AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬದರಿನಾಥ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರೀ ಭೂಕುಸಿತ, ಜೀವಭಯದಿಂದ ಓಡಿದ ಜನರು; ವಿಡಿಯೊ ನೋಡಿ

ಉತ್ತರಾಖಂಡದ ಚಮೋಲಿಯಲ್ಲಿ ಇಂದು(ಬುಧವಾರ) ಭಾರೀ ಭೂಕುಸಿತ ಸಂಭವಿಸಿದ್ದು,ಭೂಕುಸಿತದಿಂದ ರಸ್ತೆಯ ಇಕ್ಕೆಲಗಳಲ್ಲಿ ನೂರಾರು ಜನರು ಹಾಗೂ ವಾಹನಗಳು ಸಿಲುಕಿಕೊಂಡಿವೆ. ಬದರಿನಾಥ್ ಹೆದ್ದಾರಿಯಲ್ಲಿ ಸಂಚಾರ ನಿರ್ಬಂಧಿಸಿದ್ದು ಭೂಕುಸಿತ ಸಂಭವಿಸಿದಾಗ ಅಧಿಕಾರಿಗಳು ಅವಶೇಷಗಳನ್ನು ತೆರವುಗೊಳಿಸುತ್ತಿದ್ದರು. ಕೂಡಲೇ ಪೊಲೀಸರು ಮತ್ತು ಆಡಳಿತಾಧಿಕಾರಿಗಳನ್ನು ಕರೆಸಿ ಅವಶೇಷಗಳನ್ನು ತೆರವುಗೊಳಿಸಲಾಗಿದ್ದು, ತಡರಾತ್ರಿ ವೇಳೆಗೆ ರಸ್ತೆ ತೆರೆಯುವ ಸಾಧ್ಯತೆ ಇದೆ.

ಬದರಿನಾಥ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರೀ ಭೂಕುಸಿತ, ಜೀವಭಯದಿಂದ ಓಡಿದ ಜನರು; ವಿಡಿಯೊ ನೋಡಿ
ಚಮೋಲಿಯಲ್ಲಿ ಭೂ ಕುಸಿತ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Jul 10, 2024 | 12:56 PM

Share

ಚಮೋಲಿ ಜುಲೈ 10: ಉತ್ತರಾಖಂಡದ (Uttarakhand) ಚಮೋಲಿಯಲ್ಲಿ ಇಂದು(ಬುಧವಾರ) ಭಾರೀ ಭೂಕುಸಿತ (Landslide) ಸಂಭವಿಸಿದ್ದು, ಬದರಿನಾಥ್ ರಾಷ್ಟ್ರೀಯ ಹೆದ್ದಾರಿಯಲ್ಲಿ (Badrinath National Highway) ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ. ಜೋಶಿಮಠದ ಚುಂಗಿ ಧಾರ್‌ನಲ್ಲಿ ಬೆಟ್ಟದ ಬೃಹತ್ ಭಾಗವು ಕುಸಿದು ರಸ್ತೆಯ ಮೇಲೆ ಬೀಳುತ್ತಿರುವುದು, ದೊಡ್ಡ ಬಂಡೆಗಳು ಉರುಳಿ ಬೀಳುತ್ತಿರುವುದನ್ನು 30 ಸೆಕೆಂಡುಗಳ ವಿಡಿಯೊ ತೋರಿಸುತ್ತದೆ. ಜನರು ಭಯಭೀತರಾಗಿ ಸುರಕ್ಷಿತ ಜಾಗಕ್ಕೆ ಓಡುತ್ತಿರುವುದನ್ನು ವಿಡಿಯೊ ತೋರಿಸುತ್ತದೆ. ಅವರಲ್ಲಿ ಹಲವರು ತಮ್ಮ ಫೋನ್‌ಗಳಲ್ಲಿ ಈ ದೃಶ್ಯವನ್ನು ಸೆರೆಹಿಡಿಯುತ್ತಿರುವುದು ಕಂಡುಬಂದಿದೆ.

ಭೂಕುಸಿತದಿಂದ ರಸ್ತೆಯ ಇಕ್ಕೆಲಗಳಲ್ಲಿ ನೂರಾರು ಜನರು ಹಾಗೂ ವಾಹನಗಳು ಸಿಲುಕಿಕೊಂಡಿವೆ. ಬದರಿನಾಥ್ ಹೆದ್ದಾರಿಯಲ್ಲಿ ಸಂಚಾರ ನಿರ್ಬಂಧಿಸಿದ್ದು ಭೂಕುಸಿತ ಸಂಭವಿಸಿದಾಗ ಅಧಿಕಾರಿಗಳು ಅವಶೇಷಗಳನ್ನು ತೆರವುಗೊಳಿಸುತ್ತಿದ್ದರು. ಕೂಡಲೇ ಪೊಲೀಸರು ಮತ್ತು ಆಡಳಿತಾಧಿಕಾರಿಗಳನ್ನು ಕರೆಸಿ ಅವಶೇಷಗಳನ್ನು ತೆರವುಗೊಳಿಸಲಾಗಿದ್ದು, ತಡರಾತ್ರಿ ವೇಳೆಗೆ ರಸ್ತೆ ತೆರೆಯುವ ಸಾಧ್ಯತೆ ಇದೆ.

ಕಳೆದ ಕೆಲವು ದಿನಗಳಿಂದ ಉತ್ತರಾಖಂಡದ ಕೆಲವು ಭಾಗಗಳಲ್ಲಿ ಭಾರೀ ಮಳೆಯಿಂದಾಗಿ ಬೆಟ್ಟಗಳಲ್ಲಿ ಭೂಕುಸಿತಗಳು ಉಂಟಾಗಿದ್ದು, ಬದರಿನಾಥಕ್ಕೆ ಹೋಗುವ ಹೆದ್ದಾರಿಯು ಕಲ್ಲುಮಣ್ಣುಗಳಿಂದ ಮುಚ್ಚಿದ್ದು ಹಲವಾರು ಸ್ಥಳಗಳಲ್ಲಿ ಸಂಚಾರ ನಿರ್ಬಂಧಿಸಲ್ಪಟ್ಟಿದೆ. ನಿರಂತರ ಮಳೆಯಿಂದಾಗಿ ಹೆಚ್ಚಿನ ಸಂಖ್ಯೆಯ ರಸ್ತೆಗಳನ್ನು ನಿರ್ಬಂಧಿಸಲಾಗಿದೆ. ಅದೇ ವೇಳೆ ಚಂಪಾವತ್ ಮತ್ತು ಉಧಮ್ ಸಿಂಗ್ ನಗರ ಜಿಲ್ಲೆಗಳ ಹಲವಾರು ಗ್ರಾಮಗಳು ಭಾರೀ ಪ್ರಮಾಣದಲ್ಲಿ ಜಲಾವೃತವಾಗಿವೆ.

ಚಮೋಲಿಯಲ್ಲಿ ಎರಡು ಸ್ಥಳಗಳಲ್ಲಿ ಅವಶೇಷಗಳು ಬಿದ್ದು ರಾಶಿಯಾಗಿದ್ದರಿಂದ ಶುಕ್ರವಾರವೂ ಬದರಿನಾಥ್ ಹೆದ್ದಾರಿಯನ್ನು ನಿರ್ಬಂಧಿಸಲಾಗಿದೆ. ಭಾನೇರ್ಪಾನಿ-ಪಿಪಾಲ್ಕೋಟಿ ನಾಗ ಪಂಚಾಯತ್ ರಸ್ತೆ ಮತ್ತು ಅಂಗತಾಲಾ ರಸ್ತೆ ಸಂಚಾರದ ಮೇಲೂ ಇದು ಪರಿಣಾಮ ಬೀರಿದ್ದು ಅನೇಕ ಪ್ರಯಾಣಿಕರು ಮತ್ತು ಸ್ಥಳೀಯರು ಸಿಕ್ಕಿಹಾಕಿಕೊಂಡರು ಎಂದು ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಇದನ್ನೂ ಓದಿ: ವಿಚ್ಛೇದಿತ ಮುಸ್ಲಿಂ ಮಹಿಳೆಯರಿಗೆ ಜೀವನಾಂಶ ನೀಡುವ ಕುರಿತು ಸುಪ್ರೀಂಕೋರ್ಟ್​ ಮಹತ್ವದ ತೀರ್ಪು

ಶನಿವಾರ, ಹೈದರಾಬಾದ್‌ನ ಇಬ್ಬರು ಪ್ರವಾಸಿಗರು ಚಮೋಲಿ ಜಿಲ್ಲೆಯಲ್ಲಿ ಭೂಕುಸಿತದ ವೇಳೆ ಬಂಡೆ ಡಿಕ್ಕಿ ಹೊಡೆದು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನಂತರ ಅವರ ದೇಹಗಳನ್ನು ಭೂಕುಸಿತದ ಅವಶೇಷಗಳಿಂದ ಹೊರತೆಗೆಯಲಾಯಿತು.  ಏತನ್ಮಧ್ಯೆ, ರಾಜ್ಯದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಕಚೇರಿ ನೀಡಿದ್ದು, ಒಂದು ದಿನದ ಮಟ್ಟಿಗೆ ಸ್ಥಗಿತಗೊಳಿಸಿದ್ದ ಚಾರ್ ಧಾಮ್ ಯಾತ್ರೆ ಸೋಮವಾರ ಪುನರಾರಂಭವಾಯಿತು. ಭೂಕುಸಿತದಿಂದಾಗಿ ರುದ್ರಪ್ರಯಾಗ-ಕೇದಾರನಾಥ ರಾಷ್ಟ್ರೀಯ ಹೆದ್ದಾರಿಯೂ ಬಂದ್ ಆಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:55 pm, Wed, 10 July 24

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ