AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Foxlink: ಆಂಧ್ರ ಪ್ರದೇಶ; ಆ್ಯಪಲ್​ಗೆ ಉತ್ಪನ್ನ ಪೂರೈಸುವ ಫಾಕ್ಸ್​ಲಿಂಕ್ ಘಟಕದಲ್ಲಿ ಅಗ್ನಿ ಅನಾಹುತ

ಅಗ್ನಿ ಅವಘಡದಿಂದಾಗಿ ಸುಮಾರು 100 ಕೋಟಿ ರೂ ನಷ್ಟವಾಗಿದೆ ಎಂದು ಕಂಪನಿಯ ಆಡಳಿತ ಮಂಡಳಿ ಅಂದಾಜಿಸಿದೆ. ಈ ವಿಚಾರವಾಗಿ ಆ್ಯಪಲ್ ಕಂಪನಿ ತಕ್ಷಣ ಪ್ರತಿಕ್ರಿಯೆಗೆ ಲಭ್ಯವಾಗಿಲ್ಲ ಎಂದು ‘ರಾಯಿಟರ್ಸ್’ ಸುದ್ದಿಸಂಸ್ಥೆ ವರದಿ ಮಾಡಿದೆ.

Foxlink: ಆಂಧ್ರ ಪ್ರದೇಶ; ಆ್ಯಪಲ್​ಗೆ ಉತ್ಪನ್ನ ಪೂರೈಸುವ ಫಾಕ್ಸ್​ಲಿಂಕ್ ಘಟಕದಲ್ಲಿ ಅಗ್ನಿ ಅನಾಹುತ
ಬೆಂಕಿ-ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on: Feb 27, 2023 | 10:05 PM

ಹೈದರಾಬಾದ್: ಆ್ಯಪಲ್ (Apple) ಕಂಪನಿಗೆ ಉತ್ಪನ್ನಗಳನ್ನು ಪೂರೈಸುವ, ಆಂಧ್ರ ಪ್ರದೇಶದ ತಿರುಪತಿ ಬಳಿ ಇರುವ ಫಾಕ್ಸ್​ಲಿಂಕ್ (Foxlink) ಘಟಕದಲ್ಲಿ ಅಗ್ನಿ ಅನಾಹುತ ಸಂಭವಿಸಿದ್ದು, 400 ಮಂದಿ ಉದ್ಯೋಗಿಗಳನ್ನು ಸ್ಥಳಾಂತರ ಮಾಡಲಾಗಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಪರಿಣಾಮವಾಗಿ ಆ್ಯಪಲ್​ಗೆ ಪೂರೈಕೆ ಮಾಡಬೇಕಿರುವ ಪರಿಕರಗಳ ಉತ್ಪಾದನೆ ಸ್ಥಗಿತಗೊಳಿಸಲಾಗಿದೆ. ಫಾಕ್ಸ್​ಲಿಂಕ್ ಘಟಕವು ಆ್ಯಪಲ್ ಐಫೋನ್​ಗೆ ಕೇಬಲ್​​ಗಳನ್ನು ಪೂರೈಸುತ್ತದೆ. ಅಗ್ನಿ ಅವಘಡದಿಂದಾಗಿ ಘಟಕದ ಶೇ 50ರಷ್ಟು ಯಂತ್ರಗಳಿಗೆ ಹಾನಿಯಾಗಿದೆ. ಕಟ್ಟಡದ ಅರ್ಧ ಭಾಗ ಕುಸಿದಿದೆ ಎಂದು ತಿರುಪತಿ ಜಿಲ್ಲೆಯ ಅಗ್ನಿಶಾಮಕ ಸೇವೆಗಳ ಮತ್ತು ವಿಪತ್ತು ನಿರ್ವಹಣಾ ಪಡೆಯ ನೇತೃತ್ವ ವಹಿಸಿರುವ ಜೆ ರಮಣಯ್ಯ ತಿಳಿಸಿದ್ದಾರೆ.

ಅಗ್ನಿ ಅವಘಡದಿಂದಾಗಿ ಸುಮಾರು 100 ಕೋಟಿ ರೂ ನಷ್ಟವಾಗಿದೆ ಎಂದು ಕಂಪನಿಯ ಆಡಳಿತ ಮಂಡಳಿ ಅಂದಾಜಿಸಿದೆ. ಈ ವಿಚಾರವಾಗಿ ಆ್ಯಪಲ್ ಕಂಪನಿ ತಕ್ಷಣ ಪ್ರತಿಕ್ರಿಯೆಗೆ ಲಭ್ಯವಾಗಿಲ್ಲ ಎಂದು ‘ರಾಯಿಟರ್ಸ್’ ಸುದ್ದಿಸಂಸ್ಥೆ ವರದಿ ಮಾಡಿದೆ. ಅದೃಷ್ಟವಶಾತ್ ಪ್ರಣಾಪಾಯ ಸಂಭವಿಸಿಲ್ಲ.

ಆ್ಯಪಲ್ ಮತ್ತು ಗೂಗಲ್‌ನಂತಹ ಟೆಕ್ ದೈತ್ಯ ಕಂಪನಿಗಳು ಭಾರತದಲ್ಲಿ ತಮ್ಮ ಫೋನ್ ಉತ್ಪಾದನೆಯನ್ನು ವಿಸ್ತರಿಸಿವೆ. ಇದು ತಂತ್ರಜ್ಞಾನ ವಲಯದಲ್ಲಿ ಭಾರತದೊಂದಿಗಿನ ಸಂಬಂಧಗಳನ್ನು ಇನ್ನಷ್ಟು ಗಾಢವಾಗಿಸಲು ಅಮೆರಿಕದ ಕಂಪನಿಗಳಿಗೆ ಸ್ಫೂರ್ತಿ ನೀಡಿದೆ ಎಂದು ಅಮೆರಿಕದ ಟ್ರೆಷರಿ ಸೆಕ್ರೆಟರಿ ಜಾನೆಟ್ ಯೆಲೆನ್ ಕೆಲವು ದಿನಗಳ ಹಿಂದೆ ಹೇಳಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಗರ್ಭವತಿಯಾದ ಹೆಣ್ಣಿನ ಸಂತೋಷ ಕುಟುಂಬಕ್ಕೆ ಸರ್ವಶುಭಮಂಗಳ ಹೇಗೆ?
ಗರ್ಭವತಿಯಾದ ಹೆಣ್ಣಿನ ಸಂತೋಷ ಕುಟುಂಬಕ್ಕೆ ಸರ್ವಶುಭಮಂಗಳ ಹೇಗೆ?
Daily Horoscope: ಈ ರಾಶಿಯವರು ಆತುರದಲ್ಲಿ ಏನನ್ನಾದರೂ ಮಾಡಲು ಹೋಗದಿರಿ
Daily Horoscope: ಈ ರಾಶಿಯವರು ಆತುರದಲ್ಲಿ ಏನನ್ನಾದರೂ ಮಾಡಲು ಹೋಗದಿರಿ
ಪ್ರೆಸಿಡೆನ್ಸಿ ಕಾಲೇಜಿಗೆ ಭೇಟಿ ನೀಡಿದ ‘ಎಕ್ಸ್ ಆ್ಯಂಡ್ ವೈ’ ಚಿತ್ರತಂಡ
ಪ್ರೆಸಿಡೆನ್ಸಿ ಕಾಲೇಜಿಗೆ ಭೇಟಿ ನೀಡಿದ ‘ಎಕ್ಸ್ ಆ್ಯಂಡ್ ವೈ’ ಚಿತ್ರತಂಡ
ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಸಾಯಿ ಕುಮಾರ್; ‘ರಂಗಿತರಂಗ’ ಸ್ಪೆಷಲ್
ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಸಾಯಿ ಕುಮಾರ್; ‘ರಂಗಿತರಂಗ’ ಸ್ಪೆಷಲ್
ಜಮೀರ್ ಅಹ್ಮದ್​​ರಂಥ ಬೇಜವಾಬ್ದಾರಿ ಸಚಿವನನ್ನು ನೋಡೇ ಇಲ್ಲ: ಬೊಮ್ಮಾಯಿ
ಜಮೀರ್ ಅಹ್ಮದ್​​ರಂಥ ಬೇಜವಾಬ್ದಾರಿ ಸಚಿವನನ್ನು ನೋಡೇ ಇಲ್ಲ: ಬೊಮ್ಮಾಯಿ
ಪುರಿ ಜಗನ್ನಾಥ ದೇವಾಲಯದ ರಥಯಾತ್ರೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಜನ ಭಾಗಿ
ಪುರಿ ಜಗನ್ನಾಥ ದೇವಾಲಯದ ರಥಯಾತ್ರೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಜನ ಭಾಗಿ
ಧಾರವಾಡ ಟು ಬೆಂಗಳೂರು ವಂದೇ ಭಾರತ್​ ರೈಲಿನಲ್ಲಿ ಬೆಂಕಿ
ಧಾರವಾಡ ಟು ಬೆಂಗಳೂರು ವಂದೇ ಭಾರತ್​ ರೈಲಿನಲ್ಲಿ ಬೆಂಕಿ
ಹುಲಿಗಳ ಅಸಹಜ ಸಾವನ್ನು ಸರ್ಕಾರ ಹಗುರವಾಗಿ ಪರಿಗಣಿಸಿದಂತಿದೆ
ಹುಲಿಗಳ ಅಸಹಜ ಸಾವನ್ನು ಸರ್ಕಾರ ಹಗುರವಾಗಿ ಪರಿಗಣಿಸಿದಂತಿದೆ
ತಾಜ್​ ಮಹಲ್ ಮುಂದೆ ವಿಜಯಲಕ್ಷ್ಮಿಗೆ ಪ್ರಪೋಸ್ ಮಾಡಿದ ಪ್ರೇಮ್ ಥಾಪ: ವಿಡಿಯೋ
ತಾಜ್​ ಮಹಲ್ ಮುಂದೆ ವಿಜಯಲಕ್ಷ್ಮಿಗೆ ಪ್ರಪೋಸ್ ಮಾಡಿದ ಪ್ರೇಮ್ ಥಾಪ: ವಿಡಿಯೋ
ಕೊನೆಯ ಎಸೆತ, 1 ರನ್ ಬೇಕು; ಕ್ಯಾಚ್ ಬಿಟ್ಟ ನೈಟ್ ರೈಡರ್ಸ್ ತಂಡಕ್ಕೆ ಸೋಲು
ಕೊನೆಯ ಎಸೆತ, 1 ರನ್ ಬೇಕು; ಕ್ಯಾಚ್ ಬಿಟ್ಟ ನೈಟ್ ರೈಡರ್ಸ್ ತಂಡಕ್ಕೆ ಸೋಲು