AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Foxlink: ಆಂಧ್ರ ಪ್ರದೇಶ; ಆ್ಯಪಲ್​ಗೆ ಉತ್ಪನ್ನ ಪೂರೈಸುವ ಫಾಕ್ಸ್​ಲಿಂಕ್ ಘಟಕದಲ್ಲಿ ಅಗ್ನಿ ಅನಾಹುತ

ಅಗ್ನಿ ಅವಘಡದಿಂದಾಗಿ ಸುಮಾರು 100 ಕೋಟಿ ರೂ ನಷ್ಟವಾಗಿದೆ ಎಂದು ಕಂಪನಿಯ ಆಡಳಿತ ಮಂಡಳಿ ಅಂದಾಜಿಸಿದೆ. ಈ ವಿಚಾರವಾಗಿ ಆ್ಯಪಲ್ ಕಂಪನಿ ತಕ್ಷಣ ಪ್ರತಿಕ್ರಿಯೆಗೆ ಲಭ್ಯವಾಗಿಲ್ಲ ಎಂದು ‘ರಾಯಿಟರ್ಸ್’ ಸುದ್ದಿಸಂಸ್ಥೆ ವರದಿ ಮಾಡಿದೆ.

Foxlink: ಆಂಧ್ರ ಪ್ರದೇಶ; ಆ್ಯಪಲ್​ಗೆ ಉತ್ಪನ್ನ ಪೂರೈಸುವ ಫಾಕ್ಸ್​ಲಿಂಕ್ ಘಟಕದಲ್ಲಿ ಅಗ್ನಿ ಅನಾಹುತ
ಬೆಂಕಿ-ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: Feb 27, 2023 | 10:05 PM

Share

ಹೈದರಾಬಾದ್: ಆ್ಯಪಲ್ (Apple) ಕಂಪನಿಗೆ ಉತ್ಪನ್ನಗಳನ್ನು ಪೂರೈಸುವ, ಆಂಧ್ರ ಪ್ರದೇಶದ ತಿರುಪತಿ ಬಳಿ ಇರುವ ಫಾಕ್ಸ್​ಲಿಂಕ್ (Foxlink) ಘಟಕದಲ್ಲಿ ಅಗ್ನಿ ಅನಾಹುತ ಸಂಭವಿಸಿದ್ದು, 400 ಮಂದಿ ಉದ್ಯೋಗಿಗಳನ್ನು ಸ್ಥಳಾಂತರ ಮಾಡಲಾಗಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಪರಿಣಾಮವಾಗಿ ಆ್ಯಪಲ್​ಗೆ ಪೂರೈಕೆ ಮಾಡಬೇಕಿರುವ ಪರಿಕರಗಳ ಉತ್ಪಾದನೆ ಸ್ಥಗಿತಗೊಳಿಸಲಾಗಿದೆ. ಫಾಕ್ಸ್​ಲಿಂಕ್ ಘಟಕವು ಆ್ಯಪಲ್ ಐಫೋನ್​ಗೆ ಕೇಬಲ್​​ಗಳನ್ನು ಪೂರೈಸುತ್ತದೆ. ಅಗ್ನಿ ಅವಘಡದಿಂದಾಗಿ ಘಟಕದ ಶೇ 50ರಷ್ಟು ಯಂತ್ರಗಳಿಗೆ ಹಾನಿಯಾಗಿದೆ. ಕಟ್ಟಡದ ಅರ್ಧ ಭಾಗ ಕುಸಿದಿದೆ ಎಂದು ತಿರುಪತಿ ಜಿಲ್ಲೆಯ ಅಗ್ನಿಶಾಮಕ ಸೇವೆಗಳ ಮತ್ತು ವಿಪತ್ತು ನಿರ್ವಹಣಾ ಪಡೆಯ ನೇತೃತ್ವ ವಹಿಸಿರುವ ಜೆ ರಮಣಯ್ಯ ತಿಳಿಸಿದ್ದಾರೆ.

ಅಗ್ನಿ ಅವಘಡದಿಂದಾಗಿ ಸುಮಾರು 100 ಕೋಟಿ ರೂ ನಷ್ಟವಾಗಿದೆ ಎಂದು ಕಂಪನಿಯ ಆಡಳಿತ ಮಂಡಳಿ ಅಂದಾಜಿಸಿದೆ. ಈ ವಿಚಾರವಾಗಿ ಆ್ಯಪಲ್ ಕಂಪನಿ ತಕ್ಷಣ ಪ್ರತಿಕ್ರಿಯೆಗೆ ಲಭ್ಯವಾಗಿಲ್ಲ ಎಂದು ‘ರಾಯಿಟರ್ಸ್’ ಸುದ್ದಿಸಂಸ್ಥೆ ವರದಿ ಮಾಡಿದೆ. ಅದೃಷ್ಟವಶಾತ್ ಪ್ರಣಾಪಾಯ ಸಂಭವಿಸಿಲ್ಲ.

ಆ್ಯಪಲ್ ಮತ್ತು ಗೂಗಲ್‌ನಂತಹ ಟೆಕ್ ದೈತ್ಯ ಕಂಪನಿಗಳು ಭಾರತದಲ್ಲಿ ತಮ್ಮ ಫೋನ್ ಉತ್ಪಾದನೆಯನ್ನು ವಿಸ್ತರಿಸಿವೆ. ಇದು ತಂತ್ರಜ್ಞಾನ ವಲಯದಲ್ಲಿ ಭಾರತದೊಂದಿಗಿನ ಸಂಬಂಧಗಳನ್ನು ಇನ್ನಷ್ಟು ಗಾಢವಾಗಿಸಲು ಅಮೆರಿಕದ ಕಂಪನಿಗಳಿಗೆ ಸ್ಫೂರ್ತಿ ನೀಡಿದೆ ಎಂದು ಅಮೆರಿಕದ ಟ್ರೆಷರಿ ಸೆಕ್ರೆಟರಿ ಜಾನೆಟ್ ಯೆಲೆನ್ ಕೆಲವು ದಿನಗಳ ಹಿಂದೆ ಹೇಳಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ