AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horrible Video: ಕಸದ ರಾಶಿಗೆ ಬಿದ್ದ ಬೆಂಕಿಯ ರೌದ್ರತೆ ಇದು; ಅಗ್ನಿ ಜ್ವಾಲೆಯ ಭೀಕರತೆ ನೋಡಿ ಬೆಚ್ಚಿದ ಸ್ಥಳೀಯರು

ಅಲ್ಲೇ ಸಮೀಪದ ಪ್ರದೇಶಗಳಲ್ಲಿ ಕೆಲವು ಗುಡಿಸಲುಗಳಿದ್ದು, ಮಹಿಳೆಯರು ತೆರೆದ ಪ್ರದೇಶದಲ್ಲಿ ಒಲೆಗೆ ಬೆಂಕಿ ಹಾಕಿ ಅಡುಗೆ ಮಾಡುತ್ತಿದ್ದರು. ಜೋರಾದ ಗಾಳಿ ಬಂದಾಗ ಬೆಂಕಿಯ ಕಿಡಿ ಹಾರಿ ಕಸಕ್ಕೆ ಬೆಂಕಿ ಬಿದ್ದಿದೆ ಎಂದು ವರದಿಯಾಗಿದೆ.

Horrible Video: ಕಸದ ರಾಶಿಗೆ ಬಿದ್ದ ಬೆಂಕಿಯ ರೌದ್ರತೆ ಇದು; ಅಗ್ನಿ ಜ್ವಾಲೆಯ ಭೀಕರತೆ ನೋಡಿ ಬೆಚ್ಚಿದ ಸ್ಥಳೀಯರು
ಬೆಂಕಿಯ ದೃಶ್ಯ
TV9 Web
| Edited By: |

Updated on:Apr 26, 2022 | 9:05 AM

Share

ಗುರ್​ಗಾಂವ್​​ನ ಮನೇಸರ್​ ಎಂಬಲ್ಲಿ ತ್ಯಾಜ್ಯದ ರಾಶಿಗೆ ಭಾರಿ ಪ್ರಮಾಣದಲ್ಲಿ ಬೆಂಕಿ ತಗುಲಿದೆ. ಮನೇಸರ್​ನ ಸೆಕ್ಟರ್​ 6ರ ಬಳಿ, ಸೋಮವಾರ ರಾತ್ರಿ ಮೊದಲು ಕಸದ ರಾಶಿಯಲ್ಲಿ ಕಾಣಿಸಿಕೊಂಡ ಬೆಂಕಿ ಕ್ಷಿಪ್ರವಾಗಿ ವಿಶಾಲವಾದ ಪ್ರದೇಶಕ್ಕೆ ಆವರಿಸಿದೆ. ಸೋಮವಾರ ಸಂಜೆ ಹೊತ್ತಿಗೆ ದೆಹಲಿ-ಎನ್​ಸಿಆರ್​ ಪ್ರದೇಶದಲ್ಲಿ ಭಾರಿ ಪ್ರಮಾಣದಲ್ಲಿ ಧೂಳು ಸಹಿತ, ಬಿರುಗಾಳಿ ಕಾಣಿಸಿಕೊಂಡಿತ್ತು. ಅದಾದ ಕೆಲವೇ ಹೊತ್ತಲ್ಲಿ ಬೆಂಕಿ ಹೊತ್ತಿಕೊಂಡಿದೆ.  35 ಫೈರ್​ ಎಂಜಿನ್​​ಗಳ ಸಹಾಯದಿಂದ, ಸತತ ಆರು ತಾಸುಗಳ ಕಾಲ ನಿರಂತರ ಶ್ರಮವಹಿಸಿದ ಬಳಿಕ ಬೆಂಕಿ ಆರಿಸಲಾಗಿದೆ. ಬೆಂಕಿಯ ಭಯಾನಕ ವಿಡಿಯೋ ಸಿಕ್ಕಾಪಟೆ ವೈರಲ್ ಆಗಿದೆ.

ಅಲ್ಲೇ ಸಮೀಪದ ಪ್ರದೇಶಗಳಲ್ಲಿ ಕೆಲವು ಗುಡಿಸಲುಗಳಿದ್ದು, ಮಹಿಳೆಯರು ತೆರೆದ ಪ್ರದೇಶದಲ್ಲಿ ಒಲೆಗೆ ಬೆಂಕಿ ಹಾಕಿ ಅಡುಗೆ ಮಾಡುತ್ತಿದ್ದರು. ಜೋರಾದ ಗಾಳಿ ಬಂದಾಗ ಬೆಂಕಿಯ ಕಿಡಿ ಹಾರಿ ಕಸಕ್ಕೆ ಬೆಂಕಿ ಬಿದ್ದಿದೆ ಎಂದು ವರದಿಯಾಗಿದೆ. ಅಷ್ಟೇ ಅಲ್ಲ, ಬೆಂಕಿ ವಿಪರೀತವಾಗಿ ಪಸರಿಸಿದ ಬೆನ್ನಲ್ಲೇ, ಸಿಲಿಂಡರ್ ಸ್ಫೋಟಗಳೂ ಆಗಿವೆ. ಯಾವುದೇ ಸಾವು-ನೋವುಗಳ ವರದಿಯಾಗಿಲ್ಲ. ಹಾಗಂತ ಬೆಂಕಿಗೆ ಕಾರಣವೇನು ಎಂಬುದನ್ನೂ ಇನ್ನೂ ಸ್ಥಳೀಯ ಆಡಳಿತ ಸ್ಪಷ್ಟ ಪಡಿಸಿಲ್ಲ.

ಬೆಂಕಿಯ ಮತ್ತು ಅದರಿಂದ ಉಂಟಾದ ದಟ್ಟ ಹೊಗೆಯ ವಿಡಿಯೋಗಳು ಸೋಷಿಯಲ್​ ಮೀಡಿಯಾಗಳಲ್ಲಿ ಸಿಕ್ಕಾಪಟೆ ವೈರಲ್ ಆಗುತ್ತಿದೆ. ಅದೆಷ್ಟೋ ಮಂದಿ ತಮ್ಮ ಮನೆಯ ಬಾಲ್ಕನಿಗಳಿಗೆ ಬಂದು ನಿಂತು ಫೋಟೋ-ವಿಡಿಯೋ ಸೆರೆ ಹಿಡಿದಿದ್ದಾರೆ. ಅದಲ್ಲಿ ಎಎನ್​ಐ ಮಾಧ್ಯಮವೂ ಕೂಡ ಒಂದು ವಿಡಿಯೋವನ್ನು ಶೇರ್ ಮಾಡಿದ್ದು, ಆಕಾಶದೆತ್ತರಕ್ಕೆ ಎದ್ದ ಹೊಗೆಯನ್ನು ಅದರಲ್ಲಿ ನೋಡಬಹುದು. ಇದು ನಿಜಕ್ಕೂ ಭಯಾನಕ ದೃಶ್ಯವೇ ಆಗಿದೆ.

ಇದನ್ನೂ ಓದಿ: ಋತುವಿಲಾಸಿನಿ : ಸಾವು ಆವರಿಸುವ ಹೊತ್ತಿನಲ್ಲಿ ನೀನು ಹೊರಗಿರಬೇಕು ಅಂತ ಬಯಸುವವಳು ನಾನು 

Published On - 9:04 am, Tue, 26 April 22

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!