AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Manipur Landslide ಮಣಿಪುರದಲ್ಲಿ ಭಾರೀ ಭೂಕುಸಿತ: 8 ಸಾವು, 50ಕ್ಕೂ ಹೆಚ್ಚು ಮಂದಿ ನಾಪತ್ತೆ

ಮಣಿಪುರದ ಜಿರಿಬಾಮ್‌ನಿಂದ ಇಂಫಾಲ್‌ವರೆಗೆ ನಿರ್ಮಾಣ ಹಂತದಲ್ಲಿರುವ ರೈಲು ಮಾರ್ಗದ ರಕ್ಷಣೆಗಾಗಿ ಮಣಿಪುರದ ತುಪುಲ್ ರೈಲು ನಿಲ್ದಾಣದ ಬಳಿ ನಿಯೋಜಿಸಲಾದ ಭಾರತೀಯ ಸೇನೆಯ 107 ಪ್ರಾದೇಶಿಕ ಸೇನೆಯ ಕಂಪನಿಯ ಸ್ಥಳದಲ್ಲಿ ಭಾರಿ ಭೂಕುಸಿತ ಸಂಭವಿಸಿದೆ

Manipur Landslide ಮಣಿಪುರದಲ್ಲಿ ಭಾರೀ ಭೂಕುಸಿತ: 8 ಸಾವು, 50ಕ್ಕೂ ಹೆಚ್ಚು ಮಂದಿ ನಾಪತ್ತೆ
ಮಣಿಪುರದಲ್ಲಿ ಭೂಕುಸಿತ
TV9 Web
| Edited By: |

Updated on:Jun 30, 2022 | 9:55 PM

Share

ಗುರುವಾರ ಮುಂಜಾನೆ ಮಣಿಪುರದ (Manipur) ನೋನಿ ಜಿಲ್ಲೆಯ 107 ಟೆರಿಟೋರಿಯಲ್ ಆರ್ಮಿ (ಟಿಎ) ಶಿಬಿರದ ಬಳಿ ಭಾರಿ ಭೂಕುಸಿತ (landslide) ಸಂಭವಿಸಿದ್ದುಎಂಟು ಜನರು ಸಾವನ್ನಪ್ಪಿದ್ದಾರೆ ಮತ್ತು 50 ಕ್ಕೂ ಹೆಚ್ಚು ಜನರು ಕಾಣೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸತ್ತವರಲ್ಲಿ ಏಳು ಮಂದಿ ಟಿಎ ಜವಾನರು ಮತ್ತು ಒಬ್ಬರು ಇಂಫಾಲ್-ಜಿರಿಬಾಮ್ ರೈಲ್ವೇ ಯೋಜನೆಯ ನಿರ್ಮಾಣದಲ್ಲಿ ತೊಡಗಿರುವ ರೈಲ್ವೇಸ್ ಕೆಲಸಗಾರ ಎಂದು ಮೂಲಗಳು ತಿಳಿಸಿವೆ. ಮಣಿಪುರದ ಜಿರಿಬಾಮ್‌ನಿಂದ ಇಂಫಾಲ್‌ವರೆಗೆ ನಿರ್ಮಾಣ ಹಂತದಲ್ಲಿರುವ ರೈಲು ಮಾರ್ಗದ ರಕ್ಷಣೆಗಾಗಿ ಮಣಿಪುರದ ತುಪುಲ್ ರೈಲು ನಿಲ್ದಾಣದ ಬಳಿ ನಿಯೋಜಿಸಲಾದ ಭಾರತೀಯ ಸೇನೆಯ 107 ಪ್ರಾದೇಶಿಕ ಸೇನೆಯ ಕಂಪನಿಯ ಸ್ಥಳದಲ್ಲಿ ಭಾರಿ ಭೂಕುಸಿತ ಸಂಭವಿಸಿದೆ ಎಂದು ಸೇನೆ ತಿಳಿಸಿದೆ. ನಾಪತ್ತೆಯಾದವರಲ್ಲಿ ನಿರ್ಮಾಣ ಯೋಜನೆಗಾಗಿ ರೈಲ್ವೆಯಿಂದ ತೊಡಗಿಸಿಕೊಂಡಿರುವ ಸಿಬ್ಬಂದಿ ಸೇರಿದ್ದಾರೆ. ಬುಧವಾರ ರಾತ್ರಿ ಸುರಿದ ಭಾರೀ ಮಳೆಗೆ ಬಂಡೆಗಳು ಮತ್ತು ಮಣ್ಣು ಗುಡ್ಡಗಳು ಕುಸಿದಿದ್ದು ಸೇನಾ ಪೋಸ್ಟ್ ಮಣ್ಣಿನಡಿಯಲ್ಲಾಗಿದೆ. ಬೃಹತ್ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದ್ದರೂ ಪ್ರತಿಕೂಲ ಹವಾಮಾನದ ಕಾರಣದಿಂದ ಅದನ್ನು ಸ್ಥಗಿತಗೊಳಿಸಲಾಯಿತು. “ಮಣ್ಣು ಮತ್ತು ಕೆಸರು ಇದೆ, ಘಟನಾ ಸ್ಥಳಕ್ಕೆ ತಲುಪಲು ರಸ್ತೆ ಇಲ್ಲ. ಆದರೆ ಆ ನಾಪತ್ತೆಯಾದವರನ್ನು ಪತ್ತೆಹಚ್ಚಲು ಇನ್ನೂ ಪ್ರಯತ್ನಗಳು ನಡೆಯುತ್ತಿವೆ ಎಂದು ಮಣಿಪುರದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಗಾಯಗೊಂಡ ವ್ಯಕ್ತಿಗಳಿಗೆ ನೋನಿ ಆರ್ಮಿ ವೈದ್ಯಕೀಯ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತೀವ್ರವಾಗಿ ಗಾಯಗೊಂಡಿರುವ ಸಿಬ್ಬಂದಿಗಳ ಸ್ಥಳಾಂತರ ಪ್ರಗತಿಯಲ್ಲಿದೆ. ಭೂಕುಸಿತದಿಂದಾಗಿ ಇಜೈ ನದಿಯ ಹರಿವು ಕೂಡಾ ಜಾಸ್ತಿಯಾಗಿದೆ. ನಿರಂತರ ಭೂಕುಸಿತಗಳು ಮತ್ತು ಕೆಟ್ಟ ಹವಾಮಾನದಿಂದ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದೆ. ಸೇನಾ ಹೆಲಿಕಾಪ್ಟರ್‌ಗಳು ಸ್ಟ್ಯಾಂಡ್‌ಬೈನಲ್ಲಿವೆಎಂದು ನೆರೆಯ ನಾಗಾಲ್ಯಾಂಡ್‌ನ ಕೊಹಿಮಾದಲ್ಲಿ ನಿಯೋಜಿಸಲಾದ ರಕ್ಷಣಾ ಸಾರ್ವಜನಿಕ ಸಂಪರ್ಕ ಅಧಿಕಾರಿ ಲೆಫ್ಟಿನೆಂಟ್ ಕರ್ನಲ್ ಸುಮಿತ್ ಶರ್ಮಾ ಹೇಳಿದ್ದಾರೆ.

ಆದಾಗ್ಯೂ, ಸಾವುನೋವುಗಳ ಅಥವಾ ಕಾಣೆಯಾದ ವ್ಯಕ್ತಿಗಳನ್ನು ಸಂಖ್ಯೆಯನ್ನು ಶರ್ಮಾ ಅವರು ಖಚಿತಪಡಿಸಿಲ್ಲ.

ಮಣಿಪುರ ಸಿಎಂ ಎನ್. ಬಿರೇನ್ ಸಿಂಗ್ ಗುರುವಾರ ಮಧ್ಯಾಹ್ನ ಸ್ಥಳಕ್ಕೆ ಭೇಟಿ ನೀಡಿದ್ದು ಸೇನೆ, ರಾಜ್ಯ ಪೊಲೀಸರು, ರಾಜ್ಯ ವಿಪತ್ತು ಸ್ಪಂದನಾ ಪಡೆ ಮತ್ತು ಸ್ಥಳೀಯ ನಿವಾಸಿಗಳು ನಡೆಸುತ್ತಿರುವ ರಕ್ಷಣಾ ಕಾರ್ಯಗಳನ್ನು ಪರಿಶೀಲಿಸಿದರು. ಮೃತರ ಕುಟುಂಬಕ್ಕೆ ಐದು ಲಕ್ಷ ಹಾಗೂ ಗಾಯಗೊಂಡವರಿಗೆ 50,000 ರೂ. ಪರಿಹಾರಧನವನ್ನು ಸಿಂಗ್ ಘೋಷಿಸಿದ್ದಾರೆ.

Published On - 4:13 pm, Thu, 30 June 22

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?