ಬದರಿನಾಥ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರೀ ಭೂಕುಸಿತ, ಜೀವಭಯದಿಂದ ಓಡಿದ ಜನರು; ವಿಡಿಯೊ ನೋಡಿ

ಉತ್ತರಾಖಂಡದ ಚಮೋಲಿಯಲ್ಲಿ ಇಂದು(ಬುಧವಾರ) ಭಾರೀ ಭೂಕುಸಿತ ಸಂಭವಿಸಿದ್ದು,ಭೂಕುಸಿತದಿಂದ ರಸ್ತೆಯ ಇಕ್ಕೆಲಗಳಲ್ಲಿ ನೂರಾರು ಜನರು ಹಾಗೂ ವಾಹನಗಳು ಸಿಲುಕಿಕೊಂಡಿವೆ. ಬದರಿನಾಥ್ ಹೆದ್ದಾರಿಯಲ್ಲಿ ಸಂಚಾರ ನಿರ್ಬಂಧಿಸಿದ್ದು ಭೂಕುಸಿತ ಸಂಭವಿಸಿದಾಗ ಅಧಿಕಾರಿಗಳು ಅವಶೇಷಗಳನ್ನು ತೆರವುಗೊಳಿಸುತ್ತಿದ್ದರು. ಕೂಡಲೇ ಪೊಲೀಸರು ಮತ್ತು ಆಡಳಿತಾಧಿಕಾರಿಗಳನ್ನು ಕರೆಸಿ ಅವಶೇಷಗಳನ್ನು ತೆರವುಗೊಳಿಸಲಾಗಿದ್ದು, ತಡರಾತ್ರಿ ವೇಳೆಗೆ ರಸ್ತೆ ತೆರೆಯುವ ಸಾಧ್ಯತೆ ಇದೆ.

ಬದರಿನಾಥ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರೀ ಭೂಕುಸಿತ, ಜೀವಭಯದಿಂದ ಓಡಿದ ಜನರು; ವಿಡಿಯೊ ನೋಡಿ
ಚಮೋಲಿಯಲ್ಲಿ ಭೂ ಕುಸಿತ
Follow us
|

Updated on:Jul 10, 2024 | 12:56 PM

ಚಮೋಲಿ ಜುಲೈ 10: ಉತ್ತರಾಖಂಡದ (Uttarakhand) ಚಮೋಲಿಯಲ್ಲಿ ಇಂದು(ಬುಧವಾರ) ಭಾರೀ ಭೂಕುಸಿತ (Landslide) ಸಂಭವಿಸಿದ್ದು, ಬದರಿನಾಥ್ ರಾಷ್ಟ್ರೀಯ ಹೆದ್ದಾರಿಯಲ್ಲಿ (Badrinath National Highway) ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ. ಜೋಶಿಮಠದ ಚುಂಗಿ ಧಾರ್‌ನಲ್ಲಿ ಬೆಟ್ಟದ ಬೃಹತ್ ಭಾಗವು ಕುಸಿದು ರಸ್ತೆಯ ಮೇಲೆ ಬೀಳುತ್ತಿರುವುದು, ದೊಡ್ಡ ಬಂಡೆಗಳು ಉರುಳಿ ಬೀಳುತ್ತಿರುವುದನ್ನು 30 ಸೆಕೆಂಡುಗಳ ವಿಡಿಯೊ ತೋರಿಸುತ್ತದೆ. ಜನರು ಭಯಭೀತರಾಗಿ ಸುರಕ್ಷಿತ ಜಾಗಕ್ಕೆ ಓಡುತ್ತಿರುವುದನ್ನು ವಿಡಿಯೊ ತೋರಿಸುತ್ತದೆ. ಅವರಲ್ಲಿ ಹಲವರು ತಮ್ಮ ಫೋನ್‌ಗಳಲ್ಲಿ ಈ ದೃಶ್ಯವನ್ನು ಸೆರೆಹಿಡಿಯುತ್ತಿರುವುದು ಕಂಡುಬಂದಿದೆ.

ಭೂಕುಸಿತದಿಂದ ರಸ್ತೆಯ ಇಕ್ಕೆಲಗಳಲ್ಲಿ ನೂರಾರು ಜನರು ಹಾಗೂ ವಾಹನಗಳು ಸಿಲುಕಿಕೊಂಡಿವೆ. ಬದರಿನಾಥ್ ಹೆದ್ದಾರಿಯಲ್ಲಿ ಸಂಚಾರ ನಿರ್ಬಂಧಿಸಿದ್ದು ಭೂಕುಸಿತ ಸಂಭವಿಸಿದಾಗ ಅಧಿಕಾರಿಗಳು ಅವಶೇಷಗಳನ್ನು ತೆರವುಗೊಳಿಸುತ್ತಿದ್ದರು. ಕೂಡಲೇ ಪೊಲೀಸರು ಮತ್ತು ಆಡಳಿತಾಧಿಕಾರಿಗಳನ್ನು ಕರೆಸಿ ಅವಶೇಷಗಳನ್ನು ತೆರವುಗೊಳಿಸಲಾಗಿದ್ದು, ತಡರಾತ್ರಿ ವೇಳೆಗೆ ರಸ್ತೆ ತೆರೆಯುವ ಸಾಧ್ಯತೆ ಇದೆ.

ಕಳೆದ ಕೆಲವು ದಿನಗಳಿಂದ ಉತ್ತರಾಖಂಡದ ಕೆಲವು ಭಾಗಗಳಲ್ಲಿ ಭಾರೀ ಮಳೆಯಿಂದಾಗಿ ಬೆಟ್ಟಗಳಲ್ಲಿ ಭೂಕುಸಿತಗಳು ಉಂಟಾಗಿದ್ದು, ಬದರಿನಾಥಕ್ಕೆ ಹೋಗುವ ಹೆದ್ದಾರಿಯು ಕಲ್ಲುಮಣ್ಣುಗಳಿಂದ ಮುಚ್ಚಿದ್ದು ಹಲವಾರು ಸ್ಥಳಗಳಲ್ಲಿ ಸಂಚಾರ ನಿರ್ಬಂಧಿಸಲ್ಪಟ್ಟಿದೆ. ನಿರಂತರ ಮಳೆಯಿಂದಾಗಿ ಹೆಚ್ಚಿನ ಸಂಖ್ಯೆಯ ರಸ್ತೆಗಳನ್ನು ನಿರ್ಬಂಧಿಸಲಾಗಿದೆ. ಅದೇ ವೇಳೆ ಚಂಪಾವತ್ ಮತ್ತು ಉಧಮ್ ಸಿಂಗ್ ನಗರ ಜಿಲ್ಲೆಗಳ ಹಲವಾರು ಗ್ರಾಮಗಳು ಭಾರೀ ಪ್ರಮಾಣದಲ್ಲಿ ಜಲಾವೃತವಾಗಿವೆ.

ಚಮೋಲಿಯಲ್ಲಿ ಎರಡು ಸ್ಥಳಗಳಲ್ಲಿ ಅವಶೇಷಗಳು ಬಿದ್ದು ರಾಶಿಯಾಗಿದ್ದರಿಂದ ಶುಕ್ರವಾರವೂ ಬದರಿನಾಥ್ ಹೆದ್ದಾರಿಯನ್ನು ನಿರ್ಬಂಧಿಸಲಾಗಿದೆ. ಭಾನೇರ್ಪಾನಿ-ಪಿಪಾಲ್ಕೋಟಿ ನಾಗ ಪಂಚಾಯತ್ ರಸ್ತೆ ಮತ್ತು ಅಂಗತಾಲಾ ರಸ್ತೆ ಸಂಚಾರದ ಮೇಲೂ ಇದು ಪರಿಣಾಮ ಬೀರಿದ್ದು ಅನೇಕ ಪ್ರಯಾಣಿಕರು ಮತ್ತು ಸ್ಥಳೀಯರು ಸಿಕ್ಕಿಹಾಕಿಕೊಂಡರು ಎಂದು ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಇದನ್ನೂ ಓದಿ: ವಿಚ್ಛೇದಿತ ಮುಸ್ಲಿಂ ಮಹಿಳೆಯರಿಗೆ ಜೀವನಾಂಶ ನೀಡುವ ಕುರಿತು ಸುಪ್ರೀಂಕೋರ್ಟ್​ ಮಹತ್ವದ ತೀರ್ಪು

ಶನಿವಾರ, ಹೈದರಾಬಾದ್‌ನ ಇಬ್ಬರು ಪ್ರವಾಸಿಗರು ಚಮೋಲಿ ಜಿಲ್ಲೆಯಲ್ಲಿ ಭೂಕುಸಿತದ ವೇಳೆ ಬಂಡೆ ಡಿಕ್ಕಿ ಹೊಡೆದು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನಂತರ ಅವರ ದೇಹಗಳನ್ನು ಭೂಕುಸಿತದ ಅವಶೇಷಗಳಿಂದ ಹೊರತೆಗೆಯಲಾಯಿತು.  ಏತನ್ಮಧ್ಯೆ, ರಾಜ್ಯದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಕಚೇರಿ ನೀಡಿದ್ದು, ಒಂದು ದಿನದ ಮಟ್ಟಿಗೆ ಸ್ಥಗಿತಗೊಳಿಸಿದ್ದ ಚಾರ್ ಧಾಮ್ ಯಾತ್ರೆ ಸೋಮವಾರ ಪುನರಾರಂಭವಾಯಿತು. ಭೂಕುಸಿತದಿಂದಾಗಿ ರುದ್ರಪ್ರಯಾಗ-ಕೇದಾರನಾಥ ರಾಷ್ಟ್ರೀಯ ಹೆದ್ದಾರಿಯೂ ಬಂದ್ ಆಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:55 pm, Wed, 10 July 24

ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ