AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣ: ಅಯ್ಯಪ್ಪ ಶಾಪಿಂಗ್​ ಮಾಲ್​ನಲ್ಲಿ ಅಗ್ನಿ ಅವಘಡ

ತೆಲಂಗಾಣದ ಕಾಮರೆಡ್ಡಿ ಜಿಲ್ಲಾ ಕೇಂದ್ರದಲ್ಲಿರುವ ಅಯ್ಯಪ್ಪ ಶಾಪಿಂಗ್ ಮಾಲ್ ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಬುಧವಾರ ರಾತ್ರಿ 11.30ರ ವೇಳೆಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಶಾಪಿಂಗ್ ಮಾಲ್‌ನ ನಾಲ್ಕು ಮಹಡಿಗಳಿಗೆ ಬೆಂಕಿ ಕ್ರಮೇಣ ವ್ಯಾಪಿಸಿತು. ಈ ಅವಘಡದಲ್ಲಿ ಶಾಪಿಂಗ್ ಮಾಲ್‌ನಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿವೆ. ಸ್ಥಳೀಯರ ಮಾಹಿತಿ ಮೇರೆಗೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ.

ತೆಲಂಗಾಣ: ಅಯ್ಯಪ್ಪ ಶಾಪಿಂಗ್​ ಮಾಲ್​ನಲ್ಲಿ ಅಗ್ನಿ ಅವಘಡ
ಅಯ್ಯಪ್ಪ ಶಾಪಿಂಗ್ ಮಾಲ್
ನಯನಾ ರಾಜೀವ್
|

Updated on: Dec 14, 2023 | 10:34 AM

Share

ತೆಲಂಗಾಣದ ಕಾಮರೆಡ್ಡಿ ಜಿಲ್ಲಾ ಕೇಂದ್ರದಲ್ಲಿರುವ ಅಯ್ಯಪ್ಪ ಶಾಪಿಂಗ್ ಮಾಲ್ ನಲ್ಲಿ ಭಾರೀ ಅಗ್ನಿ ಅವಘಡ(Fire Accident) ಸಂಭವಿಸಿದೆ. ಬುಧವಾರ ರಾತ್ರಿ 11.30ರ ವೇಳೆಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಶಾಪಿಂಗ್ ಮಾಲ್‌ನ ನಾಲ್ಕು ಮಹಡಿಗಳಿಗೆ ಬೆಂಕಿ ಕ್ರಮೇಣ ವ್ಯಾಪಿಸಿತು. ಈ ಅವಘಡದಲ್ಲಿ ಶಾಪಿಂಗ್ ಮಾಲ್‌ನಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿವೆ. ಸ್ಥಳೀಯರ ಮಾಹಿತಿ ಮೇರೆಗೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ.

ಬೆಳಗ್ಗೆ 7 ಗಂಟೆ ವೇಳೆಗೆ ಎರಡು ಮಹಡಿಗಳಲ್ಲಿ ಬೆಂಕಿಯನ್ನು ಹತೋಟಿಗೆ ತರಲಾಯಿತು. ಆದರೆ ಇನ್ನೆರಡು ಮಹಡಿಗಳಲ್ಲಿ ಬೆಂಕಿ ಇನ್ನೂ ನಿಯಂತ್ರಣಕ್ಕೆ ಬಂದಿಲ್ಲ. ಇದರಿಂದ ಸುತ್ತಮುತ್ತಲಿನ ಜನರು ಭಯಭೀತರಾಗಿದ್ದಾರೆ.

ಈ ಅವಘಡದಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಪಾಸ್ತಿ ಹಾನಿ ಸಂಭವಿಸಿರಬಹುದು ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ. ಆದರೆ, ಈ ಬೆಂಕಿ ಹೇಗೆ ಸಂಭವಿಸಿತು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಸದ್ಯ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಶಾಪಿಂಗ್ ಮಾಲ್‌ನಲ್ಲಿ ಯಾರೂ ಇಲ್ಲದ ಕಾರಣ ಭಾರೀ ಅನಾಹುತ ತಪ್ಪಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ
ಚಂದ್ರದ್ರೋಣ ಪರ್ವತದಲ್ಲಿ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ: DFO ಹೇಳಿದ್ದೇನು?
ಚಂದ್ರದ್ರೋಣ ಪರ್ವತದಲ್ಲಿ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ: DFO ಹೇಳಿದ್ದೇನು?