AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Unemployed Husband Maintenance: ನಿರುದ್ಯೋಗಿ ಪತಿಗೆ ತಿಂಗಳಿಗೆ ₹5,000 ಜೀವನಾಂಶ ಕೊಡಬೇಕು ಎಂದು ಆದೇಶಿಸಿದ ಇಂದೋರ್ ನ್ಯಾಯಾಲಯ

ಬ್ಯೂಟಿ ಪಾರ್ಲರ್ ನಡೆಸುತ್ತಿರುವ ಪತ್ನಿ, ನಿರುದ್ಯೋಗಿಯಾದ ಪತಿ. ಕೌಟುಂಬಿಕ ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿದಾಗ ಇಂದೋರ್ ನ್ಯಾಯಾಲಯವು ಪತ್ನಿ ಪತಿಗೆ ಜೀವನಾಂಶವನ್ನು ನೀಡಬೇಕು ಎಂದು ಆದೇಶಿಸಿದೆ. ಪತಿ ಓದಿದ್ದು 12ನೇ ತರಗತಿ, ಪತ್ನಿ ಮತ್ತು ಕುಟುಂಬದವರ ದೌರ್ಜನ್ಯದಿಂದ ಓದು ಮುಂದುವರಿಸಲಾಗಿಲ್ಲ. ಕೆಲಸವಿಲ್ಲದೇ ಇರುವ ಆತ ಜೀವನ ಸಾಗಿಸುವುದು ಹೇಗೆ ಎಂದು ಪತಿಯ ಪರವಾಗಿ ವಕೀಲರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

Unemployed Husband Maintenance: ನಿರುದ್ಯೋಗಿ ಪತಿಗೆ ತಿಂಗಳಿಗೆ ₹5,000 ಜೀವನಾಂಶ ಕೊಡಬೇಕು ಎಂದು ಆದೇಶಿಸಿದ ಇಂದೋರ್ ನ್ಯಾಯಾಲಯ
ಪ್ರಾತಿನಿಧಿಕ ಚಿತ್ರ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Feb 23, 2024 | 4:53 PM

Share

ಇಂದೋರ್ ಫೆಬ್ರುವರಿ 23: ವೈವಾಹಿಕ ಪ್ರಕರಣವೊಂದರಲ್ಲಿ(matrimonial case) ಇಂದೋರ್ ಕೌಟುಂಬಿಕ ನ್ಯಾಯಾಲಯವು ಬ್ಯೂಟಿ ಪಾರ್ಲರ್ ಹೊಂದಿರುವ ಮಹಿಳೆಗೆ ತನ್ನ ನಿರುದ್ಯೋಗಿ ಪತಿಗೆ (Unemployed Husband) ತಿಂಗಳಿಗೆ 5,000 ರೂ.ಗಳನ್ನು ಜೀವನಾಂಶವಾಗಿ (maintenance) ನೀಡುವಂತೆ ಆದೇಶಿಸಿದೆ. ಪತಿಯ ವಕೀಲ ಮನೀಶ್ ಝರೋಲಾ ಅವರ ಪ್ರಕಾರ, ಅವರ ಕಕ್ಷಿದಾರನ ಪತ್ನಿ ಬ್ಯೂಟಿ ಪಾರ್ಲರ್ ನಡೆಸುತ್ತಿದ್ದಾರೆ. ಪತಿ 12 ನೇ ತರಗತಿಯನ್ನು ಪೂರ್ಣಗೊಳಿಸಿದ ನಂತರ ತನ್ನ ಹೆಂಡತಿಯ ಮಾನಸಿಕ ಮತ್ತು ದೈಹಿಕ ಹಿಂಸೆಯಿಂದಾಗಿ ಕಲಿಕೆ ಪೂರ್ಣಗೊಳಿಸಲು ಸಾಧ್ಯವಾಗಲಿಲ್ಲ ಎಂದು ಹೇಳಿದ್ದಾರೆ.

ಮಹಿಳೆಗೆ ಆತನ ಮೇಲೆ ಅಪಾರ ಪ್ರೀತಿ

ಮಹಿಳೆ ತನ್ನ ಕಕ್ಷಿದಾರನ ಮೇಲೆ ಅಪಾರ ಪ್ರೀತಿ ಇಟ್ಟುಕೊಂಡಿದ್ದಾಳೆ. ಆಕೆಗೆ ಮಾತ್ರ ನನ್ನ ಕಕ್ಷಿದಾರನ ಮೇಲೆ ಪ್ರೀತಿ ಇದ್ದದ್ದು.ಆಕೆಯ ಕುಟುಂಬ ಸದಸ್ಯರು ಸೇರಿ 2022 ರಲ್ಲಿ ಆರ್ಯ ಸಮಾಜ ದೇವಸ್ಥಾನದಲ್ಲಿ ತನ್ನ ಕಕ್ಷಿದಾರನ ಇಚ್ಛೆಗೆ ವಿರುದ್ಧವಾಗಿ ಮಹಿಳೆಯನ್ನು ಮದುವೆಯಾಗುವಂತೆ ಒತ್ತಾಯಿಸಿದರು. ಮದುವೆಯಾದ ಕೂಡಲೇ ಈ ಯುವ ದಂಪತಿಗಳು ದೂರವಾಗಿದ್ದರು ಎಂದು ಮನೀಶ್ ಝರೋಲಾ ಹೇಳಿದ್ದಾರೆ.

ಪತಿ ನಿರುದ್ಯೋಗಿ, ಆತ ಜೀವನ ನಡೆಸುವುದು ಹೇಗೆ?

ಆಕೆಯ ಪತಿ ನಿರುದ್ಯೋಗಿಯಾಗಿದ್ದು ಆತನಿಗೆ ಬದುಕು ಸಾಗಿಸಲು ಏನೇನೂ ಇಲ್ಲ ಎಂದು ತನ್ನ ಕಕ್ಷಿದಾರನು ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾನೆ ಎಂದು ಝರೋಲಾ ಹೇಳಿದರು. ಈ ಬಗ್ಗೆ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ವಕೀಲ ಮನೀಶ್ ಝರೋಲಾ, ” ನಮ್ಮ ಮಧ್ಯಂತರ ಅರ್ಜಿಯೊಂದರಲ್ಲಿ, ಫೆಬ್ರುವರಿ 20 ರಂದು (ಮಂಗಳವಾರ) ಕೌಟುಂಬಿಕ ನ್ಯಾಯಾಲಯವು ನನ್ನ ಕಕ್ಷಿದಾರನ ಹೆಂಡತಿಗೆ ಮಾಸಿಕ 5,000 ರೂಗಳನ್ನು ನೀಡುವಂತೆ ಆದೇಶ ನೀಡಿತು, ಜೊತೆಗೆ ವ್ಯಾಜ್ಯದ ವೆಚ್ಚವನ್ನು ಭರಿಸಲು ಹೇಳಿದೆ ಎಂದಿದ್ದಾರೆ.

ಝರೋಲಾ ಪ್ರಕಾರ, ತನ್ನ ಕಕ್ಷಿದಾರ ತನ್ನ ಹೆಂಡತಿ ಮತ್ತು ಅವಳ ಕುಟುಂಬ ಸದಸ್ಯರಿಂದ ಪಡೆದ ಮಾನಸಿಕ ಮತ್ತು ದೈಹಿಕ ಹಿಂಸೆಯ ಬಗ್ಗೆ ಇಂದೋರ್ ಪೊಲೀಸ್ ಕಮಿಷನರ್‌ಗೆ ದೂರು ನೀಡಿದ ನಂತರ ಪ್ರತೀಕಾರವಾಗಿ ಮಹಿಳೆ ಕೌಟುಂಬಿಕ ನ್ಯಾಯಾಲಯದ ಮೊರೆ ಹೋಗಿದ್ದಾರೆ. “ಪ್ರತಿಕಾರವಾಗಿ, ಮಹಿಳೆ ನನ್ನ ಕಕ್ಷಿದಾರನೊಂದಿಗಿನ ವೈವಾಹಿಕ ಸಂಬಂಧವನ್ನು ಮರುಸ್ಥಾಪಿಸುವಂತೆ ಕೋರಿ ಕೌಟುಂಬಿಕ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಅವರು ಜಿಲ್ಲಾ ನ್ಯಾಯಾಲಯದಲ್ಲಿ ತನ್ನ ಪತಿ ವಿರುದ್ಧ ಕೌಟುಂಬಿಕ ದೌರ್ಜನ್ಯದ ಪ್ರಕರಣವನ್ನು ದಾಖಲಿಸಿದ್ದಾರೆ ಎಂದು ಝರೋಲಾ ಹೇಳಿದ್ದಾರೆ.

ಇದನ್ನೂ ಓದಿ: ಇಂದೋರ್ ಸಿಟಿ ಕೌನ್ಸಿಲ್ ಸಭೆ: ನಾಯಿ ಪದಬಳಕೆಗೆ ಆಕ್ಷೇಪ; ಆದರಣೀಯ ಶ್ವಾನ್ ಜೀ ಎಂದು ಸಂಬೋಧಿಸಿದ ಕೌನ್ಸಿಲರ್

ಯುವ ಜೋಡಿ ಮದುವೆಯಾದ ಸ್ವಲ್ಪ ಸಮಯದ ನಂತರ, ಪತಿ ತನ್ನ ಪೋಷಕರ ಬಳಿಗೆ ಓಡಿಹೋಗಿದ್ದಾನೆ. ತನ್ನ ಪತಿ ಕಾಣೆಯಾಗಿದ್ದಾರೆ ಎಂದು ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಅವನನ್ನು ಪತ್ತೆ ಮಾಡಿದರು. ಆದರೆ, ಆತ ತನ್ನ ಹೆಂಡತಿಯೊಂದಿಗೆ ವಾಸಿಸಲು ನಿರಾಕರಿಸಿದ್ದರಿಂದ ವಿಷಯವು ಕೌಟುಂಬಿಕ ನ್ಯಾಯಾಲಯಕ್ಕೆ ತಲುಪಿತು ಎಂದು ಮಾಧ್ಯಮಗಳು ವರದಿ ಮಾಡಿವೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!