AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವ್ಯಾನ್‌ಡೈಕ್ ಪ್ರಕರಣದಲ್ಲಿ ಎಲ್ಲ ಆರೋಪಿಗಳ ವಿರುದ್ಧ ಯುಎಪಿಎ ತನಿಖೆ ಮುಂದುವರೆದಿದೆ; ಎನ್‌ಐಎ ಸ್ಪಷ್ಟನೆ

ಅಮೆರಿಕನ್ ಪ್ರಜೆ ಮ್ಯಾಥ್ಯೂ ಆರನ್ ವ್ಯಾನ್ ಡೈಕ್ ಮತ್ತು 6 ಉಕ್ರೇನಿಯನ್ ಪ್ರಜೆಗಳನ್ನು ಒಳಗೊಂಡ ಪ್ರಕರಣದಲ್ಲಿ, ಭಯೋತ್ಪಾದನೆಗೆ ಸಂಬಂಧಿಸಿದ ತನಿಖೆಯನ್ನು ಇನ್ನೂ ಮುಕ್ತಾಯಗೊಳಿಸಲಾಗಿಲ್ಲ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್​ಐಎ) ಸ್ಪಷ್ಟಪಡಿಸಿದೆ. ಯುಎಪಿಎ ಅಡಿಯಲ್ಲಿ ಎಲ್ಲಾ 7 ಆರೋಪಿಗಳ ವಿರುದ್ಧ ತನಿಖೆ ಮುಂದುವರೆದಿದೆ. ಈ ಎಲ್ಲಾ 7 ಜನರನ್ನು ಮಾರ್ಚ್ ತಿಂಗಳಲ್ಲಿ ಯುಎಪಿಎಯ ಸೆಕ್ಷನ್ 18 ಮತ್ತು ಇತರ ವಿಭಾಗಗಳ ಅಡಿಯಲ್ಲಿ ಬಂಧಿಸಲಾಯಿತು. ಅವರ ವಿರುದ್ಧ ಮ್ಯಾನ್ಮಾರ್‌ಗೆ ಅಕ್ರಮವಾಗಿ ಪ್ರವೇಶಿಸಿದ ಮತ್ತು ಜನಾಂಗೀಯ ಸಶಸ್ತ್ರ ಗುಂಪುಗಳಿಗೆ ಡ್ರೋನ್ ಯುದ್ಧ ತರಬೇತಿಯನ್ನು ನೀಡಿದ ಆರೋಪ ಹೊರಿಸಲಾಗಿದೆ.

ವ್ಯಾನ್‌ಡೈಕ್ ಪ್ರಕರಣದಲ್ಲಿ ಎಲ್ಲ ಆರೋಪಿಗಳ ವಿರುದ್ಧ ಯುಎಪಿಎ ತನಿಖೆ ಮುಂದುವರೆದಿದೆ; ಎನ್‌ಐಎ ಸ್ಪಷ್ಟನೆ
ವ್ಯಾನ್‌ಡೈಕ್Image Credit source: TV9
ಸುಷ್ಮಾ ಚಕ್ರೆ
|

Updated on: Sep 09, 2026 | 4:20 PM

Share

ನವದೆಹಲಿ, ಸೆಪ್ಟೆಂಬರ್ 9: ಮ್ಯಾನ್ಮಾರ್ ಸಂಚು ಪ್ರಕರಣಕ್ಕೆ ಸಂಬಂಧಿಸಿದಂತೆ ಅಮೆರಿಕನ್ ಪ್ರಜೆ ಮ್ಯಾಥ್ಯೂ ಆರನ್ ವ್ಯಾನ್‌ಡೈಕ್ ಮತ್ತು ಇತರೆ 6 ಮಂದಿ ಉಕ್ರೇನ್ ಪ್ರಜೆಗಳ ವಿರುದ್ಧ ಯುಎಪಿಎ ಕಾಯ್ದೆಯಡಿ ದೋಷಾರೋಪಣೆ ಹೊರಿಸಿಲ್ಲ ಎಂಬ ವರದಿಗಳ ಬೆನ್ನಲ್ಲೇ, ನಾವು ಭಯೋತ್ಪಾದನಾ ಕೋನದ ತನಿಖೆಯನ್ನು ಕೈಬಿಟ್ಟಿಲ್ಲ ಎಂದು ಎನ್​ಐಎ ಅಧಿಕೃತ ಸ್ಪಷ್ಟನೆ ನೀಡಿವೆ. ಸದ್ಯದ ತನಿಖೆಯಲ್ಲಿ ವಿದೇಶಿಯರ ನಿಯಮ ಉಲ್ಲಂಘನೆ ಸಾಬೀತಾಗಿರುವುದರಿಂದ ‘ವಲಸೆ ಮತ್ತು ವಿದೇಶಿಯರ ಕಾಯ್ದೆ’ ಅಡಿಯಲ್ಲಿ ಚಾರ್ಜ್‌ಶೀಟ್ ಸಲ್ಲಿಸಲಾಗಿದ್ದು, ಯುಎಪಿಎ ಕಾಯ್ದೆಯಡಿಯ ತನಿಖೆ ಪೂರ್ಣ ಪ್ರಮಾಣದಲ್ಲಿ ಮುಂದುವರಿದಿದೆ ಎಂದು ಸ್ಪಷ್ಟಪಡಿಸಲಾಗಿದೆ.

ಯುಎಪಿಎ ಕಾಯ್ದೆಯ ಪ್ರಕಾರ, ಆರೋಪಿಗಳನ್ನು ಕಸ್ಟಡಿಯಲ್ಲಿಟ್ಟುಕೊಂಡು ಚಾರ್ಜ್‌ಶೀಟ್ ಸಲ್ಲಿಸಲು ತನಿಖಾ ಸಂಸ್ಥೆಗೆ ಗರಿಷ್ಠ 180 ದಿನಗಳ ಕಾಲಾವಕಾಶವಿರುತ್ತದೆ. ಈ ಪ್ರಕರಣದಲ್ಲಿ ಸೆಪ್ಟೆಂಬರ್ 8ರಂದು 180 ದಿನಗಳ ಈ ಶಾಸನಬದ್ಧ ಗಡುವು ಕೊನೆಗೊಳ್ಳುತ್ತಿತ್ತು. ಒಂದು ವೇಳೆ ಈ ಅವಧಿಯೊಳಗೆ ಚಾರ್ಜ್‌ಶೀಟ್ ಸಲ್ಲಿಸದಿದ್ದರೆ, ಆರೋಪಿಗಳಿಗೆ ಕಾನೂನುಬದ್ಧ ಜಾಮೀನು ಸಿಗುವ ಸಾಧ್ಯತೆಯಿತ್ತು. ಅದನ್ನು ತಡೆಯಲು ಸದ್ಯ ಪೂರ್ಣಗೊಂಡಿರುವ ಐಎಫ್‌ಎ ಕಾಯ್ದೆಯಡಿ ದೋಷಾರೋಪಣ ಪಟ್ಟಿ ಸಲ್ಲಿಸಲಾಗಿದೆ.

ಇದನ್ನೂ ಓದಿ: ಮ್ಯಾನ್ಮಾರ್ ಪ್ರಕರಣ; ಅಮೆರಿಕ ಪ್ರಜೆ ಮತ್ತು ಉಕ್ರೇನಿಯನ್ನರ ಮೇಲಿನ ಭಯೋತ್ಪಾದನಾ ಆರೋಪ ಹಿಂಪಡೆದ ಭಾರತ

ಪೂರಕ ದೋಷಾರೋಪಣ ಪಟ್ಟಿ:

ಬಂಧಿತರಿಂದ ವಶಪಡಿಸಿಕೊಂಡಿರುವ ಬೃಹತ್ ಪ್ರಮಾಣದ ಡ್ರೋನ್‌ಗಳು, ಡಿಜಿಟಲ್ ಸಾಧನಗಳು ಹಾಗೂ ಮ್ಯಾನ್ಮಾರ್‌ನ ಜನಾಂಗೀಯ ಸಶಸ್ತ್ರ ಪಡೆಗಳ ಜೊತೆಗಿನ ನಂಟಿನ ತನಿಖೆ ಇನ್ನೂ ಪ್ರಗತಿಯಲ್ಲಿದೆ. ಈ ವಿಶ್ಲೇಷಣೆ ಪೂರ್ಣಗೊಂಡ ತಕ್ಷಣ ಯುಎಪಿಎ ಕಾಯ್ದೆಯಡಿ ಪೂರಕ ಚಾರ್ಜ್‌ಶೀಟ್ ಸಲ್ಲಿಸಲಾಗುವುದು.

ಮ್ಯಾನ್ಮಾರ್‌ಗೆ ರವಾನಿಸಲಾದ ಬೃಹತ್ ಪ್ರಮಾಣದ ಡ್ರೋನ್‌ಗಳು ಹಾಗೂ ವಶಪಡಿಸಿಕೊಂಡ ಡಿಜಿಟಲ್ ಸಾಧನಗಳ ತನಿಖೆ ಇನ್ನೂ ನಡೆಯುತ್ತಿದೆ. ಭಾರತದ ಸಾರ್ವಭೌಮತ್ವ ಮತ್ತು ಭದ್ರತೆಗೆ ಧಕ್ಕೆ ತಂದಿರುವ ನಂಟು ಸಂಪೂರ್ಣ ಸಾಬೀತಾದ ತಕ್ಷಣ ಬಿಎನ್‌ಎಸ್ಎಸ್ ಸೆಕ್ಷನ್ 193(9)ರ ಅಡಿಯಲ್ಲಿ ಪೂರಕ ಚಾರ್ಜ್‌ಶೀಟ್ ಸಲ್ಲಿಸಲಾಗುವುದು ಎಂದು ಎನ್​ಐಎ ಕೋರ್ಟ್‌ಗೆ ತಿಳಿಸಿದೆ.

ಬಾಡಿಗೆ ಸೈನಿಕರ ಅಕ್ರಮ ಚಟುವಟಿಕೆ:

ಅಮೆರಿಕದ ‘ಸನ್ಸ್ ಆಫ್ ಲಿಬರ್ಟಿ ಇಂಟರ್​ನ್ಯಾಷನಲ್’ ಮುಖ್ಯಸ್ಥ ವ್ಯಾನ್‌ಡೈಕ್ ಹಾಗೂ ಆತನ ಉಕ್ರೇನಿಯನ್ ಸಹಚರರು ಭಾರತದ ರಕ್ಷಿತ ಪ್ರದೇಶವಾದ ಮಿಜೋರಾಂ ಮೂಲಕ ಮ್ಯಾನ್ಮಾರ್ ಪ್ರವೇಶಿಸಿ, ಅಲ್ಲಿನ ಸಶಸ್ತ್ರ ಗುಂಪುಗಳಿಗೆ ತರಬೇತಿ ನೀಡುತ್ತಿದ್ದರು. ಭಾರತದ ಭದ್ರತೆ ಮತ್ತು ಸಾರ್ವಭೌಮತ್ವಕ್ಕೆ ಧಕ್ಕೆ ತರುವಂತಹ ಯಾವುದೇ ಚಟುವಟಿಕೆಯನ್ನು ಸರ್ಕಾರ ಹಗುರವಾಗಿ ಪರಿಗಣಿಸಿಲ್ಲ ಎಂದು ಮೂಲಗಳು ಉಲ್ಲೇಖಿಸಿವೆ. ಪ್ರಸ್ತುತ ದೆಹಲಿ ನ್ಯಾಯಾಲಯವು ಪ್ರಕರಣದ ಮುಂದಿನ ವಿಚಾರಣೆಯನ್ನು ಅಕ್ಟೋಬರ್ 1ಕ್ಕೆ ನಿಗದಿಪಡಿಸಿದ್ದು, ಆರೋಪಿಗಳು ನ್ಯಾಯಾಂಗ ಬಂಧನದಲ್ಲೇ ಮುಂದುವರಿಯಲಿದ್ದಾರೆ.

ಇದನ್ನೂ ಓದಿ: ದೆಹಲಿ ಜೈಲಿನಲ್ಲಿ ಅಮೆರಿಕನ್ ಸ್ಟೈಲ್ ಡಯಟ್ ಕೇಳಿ ಕೋರ್ಟ್ ಮೆಟ್ಟಿಲೇರಿದ ವಿದೇಶಿ ಕೈದಿ!

ಪ್ರಕರಣದ ಹಿನ್ನೆಲೆಯೇನು?:

ಮಾರ್ಚ್ 13ರಂದು ಕೊಲ್ಕತ್ತಾ, ಲಕ್ನೋ ಮತ್ತು ದೆಹಲಿ ವಿಮಾನನಿಲ್ದಾಣಗಳಲ್ಲಿ ಅಮೆರಿಕದ ವ್ಯಾನ್‌ಡೈಕ್ ಹಾಗೂ 6 ಮಂದಿ ಉಕ್ರೇನಿಯನ್ನರನ್ನು (ಪೆಟ್ರೋ ಹುರ್ಬಾ, ತಾರಾಸ್ ಸ್ಲಿವಿಯಾಕ್ ಸೇರಿದಂತೆ) ಬಂಧಿಸಲಾಗಿತ್ತು. ಇವರು ಭಾರತ ಹಾಗೂ ಮ್ಯಾನ್ಮಾರ್‌ನ ಜನಾಂಗೀಯ ಸಶಸ್ತ್ರ ಪಡೆಗಳಿಗೆ ಬಾಡಿಗೆ ಸೈನಿಕರಾಗಿ ತರಬೇತಿ ಹಾಗೂ ಡ್ರೋನ್ ಪೂರೈಕೆ ಮಾಡುತ್ತಿದ್ದರೆಂಬ ಆರೋಪದ ಮೇಲೆ ಆರಂಭದಲ್ಲಿ ಯುಎಪಿಎ ಸೆಕ್ಷನ್ 18ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಪ್ರಸ್ತುತ ಇವರು ನ್ಯಾಯಾಂಗ ಬಂಧನದಲ್ಲಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಗೆ ಜಿಲ್ಲಾಡಳಿತದಿಂದ ಟಫ್ ರೂಲ್ಸ್
ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಗೆ ಜಿಲ್ಲಾಡಳಿತದಿಂದ ಟಫ್ ರೂಲ್ಸ್
ರಾಜಕೀಯ ಸ್ವರೂಪ ಪಡೆದ ಸತೀಶ್​​ ಜಾರಕಿಹೊಳಿ ಮನೆ ಮೇಲಿನ ಇಡಿ ದಾಳಿ
ರಾಜಕೀಯ ಸ್ವರೂಪ ಪಡೆದ ಸತೀಶ್​​ ಜಾರಕಿಹೊಳಿ ಮನೆ ಮೇಲಿನ ಇಡಿ ದಾಳಿ
ಸತೀಶ್ ಜಾರಕಿಹೊಳಿ ನಿವಾಸಕ್ಕೆ ಭೇಟಿ ನೀಡಿದ್ದ ರುವಾಂಡಾ ಅಧಿಕಾರಿಗಳು
ಸತೀಶ್ ಜಾರಕಿಹೊಳಿ ನಿವಾಸಕ್ಕೆ ಭೇಟಿ ನೀಡಿದ್ದ ರುವಾಂಡಾ ಅಧಿಕಾರಿಗಳು
8 ವರ್ಷಗಳಿಂದ ಪರಿಸರ ಸ್ನೇಹಿ ಗಣಪತಿ ತಯಾರಿಸುತ್ತಿರುವ ಬೀದರ್ ಕಲಾವಿದ!
8 ವರ್ಷಗಳಿಂದ ಪರಿಸರ ಸ್ನೇಹಿ ಗಣಪತಿ ತಯಾರಿಸುತ್ತಿರುವ ಬೀದರ್ ಕಲಾವಿದ!
ಸತೀಶ್ ಜಾರಕಿಹೊಳಿ ಆಪ್ತರ ಮನೆಗಳಲ್ಲಿ ಮಹತ್ವದ ದಾಖಲೆ ಪತ್ತೆ
ಸತೀಶ್ ಜಾರಕಿಹೊಳಿ ಆಪ್ತರ ಮನೆಗಳಲ್ಲಿ ಮಹತ್ವದ ದಾಖಲೆ ಪತ್ತೆ
‘ಓಂ’ ನನ್ನ ಮೆಚ್ಚಿನ ಸಿನಿಮಾ ಎಂದ ತೆಲುಗು ನಟ ಸುನಿಲ್
‘ಓಂ’ ನನ್ನ ಮೆಚ್ಚಿನ ಸಿನಿಮಾ ಎಂದ ತೆಲುಗು ನಟ ಸುನಿಲ್
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?