AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Manipur Landslide ಮಣಿಪುರದಲ್ಲಿ ಭಾರೀ ಭೂಕುಸಿತ: 8 ಸಾವು, 50ಕ್ಕೂ ಹೆಚ್ಚು ಮಂದಿ ನಾಪತ್ತೆ

ಮಣಿಪುರದ ಜಿರಿಬಾಮ್‌ನಿಂದ ಇಂಫಾಲ್‌ವರೆಗೆ ನಿರ್ಮಾಣ ಹಂತದಲ್ಲಿರುವ ರೈಲು ಮಾರ್ಗದ ರಕ್ಷಣೆಗಾಗಿ ಮಣಿಪುರದ ತುಪುಲ್ ರೈಲು ನಿಲ್ದಾಣದ ಬಳಿ ನಿಯೋಜಿಸಲಾದ ಭಾರತೀಯ ಸೇನೆಯ 107 ಪ್ರಾದೇಶಿಕ ಸೇನೆಯ ಕಂಪನಿಯ ಸ್ಥಳದಲ್ಲಿ ಭಾರಿ ಭೂಕುಸಿತ ಸಂಭವಿಸಿದೆ

Manipur Landslide ಮಣಿಪುರದಲ್ಲಿ ಭಾರೀ ಭೂಕುಸಿತ: 8 ಸಾವು, 50ಕ್ಕೂ ಹೆಚ್ಚು ಮಂದಿ ನಾಪತ್ತೆ
ಮಣಿಪುರದಲ್ಲಿ ಭೂಕುಸಿತ
TV9 Web
| Edited By: |

Updated on:Jun 30, 2022 | 9:55 PM

Share

ಗುರುವಾರ ಮುಂಜಾನೆ ಮಣಿಪುರದ (Manipur) ನೋನಿ ಜಿಲ್ಲೆಯ 107 ಟೆರಿಟೋರಿಯಲ್ ಆರ್ಮಿ (ಟಿಎ) ಶಿಬಿರದ ಬಳಿ ಭಾರಿ ಭೂಕುಸಿತ (landslide) ಸಂಭವಿಸಿದ್ದುಎಂಟು ಜನರು ಸಾವನ್ನಪ್ಪಿದ್ದಾರೆ ಮತ್ತು 50 ಕ್ಕೂ ಹೆಚ್ಚು ಜನರು ಕಾಣೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸತ್ತವರಲ್ಲಿ ಏಳು ಮಂದಿ ಟಿಎ ಜವಾನರು ಮತ್ತು ಒಬ್ಬರು ಇಂಫಾಲ್-ಜಿರಿಬಾಮ್ ರೈಲ್ವೇ ಯೋಜನೆಯ ನಿರ್ಮಾಣದಲ್ಲಿ ತೊಡಗಿರುವ ರೈಲ್ವೇಸ್ ಕೆಲಸಗಾರ ಎಂದು ಮೂಲಗಳು ತಿಳಿಸಿವೆ. ಮಣಿಪುರದ ಜಿರಿಬಾಮ್‌ನಿಂದ ಇಂಫಾಲ್‌ವರೆಗೆ ನಿರ್ಮಾಣ ಹಂತದಲ್ಲಿರುವ ರೈಲು ಮಾರ್ಗದ ರಕ್ಷಣೆಗಾಗಿ ಮಣಿಪುರದ ತುಪುಲ್ ರೈಲು ನಿಲ್ದಾಣದ ಬಳಿ ನಿಯೋಜಿಸಲಾದ ಭಾರತೀಯ ಸೇನೆಯ 107 ಪ್ರಾದೇಶಿಕ ಸೇನೆಯ ಕಂಪನಿಯ ಸ್ಥಳದಲ್ಲಿ ಭಾರಿ ಭೂಕುಸಿತ ಸಂಭವಿಸಿದೆ ಎಂದು ಸೇನೆ ತಿಳಿಸಿದೆ. ನಾಪತ್ತೆಯಾದವರಲ್ಲಿ ನಿರ್ಮಾಣ ಯೋಜನೆಗಾಗಿ ರೈಲ್ವೆಯಿಂದ ತೊಡಗಿಸಿಕೊಂಡಿರುವ ಸಿಬ್ಬಂದಿ ಸೇರಿದ್ದಾರೆ. ಬುಧವಾರ ರಾತ್ರಿ ಸುರಿದ ಭಾರೀ ಮಳೆಗೆ ಬಂಡೆಗಳು ಮತ್ತು ಮಣ್ಣು ಗುಡ್ಡಗಳು ಕುಸಿದಿದ್ದು ಸೇನಾ ಪೋಸ್ಟ್ ಮಣ್ಣಿನಡಿಯಲ್ಲಾಗಿದೆ. ಬೃಹತ್ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದ್ದರೂ ಪ್ರತಿಕೂಲ ಹವಾಮಾನದ ಕಾರಣದಿಂದ ಅದನ್ನು ಸ್ಥಗಿತಗೊಳಿಸಲಾಯಿತು. “ಮಣ್ಣು ಮತ್ತು ಕೆಸರು ಇದೆ, ಘಟನಾ ಸ್ಥಳಕ್ಕೆ ತಲುಪಲು ರಸ್ತೆ ಇಲ್ಲ. ಆದರೆ ಆ ನಾಪತ್ತೆಯಾದವರನ್ನು ಪತ್ತೆಹಚ್ಚಲು ಇನ್ನೂ ಪ್ರಯತ್ನಗಳು ನಡೆಯುತ್ತಿವೆ ಎಂದು ಮಣಿಪುರದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಗಾಯಗೊಂಡ ವ್ಯಕ್ತಿಗಳಿಗೆ ನೋನಿ ಆರ್ಮಿ ವೈದ್ಯಕೀಯ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತೀವ್ರವಾಗಿ ಗಾಯಗೊಂಡಿರುವ ಸಿಬ್ಬಂದಿಗಳ ಸ್ಥಳಾಂತರ ಪ್ರಗತಿಯಲ್ಲಿದೆ. ಭೂಕುಸಿತದಿಂದಾಗಿ ಇಜೈ ನದಿಯ ಹರಿವು ಕೂಡಾ ಜಾಸ್ತಿಯಾಗಿದೆ. ನಿರಂತರ ಭೂಕುಸಿತಗಳು ಮತ್ತು ಕೆಟ್ಟ ಹವಾಮಾನದಿಂದ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದೆ. ಸೇನಾ ಹೆಲಿಕಾಪ್ಟರ್‌ಗಳು ಸ್ಟ್ಯಾಂಡ್‌ಬೈನಲ್ಲಿವೆಎಂದು ನೆರೆಯ ನಾಗಾಲ್ಯಾಂಡ್‌ನ ಕೊಹಿಮಾದಲ್ಲಿ ನಿಯೋಜಿಸಲಾದ ರಕ್ಷಣಾ ಸಾರ್ವಜನಿಕ ಸಂಪರ್ಕ ಅಧಿಕಾರಿ ಲೆಫ್ಟಿನೆಂಟ್ ಕರ್ನಲ್ ಸುಮಿತ್ ಶರ್ಮಾ ಹೇಳಿದ್ದಾರೆ.

ಆದಾಗ್ಯೂ, ಸಾವುನೋವುಗಳ ಅಥವಾ ಕಾಣೆಯಾದ ವ್ಯಕ್ತಿಗಳನ್ನು ಸಂಖ್ಯೆಯನ್ನು ಶರ್ಮಾ ಅವರು ಖಚಿತಪಡಿಸಿಲ್ಲ.

ಮಣಿಪುರ ಸಿಎಂ ಎನ್. ಬಿರೇನ್ ಸಿಂಗ್ ಗುರುವಾರ ಮಧ್ಯಾಹ್ನ ಸ್ಥಳಕ್ಕೆ ಭೇಟಿ ನೀಡಿದ್ದು ಸೇನೆ, ರಾಜ್ಯ ಪೊಲೀಸರು, ರಾಜ್ಯ ವಿಪತ್ತು ಸ್ಪಂದನಾ ಪಡೆ ಮತ್ತು ಸ್ಥಳೀಯ ನಿವಾಸಿಗಳು ನಡೆಸುತ್ತಿರುವ ರಕ್ಷಣಾ ಕಾರ್ಯಗಳನ್ನು ಪರಿಶೀಲಿಸಿದರು. ಮೃತರ ಕುಟುಂಬಕ್ಕೆ ಐದು ಲಕ್ಷ ಹಾಗೂ ಗಾಯಗೊಂಡವರಿಗೆ 50,000 ರೂ. ಪರಿಹಾರಧನವನ್ನು ಸಿಂಗ್ ಘೋಷಿಸಿದ್ದಾರೆ.

Published On - 4:13 pm, Thu, 30 June 22

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ