AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

New Parliament: ಸಂಸತ್ ಭವನವನ್ನು ಮೋದಿ ಅಲ್ಲದೆ ಪಾಕ್ ಪ್ರಧಾನಿ ಉದ್ಘಾಟಿಸಲಾಗುತ್ತದೆಯೇ; ಮೌಲಾನಾ ಮುಫ್ತಿ ಪ್ರಶ್ನೆ

ಸಂಸತ್ ಭವನದ ನೂತನ ಕಟ್ಟಡವನ್ನು ಉದ್ಘಾಟಿಸುವ ಹಕ್ಕು ಪ್ರಧಾನಿ ನರೇಂದ್ರ ಮೋದಿಯವರಿಗೆ ಇದೆ. ಅದನ್ನು ಅವರೇ ಮಾಡಬೇಕಲ್ಲದೆ ಪಾಕಿಸ್ತಾನದ ಪ್ರಧಾನಿ ಮಾಡಬೇಕಾದ್ದಲ್ಲ ಎಂದು ಅಖಿಲ ಭಾರತ ಮುಸ್ಲಿಂ ಜಮಾತ್ ರಾಷ್ಟ್ರೀಯ ಅಧ್ಯಕ್ಷ ಮೌಲಾನಾ ಮುಫ್ತಿ ಶಹಾಬುದ್ದೀನ್ ರಜ್ವಿ ಹೇಳಿದ್ದಾರೆ.

New Parliament: ಸಂಸತ್ ಭವನವನ್ನು ಮೋದಿ ಅಲ್ಲದೆ ಪಾಕ್ ಪ್ರಧಾನಿ ಉದ್ಘಾಟಿಸಲಾಗುತ್ತದೆಯೇ; ಮೌಲಾನಾ ಮುಫ್ತಿ ಪ್ರಶ್ನೆ
ಮೌಲಾನಾ ಮುಫ್ತಿ ಶಹಾಬುದ್ದೀನ್ ರಜ್ವಿ
Follow us
Ganapathi Sharma
|

Updated on: May 25, 2023 | 6:06 PM

ಬರೇಲಿ: ಸಂಸತ್ ಭವನದ ನೂತನ ಕಟ್ಟಡವನ್ನು (New Parliament) ಉದ್ಘಾಟಿಸುವ ಹಕ್ಕು ಪ್ರಧಾನಿ ನರೇಂದ್ರ ಮೋದಿಯವರಿಗೆ (Narendra Modi) ಇದೆ. ಅದನ್ನು ಅವರೇ ಮಾಡಬೇಕಲ್ಲದೆ ಪಾಕಿಸ್ತಾನದ ಪ್ರಧಾನಿ ಮಾಡಬೇಕಾದ್ದಲ್ಲ ಎಂದು ಅಖಿಲ ಭಾರತ ಮುಸ್ಲಿಂ ಜಮಾತ್ ರಾಷ್ಟ್ರೀಯ ಅಧ್ಯಕ್ಷ ಮೌಲಾನಾ ಮುಫ್ತಿ ಶಹಾಬುದ್ದೀನ್ ರಜ್ವಿ (maulana mufti shahabuddin razvi) ಹೇಳಿದ್ದಾರೆ. ಉತ್ತರ ಪ್ರದೇಶದ ಬರೇಲಿಯಲ್ಲಿ ಮಾತನಾಡಿದ ಅವರು, ನೂತನ ಸಂಸತ್ ಭವನ ಲೋಕಾರ್ಪಣೆ ವಿಚಾರವಾಗಿ ಕೇಂದ್ರ ಸರ್ಕಾರವನ್ನು ಬೆಂಬಲಿಸಿ ಹೇಳಿಕೆ ನೀಡಿದ್ದಾರೆ. ಮೇ 29 ರಂದು ಸಂಸತ್ತಿನ ನೂತನ ಕಟ್ಟಡವನ್ನು ಮೋದಿ ಲೋಕಾರ್ಪಣೆ ಮಾಡಲಿದ್ದಾರೆ. ಮೋದಿ ಅವರು ಉದ್ಘಾಟನೆ ಮಾಡುವುದನ್ನು ಪ್ರತಿಭಟಿಸಿ ಸುಮಾರು 20 ಪ್ರತಿಪಕ್ಷಗಳು ಸಮಾರಂಭವನ್ನು ಬಹಿಷ್ಕರಿಸುವುದಾಗಿ ಘೋಷಿಸಿರುವ ಸಂದರ್ಭದಲ್ಲೇ ಮೌಲಾನಾ ಮುಫ್ತಿ ಶಹಾಬುದ್ದೀನ್ ರಜ್ವಿ ಈ ಹೇಳಿಕೆ ನೀಡಿದ್ದಾರೆ.

ಕೇಂದ್ರ ಸರ್ಕಾರದ ನೇತೃತ್ವದಲ್ಲಿ ಈ ನೂತನ ಸಂಸತ್ ಭವನದ ಕಾಮಗಾರಿ ಪೂರ್ಣಗೊಂಡಿದೆ. ಸ್ವತಃ ಪ್ರಧಾನಿಯೇ ಇದರ ನಿರ್ಮಾಣಕ್ಕೆ ಹೆಚ್ಚಿನ ಆಸಕ್ತಿ ವಹಿಸಿದ್ದನ್ನು ನಾವೆಲ್ಲರೂ ನೋಡಿದ್ದೇವೆ. ಅವರ ನೇತೃತ್ವದಲ್ಲಿ ಈ ಹೊಸ ಸಂಸತ್ ಭವನ ಪೂರ್ಣಗೊಂಡಿದೆ. ಇಂತಹ ಪರಿಸ್ಥಿತಿಯಲ್ಲಿ ಪ್ರಧಾನಿಗೆ ಮಾತ್ರ ಉದ್ಘಾಟನೆ ಮಾಡುವ ಹಕ್ಕು ಇದೆ ಎಂದು ರಜ್ವಿ ಹೇಳಿದ್ದಾರೆ.

ಪ್ರತಿಭಟಿಸುವವರಿಗೆ ನಾಚಿಕೆಯಾಗಬೇಕೆಂದ ರಜ್ವಿ

ಸಂಸತ್ ಭವನದ ಹೊಸ ಕಟ್ಟಡವನ್ನು ಭಾರತದ ಪ್ರಧಾನಿ ಉದ್ಘಾಟಿಸದೆ, ಪಾಕಿಸ್ತಾನದ ಪ್ರಧಾನಿ ಶಹಬಾಜ್ ಷರೀಫ್ ಮಾಡಬೇಕೇ? ಇದನ್ನು ವಿರೋಧಿಸುತ್ತಿರುವವರಿಗೆ ನಾಚಿಕೆಯಾಗಬೇಕು ಎಂದಿದ್ದಾರೆ. ನೂತನ ಸಂಸತ್ ಭವನದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಸಂಸತ್ತಿನ ಎಲ್ಲಾ ಮುಸ್ಲಿಂ ಸದಸ್ಯರಲ್ಲಿ ನಾನು ಮನವಿ ಮಾಡುತ್ತೇನೆ ಎಂದೂ ಹೇಳಿದ್ದಾರೆ.

ಇದನ್ನೂ ಓದಿ: Old Parliament History: ಹೊಸ ಸಂಸತ್ ಉದ್ಘಾಟನೆಗೆ ದಿನಗಣನೆ; ಇತಿಹಾಸದ ಪುಟ ಸೇರಲಿರುವ ಹಳೆ ಸಂಸತ್ ವಿಶೇಷಗಳು ಇಲ್ಲಿವೆ

ಎಐಎಂಐ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರನ್ನು ಉದ್ದೇಶಿಸಿ ಅವರು, ಜನರನ್ನು ದಾರಿತಪ್ಪಿಸಬೇಡಿ ಎಂದು ಹೇಳಿದ್ದಾರೆ. ನಿಗದಿತ ದಿನಾಂಕದಂದು ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ, ಭಾರತಕ್ಕೆ ಸಿಗುವ ಉಡುಗೊರೆಯನ್ನು ಸ್ವಂತ ಕಣ್ಣುಗಳಿಂದ ನೋಡುವ ಮೂಲಕ ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಗಳಾಗಿರಿ ಎಂದು ಅವರ ಕರೆ ನೀಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ
ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ
ದಕ್ಷತೆಯಿಂದ ಗುಮಾಸ್ತ ಕೆಲಸ ಮಾಡುತ್ತಿದ್ದ: ಪ್ರಾದೇಶಿಕ ಸಾರಿಗೆ ಅಧಿಕಾರಿ
ದಕ್ಷತೆಯಿಂದ ಗುಮಾಸ್ತ ಕೆಲಸ ಮಾಡುತ್ತಿದ್ದ: ಪ್ರಾದೇಶಿಕ ಸಾರಿಗೆ ಅಧಿಕಾರಿ
ಪ್ರಲ್ಹಾದ್ ಜೋಶಿ ಸುದ್ದಿಗೋಷ್ಠಿ ಲೈವ್
ಪ್ರಲ್ಹಾದ್ ಜೋಶಿ ಸುದ್ದಿಗೋಷ್ಠಿ ಲೈವ್
‘ಜನರಿಗೆ ಮನು ಬುದ್ಧಿ ತೋರಿಸಲು ಆ ಆಡಿಯೋ ಬಿಟ್ಟೆ’; ಸಂತ್ರಸ್ತೆಯ ನೇರ ಮಾತು
‘ಜನರಿಗೆ ಮನು ಬುದ್ಧಿ ತೋರಿಸಲು ಆ ಆಡಿಯೋ ಬಿಟ್ಟೆ’; ಸಂತ್ರಸ್ತೆಯ ನೇರ ಮಾತು
ಒಂದೇ ವಿಮಾನದಲ್ಲಿ ದೆಹಲಿಗೆ ಹೊರಟ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಒಂದೇ ವಿಮಾನದಲ್ಲಿ ದೆಹಲಿಗೆ ಹೊರಟ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಗೂಗಲ್ ನಂಬಿ, ನಿರ್ಮಾಣ ಹಂತದ ಸೇತುವೆ ಮೇಲೆ ಹೋಗಿ ನೇತಾಡಿದ ಕಾರು
ಗೂಗಲ್ ನಂಬಿ, ನಿರ್ಮಾಣ ಹಂತದ ಸೇತುವೆ ಮೇಲೆ ಹೋಗಿ ನೇತಾಡಿದ ಕಾರು