AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

New Parliament: ಸಂಸತ್ ಭವನವನ್ನು ಮೋದಿ ಅಲ್ಲದೆ ಪಾಕ್ ಪ್ರಧಾನಿ ಉದ್ಘಾಟಿಸಲಾಗುತ್ತದೆಯೇ; ಮೌಲಾನಾ ಮುಫ್ತಿ ಪ್ರಶ್ನೆ

ಸಂಸತ್ ಭವನದ ನೂತನ ಕಟ್ಟಡವನ್ನು ಉದ್ಘಾಟಿಸುವ ಹಕ್ಕು ಪ್ರಧಾನಿ ನರೇಂದ್ರ ಮೋದಿಯವರಿಗೆ ಇದೆ. ಅದನ್ನು ಅವರೇ ಮಾಡಬೇಕಲ್ಲದೆ ಪಾಕಿಸ್ತಾನದ ಪ್ರಧಾನಿ ಮಾಡಬೇಕಾದ್ದಲ್ಲ ಎಂದು ಅಖಿಲ ಭಾರತ ಮುಸ್ಲಿಂ ಜಮಾತ್ ರಾಷ್ಟ್ರೀಯ ಅಧ್ಯಕ್ಷ ಮೌಲಾನಾ ಮುಫ್ತಿ ಶಹಾಬುದ್ದೀನ್ ರಜ್ವಿ ಹೇಳಿದ್ದಾರೆ.

New Parliament: ಸಂಸತ್ ಭವನವನ್ನು ಮೋದಿ ಅಲ್ಲದೆ ಪಾಕ್ ಪ್ರಧಾನಿ ಉದ್ಘಾಟಿಸಲಾಗುತ್ತದೆಯೇ; ಮೌಲಾನಾ ಮುಫ್ತಿ ಪ್ರಶ್ನೆ
ಮೌಲಾನಾ ಮುಫ್ತಿ ಶಹಾಬುದ್ದೀನ್ ರಜ್ವಿ
ಗಣಪತಿ ಶರ್ಮಾ
|

Updated on: May 25, 2023 | 6:06 PM

Share

ಬರೇಲಿ: ಸಂಸತ್ ಭವನದ ನೂತನ ಕಟ್ಟಡವನ್ನು (New Parliament) ಉದ್ಘಾಟಿಸುವ ಹಕ್ಕು ಪ್ರಧಾನಿ ನರೇಂದ್ರ ಮೋದಿಯವರಿಗೆ (Narendra Modi) ಇದೆ. ಅದನ್ನು ಅವರೇ ಮಾಡಬೇಕಲ್ಲದೆ ಪಾಕಿಸ್ತಾನದ ಪ್ರಧಾನಿ ಮಾಡಬೇಕಾದ್ದಲ್ಲ ಎಂದು ಅಖಿಲ ಭಾರತ ಮುಸ್ಲಿಂ ಜಮಾತ್ ರಾಷ್ಟ್ರೀಯ ಅಧ್ಯಕ್ಷ ಮೌಲಾನಾ ಮುಫ್ತಿ ಶಹಾಬುದ್ದೀನ್ ರಜ್ವಿ (maulana mufti shahabuddin razvi) ಹೇಳಿದ್ದಾರೆ. ಉತ್ತರ ಪ್ರದೇಶದ ಬರೇಲಿಯಲ್ಲಿ ಮಾತನಾಡಿದ ಅವರು, ನೂತನ ಸಂಸತ್ ಭವನ ಲೋಕಾರ್ಪಣೆ ವಿಚಾರವಾಗಿ ಕೇಂದ್ರ ಸರ್ಕಾರವನ್ನು ಬೆಂಬಲಿಸಿ ಹೇಳಿಕೆ ನೀಡಿದ್ದಾರೆ. ಮೇ 29 ರಂದು ಸಂಸತ್ತಿನ ನೂತನ ಕಟ್ಟಡವನ್ನು ಮೋದಿ ಲೋಕಾರ್ಪಣೆ ಮಾಡಲಿದ್ದಾರೆ. ಮೋದಿ ಅವರು ಉದ್ಘಾಟನೆ ಮಾಡುವುದನ್ನು ಪ್ರತಿಭಟಿಸಿ ಸುಮಾರು 20 ಪ್ರತಿಪಕ್ಷಗಳು ಸಮಾರಂಭವನ್ನು ಬಹಿಷ್ಕರಿಸುವುದಾಗಿ ಘೋಷಿಸಿರುವ ಸಂದರ್ಭದಲ್ಲೇ ಮೌಲಾನಾ ಮುಫ್ತಿ ಶಹಾಬುದ್ದೀನ್ ರಜ್ವಿ ಈ ಹೇಳಿಕೆ ನೀಡಿದ್ದಾರೆ.

ಕೇಂದ್ರ ಸರ್ಕಾರದ ನೇತೃತ್ವದಲ್ಲಿ ಈ ನೂತನ ಸಂಸತ್ ಭವನದ ಕಾಮಗಾರಿ ಪೂರ್ಣಗೊಂಡಿದೆ. ಸ್ವತಃ ಪ್ರಧಾನಿಯೇ ಇದರ ನಿರ್ಮಾಣಕ್ಕೆ ಹೆಚ್ಚಿನ ಆಸಕ್ತಿ ವಹಿಸಿದ್ದನ್ನು ನಾವೆಲ್ಲರೂ ನೋಡಿದ್ದೇವೆ. ಅವರ ನೇತೃತ್ವದಲ್ಲಿ ಈ ಹೊಸ ಸಂಸತ್ ಭವನ ಪೂರ್ಣಗೊಂಡಿದೆ. ಇಂತಹ ಪರಿಸ್ಥಿತಿಯಲ್ಲಿ ಪ್ರಧಾನಿಗೆ ಮಾತ್ರ ಉದ್ಘಾಟನೆ ಮಾಡುವ ಹಕ್ಕು ಇದೆ ಎಂದು ರಜ್ವಿ ಹೇಳಿದ್ದಾರೆ.

ಪ್ರತಿಭಟಿಸುವವರಿಗೆ ನಾಚಿಕೆಯಾಗಬೇಕೆಂದ ರಜ್ವಿ

ಸಂಸತ್ ಭವನದ ಹೊಸ ಕಟ್ಟಡವನ್ನು ಭಾರತದ ಪ್ರಧಾನಿ ಉದ್ಘಾಟಿಸದೆ, ಪಾಕಿಸ್ತಾನದ ಪ್ರಧಾನಿ ಶಹಬಾಜ್ ಷರೀಫ್ ಮಾಡಬೇಕೇ? ಇದನ್ನು ವಿರೋಧಿಸುತ್ತಿರುವವರಿಗೆ ನಾಚಿಕೆಯಾಗಬೇಕು ಎಂದಿದ್ದಾರೆ. ನೂತನ ಸಂಸತ್ ಭವನದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಸಂಸತ್ತಿನ ಎಲ್ಲಾ ಮುಸ್ಲಿಂ ಸದಸ್ಯರಲ್ಲಿ ನಾನು ಮನವಿ ಮಾಡುತ್ತೇನೆ ಎಂದೂ ಹೇಳಿದ್ದಾರೆ.

ಇದನ್ನೂ ಓದಿ: Old Parliament History: ಹೊಸ ಸಂಸತ್ ಉದ್ಘಾಟನೆಗೆ ದಿನಗಣನೆ; ಇತಿಹಾಸದ ಪುಟ ಸೇರಲಿರುವ ಹಳೆ ಸಂಸತ್ ವಿಶೇಷಗಳು ಇಲ್ಲಿವೆ

ಎಐಎಂಐ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರನ್ನು ಉದ್ದೇಶಿಸಿ ಅವರು, ಜನರನ್ನು ದಾರಿತಪ್ಪಿಸಬೇಡಿ ಎಂದು ಹೇಳಿದ್ದಾರೆ. ನಿಗದಿತ ದಿನಾಂಕದಂದು ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ, ಭಾರತಕ್ಕೆ ಸಿಗುವ ಉಡುಗೊರೆಯನ್ನು ಸ್ವಂತ ಕಣ್ಣುಗಳಿಂದ ನೋಡುವ ಮೂಲಕ ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಗಳಾಗಿರಿ ಎಂದು ಅವರ ಕರೆ ನೀಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!