AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರದ ಕೇಂದ್ರ ಕಾರಾಗೃಹದಲ್ಲಿ ಭಾರಿ ಸ್ಫೋಟ

ಅಮರಾವತಿ ಜೈಲಿನ ಬ್ಯಾರಕ್ ಸಂಖ್ಯೆ ಆರು ಮತ್ತು ಏಳರ ಹೊರಗೆ ಸ್ಫೋಟಗಳು ಸಂಭವಿಸಿವೆ. ಘಟನೆಯ ಮಾಹಿತಿ ತಿಳಿದ ಕೂಡಲೇ ಜೈಲು ಅಧಿಕಾರಿ ಹಾಗೂ ಅಮರಾವತಿ ಪೊಲೀಸ್ ಕಮಿಷನರ್, ಡಿಸಿಪಿ ಸೇರಿದಂತೆ ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ಆಗಮಿಸಿದೆ.

ಮಹಾರಾಷ್ಟ್ರದ ಕೇಂದ್ರ ಕಾರಾಗೃಹದಲ್ಲಿ ಭಾರಿ ಸ್ಫೋಟ
ಸ್ಫೋಟ
ನಯನಾ ರಾಜೀವ್
|

Updated on: Jul 07, 2024 | 9:19 AM

Share

ಮಹಾರಾಷ್ಟ್ರದ ಅಮರಾವತಿ ಕೇಂದ್ರ ಕಾರಾಗೃಹದಲ್ಲಿ ಭಾರಿ ಸ್ಫೋಟ(Blast)ಗಳು ಸಂಭವಿಸಿವೆ. ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿರುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಅಪಘಾತದ ಬಗ್ಗೆ ಮಾಹಿತಿ ಲಭಿಸಿದ ಕೂಡಲೇ ಅಮರಾವತಿ ಸಿಪಿ-ಡಿಸಿಪಿ ಹಾಗೂ ಬಾಂಬ್ ನಿಷ್ಕ್ರಿಯ ದಳದ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ತನಿಖೆ ಆರಂಭಿಸಿದ್ದಾರೆ.

ಆರು ಮತ್ತು ಏಳನೇ ಸಂಖ್ಯೆಯ ಬ್ಯಾರಕ್‌ನ ಹೊರಗೆ ಕಂಟ್ರಿ ಮೇಡ್ ಬಾಂಬ್​ ಸ್ಫೋಟ ಸಂಭವಿಸಿದೆ. ಘಟನೆಯ ನಂತರ ಜೈಲು ಆವರಣದಲ್ಲಿ ಸಂಚಲನ ಉಂಟಾಯಿತು. ಘಟನೆಯ ಬಗ್ಗೆ ಮಾಹಿತಿ ಬಂದ ಕೂಡಲೇ ಜೈಲು ಅಧಿಕಾರಿಗಳು, ಅಮರಾವತಿ ಪೊಲೀಸ್ ಕಮಿಷನರ್ ಮತ್ತು ಡಿಸಿಪಿ ಸೇರಿದಂತೆ ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ಧಾವಿಸಿತು.

ಘಟನೆಯ ತನಿಖೆಗೆ ತಕ್ಷಣವೇ ವಿಧಿವಿಜ್ಞಾನ ತಂಡವನ್ನು ಕರೆಯಲಾಯಿತು. ಪಕ್ಕದ ಹೆದ್ದಾರಿಯ ಮೋರಿಯಿಂದ ಚೆಂಡಿನ ಮೂಲಕ ಬಾಂಬ್ ಎಸೆದಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಎಸೆದ ವ್ಯಕ್ತಿ ಯಾರು ಮತ್ತು ಅದರ ಹಿಂದಿನ ಕಾರಣವೇನು? ಸದ್ಯ ಅದರ ತನಿಖೆ ನಡೆಯುತ್ತಿದೆ.

ಮತ್ತಷ್ಟು ಓದಿ: Bihar Madrasa Blast: ಬಿಹಾರದ ಮದರಸಾದಲ್ಲಿ ಬಾಂಬ್ ಸ್ಫೋಟ, ಮೌಲ್ವಿ ಸೇರಿ ಇಬ್ಬರಿಗೆ ಗಾಯ

ಈ ಹಿಂದೆ ಬಾಲ್‌ಗಳಲ್ಲಿ ಗಾಂಜಾ ಪತ್ತೆಯಾಗಿತ್ತು ಎಂದು ಪೊಲೀಸ್ ಆಯುಕ್ತ ನವೀನಚಂದ್ರ ರೆಡ್ಡಿ ತಿಳಿಸಿದ್ದಾರೆ. ಅದೇ ರೀತಿ ಜಿಲ್ಲಾ ಕಾರಾಗೃಹದಲ್ಲಿ ಪ್ಲಾಸ್ಟಿಕ್ ಬಾಲ್ ಆಕಾರದ ಬಾಂಬ್‌ನಂಥ ವಸ್ತು ಪತ್ತೆಯಾದ ಸುದ್ದಿ ಇದೆ. ಪ್ಲಾಸ್ಟಿಕ್ ಚೆಂಡಿನಲ್ಲಿದ್ದ ಎರಡು ಪಟಾಕಿಯಂತಹ ವಸ್ತುಗಳನ್ನು ಜೈಲಿನೊಳಗೆ ಎಸೆಯಲಾಗಿದೆ ಎಂದೂ ಅವರು ಹೇಳಿದ್ದಾರೆ.

ಸ್ಫೋಟಕಕ್ಕೆ ಏನನ್ನು ಬಳಸಲಾಗಿದೆ ಎಂಬುದನ್ನು ಕಂಡುಹಿಡಿಯಲಾಗುತ್ತಿದೆ, ವಿಧಿವಿಜ್ಞಾನ ತಂಡವೂ ತನಿಖೆ ನಡೆಸುತ್ತಿದೆ. ಜೂನ್ 2 ರಂದು ಮಹಾರಾಷ್ಟ್ರದ ಕೊಲ್ಹಾಪುರ ಕೇಂದ್ರ ಕಾರಾಗೃಹದ ಕೈದಿಗಳು ದೊಡ್ಡ ಅಪರಾಧ ಎಸಗಿದ್ದರು. 1992-93ರ ಮುಂಬೈ ಬಾಂಬ್ ಸ್ಫೋಟದ ಆರೋಪಿ ಮೊಹಮ್ಮದ್ ಅಲಿ ಖಾನ್​ನನ್ನು ಜೈಲಿನಲ್ಲಿದ್ದ ಐದು ಕೊಲೆ ಆರೋಪಿಗಳು ಹೊಡೆದು ಕೊಂದಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್