ್ ಎನ್ನುವ ನೆರೆಹೊರೆಯವರ ಪ್ರಕಾರ, ನಾಶವಾದ ಕಟ್ಟಡದ ನಿವಾಸಿಗಳು ಪಟಾಕಿ ತಯಾರಿಕೆಯಲ್ಲಿ ತೊಡಗಿದ್ದರು ಎಂದು ಹೇಳಿದ್ದಾರೆ. ಸ್ಫೋಟಕ್ಕೆ ಪ್ರಾಥಮಿಕ ಕಾರಣವೆಂದರೆ ಗನ್‌ಪೌಡರ್, ಅಕ್ರಮ ಪಟಾಕಿಗಳು ಮತ್ತು ಕಟ್ಟಡದಲ್ಲಿ ಸಂಗ್ರಹಿಸಲಾದ ದೇಶ ನಿರ್ಮಿತ ಬಾಂಬ್‌ಗಳು ಎಂದು ಭಾಗಲ್ಪುರ ರೇಂಜ್ ಡಿಐಜಿ ಸುಜಿತ್ ಕುಮಾರ್ ಹೇಳಿದ್ದಾರೆ. ಸದ್ಯ ತನಿಖೆಯನ್ನು ಪ್ರಾರಂಭಿಸಲಾಗಿದ್ದು, ಫೋರೆನ್ಸಿಕ್ಸ್ ತಂಡವು ಘಟನಾ ಸ್ಥಳವನ್ನು ಪರೀಕ್ಷಿಸಿದ ನಂತರ ಹೆಚ್ಚಿನ ವಿವರಗಳನ್ನು ಹಂಚಿಕೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ:

Ukraine Crisis: ಕೀವ್​ನಿಂದ ಆಗಮಿಸುತ್ತಿದ್ದ ಭಾರತದ ವಿದ್ಯಾರ್ಥಿಗೆ ಗುಂಡು; ಆಸ್ಪತ್ರೆಗೆ ದಾಖಲು: ವಿಕೆ ಸಿಂಗ್ ಮಾಹಿತಿ

Published On - 10:00 am, Fri, 4 March 22

ರಾಹುಲ್ ಗಾಂಧಿಯನ್ನು ವಶಕ್ಕೆ ಪಡೆದ ಪೊಲೀಸರು
ರಾಹುಲ್ ಗಾಂಧಿಯನ್ನು ವಶಕ್ಕೆ ಪಡೆದ ಪೊಲೀಸರು
ಬಿಜೆಪಿ ಸಂಸದರಿಗೆ ಖಾಲಿ ಡಬ್ಬಗಳಂತೆ ಸದ್ದು ಮಾಡೋದು ಮಾತ್ರ ಗೊತ್ತು: ಡಿಕೆಎಸ್
ಬಿಜೆಪಿ ಸಂಸದರಿಗೆ ಖಾಲಿ ಡಬ್ಬಗಳಂತೆ ಸದ್ದು ಮಾಡೋದು ಮಾತ್ರ ಗೊತ್ತು: ಡಿಕೆಎಸ್
ಧರ್ಮಸ್ಥಳ ಪ್ರಕರಣದ ಹಿಂದೆ ಮತಾಂತರ ಮಾಫಿಯಾ, ನಗರ ನಕ್ಸಲರು: ಸಿಟಿ ರವಿ ಆರೋಪ
ಧರ್ಮಸ್ಥಳ ಪ್ರಕರಣದ ಹಿಂದೆ ಮತಾಂತರ ಮಾಫಿಯಾ, ನಗರ ನಕ್ಸಲರು: ಸಿಟಿ ರವಿ ಆರೋಪ
ಕೊಪ್ಪಳದಲ್ಲಿ ಯೂರಿಯಾಗಾಗಿ ಒಂದು ಕಿಮೀ ವರೆಗೂ ಸರತಿ ಸಾಲಿನಲ್ಲಿ ನಿಂತ ರೈತರು‌
ಕೊಪ್ಪಳದಲ್ಲಿ ಯೂರಿಯಾಗಾಗಿ ಒಂದು ಕಿಮೀ ವರೆಗೂ ಸರತಿ ಸಾಲಿನಲ್ಲಿ ನಿಂತ ರೈತರು‌
VIDEO: ಬರೋಬ್ಬರಿ 109 ಮೀಟರ್ ಸಿಕ್ಸ್​ ಸಿಡಿಸಿದ ಟಿಮ್ ಡೇವಿಡ್
VIDEO: ಬರೋಬ್ಬರಿ 109 ಮೀಟರ್ ಸಿಕ್ಸ್​ ಸಿಡಿಸಿದ ಟಿಮ್ ಡೇವಿಡ್
Assembly Session Live: ವಿಧಾನಸಭೆ ಅಧಿವೇಶನ ನೇರಪ್ರಸಾರ
Assembly Session Live: ವಿಧಾನಸಭೆ ಅಧಿವೇಶನ ನೇರಪ್ರಸಾರ
ಭೀಮ ಹೆಸರಿಗೆ ತಕ್ಕಂತೆ ಗಜಪಡೆಯಲ್ಲಿ ಎಲ್ಲರಿಗಿಂತ ಹೆಚ್ಚು ತೂಕದ ಆನೆ
ಭೀಮ ಹೆಸರಿಗೆ ತಕ್ಕಂತೆ ಗಜಪಡೆಯಲ್ಲಿ ಎಲ್ಲರಿಗಿಂತ ಹೆಚ್ಚು ತೂಕದ ಆನೆ
‘ನನ್ನ ಅಮೂಲ್ಯ 8 ವರ್ಷ ವ್ಯರ್ಥವಾಗಿದೆ’; ಧ್ರುವ ಬಗ್ಗೆ ರಾಘವೇಂದ್ರ ಹೊಸ ಆರೋಪ
‘ನನ್ನ ಅಮೂಲ್ಯ 8 ವರ್ಷ ವ್ಯರ್ಥವಾಗಿದೆ’; ಧ್ರುವ ಬಗ್ಗೆ ರಾಘವೇಂದ್ರ ಹೊಸ ಆರೋಪ
ಕೊನೆಯ ಓವರ್​ನಲ್ಲಿ 7 ರನ್​ಗಳ​ ಗುರಿ ನಿಯಂತ್ರಿಸಿ ಪಂದ್ಯ ಗೆಲ್ಲಿಸಿದ ಆಶಿಶ್
ಕೊನೆಯ ಓವರ್​ನಲ್ಲಿ 7 ರನ್​ಗಳ​ ಗುರಿ ನಿಯಂತ್ರಿಸಿ ಪಂದ್ಯ ಗೆಲ್ಲಿಸಿದ ಆಶಿಶ್
ಸೆಲ್ಫೀಗೆ ಮುಂದಾದವನ ಅಟ್ಟಾಡಿಸಿ ಮೆಟ್ಟಿದ ಕಾಡಾನೆ, ಆಮೇಲೇನಾಯ್ತು ನೋಡಿ
ಸೆಲ್ಫೀಗೆ ಮುಂದಾದವನ ಅಟ್ಟಾಡಿಸಿ ಮೆಟ್ಟಿದ ಕಾಡಾನೆ, ಆಮೇಲೇನಾಯ್ತು ನೋಡಿ