AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hema Malini: ಕೆನ್ನೆಯನ್ನು ರಸ್ತೆಗೆ ಹೋಲಿಸುತ್ತಿರುವ ರಾಜಕೀಯ ನಾಯಕರ ವಿರುದ್ಧ ಕಿಡಿಕಾರಿದ ಸಂಸದೆ ಹೇಮಾ ಮಾಲಿನಿ

ಬಾಲಿವುಡ್ ಹಿರಿಯ ನಟಿ, ಮಥುರಾ ಕ್ಷೇತ್ರದ ಸಂಸದೆ ಹೇಮಾ ಮಾಲಿನಿ ಪದೇ ಪದೇ ತಮ್ಮ ಕೆನ್ನೆ ರಾಜಕೀಯ ಮುಖಂಡರ ಹೋಲಿಕೆಗೆ ಗುರಿಯಾಗುತ್ತಿರುವುದರ ಕುರಿತು ಕಟುವಾಗಿ ಪ್ರತಿಕ್ರಿಯಿಸಿದ್ದಾರೆ. ಅಲ್ಲದೇ ಜವಾಬ್ದಾರಿಯುತ ಸ್ಥಾನದಲ್ಲಿರುವವರು ಹೇಳಿಕೆ ನೀಡುವಾಗ ಎಚ್ಚರಿಕೆಯಿಂದಿರಬೇಕು ಎಂದು ಅವರು ಹೇಳಿದ್ದಾರೆ.

Hema Malini: ಕೆನ್ನೆಯನ್ನು ರಸ್ತೆಗೆ ಹೋಲಿಸುತ್ತಿರುವ ರಾಜಕೀಯ ನಾಯಕರ ವಿರುದ್ಧ ಕಿಡಿಕಾರಿದ ಸಂಸದೆ ಹೇಮಾ ಮಾಲಿನಿ
ಹೇಮಾ ಮಾಲಿನಿ (ಸಂಗ್ರಹ ಚಿತ್ರ)
TV9 Web
| Edited By: |

Updated on: Dec 21, 2021 | 8:55 AM

Share

ಬಾಲಿವುಡ್ ಹಿರಿಯ ನಟಿ, ಮಥುರಾ ಕ್ಷೇತ್ರದ ಸಂಸದೆ ಹೇಮಾ ಮಾಲಿನಿ (Hema Malini) ಪದೇ ಪದೇ ತಮ್ಮ ಕೆನ್ನೆ ರಾಜಕೀಯ ಮುಖಂಡರ ಹೋಲಿಕೆಗೆ ಗುರಿಯಾಗುತ್ತಿರುವುದರ ಕುರಿತು ಕಟುವಾಗಿ ಪ್ರತಿಕ್ರಿಯಿಸಿದ್ದಾರೆ. ಮಹಾರಾಷ್ಟ್ರದ ನೀರು ಸರಬರಾಜು ಮತ್ತು ನೈರ್ಮಲ್ಯ ಖಾತೆ ಸಚಿವ ಗುಲಾಬ್​ರಾವ್ ಪಾಟೀಲ್ (GulabRao Patil) ಅವರು ತಮ್ಮ ಸ್ವಕ್ಷೇತ್ರದ ಸುಗಮ ರಸ್ತೆಗಳನ್ನು ಇತ್ತೀಚೆಗೆ ಹೇಮಾ ಮಾಲಿನಿ ಅವರ ಕೆನ್ನೆಗೆ ಹೋಲಿಸಿದ್ದರು. ಈ ಹೇಳಿಕೆಗೆ ಹೇಮಾ ಮಾಲಿನಿ ಪ್ರತಿಕ್ರಿಯಿಸಿದ್ದು, ಅಂತಹ ಕಾಮೆಂಟ್‌ಗಳು ಒಳ್ಳೆಯದಲ್ಲ ಎಂದು ಕಟುವಾಗಿ ನುಡಿದಿದ್ದಾರೆ. ಎಎನ್‌ಐ ಸುದ್ದಿಸಂಸ್ಥೆ ಜೊತೆ ಮಾತನಾಡಿದ ಹೇಮಾ, ‘‘”ನನ್ನ ಕೆನ್ನೆಗಳನ್ನು ಸರಿಯಾಗಿ, ಸುರಕ್ಷಿತವಾಗಿ ಇಟ್ಟುಕೊಳ್ಳುವುದು ಉತ್ತಮ’’ ಎಂದು ಮಾರ್ಮಿಕವಾಗಿ ಹೇಳಿದ್ದಾರೆ. ಹಲವು ವರ್ಷಗಳ ಹಿಂದೆ ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಅವರು ಮೊದಲ ಬಾರಿಗೆ ಹೇಮಾ ಮಾಲಿನಿ ಅವರ ಕೆನ್ನೆಯನ್ನು ರಸ್ತೆಗಳಿಗೆ ಹೋಲಿಸಿದ್ದರು. ಅಲ್ಲಿಂದ ಇಲ್ಲಿಯವರೆಗೆ ಹಲವು ರಾಜಕೀಯ ಮುಖಂಡರು ಇದೇ ಹೇಳಿಕೆಯನ್ನು ಪುನರಾವರ್ತಿಸಿದ್ದು, ‘ಟ್ರೆಂಡ್’ ಮುಂದುವರೆದಿದೆ ಎಂದು ಹೇಮಾ ಮಾಲಿನಿ ನುಡಿದಿದ್ದಾರೆ.

ಇಂತಹ ಹೇಳಿಕೆಗಳಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಹೇಮಾ ಮಾಲಿನಿ, ‘‘ಇಂಥದ್ದು ಆಗಬಾರದು’’ ಎಂದು ಹೇಳಿದ್ದಾರೆ. ಅಂತಹ ಹೇಳಿಕೆಗಳನ್ನು ಸಾರ್ವಜನಿಕರು ಹೇಳಿದರೆ ನಿರ್ಲಕ್ಷಿಸಬಹುದು. ಆದರೆ ರಾಜಕೀಯ ಮುಖಂಡರು, ಸಂಸತ್ ಸದಸ್ಯರು ಇಂತಹ ಹೇಳಿಕೆಗಳನ್ನು ನೀಡಿದರೆ ಅದು ಉತ್ತಮ ಅಭಿರುಚಿಯಲ್ಲಿದೆ ಎಂದು ತಮಗನ್ನಿಸುವುದಿಲ್ಲ ಎಂದು ಅವರು ಹೇಳಿದ್ದಾರೆ. ಅಲ್ಲದೇ ಇಂತಹ ಪದಪ್ರಯೋಗ ಬಳಸುವ ಮುನ್ನ ಎಚ್ಚರಿಕೆಯಿಂದಿರಬೇಕು ಎಂದ ಅವರು, ‘‘ಯಾವುದೇ ಮಹಿಳೆಯಗೆ ಅಮತಹ ವಿಷಯಗಳನ್ನು ಹೋಲಿಸಿ ಮಾತನಾಡಬಾರದು’’ ಎಂದು ಕಿವಿಮಾತು ಹೇಳಿದ್ದಾರೆ.

ಎಎನ್​ಐ ಜತೆ ಹೇಮಾ ಮಾಲಿನಿ ಮಾತನಾಡಿರುವುದು ಇಲ್ಲಿದೆ:

ಪ್ರಕರಣವೇನು? ಭಾನುವಾರ ನಡೆದಿದ್ದ ರಾಜಕೀಯ ಸಮಾವೇಶವೊಂದರಲ್ಲಿ ಗುಲಾಬ್​ರಾವ್ ಪಾಟೀಲ್ ತಮ್ಮ ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಕುರಿತು ಮಾತನಾಡಿದ್ದರು. ಆಗ ಅವರು, ಹೇಮಾ ಮಾಲಿನಿ ಅವರ ಕೆನ್ನೆಯಂತೆ ರಸ್ತೆಗಳು ನುಣುಪಾಗಿವೆ ಎಂದಿದ್ದರು. ಈ ಹೇಳಿಕೆ ವಿವಾದ ಪಡೆದುಕೊಂಡಿತ್ತು. ಬಳಿಕ ಅವರು ಕ್ಷಮೆಯಾಚಿಸಿ, ಯಾರ ಭಾವನೆಗೂ ಧಕ್ಕೆ ತರುವ ಉದ್ದೇಶವಿರಲಿಲ್ಲ ಎಂದಿದ್ದರು. ‘‘ನಾನು ಯಾರನ್ನೂ ನೋಯಿಸುವ ಉದ್ದೇಶವನ್ನು ಹೊಂದಿರಲಿಲ್ಲ. ನನ್ನ ಹೇಳಿಕೆಗೆ ಕ್ಷಮೆಯಾಚಿಸುತ್ತೇನೆ. ನಾನು ಛತ್ರಪತಿ ಶಿವಾಜಿ ಮಹಾರಾಜರನ್ನು ಆರಾಧಿಸುವ ಶಿವಸೇನೆಗೆ ಸೇರಿದವನು. ಮಹಿಳೆಯರನ್ನು ಗೌರವಿಸುವುದನ್ನು ಪಕ್ಷದ ಸಂಸ್ಥಾಪಕ ಬಾಳಾಸಾಹೇಬ್ ಠಾಕ್ರೆ ನಮಗೆ ಕಲಿಸಿದ್ದಾರೆ’’ ಎಂದು ಅವರು ಕ್ಷಮೆಯಾಚಿಸಿದ್ದರು.

ಇದನ್ನೂ ಓದಿ:

ರಸ್ತೆಗಳನ್ನು ಹೇಮಾ ಮಾಲಿನಿ ಕೆನ್ನೆಗೆ ಹೋಲಿಸಿದ್ದಕ್ಕೆ ಕ್ಷಮೆಯಾಚಿಸಿದ ಮಹಾರಾಷ್ಟ್ರ ಸಚಿವ ಗುಲಾಬ್​​ರಾವ್ ಪಾಟಿಲ್

Tamannaah Bhatia Birthday: 32ನೇ ವಸಂತಕ್ಕೆ ಕಾಲಿಟ್ಟ ತಮನ್ನಾ; ಮಿಲ್ಕಿ ಬ್ಯೂಟಿ ಕುರಿತು ನಿಮಗೆ ತಿಳಿದಿಲ್ಲದ ಸಂಗತಿಗಳು ಇಲ್ಲಿವೆ

Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು