AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Foxlink: ಆಂಧ್ರ ಪ್ರದೇಶ; ಆ್ಯಪಲ್​ಗೆ ಉತ್ಪನ್ನ ಪೂರೈಸುವ ಫಾಕ್ಸ್​ಲಿಂಕ್ ಘಟಕದಲ್ಲಿ ಅಗ್ನಿ ಅನಾಹುತ

ಅಗ್ನಿ ಅವಘಡದಿಂದಾಗಿ ಸುಮಾರು 100 ಕೋಟಿ ರೂ ನಷ್ಟವಾಗಿದೆ ಎಂದು ಕಂಪನಿಯ ಆಡಳಿತ ಮಂಡಳಿ ಅಂದಾಜಿಸಿದೆ. ಈ ವಿಚಾರವಾಗಿ ಆ್ಯಪಲ್ ಕಂಪನಿ ತಕ್ಷಣ ಪ್ರತಿಕ್ರಿಯೆಗೆ ಲಭ್ಯವಾಗಿಲ್ಲ ಎಂದು ‘ರಾಯಿಟರ್ಸ್’ ಸುದ್ದಿಸಂಸ್ಥೆ ವರದಿ ಮಾಡಿದೆ.

Foxlink: ಆಂಧ್ರ ಪ್ರದೇಶ; ಆ್ಯಪಲ್​ಗೆ ಉತ್ಪನ್ನ ಪೂರೈಸುವ ಫಾಕ್ಸ್​ಲಿಂಕ್ ಘಟಕದಲ್ಲಿ ಅಗ್ನಿ ಅನಾಹುತ
ಬೆಂಕಿ-ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: Feb 27, 2023 | 10:05 PM

Share

ಹೈದರಾಬಾದ್: ಆ್ಯಪಲ್ (Apple) ಕಂಪನಿಗೆ ಉತ್ಪನ್ನಗಳನ್ನು ಪೂರೈಸುವ, ಆಂಧ್ರ ಪ್ರದೇಶದ ತಿರುಪತಿ ಬಳಿ ಇರುವ ಫಾಕ್ಸ್​ಲಿಂಕ್ (Foxlink) ಘಟಕದಲ್ಲಿ ಅಗ್ನಿ ಅನಾಹುತ ಸಂಭವಿಸಿದ್ದು, 400 ಮಂದಿ ಉದ್ಯೋಗಿಗಳನ್ನು ಸ್ಥಳಾಂತರ ಮಾಡಲಾಗಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಪರಿಣಾಮವಾಗಿ ಆ್ಯಪಲ್​ಗೆ ಪೂರೈಕೆ ಮಾಡಬೇಕಿರುವ ಪರಿಕರಗಳ ಉತ್ಪಾದನೆ ಸ್ಥಗಿತಗೊಳಿಸಲಾಗಿದೆ. ಫಾಕ್ಸ್​ಲಿಂಕ್ ಘಟಕವು ಆ್ಯಪಲ್ ಐಫೋನ್​ಗೆ ಕೇಬಲ್​​ಗಳನ್ನು ಪೂರೈಸುತ್ತದೆ. ಅಗ್ನಿ ಅವಘಡದಿಂದಾಗಿ ಘಟಕದ ಶೇ 50ರಷ್ಟು ಯಂತ್ರಗಳಿಗೆ ಹಾನಿಯಾಗಿದೆ. ಕಟ್ಟಡದ ಅರ್ಧ ಭಾಗ ಕುಸಿದಿದೆ ಎಂದು ತಿರುಪತಿ ಜಿಲ್ಲೆಯ ಅಗ್ನಿಶಾಮಕ ಸೇವೆಗಳ ಮತ್ತು ವಿಪತ್ತು ನಿರ್ವಹಣಾ ಪಡೆಯ ನೇತೃತ್ವ ವಹಿಸಿರುವ ಜೆ ರಮಣಯ್ಯ ತಿಳಿಸಿದ್ದಾರೆ.

ಅಗ್ನಿ ಅವಘಡದಿಂದಾಗಿ ಸುಮಾರು 100 ಕೋಟಿ ರೂ ನಷ್ಟವಾಗಿದೆ ಎಂದು ಕಂಪನಿಯ ಆಡಳಿತ ಮಂಡಳಿ ಅಂದಾಜಿಸಿದೆ. ಈ ವಿಚಾರವಾಗಿ ಆ್ಯಪಲ್ ಕಂಪನಿ ತಕ್ಷಣ ಪ್ರತಿಕ್ರಿಯೆಗೆ ಲಭ್ಯವಾಗಿಲ್ಲ ಎಂದು ‘ರಾಯಿಟರ್ಸ್’ ಸುದ್ದಿಸಂಸ್ಥೆ ವರದಿ ಮಾಡಿದೆ. ಅದೃಷ್ಟವಶಾತ್ ಪ್ರಣಾಪಾಯ ಸಂಭವಿಸಿಲ್ಲ.

ಆ್ಯಪಲ್ ಮತ್ತು ಗೂಗಲ್‌ನಂತಹ ಟೆಕ್ ದೈತ್ಯ ಕಂಪನಿಗಳು ಭಾರತದಲ್ಲಿ ತಮ್ಮ ಫೋನ್ ಉತ್ಪಾದನೆಯನ್ನು ವಿಸ್ತರಿಸಿವೆ. ಇದು ತಂತ್ರಜ್ಞಾನ ವಲಯದಲ್ಲಿ ಭಾರತದೊಂದಿಗಿನ ಸಂಬಂಧಗಳನ್ನು ಇನ್ನಷ್ಟು ಗಾಢವಾಗಿಸಲು ಅಮೆರಿಕದ ಕಂಪನಿಗಳಿಗೆ ಸ್ಫೂರ್ತಿ ನೀಡಿದೆ ಎಂದು ಅಮೆರಿಕದ ಟ್ರೆಷರಿ ಸೆಕ್ರೆಟರಿ ಜಾನೆಟ್ ಯೆಲೆನ್ ಕೆಲವು ದಿನಗಳ ಹಿಂದೆ ಹೇಳಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ