AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ: ನಾಸಿಕ್ ಕಾರ್ಖಾನೆಯಲ್ಲಿ ಭಾರೀ ಅಗ್ನಿ ಅವಘಡ; ಯಾವುದೇ ಪ್ರಾಣಹಾನಿ ಇಲ್ಲ

ಸಿನ್ನಾರ್‌ನ ಎಂಐಡಿಸಿ ಪ್ರದೇಶದಲ್ಲಿರುವ ಆದಿಮಾ ಆರ್ಗ್ಯಾನಿಕ್ ಎಂಬ ಕಂಪನಿಯಲ್ಲಿ ಈ ಘಟನೆ ನಡೆದಿದೆ. ಘಟನೆ ನಡೆದ ಕೂಡಲೇ ಹತ್ತಾರು ಅಗ್ನಿಶಾಮಕ ದಳಗಳು ಸ್ಥಳಕ್ಕೆ ಆಗಮಿಸಿದವು. ಶುಕ್ರವಾರ ಮಧ್ಯಾಹ್ನ 2 ರಿಂದ 3 ಗಂಟೆಯವರೆಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ.

ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Feb 02, 2024 | 8:34 PM

Share

ನಾಸಿಕ್ ಫೆಬ್ರುವರಿ 02: ಮಹಾರಾಷ್ಟ್ರದ (Maharashtra) ನಾಸಿಕ್ (Nashik) ಜಿಲ್ಲೆಯ ಕಂಪನಿಯೊಂದರಲ್ಲಿ ಭಾರೀ ಅಗ್ನಿ ಅವಘಡ (Fire Accident) ಸಂಭವಿಸಿದೆ. ಘಟನೆಯಲ್ಲಿ ಹಲವು ಸ್ಫೋಟಗಳು ಸಂಭವಿಸಿರುವ ಬಗ್ಗೆಯೂ ವರದಿಯಾಗಿದೆ. ಹಲವಾರು ಕಿಲೋಮೀಟರ್ ದೂರದಿಂದ ಬೆಂಕಿ ಮತ್ತು ಹೊಗೆಯ ಮೋಡಗಳು ಸಹ ಗೋಚರಿಸಿದವು. ವರದಿಗಳ ಪ್ರಕಾರ, ಸಿನ್ನಾರ್‌ನ ಎಂಐಡಿಸಿ ಪ್ರದೇಶದಲ್ಲಿರುವ ಆದಿಮಾ ಆರ್ಗ್ಯಾನಿಕ್ ಎಂಬ ಕಂಪನಿಯಲ್ಲಿ ಈ ಘಟನೆ ನಡೆದಿದೆ. ಘಟನೆ ನಡೆದ ಕೂಡಲೇ ಹತ್ತಾರು ಅಗ್ನಿಶಾಮಕ ದಳಗಳು ಸ್ಥಳಕ್ಕೆ ಆಗಮಿಸಿದವು. ಶುಕ್ರವಾರ ಮಧ್ಯಾಹ್ನ 2 ರಿಂದ 3 ಗಂಟೆಯವರೆಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ. ಬೆಂಕಿ ನಂದಿಸಲು ಪ್ರಯತ್ನಗಳು ನಡೆಯುತ್ತಿದ್ದರೂ ಯಾವುದೇ ಸಾವು ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ.

ಮಾಧ್ಯಮಗಳೊಂದಿಗೆ ಮಾತನಾಡಿದ ಅಗ್ನಿಶಾಮಕ ದಳ, ಬೆಂಕಿ ನಿಯಂತ್ರಣಕ್ಕೆ ಬಂದ ನಂತರ ಕೂಲಿಂಗ್ ಕಾರ್ಯಾಚರಣೆ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗುವುದು ಎಂದು ಹೇಳಿದ್ದಾರೆ

ಕೆಲವು ಮಾಧ್ಯಮ ವರದಿಗಳ ಪ್ರಕಾರ, ಮುಸಲ್ಗಾಂವ್ ಸಿನ್ನಾರ್ ಎಕ್ಸ್‌ಪ್ರೆಸ್‌ವೇಯಲ್ಲಿರುವ ಆದಿಮಾ ಆರ್ಗಾನಿಕ್ಸ್ ಕಾರ್ಖಾನೆಯಲ್ಲಿ ಸಂಜೆ 4 ಗಂಟೆಗೆ ಬೆಂಕಿ ಕಾಣಿಸಿಕೊಂಡಿದೆ.

ಇದನ್ನೂ ಓದಿ: ಮಹಾರಾಷ್ಟ್ರ ಸರ್ಕಾರ ವಿಶೇಷ ಅಧಿವೇಶನ ಕರೆಯಬೇಕು, ಮರಾಠರಿಗೆ ಮೀಸಲಾತಿ ನೀಡಬೇಕು: ಮನೋಜ ಜಾರಂಗೆ

ಘಟನೆಯ ಸಂದರ್ಭದಲ್ಲಿ 20 ರಿಂದ 25 ರ ಒಟ್ಟು ಸಿಬ್ಬಂದಿಯ ಸುಮಾರು 10 ರಿಂದ 12 ನೌಕರರು ಕೆಲಸದಲ್ಲಿ ಹಾಜರಿದ್ದರು. ಐದು ಅಗ್ನಿಶಾಮಕ ಟೆಂಡರ್‌ಗಳು ಸ್ಥಳದಲ್ಲಿ ಬೆಂಕಿಯನ್ನು ನಿಯಂತ್ರಿಸಲು ಕಾರ್ಯಾಚರಣೆ ನಡೆಸುತ್ತಿವೆ ಎಂದು ವರದಿಯಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:22 pm, Fri, 2 February 24

Follow Us
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ