AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರದ ಕೇಂದ್ರ ಕಾರಾಗೃಹದಲ್ಲಿ ಭಾರಿ ಸ್ಫೋಟ

ಅಮರಾವತಿ ಜೈಲಿನ ಬ್ಯಾರಕ್ ಸಂಖ್ಯೆ ಆರು ಮತ್ತು ಏಳರ ಹೊರಗೆ ಸ್ಫೋಟಗಳು ಸಂಭವಿಸಿವೆ. ಘಟನೆಯ ಮಾಹಿತಿ ತಿಳಿದ ಕೂಡಲೇ ಜೈಲು ಅಧಿಕಾರಿ ಹಾಗೂ ಅಮರಾವತಿ ಪೊಲೀಸ್ ಕಮಿಷನರ್, ಡಿಸಿಪಿ ಸೇರಿದಂತೆ ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ಆಗಮಿಸಿದೆ.

ಮಹಾರಾಷ್ಟ್ರದ ಕೇಂದ್ರ ಕಾರಾಗೃಹದಲ್ಲಿ ಭಾರಿ ಸ್ಫೋಟ
ಸ್ಫೋಟ
Follow us
ನಯನಾ ರಾಜೀವ್
|

Updated on: Jul 07, 2024 | 9:19 AM

ಮಹಾರಾಷ್ಟ್ರದ ಅಮರಾವತಿ ಕೇಂದ್ರ ಕಾರಾಗೃಹದಲ್ಲಿ ಭಾರಿ ಸ್ಫೋಟ(Blast)ಗಳು ಸಂಭವಿಸಿವೆ. ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿರುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಅಪಘಾತದ ಬಗ್ಗೆ ಮಾಹಿತಿ ಲಭಿಸಿದ ಕೂಡಲೇ ಅಮರಾವತಿ ಸಿಪಿ-ಡಿಸಿಪಿ ಹಾಗೂ ಬಾಂಬ್ ನಿಷ್ಕ್ರಿಯ ದಳದ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ತನಿಖೆ ಆರಂಭಿಸಿದ್ದಾರೆ.

ಆರು ಮತ್ತು ಏಳನೇ ಸಂಖ್ಯೆಯ ಬ್ಯಾರಕ್‌ನ ಹೊರಗೆ ಕಂಟ್ರಿ ಮೇಡ್ ಬಾಂಬ್​ ಸ್ಫೋಟ ಸಂಭವಿಸಿದೆ. ಘಟನೆಯ ನಂತರ ಜೈಲು ಆವರಣದಲ್ಲಿ ಸಂಚಲನ ಉಂಟಾಯಿತು. ಘಟನೆಯ ಬಗ್ಗೆ ಮಾಹಿತಿ ಬಂದ ಕೂಡಲೇ ಜೈಲು ಅಧಿಕಾರಿಗಳು, ಅಮರಾವತಿ ಪೊಲೀಸ್ ಕಮಿಷನರ್ ಮತ್ತು ಡಿಸಿಪಿ ಸೇರಿದಂತೆ ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ಧಾವಿಸಿತು.

ಘಟನೆಯ ತನಿಖೆಗೆ ತಕ್ಷಣವೇ ವಿಧಿವಿಜ್ಞಾನ ತಂಡವನ್ನು ಕರೆಯಲಾಯಿತು. ಪಕ್ಕದ ಹೆದ್ದಾರಿಯ ಮೋರಿಯಿಂದ ಚೆಂಡಿನ ಮೂಲಕ ಬಾಂಬ್ ಎಸೆದಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಎಸೆದ ವ್ಯಕ್ತಿ ಯಾರು ಮತ್ತು ಅದರ ಹಿಂದಿನ ಕಾರಣವೇನು? ಸದ್ಯ ಅದರ ತನಿಖೆ ನಡೆಯುತ್ತಿದೆ.

ಮತ್ತಷ್ಟು ಓದಿ: Bihar Madrasa Blast: ಬಿಹಾರದ ಮದರಸಾದಲ್ಲಿ ಬಾಂಬ್ ಸ್ಫೋಟ, ಮೌಲ್ವಿ ಸೇರಿ ಇಬ್ಬರಿಗೆ ಗಾಯ

ಈ ಹಿಂದೆ ಬಾಲ್‌ಗಳಲ್ಲಿ ಗಾಂಜಾ ಪತ್ತೆಯಾಗಿತ್ತು ಎಂದು ಪೊಲೀಸ್ ಆಯುಕ್ತ ನವೀನಚಂದ್ರ ರೆಡ್ಡಿ ತಿಳಿಸಿದ್ದಾರೆ. ಅದೇ ರೀತಿ ಜಿಲ್ಲಾ ಕಾರಾಗೃಹದಲ್ಲಿ ಪ್ಲಾಸ್ಟಿಕ್ ಬಾಲ್ ಆಕಾರದ ಬಾಂಬ್‌ನಂಥ ವಸ್ತು ಪತ್ತೆಯಾದ ಸುದ್ದಿ ಇದೆ. ಪ್ಲಾಸ್ಟಿಕ್ ಚೆಂಡಿನಲ್ಲಿದ್ದ ಎರಡು ಪಟಾಕಿಯಂತಹ ವಸ್ತುಗಳನ್ನು ಜೈಲಿನೊಳಗೆ ಎಸೆಯಲಾಗಿದೆ ಎಂದೂ ಅವರು ಹೇಳಿದ್ದಾರೆ.

ಸ್ಫೋಟಕಕ್ಕೆ ಏನನ್ನು ಬಳಸಲಾಗಿದೆ ಎಂಬುದನ್ನು ಕಂಡುಹಿಡಿಯಲಾಗುತ್ತಿದೆ, ವಿಧಿವಿಜ್ಞಾನ ತಂಡವೂ ತನಿಖೆ ನಡೆಸುತ್ತಿದೆ. ಜೂನ್ 2 ರಂದು ಮಹಾರಾಷ್ಟ್ರದ ಕೊಲ್ಹಾಪುರ ಕೇಂದ್ರ ಕಾರಾಗೃಹದ ಕೈದಿಗಳು ದೊಡ್ಡ ಅಪರಾಧ ಎಸಗಿದ್ದರು. 1992-93ರ ಮುಂಬೈ ಬಾಂಬ್ ಸ್ಫೋಟದ ಆರೋಪಿ ಮೊಹಮ್ಮದ್ ಅಲಿ ಖಾನ್​ನನ್ನು ಜೈಲಿನಲ್ಲಿದ್ದ ಐದು ಕೊಲೆ ಆರೋಪಿಗಳು ಹೊಡೆದು ಕೊಂದಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಭಾರಿ ಮಳೆಗೆ ಜಮಖಂಡಿ ಬಸ್ ನಿಲ್ದಾಣದೊಳಗೆ ನುಗ್ಗಿದ ನೀರು
ಭಾರಿ ಮಳೆಗೆ ಜಮಖಂಡಿ ಬಸ್ ನಿಲ್ದಾಣದೊಳಗೆ ನುಗ್ಗಿದ ನೀರು
ಶಿವಣ್ಣ, ದರ್ಶನ್ ಅವರನ್ನು ನಿಂದಿಸಿದ್ದು ನಿಜವೇ? ಮನು ಹೇಳಿದ್ದೇನು?
ಶಿವಣ್ಣ, ದರ್ಶನ್ ಅವರನ್ನು ನಿಂದಿಸಿದ್ದು ನಿಜವೇ? ಮನು ಹೇಳಿದ್ದೇನು?
ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್