AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Krishna Janmabhoomi Case: ಕೃಷ್ಣ ಜನ್ಮಸ್ಥಳದ ಸರ್ವೆಗೆ ಮಥುರಾ ಕೋರ್ಟ್ ಆದೇಶ

ಮಥುರಾದಲ್ಲಿರುವ ಕೃಷ್ಣ ದೇಗುಲ ಸರ್ವೆಗೆ ಮಥುರಾ ಹೈಕೋರ್ಟ್ ಆದೇಶ ನೀಡಿದೆ. ಜ.20ರಂದು ಸರ್ವೆ ವರದಿ ಸಲ್ಲಿಸಲು ಮಥುರಾ ಕೋರ್ಟ್​ ಆದೇಶ ನೀಡಿದೆ.

Krishna Janmabhoomi Case: ಕೃಷ್ಣ ಜನ್ಮಸ್ಥಳದ ಸರ್ವೆಗೆ ಮಥುರಾ ಕೋರ್ಟ್ ಆದೇಶ
ಸಾಂದರ್ಭಿಕ ಚಿತ್ರ Image Credit source: google image
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:Dec 24, 2022 | 5:12 PM

ಉತ್ತರಪ್ರದೇಶ: ಮಥುರಾದಲ್ಲಿರುವ ಕೃಷ್ಣ ದೇಗುಲ (Mathura Krishna Temple) ಸಮೀಕ್ಷೆಗೆ (Survey) ಮಥುರಾ ಸ್ಥಳೀಯ ಕೋರ್ಟ್ ಆದೇಶ ನೀಡಿದೆ. ಜ.20ರಂದು ಸರ್ವೆ ವರದಿ ಸಲ್ಲಿಸಲು ಮಥುರಾ ಕೋರ್ಟ್​ ಆದೇಶ ನೀಡಿದೆ. ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯಿಂದ ಸಮೀಕ್ಷೆ ಮಾಡಲು ಆದೇಶ ನೀಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಈಗಾಗಲೇ ಈ ಬಗ್ಗೆ ವರದಿಯನ್ನು ಕೋರ್ಟ್​​ಗೆ ಸಲ್ಲಿಸಿದೆ. ಉತ್ತರ ಪ್ರದೇಶದ ಮಥುರಾದಲ್ಲಿರುವ ಶ್ರೀಕೃಷ್ಣ ಜನ್ಮಭೂಮಿಯನ್ನು ಅತಿಕ್ರಮಿಸಿ ಮಸೀದಿ ನಿರ್ಮಿಸಲಾಗಿದೆ. ಶಾಹಿ ಈದ್ಗಾ ಮಸೀದಿಯಲ್ಲಿ ಶುದ್ಧೀಕರಣ ವಿಧಿಗಳನ್ನು ನೆರವೇರಿಸಲು ಅವಕಾಶ ನೀಡಬೇಕು ಎಂದು ಕೋರಿ ಹಿಂದೂ ಮಹಾಸಭಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ಕೃಷ್ಣ ಜನ್ಮಭೂಮಿಯ ಪಕ್ಕದಲ್ಲಿಯೇ ಶಾಹಿ ಈದ್ಗಾ ಮಸೀದಿಯೂ ಇದೆ. ವಾರಣಾಸಿಯ ಜ್ಞಾನವಾಪಿ ಮಸೀದಿಯ ವಿವಾದ ದೇಶದ ಗಮನ ಸೆಳೆದಿರುವ ಬೆನ್ನಲ್ಲೇ ಮಥುರದಲ್ಲಿಯೂ ಬಹುಕಾಲದ ವಿವಾದ ಮತ್ತೆ ಗರಿಗೆದರಿತ್ತು.

ಶಾಹಿ ಈದ್ಗಾ ಮಸೀದಿ ಇರುವ ಸ್ಥಳದಲ್ಲಿಯೇ ಶ್ರೀಕೃಷ್ಣನ ಪುರಾತನ ದೇಗುಲವೂ ಇತ್ತು. ಶ್ರೀಕೃಷ್ಣನ ಜನ್ಮಭೂಮಿಯ ಗರ್ಭಗೃಹದ ಮೇಲೆಯೇ ಮಸೀದಿಯನ್ನು ನಿರ್ಮಿಸಲಾಗಿದೆ. ಮಸೀದಿಗೆ ಪ್ರವೇಶಿಸಿ ಅಭಿಷೇಕ ನಡೆಸಲು ಅವಕಾಶ ನೀಡಬೇಕು ಎಂದು ಹಿಂದೂ ಮಹಾಸಭಾಗದ ಖಜಾಂಚಿ ದಿನೇಶ್ ಶರ್ಮಾ ವಿನಂತಿಸಿದ್ದರು. ‘ಅವರು ಮೊದಲು ತಮ್ಮ ಖಡ್ಗದ ಬಲದಿಂದ ದಾಳಿ ನಡೆಸಿದರು. ಆದರೆ ಈಗ ನಾವು ನಮ್ಮ ಪುರಾತನ ಪರಂಪರೆಯನ್ನು ಮರಳಿ ಪಡೆಯಲು ಇಚ್ಛಿಸುತ್ತಿದ್ದೇವೆ. ಈ ಮಸೀದಿಯನ್ನು ತೆರವುಗೊಳಿಸಿ, ಹಿಂದೂಗಳ ಆತ್ಮಗೌರವಕ್ಕೆ ಮನ್ನಣೆ ನೀಡಬೇಕು’ ಎಂದು ಅವರು ಕೋರಿದ್ದರು. ನಂತರ ನ್ಯಾಯಲಯವು ಈ ಪ್ರಕರಣದ ತೀರ್ಪನ್ನು  ಮೇ 31 ಮುಂದೂಡಿತ್ತು. ಆದರೆ ಇದೀಗ ಮಥುರಾ ಹೈಕೋರ್ಟ್ ಮಹತ್ವದ ಆದೇಶವೊಂದನ್ನು ಹೊರಡಿಸಿದೆ. ಮಥುರಾದಲ್ಲಿರುವ ಕೃಷ್ಣ ದೇಗುಲ ಸರ್ವೆ ಮಾಡಿ ವರದಿ ಸಲ್ಲಿಸುವಂತೆ ಆದೇಶವನ್ನು ನೀಡಿದೆ.

ಇದನ್ನು ಓದಿ: Krishna Janmabhoomi Case: ಮಥುರಾದ ಕೃಷ್ಣ ಜನ್ಮಭೂಮಿ- ಶಾಹಿ ಈದ್ಗಾ ಮಸೀದಿ ವಿವಾದ: ಮುಂದಿನ ವಿಚಾರಣೆ ಜುಲೈ 1ಕ್ಕೆ ಮುಂದೂಡಿಕೆ

ಶ್ರೀಕೃಷ್ಣ ದೇವಾಲಯಕ್ಕೆ ಸೇರಿದ್ದು ಎನ್ನುವ 13.37 ಎಕರೆ ಭೂಮಿಯನ್ನು ಸಂಪೂರ್ಣವಾಗಿ ಹಿಂದೂಗಳಿಗೆ ನೀಡಬೇಕು ಎನ್ನುವುದು ಹಿಂದೂ ಮಹಾಸಭಾದ ವಿನಂತಿ. ಈ ಭೂಮಿಯಲ್ಲಿಯೇ ಶಾಹಿ ಈದ್ಗಾ ಮಸೀದಿಯೂ ಇದೆ. ನ್ಯಾಯಾಲಯಕ್ಕೆ ಸಲ್ಲಿಕೆಯಾಗಿರುವ ಅರ್ಜಿ ಕುರಿತು ಪ್ರತಿಕ್ರಿಯಿಸಿದ್ದ ಶಾಹಿ ಈದ್ಗಾ ಮಸೀದಿ ಸಮಿತಿಯ ಕಾರ್ಯದರ್ಶಿ ತನ್ವೀರ್ ಅಹ್ಮದ್, 1991ರ ಪೂಜಾ ಸ್ಥಳಗಳ ಕಾಯ್ದೆಯನ್ನು ಎಲ್ಲರೂ ಗೌರವಿಸಬೇಕು. ಮಥುರಾದಲ್ಲಿ ಗೋಡೆಯ ಒಂದು ಬದಿಗೆ ಕೃಷ್ಣನ ಆಲಯವಿದ್ದರೆ, ಮತ್ತೊಂದು ಬದಿಗೆ ಮಸೀದಿಯಿದೆ. ಬಹುಕಾಲದಿಂದ ಇದು ಹೀಗೆಯೇ ನಡೆದುಕೊಂಡು ಬಂದಿದೆ. ಯಾರಿಗೂ ಇದರಿಂದ ಯಾವುದೇ ಸಮಸ್ಯೆ ಆಗಿರಲಿಲ್ಲ’ ಎಂದು ಹೇಳಿದ್ದರು.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:18 pm, Sat, 24 December 22

VIDEO: ರನೌಟ್​ ಮಾಡುವ ಮುನ್ನ ಆಟಗಾರರ ಭರ್ಜರಿ ಡ್ಯಾನ್ಸ್
VIDEO: ರನೌಟ್​ ಮಾಡುವ ಮುನ್ನ ಆಟಗಾರರ ಭರ್ಜರಿ ಡ್ಯಾನ್ಸ್
ಮತ್ತೋರ್ವ ಶಂಕಿತ ಉಗ್ರ ಫಾರೂಕ್ ಅಹ್ಮದ್ ತಡ್ವಾನ ಮನೆ ಧ್ವಂಸ
ಮತ್ತೋರ್ವ ಶಂಕಿತ ಉಗ್ರ ಫಾರೂಕ್ ಅಹ್ಮದ್ ತಡ್ವಾನ ಮನೆ ಧ್ವಂಸ
Weekly Horoscope: ಏಪ್ರಿಲ್ 28 ರಿಂದ ಮೇ 4 ರವರೆಗಿನ ವಾರ ಭವಿಷ್ಯ
Weekly Horoscope: ಏಪ್ರಿಲ್ 28 ರಿಂದ ಮೇ 4 ರವರೆಗಿನ ವಾರ ಭವಿಷ್ಯ
Daily Devotional: ಉಪವಾಸವಿದ್ದಾಗ ಹಗಲು ಹೊತ್ತಿನಲ್ಲಿ ಮಲಗಬಹುದಾ?
Daily Devotional: ಉಪವಾಸವಿದ್ದಾಗ ಹಗಲು ಹೊತ್ತಿನಲ್ಲಿ ಮಲಗಬಹುದಾ?
ಅಕ್ಷಯ ಅಮಾವಾಸ್ಯೆ: ಈ ದಿನದಂದು ಯಾವೆಲ್ಲಾ ರಾಶಿಗಳಿಗೆ ಶುಭ, ಅಶುಭ ತಿಳಿಯಿರಿ
ಅಕ್ಷಯ ಅಮಾವಾಸ್ಯೆ: ಈ ದಿನದಂದು ಯಾವೆಲ್ಲಾ ರಾಶಿಗಳಿಗೆ ಶುಭ, ಅಶುಭ ತಿಳಿಯಿರಿ
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ