AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾರ್​ಮಿನಾರ್​ ಬಳಿ ಅಗ್ನಿ ಅವಘಡ, ರಜೆಗೆ ಬಂದಿದ್ದ ಮಕ್ಕಳು ಸೇರಿ 17ಮಂದಿ ಸಜೀವ ದಹನ, ಮೋದಿ ಸಂತಾಪ

ಚಾರ್​ಮಿನಾರ್(CharMinar)​ ಬಳಿ ಸಂಭವಿಸಿದ ಅಗ್ನಿ ಅವಘಡದಲ್ಲಿ 17 ಮಂದಿ ಸಾವನ್ನಪ್ಪಿರುವ ಮಾಹಿತಿ ಲಭ್ಯವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ರಜೆಗೆ ಬಂದಿದ್ದ ಮಕ್ಕಳು ಸೇರಿ ಒಂದೇ ಕುಟುಂಬದ 17 ಮಂದಿ ಸುಟ್ಟು ಕರಕಲಾಗಿದ್ದಾರೆ. ಕೇಂದ್ರ ಸಚಿವ ಮತ್ತು ರಾಜ್ಯ ಬಿಜೆಪಿ ಮುಖ್ಯಸ್ಥ ಜಿ. ಕಿಶನ್ ರೆಡ್ಡಿ ಮತ್ತು ತೆಲಂಗಾಣ ಸಚಿವ ಪೊನ್ನಂ ಪ್ರಭಾಕರ್ ಗುಲ್ಜಾರ್ ಹೌಸ್  ಭೇಟಿ ನೀಡಿದ್ದಾರೆ. ಆ ಪ್ರದೇಶದ ಮಾಜಿ ಶಾಸಕ ಮತ್ತು ಎಐಎಂಐಎಂ ನಾಯಕಿ ಮುಮ್ತಾಜ್ ಅಹ್ಮದ್ ಖಾನ್ ಕೂಡ ಸ್ಥಳದಲ್ಲಿದ್ದರು.

ಚಾರ್​ಮಿನಾರ್​ ಬಳಿ ಅಗ್ನಿ ಅವಘಡ, ರಜೆಗೆ ಬಂದಿದ್ದ ಮಕ್ಕಳು ಸೇರಿ  17ಮಂದಿ ಸಜೀವ ದಹನ, ಮೋದಿ ಸಂತಾಪ
ಬೆಂಕಿ Image Credit source: PTI
ನಯನಾ ರಾಜೀವ್
|

Updated on: May 18, 2025 | 12:23 PM

Share

ಹೈದರಾಬಾದ್, ಮೇ 18: ಚಾರ್​ಮಿನಾರ್(CharMinar)​ ಬಳಿ ಸಂಭವಿಸಿದ ಅಗ್ನಿ ಅವಘಡದಲ್ಲಿ 17 ಮಂದಿ ಸಾವನ್ನಪ್ಪಿರುವ ಕುರಿತು ಮಾಹಿತಿ ಲಭ್ಯವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ರಜೆಗೆ ಬಂದಿದ್ದ ಮಕ್ಕಳು ಸೇರಿ ಒಂದೇ ಕುಟುಂಬದ 17 ಮಂದಿ ಸುಟ್ಟು ಕರಕಲಾಗಿದ್ದಾರೆ. ಕೇಂದ್ರ ಸಚಿವ ಮತ್ತು ರಾಜ್ಯ ಬಿಜೆಪಿ ಮುಖ್ಯಸ್ಥ ಜಿ. ಕಿಶನ್ ರೆಡ್ಡಿ ಮತ್ತು ತೆಲಂಗಾಣ ಸಚಿವ ಪೊನ್ನಂ ಪ್ರಭಾಕರ್ ಗುಲ್ಜಾರ್ ಹೌಸ್  ಭೇಟಿ ನೀಡಿದ್ದಾರೆ. ಆ ಪ್ರದೇಶದ ಮಾಜಿ ಶಾಸಕ ಮತ್ತು ಎಐಎಂಐಎಂ ನಾಯಕಿ ಮುಮ್ತಾಜ್ ಅಹ್ಮದ್ ಖಾನ್ ಕೂಡ ಸ್ಥಳದಲ್ಲಿದ್ದರು.

ತೆಲಂಗಾಣದ ಐತಿಹಾಸಿಕ ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ ಕಟ್ಟಡದಲ್ಲಿ ಭಾನುವಾರ ಭಾರಿ ಬೆಂಕಿ ಅವಘಡ ಸಂಭವಿಸಿದೆ. ಘಟನೆಯ ಬಗ್ಗೆ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ದುಃಖ ವ್ಯಕ್ತಪಡಿಸಿದ್ದಾರೆ. ಕಟ್ಟಡದಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅವರು ಹಿರಿಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಮೋದಿ ಸಂತಾಪ, ಪರಿಹಾರ ಘೋಷಣೆ

ಅಪಘಾತದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ತೆಲಂಗಾಣದ ಹೈದರಾಬಾದ್‌ನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಜೀವ ಮತ್ತು ಆಸ್ತಿಪಾಸ್ತಿ ನಷ್ಟವಾಗಿದ್ದರಿಂದ ಪ್ರಧಾನಿ ಮೋದಿ ತೀವ್ರ ದುಃಖಿತರಾಗಿದ್ದಾರೆ ಎಂದು ಪ್ರಧಾನಿ ಕಚೇರಿ ತಿಳಿಸಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪಗಳು. ಮೃತರ ಕುಟುಂಬ ಸದಸ್ಯರಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿಗಳ ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ಪರಿಹಾರ ನೀಡಲಾಗುವುದು ಎಂದು ಘೋಷಿಸಿದ್ದಾರೆ.

ತೆಲಂಗಾಣ ಬಿಜೆಪಿ ಅಧ್ಯಕ್ಷ ಜಿ ಕಿಶನ್ ರೆಡ್ಡಿ ಮಾತನಾಡಿ, ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್‌ನಲ್ಲಿರುವ ಕಟ್ಟಡದಲ್ಲಿ ಇಂದು ಶಾರ್ಟ್ ಸರ್ಕ್ಯೂಟ್‌ನಿಂದ ಉಂಟಾದ ಅಪಘಾತದಲ್ಲಿ ಕೆಲವರು ಸಾವನ್ನಪ್ಪಿದ್ದಾರೆ ಮತ್ತು ಕೆಲವರು ಗಾಯಗೊಂಡಿದ್ದಾರೆ. ಈ ಘಟನೆ ಬೆಳಿಗ್ಗೆ 6 ಗಂಟೆ ಸುಮಾರಿಗೆ ಸಂಭವಿಸಿದೆ. ಇಂತಹ ಘಟನೆಗಳು ತುಂಬಾ ದುಃಖಕರ ಎಂದಿದ್ದಾರೆ.

ಮತ್ತಷ್ಟು ಓದಿ:Video: ಹೈದರಾಬಾದ್: ಚಾರ್​ಮಿನಾರ್​ ಬಳಿ ಅಗ್ನಿ ಅವಘಡ, 17 ಮಂದಿ ಸಾವು

ಮೃತದೇಹಗಳನ್ನು ಹೊರತೆಗೆದು ಆಸ್ಪತ್ರೆಗಳಿಗೆ ಕಳುಹಿಸಲಾಗಿದ್ದು, ರಾಜ್ಯ ಸರ್ಕಾರ ಶೀಘ್ರದಲ್ಲೇ ಸಂಪೂರ್ಣ ವಿವರಗಳನ್ನು ಹಂಚಿಕೊಳ್ಳಲಿದೆ ಎಂದು ತೆಲಂಗಾಣ ಸಚಿವ ಪೊನ್ನಂ ಪ್ರಭಾಕರ್ ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ