AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರಾಖಂಡದಲ್ಲಿ ಟ್ರೆಕಿಂಗ್ ಹೋಗಿದ್ದ ಎಂಬಿಎ ವಿದ್ಯಾರ್ಥಿನಿ ನಾಪತ್ತೆ; ಆಗಿದ್ದೇನು?

ಕಳೆದ ತಿಂಗಳು 23 ವರ್ಷದ ಎಂಬಿಎ ವಿದ್ಯಾರ್ಥಿನಿಯೊಬ್ಬರು ನಾಪತ್ತೆಯಾದ ನಂತರ ಉತ್ತರಾಖಂಡದ ಉತ್ತರಕಾಶಿಯಲ್ಲಿ ಟ್ರೆಕ್ಕಿಂಗ್ ಏಜೆನ್ಸಿಯೊಂದರ ಪಾತ್ರದ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ನಾಪತ್ತೆಯಾದ ವಿದ್ಯಾರ್ಥಿನಿಯನ್ನು ಬಬಿತಾ ಪಾಂಡೆ ಎಂದು ಗುರುತಿಸಲಾಗಿದ್ದು, ಆಕೆ ತನ್ನ ಇಬ್ಬರು ಸ್ನೇಹಿತರೊಂದಿಗೆ ಟ್ರೆಕ್ಕಿಂಗ್‌ಗೆ ಹೋಗಿದ್ದರು. ಆಕೆ ಮತ್ತು ಆಕೆಯ ಇಬ್ಬರು ಸ್ನೇಹಿತರು ಮೇ 28ರಂದು ರೈಥಾಲ್ ಗ್ರಾಮದಲ್ಲಿ ತಂಗಿದ್ದರು. ಇದು ಸಿಸಿಟಿವಿ (CCTV) ಯಲ್ಲಿ ಸೆರೆಯಾಗಿದೆ. ಅದಾದ ಒಂದು ದಿನದ ನಂತರ, ಅವರು ರೈಥಾಲ್‌ನಿಂದ ದಯಾರಾ ಬುಗ್ಯಾಲ್‌ಗೆ ತಮ್ಮ ಟ್ರೆಕ್ಕಿಂಗ್ ಪ್ರಾರಂಭಿಸಿದರು. ಆದರೆ ಬಬಿತಾ ಆ ಕ್ಯಾಂಪ್‌ನಿಂದಲೇ ನಾಪತ್ತೆಯಾಗಿದ್ದಾಳೆ. ಭಾರತೀಯ ಸೇನೆ, ITBP, NDRF, SDRF, ಪೊಲೀಸ್, ಅರಣ್ಯ ಇಲಾಖೆ ಮತ್ತು ವಿಪತ್ತು ನಿರ್ವಹಣಾ ಸಿಬ್ಬಂದಿಯನ್ನು ಒಳಗೊಂಡ ಬೃಹತ್ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಸುಮಾರು 150ಕ್ಕೂ ಹೆಚ್ಚು ಸಿಬ್ಬಂದಿ ಈ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದಾರೆ.

ಉತ್ತರಾಖಂಡದಲ್ಲಿ ಟ್ರೆಕಿಂಗ್ ಹೋಗಿದ್ದ ಎಂಬಿಎ ವಿದ್ಯಾರ್ಥಿನಿ ನಾಪತ್ತೆ; ಆಗಿದ್ದೇನು?
Uttarakhand Girl MissingImage Credit source: x
ಸುಷ್ಮಾ ಚಕ್ರೆ
|

Updated on:Jun 04, 2026 | 3:52 PM

Share

ಡೆಹ್ರಾಡೂನ್, ಜೂನ್ 4: ಉತ್ತರಾಖಂಡದ ಗಡ್ವಾಲ್ ಹಿಮಾಲಯದಲ್ಲಿ ಟ್ರೆಕ್ಕಿಂಗ್‌ಗೆ (Trekking) ಹೋಗಿದ್ದ ಎಂಬಿಎ ವಿದ್ಯಾರ್ಥಿನಿಯೊಬ್ಬರು ನಾಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಠಿಣ ಕಾನೂನು ಕ್ರಮಗಳು ಆರಂಭವಾಗಿವೆ. ಉತ್ತರಾಖಂಡದ ದುರ್ಗಮ ಬೆಟ್ಟ ಪ್ರದೇಶದಲ್ಲಿ ಟ್ರೆಕ್ಕಿಂಗ್ ಮಾಡುವಾಗ ಎಂಬಿಎ ವಿದ್ಯಾರ್ಥಿನಿ ನಿಗೂಢವಾಗಿ ನಾಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರಾಖಂಡ ಪೊಲೀಸರು ಮತ್ತು ಅರಣ್ಯ ಇಲಾಖೆ ಕಠಿಣ ಕ್ರಮಕ್ಕೆ ಮುಂದಾಗಿದೆ. ಸುರಕ್ಷತಾ ಲೋಪದ ಆರೋಪದ ಮೇಲೆ ಇಬ್ಬರನ್ನು ವಶಕ್ಕೆ ಪಡೆಯಲಾಗಿದ್ದು, ಟ್ರೆಕ್ಕಿಂಗ್ ಆಯೋಜಿಸಿದ್ದ ಅಧಿಕೃತ ಏಜೆನ್ಸಿಯನ್ನು ಈಗ ತೀವ್ರ ತನಿಖೆಗೆ ಒಳಪಡಿಸಲಾಗಿದೆ. ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳ ವಿರುದ್ಧವೂ ಕ್ರಮ ಜರುಗಿಸುವ ಸಾಧ್ಯತೆ ಇದೆ.

ಏನಿದು ಘಟನೆ?:

ದೆಹಲಿಯ ಪ್ರತಿಷ್ಠಿತ ಕಾಲೇಜೊಂದರಲ್ಲಿ ಎಂಬಿಎ ವ್ಯಾಸಂಗ ಮಾಡುತ್ತಿದ್ದ ಬಬಿತಾ ಎಂಬ ವಿದ್ಯಾರ್ಥಿನಿ ತನ್ನ ಸ್ನೇಹಿತರ ತಂಡ ಮತ್ತು ಟ್ರೆಕ್ಕಿಂಗ್ ಏಜೆನ್ಸಿಯೊಂದಿಗೆ ಉತ್ತರಾಖಂಡದ ಎತ್ತರದ ಪರ್ವತ ಪ್ರದೇಶಕ್ಕೆ ಪ್ರವಾಸ ತೆರಳಿದ್ದರು. ಆದರೆ, ಟ್ರೆಕ್ಕಿಂಗ್ ಮಾರ್ಗದ ಮಧ್ಯದಲ್ಲಿ ಕ್ಯಾಂಪ್​ನಲ್ಲಿ ಅವರು ನಾಪತ್ತೆಯಾಗಿದ್ದಾರೆ. ಆ ವಿದ್ಯಾರ್ಥಿನಿಗಾಗಿ ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ಮತ್ತು ಸ್ಥಳೀಯ ಪೊಲೀಸರು ಡ್ರೋನ್ ಹಾಗೂ ಹೆಲಿಕಾಪ್ಟರ್ ಮೂಲಕ ತೀವ್ರ ಶೋಧ ನಡೆಸುತ್ತಿದ್ದರೂ ಇನ್ನು ಯಾವುದೇ ಸುಳಿವು ಸಿಕ್ಕಿಲ್ಲ.

ಇದನ್ನೂ ಓದಿ: ರಾಜ್ಯದಲ್ಲಿ ಬ್ಯಾನ್​​ ಆಗುತ್ತಾ ಸೋಲೋ ಟ್ರೆಕ್ಕಿಂಗ್?: ಅನುಭವ ಇದ್ದರೂ ಅಪಾಯ ಫಿಕ್ಸ್​​, ಯಾಕೆ ಗೊತ್ತಾ?

ಈ ಟ್ರೆಕ್ಕಿಂಗ್ ತಂಡದ ಜೊತೆಯಲ್ಲಿದ್ದ ಸ್ಥಳೀಯ ಗೈಡ್ (ಮಾರ್ಗದರ್ಶಿ) ಮತ್ತು ಏಜೆನ್ಸಿಯ ಒಬ್ಬ ನಿರ್ವಾಹಕನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ವಿದ್ಯಾರ್ಥಿನಿ ಕಾಣೆಯಾದ ತಕ್ಷಣವೇ ಆಡಳಿತ ಮಂಡಳಿಗೆ ಮಾಹಿತಿ ನೀಡದೆ ವಿಳಂಬ ಮಾಡಿದ್ದು ಯಾಕೆ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಈ ಪ್ರವಾಸವನ್ನು ಆಯೋಜಿಸಿದ್ದ ಟ್ರೆಕ್ಕಿಂಗ್ ಏಜೆನ್ಸಿಯು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡಿರಲಿಲ್ಲ. ನಿಷೇಧಿತ ಅಥವಾ ಅಪಾಯಕಾರಿ ಮಾರ್ಗದಲ್ಲಿ ವಿದ್ಯಾರ್ಥಿಗಳನ್ನು ಕರೆದೊಯ್ದಿತ್ತು ಎಂಬ ಗಂಭೀರ ಆರೋಪ ಕೇಳಿಬಂದಿದೆ. ಹೀಗಾಗಿ, ಏಜೆನ್ಸಿಯ ಲೈಸೆನ್ಸ್ ರದ್ದುಗೊಳಿಸುವ ಸಾಧ್ಯತೆಯಿದೆ.

ಇದನ್ನೂ ಓದಿ: ಟ್ರೆಕ್ಕಿಂಗ್​​ ಪ್ರಿಯರೇ ಗಮನಿಸಿ: ವನ್ಯಜೀವಿ ಓಡಾಟವಿರುವ ಚಾರಣಪಥಗಳಲ್ಲಿ ಸಂಚಾರಕ್ಕೆ ತಾತ್ಕಾಲಿಕ ಬ್ರೇಕ್​​

ಈ ಘಟನೆಯ ಬೆನ್ನಲ್ಲೇ ಉತ್ತರಾಖಂಡ ಸರ್ಕಾರವು ಹಿಮಾಲಯನ್ ವಲಯದಲ್ಲಿ ಟ್ರೆಕ್ಕಿಂಗ್ ಮಾಡುವ ಸಂಸ್ಥೆಗಳಿಗೆ ಹೊಸ ಮತ್ತು ಕಠಿಣ ಮಾರ್ಗಸೂಚಿಗಳನ್ನು ಪಾಲಿಸುವಂತೆ ಸೂಚಿಸಿದೆ. ಇನ್ನು ಮುಂದೆ ಪ್ರತಿಯೊಬ್ಬ ಟ್ರೆಕ್ಕರ್ ಬಳಿ ಜಿಪಿಎಸ್ (GPS) ಟ್ರ್ಯಾಕಿಂಗ್ ಸಾಧನ ಇರಬೇಕು ಮತ್ತು ನೋಂದಾಯಿತ ಗೈಡ್‌ಗಳಿಲ್ಲದೆ ಯಾರೂ ಇಂತಹ ಸಾಹಸಕ್ಕೆ ಕೈಹಾಕಬಾರದು ಎಂದು ಕಡ್ಡಾಯಗೊಳಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:52 pm, Thu, 4 June 26

Follow Us
ಟಿ20 ಸರಣಿಗಾಗಿ ಐರ್ಲೆಂಡ್ ತಲುಪಿದ ಟೀಂ ಇಂಡಿಯಾ
ಟಿ20 ಸರಣಿಗಾಗಿ ಐರ್ಲೆಂಡ್ ತಲುಪಿದ ಟೀಂ ಇಂಡಿಯಾ
ಸಿಗ್ನಲ್ ನಲ್ಲಿ ಯಾರಾದ್ರೂ ಹಂಪ್ ಮಾಡ್ತಾರೇನ್ರಿ? ಕೃಷ್ಣಭೈರೇಗೌಡ ಕ್ಲಾಸ್
ಸಿಗ್ನಲ್ ನಲ್ಲಿ ಯಾರಾದ್ರೂ ಹಂಪ್ ಮಾಡ್ತಾರೇನ್ರಿ? ಕೃಷ್ಣಭೈರೇಗೌಡ ಕ್ಲಾಸ್
ಕನ್ನೇರಿ ಸ್ವಾಮೀಜಿ ಕಾರ್ಯಕ್ರಮಕ್ಕೆ ಷರತ್ತುಬದ್ಧ ಅನುಮತಿ
ಕನ್ನೇರಿ ಸ್ವಾಮೀಜಿ ಕಾರ್ಯಕ್ರಮಕ್ಕೆ ಷರತ್ತುಬದ್ಧ ಅನುಮತಿ
ಫುಟ್ ಪಾತ್ ತೆರವಿಗೆ ಕೃಷ್ಣಬೈರೇಗೌಡ ದಿಟ್ಟ ಹೆಜ್ಜೆ
ಫುಟ್ ಪಾತ್ ತೆರವಿಗೆ ಕೃಷ್ಣಬೈರೇಗೌಡ ದಿಟ್ಟ ಹೆಜ್ಜೆ
ಹೈಕಮಾಂಡ್​​​​ನಿಂದ ಬಂತು ಫೋನ್, ಡಿಕೆಶಿಗೆ ಖಡಕ್ ಎಚ್ಚರಿಕೆ
ಹೈಕಮಾಂಡ್​​​​ನಿಂದ ಬಂತು ಫೋನ್, ಡಿಕೆಶಿಗೆ ಖಡಕ್ ಎಚ್ಚರಿಕೆ
15ವರ್ಷಗಳ ಪಯಣ ಎಂದಿದ್ದ ಗೋಯೆಂಕಾಗೆ ಎರಡೇ ವರ್ಷಕ್ಕೆ ಬೇಡವಾದ ಪಂತ್
15ವರ್ಷಗಳ ಪಯಣ ಎಂದಿದ್ದ ಗೋಯೆಂಕಾಗೆ ಎರಡೇ ವರ್ಷಕ್ಕೆ ಬೇಡವಾದ ಪಂತ್
TV9 ಇಂಪ್ಯಾಕ್ಟ್: ಹಸಿದ ಹೊಟ್ಟೆಗೆ ಸಿಕ್ತು ಅನ್ನ, ಆದಿವಾಸಿಗಳು ಫುಲ್ ಖುಷ್
TV9 ಇಂಪ್ಯಾಕ್ಟ್: ಹಸಿದ ಹೊಟ್ಟೆಗೆ ಸಿಕ್ತು ಅನ್ನ, ಆದಿವಾಸಿಗಳು ಫುಲ್ ಖುಷ್
ಮುಂಬೈ ಮೇಯರ್ ಕಣ್ಣೆದುರೇ ತೆರೆದ ಮ್ಯಾನ್‌ಹೋಲ್‌ಗೆ ಬಿದ್ದ ಪೌರಕಾರ್ಮಿಕ
ಮುಂಬೈ ಮೇಯರ್ ಕಣ್ಣೆದುರೇ ತೆರೆದ ಮ್ಯಾನ್‌ಹೋಲ್‌ಗೆ ಬಿದ್ದ ಪೌರಕಾರ್ಮಿಕ
ಮೆಡಿಕಲ್ ಕೋರ್ಸ್ ಮ್ಯಾನೇಜ್ಮೆಂಟ್ ಸೀಟ್ ಬಗ್ಗೆ KEA ನಿರ್ದೇಶಕ ಹೇಳಿದ್ದಿಷ್ಟು
ಮೆಡಿಕಲ್ ಕೋರ್ಸ್ ಮ್ಯಾನೇಜ್ಮೆಂಟ್ ಸೀಟ್ ಬಗ್ಗೆ KEA ನಿರ್ದೇಶಕ ಹೇಳಿದ್ದಿಷ್ಟು
ಸಿಇಟಿ ರ‍್ಯಾಂಕ್ ಬಂದಿಲ್ಲವೆಂದ ವಿದ್ಯಾರ್ಥಿಗಳ ದೂರಿಗೆ ಸ್ಪಷ್ಟನೆ ನೀಡಿದ KEA
ಸಿಇಟಿ ರ‍್ಯಾಂಕ್ ಬಂದಿಲ್ಲವೆಂದ ವಿದ್ಯಾರ್ಥಿಗಳ ದೂರಿಗೆ ಸ್ಪಷ್ಟನೆ ನೀಡಿದ KEA