ಮಹಾರಾಷ್ಟ್ರದ ಕೇಂದ್ರ ಕಾರಾಗೃಹದಲ್ಲಿ ಭಾರಿ ಸ್ಫೋಟ

ಅಮರಾವತಿ ಜೈಲಿನ ಬ್ಯಾರಕ್ ಸಂಖ್ಯೆ ಆರು ಮತ್ತು ಏಳರ ಹೊರಗೆ ಸ್ಫೋಟಗಳು ಸಂಭವಿಸಿವೆ. ಘಟನೆಯ ಮಾಹಿತಿ ತಿಳಿದ ಕೂಡಲೇ ಜೈಲು ಅಧಿಕಾರಿ ಹಾಗೂ ಅಮರಾವತಿ ಪೊಲೀಸ್ ಕಮಿಷನರ್, ಡಿಸಿಪಿ ಸೇರಿದಂತೆ ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ಆಗಮಿಸಿದೆ.

ಮಹಾರಾಷ್ಟ್ರದ ಕೇಂದ್ರ ಕಾರಾಗೃಹದಲ್ಲಿ ಭಾರಿ ಸ್ಫೋಟ
ಸ್ಫೋಟ
Follow us
|

Updated on: Jul 07, 2024 | 9:19 AM

ಮಹಾರಾಷ್ಟ್ರದ ಅಮರಾವತಿ ಕೇಂದ್ರ ಕಾರಾಗೃಹದಲ್ಲಿ ಭಾರಿ ಸ್ಫೋಟ(Blast)ಗಳು ಸಂಭವಿಸಿವೆ. ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿರುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಅಪಘಾತದ ಬಗ್ಗೆ ಮಾಹಿತಿ ಲಭಿಸಿದ ಕೂಡಲೇ ಅಮರಾವತಿ ಸಿಪಿ-ಡಿಸಿಪಿ ಹಾಗೂ ಬಾಂಬ್ ನಿಷ್ಕ್ರಿಯ ದಳದ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ತನಿಖೆ ಆರಂಭಿಸಿದ್ದಾರೆ.

ಆರು ಮತ್ತು ಏಳನೇ ಸಂಖ್ಯೆಯ ಬ್ಯಾರಕ್‌ನ ಹೊರಗೆ ಕಂಟ್ರಿ ಮೇಡ್ ಬಾಂಬ್​ ಸ್ಫೋಟ ಸಂಭವಿಸಿದೆ. ಘಟನೆಯ ನಂತರ ಜೈಲು ಆವರಣದಲ್ಲಿ ಸಂಚಲನ ಉಂಟಾಯಿತು. ಘಟನೆಯ ಬಗ್ಗೆ ಮಾಹಿತಿ ಬಂದ ಕೂಡಲೇ ಜೈಲು ಅಧಿಕಾರಿಗಳು, ಅಮರಾವತಿ ಪೊಲೀಸ್ ಕಮಿಷನರ್ ಮತ್ತು ಡಿಸಿಪಿ ಸೇರಿದಂತೆ ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ಧಾವಿಸಿತು.

ಘಟನೆಯ ತನಿಖೆಗೆ ತಕ್ಷಣವೇ ವಿಧಿವಿಜ್ಞಾನ ತಂಡವನ್ನು ಕರೆಯಲಾಯಿತು. ಪಕ್ಕದ ಹೆದ್ದಾರಿಯ ಮೋರಿಯಿಂದ ಚೆಂಡಿನ ಮೂಲಕ ಬಾಂಬ್ ಎಸೆದಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಎಸೆದ ವ್ಯಕ್ತಿ ಯಾರು ಮತ್ತು ಅದರ ಹಿಂದಿನ ಕಾರಣವೇನು? ಸದ್ಯ ಅದರ ತನಿಖೆ ನಡೆಯುತ್ತಿದೆ.

ಮತ್ತಷ್ಟು ಓದಿ: Bihar Madrasa Blast: ಬಿಹಾರದ ಮದರಸಾದಲ್ಲಿ ಬಾಂಬ್ ಸ್ಫೋಟ, ಮೌಲ್ವಿ ಸೇರಿ ಇಬ್ಬರಿಗೆ ಗಾಯ

ಈ ಹಿಂದೆ ಬಾಲ್‌ಗಳಲ್ಲಿ ಗಾಂಜಾ ಪತ್ತೆಯಾಗಿತ್ತು ಎಂದು ಪೊಲೀಸ್ ಆಯುಕ್ತ ನವೀನಚಂದ್ರ ರೆಡ್ಡಿ ತಿಳಿಸಿದ್ದಾರೆ. ಅದೇ ರೀತಿ ಜಿಲ್ಲಾ ಕಾರಾಗೃಹದಲ್ಲಿ ಪ್ಲಾಸ್ಟಿಕ್ ಬಾಲ್ ಆಕಾರದ ಬಾಂಬ್‌ನಂಥ ವಸ್ತು ಪತ್ತೆಯಾದ ಸುದ್ದಿ ಇದೆ. ಪ್ಲಾಸ್ಟಿಕ್ ಚೆಂಡಿನಲ್ಲಿದ್ದ ಎರಡು ಪಟಾಕಿಯಂತಹ ವಸ್ತುಗಳನ್ನು ಜೈಲಿನೊಳಗೆ ಎಸೆಯಲಾಗಿದೆ ಎಂದೂ ಅವರು ಹೇಳಿದ್ದಾರೆ.

ಸ್ಫೋಟಕಕ್ಕೆ ಏನನ್ನು ಬಳಸಲಾಗಿದೆ ಎಂಬುದನ್ನು ಕಂಡುಹಿಡಿಯಲಾಗುತ್ತಿದೆ, ವಿಧಿವಿಜ್ಞಾನ ತಂಡವೂ ತನಿಖೆ ನಡೆಸುತ್ತಿದೆ. ಜೂನ್ 2 ರಂದು ಮಹಾರಾಷ್ಟ್ರದ ಕೊಲ್ಹಾಪುರ ಕೇಂದ್ರ ಕಾರಾಗೃಹದ ಕೈದಿಗಳು ದೊಡ್ಡ ಅಪರಾಧ ಎಸಗಿದ್ದರು. 1992-93ರ ಮುಂಬೈ ಬಾಂಬ್ ಸ್ಫೋಟದ ಆರೋಪಿ ಮೊಹಮ್ಮದ್ ಅಲಿ ಖಾನ್​ನನ್ನು ಜೈಲಿನಲ್ಲಿದ್ದ ಐದು ಕೊಲೆ ಆರೋಪಿಗಳು ಹೊಡೆದು ಕೊಂದಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ