AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಥುರಾ: ಪಟಾಕಿ ಮಾರುಕಟ್ಟೆಯಲ್ಲಿ ಅಗ್ನಿ ಅವಘಡ, 15 ಮಂದಿಗೆ ಗಾಯ, ನಾಲ್ವರ ಸ್ಥಿತಿ ಚಿಂತಾಜನಕ

ಮಥುರಾದ ಸ್ಥಳೀಯ ಪಟಾಕಿ ಮಾರುಕಟ್ಟೆಯಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, 15 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ದೀಪಾವಳಿ ಹಬ್ಬದ ಪ್ರಯುಕ್ತ ಹಾಕಲಾಗಿದ್ದ 20ಕ್ಕೂ ಹೆಚ್ಚು ಅಂಗಡಿಗಳಿಗೆ ಬೆಂಕಿ ತಗುಲಿದೆ. ಬೆಂಕಿಯ ಜ್ವಾಲೆ ಎಂಟು ಬೈಕ್​ಗಳನ್ನು ಕೂಡ ಸುಟ್ಟು ಹಾಕಿತ್ತು. ಘಟನೆಯಲ್ಲಿ ಸುಮಾರು 15 ಮಂದಿಗೆ ಸುಟ್ಟ ಗಾಯಗಳಾಗಿದ್ದು, ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ. ಬೆಂಕಿಯನ್ನು ನಂದಿಸಲು ಯಾವುದೇ ಮಾರ್ಗಗಳಿರಲಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ಘಟನೆಯ ಬಗ್ಗೆ ಮಾಹಿತಿ ನೀಡಿದ್ದಾರೆ.

ಮಥುರಾ: ಪಟಾಕಿ ಮಾರುಕಟ್ಟೆಯಲ್ಲಿ ಅಗ್ನಿ ಅವಘಡ, 15 ಮಂದಿಗೆ ಗಾಯ, ನಾಲ್ವರ ಸ್ಥಿತಿ ಚಿಂತಾಜನಕ
ಪಟಾಕಿ Image Credit source: News 9
Follow us
ನಯನಾ ರಾಜೀವ್
|

Updated on: Nov 13, 2023 | 2:10 PM

ಮಥುರಾದ ಸ್ಥಳೀಯ ಪಟಾಕಿ ಮಾರುಕಟ್ಟೆಯಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, 15 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ದೀಪಾವಳಿ ಹಬ್ಬದ ಪ್ರಯುಕ್ತ ಹಾಕಲಾಗಿದ್ದ 20ಕ್ಕೂ ಹೆಚ್ಚು ಅಂಗಡಿಗಳಿಗೆ ಬೆಂಕಿ ತಗುಲಿದೆ. ಬೆಂಕಿಯ ಜ್ವಾಲೆ ಎಂಟು ಬೈಕ್​ಗಳನ್ನು ಕೂಡ ಸುಟ್ಟು ಹಾಕಿತ್ತು. ಘಟನೆಯಲ್ಲಿ ಸುಮಾರು 15 ಮಂದಿಗೆ ಸುಟ್ಟ ಗಾಯಗಳಾಗಿದ್ದು, ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ. ಬೆಂಕಿಯನ್ನು ನಂದಿಸಲು ಯಾವುದೇ ಮಾರ್ಗಗಳಿರಲಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ಘಟನೆಯ ಬಗ್ಗೆ ಮಾಹಿತಿ ನೀಡಿದ್ದಾರೆ.

ಅಗ್ನಿಶಾಮಕ ದಳದಿಂದ ತಡವಾಗಿ ಸ್ಪಂದಿಸಿದ ಆರೋಪಗಳು ಸಂಕಟವನ್ನು ಹೆಚ್ಚಿಸಿವೆ, ವಾಹನಗಳು ಸ್ಥಳಕ್ಕೆ ತಲುಪಲು ಸುಮಾರು ಅರ್ಧ ಗಂಟೆ ಬೇಕಾಯಿತು ಎಂದು ಸ್ಥಳೀಯರು ದೂರಿದ್ದಾರೆ. ಘಟನೆ ನಡೆದ ರಾಯ ಗ್ರಾಮದ ಸಂತ್ರಸ್ತರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಮಥುರಾ ಹಿರಿಯ ಪೊಲೀಸ್ ಅಧೀಕ್ಷಕರು (ಎಸ್‌ಎಸ್‌ಪಿ) ಮತ್ತು ಜಿಲ್ಲಾ ಮ್ಯಾಜಿಸ್ಟ್ರೇಟ್ (ಡಿಎಂ) ಪರಿಹಾರ ಕಾರ್ಯಗಳನ್ನು ಮೇಲ್ವಿಚಾರಣೆ ಮಾಡಲು ಮತ್ತು ಘಟನೆಯ ಬಗ್ಗೆ ಮಾಹಿತಿ ಸಂಗ್ರಹಿಸಲು ಘಟನಾ ಸ್ಥಳಕ್ಕೆ ತಲುಪಿದ್ದಾರೆ.

ಮತ್ತಷ್ಟು ಓದಿ: ಹೈದರಾಬಾದ್​ನ ಬಜಾರ್​ಘಾಟ್​ನಲ್ಲಿ ಅಗ್ನಿ ಅವಘಡ, 6 ಕಾರ್ಮಿಕರು ಸಜೀವದಹನ

ಘಟನೆಯ ಬಗ್ಗೆ ಅಧಿಕಾರಿಗಳಿಂದ ತನಿಖೆ ಸಾವಿನ ಜೊತೆಗೆ ಆಸ್ತಿ-ಪಾಸ್ತಿ ನಷ್ಟವು ಸಮುದಾಯವನ್ನು ಆಘಾತ ಮತ್ತು ದುಃಖಕ್ಕೆ ತಳ್ಳಿದೆ. ಬೆಂಕಿಯ ನಿಖರವಾದ ಕಾರಣಗಳ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಸ್ಥಳದಲ್ಲಿ ಪರಿಹಾರ ಕಾರ್ಯ ಮುಂದುವರೆದಿದ್ದು, ಅಗ್ನಿಶಾಮಕ ವಾಹನಗಳು ಜ್ವಾಲೆಗಳನ್ನು ನಂದಿಸಲು ಶ್ರಮಿಸುತ್ತಿವೆ ಮತ್ತು ಸಂತ್ರಸ್ತ ಕುಟುಂಬಗಳಿಗೆ ಬೆಂಬಲವನ್ನು ಒದಗಿಸುವತ್ತ ಗಮನಹರಿಸಲಾಗಿದೆ.

ಹೈದರಾಬಾದ್ ಕೆಮಿಕಲ್ ಗೋದಾಮಿನಲ್ಲಿ ಬೆಂಕಿ ಅವಘಡಕ್ಕೆ 6 ಮಂದಿ ಬಲಿ ಮತ್ತೊಂದು ಘಟನೆಯಲ್ಲಿ, ಹೈದರಾಬಾದ್‌ನ ರಾಸಾಯನಿಕ ಗೋದಾಮಿನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, 6 ಜನರು ಸಾವನ್ನಪ್ಪಿದ್ದಾರೆ ಮತ್ತು ಹನ್ನೊಂದು ಮಂದಿ ಗಾಯಗೊಂಡಿದ್ದಾರೆ. ಬಜಾರ್ ಘಾಟ್‌ನಲ್ಲಿ ನಡೆದ ಘಟನೆಯಲ್ಲಿ ಕೆಮಿಕಲ್ ಡ್ರಮ್‌ಗಳಿರುವ ಗ್ಯಾರೇಜ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕಾರು ದುರಸ್ತಿ ಕಾರ್ಯದ ವೇಳೆ ಸಮೀಪದ ಅಪಾರ್ಟ್‌ಮೆಂಟ್‌ಗಳಿಗೆ ಬೆಂಕಿ ವ್ಯಾಪಿಸಿದೆ.

21 ಜನರನ್ನು ರಕ್ಷಿಸಲಾಗಿದೆ. ಕೇಂದ್ರ ಸಚಿವ ಜಿ ಕಿಶನ್ ರೆಡ್ಡಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಗ್ಯಾರೇಜ್‌ನಲ್ಲಿನ ಕಿಡಿಗಳಿಂದ ಉಂಟಾದ ಬೆಂಕಿಯನ್ನು ಅಗ್ನಿಶಾಮಕ ಟೆಂಡರ್‌ಗಳು ತ್ವರಿತವಾಗಿ ನಿಯಂತ್ರಿಸಿದರು. ಕಾರು ರಿಪೇರಿ ಮಾಡುವಾಗ ಈ ದುರಂತ ಸಂಭವಿಸಿದ್ದು, ಆರು ಮಂದಿ ಸಾವನ್ನಪ್ಪಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್ ಸಿಂಧೂರ್: ಮೋದಿಯ ನಾಯಕತ್ವವ ಕೊಂಡಾಡಿದ ತಾರಾ
ಆಪರೇಷನ್ ಸಿಂಧೂರ್: ಮೋದಿಯ ನಾಯಕತ್ವವ ಕೊಂಡಾಡಿದ ತಾರಾ
ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್
ನಮ್ಮ ಸರ್ಕಾರ ಮತ್ತು ಪಕ್ಷ ಕೇಂದ್ರ ಸರ್ಕಾರದೊಂದಿಗಿವೆ: ಶಿವಕುಮಾರ್
ನಮ್ಮ ಸರ್ಕಾರ ಮತ್ತು ಪಕ್ಷ ಕೇಂದ್ರ ಸರ್ಕಾರದೊಂದಿಗಿವೆ: ಶಿವಕುಮಾರ್