AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳೆದೊಂದು ವರ್ಷದಿಂದ ದೇಶದಲ್ಲಿ ಕಂಡುಬಂದ ಒಟ್ಟು ಕೊರೊನಾ ಸೋಂಕಿತರ ಶೇ.27ರಷ್ಟು ಪಾಲು ಮೇ ತಿಂಗಳ 21 ದಿನದಲ್ಲಿ ಪತ್ತೆ

ನಿನ್ನೆ (ಮೇ 21) ಅಂತ್ಯದ ವೇಳೆಗೆ ದೇಶದಲ್ಲಿ ಮೇ ತಿಂಗಳೊಂದರಲ್ಲೇ ದಾಖಲಾದ ಸೋಂಕಿತರ ಸಂಖ್ಯೆ 70 ಲಕ್ಷದ ಗಡಿ ದಾಟಿದೆ. ಕಳೆದ ಏಪ್ರಿಲ್ ತಿಂಗಳಿನಲ್ಲಿ ಒಟ್ಟು 69.4ಲಕ್ಷ ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಮೇ ತಿಂಗಳ 21 ದಿದೊಳಗೆ 71.3ಲಕ್ಷ ಕೇಸ್ ಪತ್ತೆಯಾಗಿರುವುದು ತಜ್ಞರನ್ನು ಚಿಂತೆಗೀಡುಮಾಡಿದೆ.

ಕಳೆದೊಂದು ವರ್ಷದಿಂದ ದೇಶದಲ್ಲಿ ಕಂಡುಬಂದ ಒಟ್ಟು ಕೊರೊನಾ ಸೋಂಕಿತರ ಶೇ.27ರಷ್ಟು ಪಾಲು ಮೇ ತಿಂಗಳ 21 ದಿನದಲ್ಲಿ ಪತ್ತೆ
ಸಾಂದರ್ಭಿಕ ಚಿತ್ರ
Follow us
Skanda
|

Updated on: May 22, 2021 | 10:39 AM

ದೆಹಲಿ: ಭಾರತದಲ್ಲಿ ಕೊರೊನಾ ಎರಡನೇ ಅಲೆ ಸೃಷ್ಟಿಸಿರುವ ಅವಾಂತರದಿಂದ ಜನ ಸಾಮಾನ್ಯರ ಜೀವನ ದುರ್ಭರವಾಗಿದೆ. ಕಳೆದ 24 ಗಂಟೆಯಲ್ಲಿ ಮತ್ತೆ ಹೊಸದಾಗಿ 2,57,299 ಕೊರೊನಾ ಪ್ರಕರಣಗಳು ದಾಖಲಾಗಿದ್ದು, 4,194 ಜನ ಸೋಂಕಿನಿಂದ ಕೊನೆಯುಸಿರೆಳೆದಿದ್ದಾರೆ. ಸದ್ಯ ದೇಶದಲ್ಲಿ 29,23,400 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ ದಾಖಲಾದ ಒಟ್ಟು ಪ್ರಕರಣಗಳ ಸಂಖ್ಯೆ 2,62,89,290ಕ್ಕೆ ತಲುಪಿದೆ. ಕೊರೊನಾದಿಂದಾಗಿ ದೇಶದಲ್ಲಿ ಇಲ್ಲಿಯ ತನಕ 2,95,525ಜನ ಮೃತಪಟ್ಟಿದ್ದರೆ, 2,30,70,365ಜನ ಚೇತರಿಸಿಕೊಂಡಿದ್ದಾರೆ.

ಮೂರು ವಾರಗಳ ನಂತರ ದಿನವೊಂದರಲ್ಲಿ 30ಲಕ್ಷಕ್ಕೂ ಕಡಿಮೆ ಪ್ರಕರಣಗಳು ದಾಖಲಾಗಿರುವುದು ಕೊಂಚ ಆಶಾದಾಯಕ ಬೆಳವಣಿಗೆ ಆಗಿದ್ದರೂ, ಹೊಸ ಪ್ರಕರಣಗಳ ಬಹುಪಾಲು ಪ್ರಮಾಣ ತಮಿಳುನಾಡು, ಕರ್ನಾಟಕ, ಕೇರಳದಲ್ಲಿ ಕಂಡುಬರುತ್ತಿರುವುದು ಚಿಂತೆಗೀಡುಮಾಡುತ್ತಿದೆ. ಅತ್ತ ನೆರೆಯ ಮಹಾರಾಷ್ಟ್ರದಲ್ಲಿ ಪರಿಸ್ಥಿತಿ ಸ್ವಲ್ಪ ಸುಧಾರಿಸುತ್ತಿದ್ದು ದೈನಂದಿನ ಪ್ರಕರಣಗಳ ಸಂಖ್ಯೆ 30 ಸಾವಿರಕ್ಕಿಂತಲೂ ಕಡಿಮೆ ಆಗಿದೆ.

ಸಾವಿನ ಪ್ರಮಾಣ ಹಾಗೂ ಸೋಂಕಿತರ ಸಂಖ್ಯೆ ಆಘಾತಕಾರಿ ರೀತಿಯಲ್ಲಿ ಹೆಚ್ಚುತ್ತಿರುವ ಕಾರಣ ಕರ್ನಾಟಕ, ಕೇರಳ, ಗೋವಾ ರಾಜ್ಯಗಳು ಈಗಾಗಲೇ ಜಾರಿಯಲ್ಲಿದ್ದ ಕಠಿಣ ನಿಯಮಾವಳಿಗಳನ್ನು ಮತ್ತೆ ವಿಸ್ತರಣೆ ಮಾಡಿವೆ. ಕರ್ನಾಟಕದಲ್ಲಿ ಜೂನ್​ 7ರ ತನಕ, ಗೋವಾದಲ್ಲಿ ಮೇ 31ರ ತನಕ ಹಾಗೂ ಕೇರಳದಲ್ಲಿ ಮೇ 30ರ ತನಕ ನಿಯಮಾವಳಿಗಳು ಜಾರಿಯಲ್ಲಿರಲಿವೆ.

ಇದೆಲ್ಲದರ ನಡುವೆ ವಿದೇಶಾಂಗ ಸಚಿವ ಎಸ್.ಜೈಶಂಕರ್ ಮೇ 24ರಿಂದ ಮೇ 28ರ ತನಕ ಅಮೆರಿಕಾಕ್ಕೆ ಭೇಟಿ ನೀಡುತ್ತಿದ್ದು, ಲಸಿಕೆ ಉತ್ಪಾದಕರು ಹಾಗೂ ಉನ್ನತ ಮಟ್ಟದ ತಜ್ಞರ ಜತೆ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ದೇಶದಲ್ಲಿ ತೀವ್ರವಾಗಿ ಲಸಿಕೆ ಕೊರತೆ ಎದುರಾಗಿರುವುದು ದೊಡ್ಡ ಸಮಸ್ಯೆಯಾಗಿರುವುದರಿಂದ ಅದಕ್ಕೆ ಪರಿಹಾರ ಕಂಡುಕೊಳ್ಳುವ ಬಗ್ಗೆ ಮಾತುಕತೆ ನಡೆಸಲಿದ್ದಾರೆ.

ಮೇ ತಿಂಗಳು ಅತ್ಯಂತ ಅಪಾಯಕಾರಿ ದೇಶದಲ್ಲಿ ಕೊರೊನಾ ಪ್ರಕರಣಗಳ ಕೊಂಚ ಇಳಿಮುಖವಾಗುತ್ತಿರುವಂತೆ ಕಾಣುತ್ತಿದ್ದರೂ ಮೇ ತಿಂಗಳ ಮೊದಲ ದಿನದಿಂದ 21ನೇ ತಾರೀಖಿನ ತನಕದ ಅಂಕಿ ಅಂಶಗಳನ್ನು ಗಮನಿಸಿದರೆ ಸೋಂಕು ಅತ್ಯಂತ ವ್ಯಾಪಕವಾಗಿ ಹರಡಿರುವುದು ಕಂಡುಬರುತ್ತದೆ. ನಿನ್ನೆ (ಮೇ 21) ಅಂತ್ಯದ ವೇಳೆಗೆ ದೇಶದಲ್ಲಿ ಮೇ ತಿಂಗಳೊಂದರಲ್ಲೇ ದಾಖಲಾದ ಸೋಂಕಿತರ ಸಂಖ್ಯೆ 70 ಲಕ್ಷದ ಗಡಿ ದಾಟಿದೆ. ಕಳೆದ ಏಪ್ರಿಲ್ ತಿಂಗಳಿನಲ್ಲಿ ಒಟ್ಟು 69.4ಲಕ್ಷ ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಮೇ ತಿಂಗಳ 21 ದಿದೊಳಗೆ 71.3ಲಕ್ಷ ಕೇಸ್ ಪತ್ತೆಯಾಗಿರುವುದು ತಜ್ಞರನ್ನು ಚಿಂತೆಗೀಡುಮಾಡಿದೆ. ಕಳೆದ ವರ್ಷದಿಂದ ಇಲ್ಲಿಯ ತನಕ ದೇಶದಲ್ಲಿ ದಾಖಲಾದ ಒಟ್ಟು ಸೋಂಕಿತರ ಶೇ.27ರಷ್ಟು ಭಾಗ ಮೇ ತಿಂಗಳ 21 ದಿನದಲ್ಲಿ ಕಂಡುಬಂದಿರುವುದು ಚಿಂತನಾರ್ಹ ಸಂಗತಿಯಾಗಿದೆ.

ಇದನ್ನೂ ಓದಿ: ಕೊರೊನಾದಿಂದ ನಿಜವಾಗಿಯೂ ಸಂಭವಿಸಿದ ಸಾವುಗಳೆಷ್ಟು? ಅಧಿಕೃತ ಅಂಕಿಗೂ ಆರೋಗ್ಯ ಸಂಸ್ಥೆ ನೀಡಿದ ಲೆಕ್ಕಾಚಾರಕ್ಕೂ ವ್ಯತ್ಯಾಸ ನೋಡಿ! 

ಕೊರೊನಾ ಸೋಂಕಿತರಿಗೆ ನೀಡುವ ಸ್ಟಿರಾಯ್ಡ್​ನಿಂದ ಸಕ್ಕರೆ ಖಾಯಿಲೆಗೆ ತುತ್ತಾಗುವ ಸಾಧ್ಯತೆ ಹೆಚ್ಚು; ಇಲ್ಲಿದೆ ವಿವರ

‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ