AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆಯನ್ನು ಚುಡಾಯಿಸಿದ 7 ವರ್ಷದ ಬಾಲಕ, ತಮಾಷೆ ಎಂದು ಸುಮ್ಮನಿದ್ದರೆ ಕಿರುಕುಳವಾಗುತ್ತೆ ಎಂದ ಮಹಿಳೆ

ಮಹಿಳೆಯೊಬ್ಬರನ್ನು ಏಳು ವರ್ಷದ ಬಾಲಕ ಚುಡಾಯಿಸಿರುವ ಘಟನೆ ವರದಿಯಾಗಿದೆ. ಮಹಿಳೆ ಇನ್​​ಸ್ಟಾಗ್ರಾಂ(Instagram)ನಲ್ಲಿ ಪೋಸ್ಟ್​ ಮಾಡಿ ನಡೆದಿರುವ ಘಟನೆಯನ್ನು ವಿವರಿಸಿದ್ದಾರೆ. ಆಕೆ ಲಾಂಗ್ ಸ್ಕರ್ಟ್​ ಹಾಗೂ ಕೆಂಪು ಟಾಪ್ ಧರಿಸಿ ನಡೆಯುತ್ತಿರುವಾಗ ಆ ಬಾಲಕ ‘ಓ ಲಾಲ್ ಪರಿ’ ಎಂದು ಕಮೆಂಟ್ ಮಾಡಿದ್ದಾನೆ. ಆರಂಭದಲ್ಲಿ ತನಗೆ ಅಚ್ಚರಿಯಾಯಿತು ಏನು ತಿರುಗಿ ಹೇಳಬೇಕೆಂದೇ ಗೊತ್ತಾಗಲಿಲ್ಲ, ಸೊಸೈಟಿಯ ಭದ್ರತಾ ಸಿಬ್ಬಂದಿ ಕೂಡ ಅದನ್ನು ನೋಡಿ ನಗುತ್ತಿರುವುದು ಕಂಡೂ ಮತ್ತಷ್ಟು ಅಚ್ಚರಿಯಾಯಿತು.

ಮಹಿಳೆಯನ್ನು ಚುಡಾಯಿಸಿದ 7 ವರ್ಷದ ಬಾಲಕ, ತಮಾಷೆ ಎಂದು ಸುಮ್ಮನಿದ್ದರೆ ಕಿರುಕುಳವಾಗುತ್ತೆ ಎಂದ ಮಹಿಳೆ
ಮಹಿಳೆ Image Credit source: NDTV
ನಯನಾ ರಾಜೀವ್
|

Updated on: Aug 26, 2025 | 9:36 AM

Share

ಮಹಿಳೆಯೊಬ್ಬರನ್ನು ಏಳು ವರ್ಷದ ಬಾಲಕ ಚುಡಾಯಿಸಿರುವ ಘಟನೆ ವರದಿಯಾಗಿದೆ. ಮಹಿಳೆ ಇನ್​​ಸ್ಟಾಗ್ರಾಂ(Instagram)ನಲ್ಲಿ ಪೋಸ್ಟ್​ ಮಾಡಿ ನಡೆದಿರುವ ಘಟನೆಯನ್ನು ವಿವರಿಸಿದ್ದಾರೆ. ಆಕೆ ಲಾಂಗ್ ಸ್ಕರ್ಟ್​ ಹಾಗೂ ಕೆಂಪು ಟಾಪ್ ಧರಿಸಿ ನಡೆಯುತ್ತಿರುವಾಗ ಆ ಬಾಲಕ ‘ಓ ಲಾಲ್ ಪರಿ’ ಎಂದು ಕಮೆಂಟ್ ಮಾಡಿದ್ದಾನೆ. ಆರಂಭದಲ್ಲಿ ತನಗೆ ಅಚ್ಚರಿಯಾಯಿತು ಏನು ತಿರುಗಿ ಹೇಳಬೇಕೆಂದೇ ಗೊತ್ತಾಗಲಿಲ್ಲ, ಸೊಸೈಟಿಯ ಭದ್ರತಾ ಸಿಬ್ಬಂದಿ ಕೂಡ ಅದನ್ನು ನೋಡಿ ನಗುತ್ತಿರುವುದು ಕಂಡೂ ಮತ್ತಷ್ಟು ಅಚ್ಚರಿಯಾಯಿತು.

ಆಕೆ ಮತ್ತಷ್ಟು ಮುಂದಕ್ಕೆ ಹೋದಾಗ ಯಾರು ನೀನು, ನನ್ನ ಜತೆ ಬರ್ತೀಯಾ ಎಂದು ಕೆಟ್ಟದಾಗಿ ಕಮೆಂಟ್ ಮಾಡಿದ್ದಾನೆ. ಈ ಮಾತು ಕೇಳಿ ಮಹಿಳೆಗೆ ಕೋಪ ನೆತ್ತಿಗೇರಿ ಆ ಬಾಲಕನಿಗೆ ಬೈದಿದ್ದಾರೆ, ಆ ಸಮಯದಲ್ಲಿ ಭದ್ರತಾ ಸಿಬ್ಬಂದಿ ಮಧ್ಯೆ ಪ್ರವೇಶಿಸಿ ಆ ಹುಡುಗನಿಗೆ ಕ್ಷಮೆ ಯಾಚಿಸುವಂತೆ ಸೂಚಿಸಿದರು. ಆದರೆ ಆತ ಒಲ್ಲದ ಮನಸ್ಸಿನಿಂದಲೇ ಕ್ಷಮಿಸಿ ಎಂದು ಹೇಳಿ ಅಲ್ಲಿಂದ ಓಡಿ ಹೋಗಿದ್ದಾನೆಂದು ಮಹಿಳೆ ತಿಳಿಸಿದ್ದಾರೆ.

ಬೀದಿಗಳಲ್ಲಿ ಪುಂಡ-ಪೋಕರಿಗಳು ಹೆಣ್ಣುಮಕ್ಕಳನ್ನು ಚುಡಾಯಿಸಲು ಬಳಸುವ ಅದೇ ಸಾಲನ್ನು ಆರು-ಏಳು ವರ್ಷದ ಮಕ್ಕಳು ಬಳಸುತ್ತಿದ್ದಾರೆ ಎಂದರೆ ಈ ಸಮಾಜ ಎತ್ತ ಸಾಗುತ್ತಿದೆ ಎನ್ನುವ ಪ್ರಶ್ನೆ ಉದ್ಭವವಾಗುತ್ತದೆ. ಭದ್ರತಾ ಸಿಬ್ಬಂದಿ ಬಾಲಕನ ಮಾತು ಕೇಳಿ ನಕ್ಕರೂ ಕೂಡ ನನಗೆ ಅದು ತಮಾಷೆ ಅನ್ನಿಸಲಿಲ್ಲ.

ಇನ್​​ಸ್ಟಾಗ್ರಾಂ ಪೋಸ್ಟ್​

View this post on Instagram

A post shared by Kiran Grewal (@quirkey_lyf)

ತಮಾಷೆ ಎಂದು ಸುಮ್ಮನಿದ್ದರೆ ನಂತರ ಅದು ಕಿರುಕುಳವಾಗಿ ಮುಂದುವರೆದೀತು ಎಂದು ಕಿರಣ್ ಗ್ರೆವಾಲ್ ಬರೆದಿದ್ದಾರೆ. ಭದ್ರತಾ ಸಿಬ್ಬಂದಿಯು ಆ ಬಾಲಕ ಉತ್ತಮ ಕುಟುಂಬದಿಂದ ಬಂದವನು, ಯಾವುದೇ ದುರುದ್ದೇಶವಿಲ್ಲ, ತಮಾಷೆಗಾಗಿ ಮಾಡಿದ್ದಾನೆಂದು ಹೇಳುವ ಮೂಲಕ ಪರಿಸ್ಥಿತಿ ಶಾಂತವಾಗಿಸಲು ಪ್ರಯತ್ನಿಸಿದ್ದರು ಎಂದು ಹೇಳಿದ್ದಾರೆ.

ಮತ್ತಷ್ಟು ಓದಿ: ನೊಯ್ಡಾ ವರದಕ್ಷಿಣೆ ಕಿರುಕುಳ ಪ್ರಕರಣ; ನಿಕ್ಕಿಯನ್ನು ಸುಟ್ಟು ಕೊಲ್ಲಲು 1 ತಿಂಗಳಿಂದ ರೆಡಿಯಾಗಿತ್ತು ಪ್ಲಾನ್!

ಈ ವಿಡಿಯೋ ವ್ಯಾಪಕ ಆಕ್ರೋಶಕ್ಕೆ ಕಾರಣವಾಯಿತು, ಈ ಘಟನೆಯು ಭಾರತದಲ್ಲಿ ಮಹಿಳೆಯರ ಸುರಕ್ಷತೆ ಮತ್ತು ಪೋಷಕರ ಬಗ್ಗೆ ಕಳವಳ ವ್ಯಕ್ತಪಡಿಸಿತು.ಹಾಗೆಯೇ ನೀವು ಆ ಬಾಲಕನನ್ನು ತಡೆದು ಪೋಷಕರನ್ನು ಕರೆಸಿ ನಡೆದಿದ್ದನ್ನು ವಿವರಿಸಬೇಕಿತ್ತು ಎಂದು ಬಳಕೆದಾರರೊಬ್ಬರು ಕಮೆಂಟ್ ಮಾಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ