AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಕು ನಾಯಿ ಕೆರೆ ಕಡೆ ನೋಡಿ ಒಂದೇ ಸಮನೆ ಬೊಗಳುತ್ತಿತ್ತು! ಯಾಕೆ ಅಂದ್ರೆ ಅಲ್ಲಿ ನಡೆದಿತ್ತು ಹೃದಯ ವಿದ್ರಾವಕ ಘಟನೆ

ಸ್ವಗ್ರಾಮಕ್ಕೆ ಬಂದಿದ್ದ ಎಂಬಿಬಿಎಸ್ ವಿದ್ಯಾರ್ಥಿ ರಂಜಿತ್ ಮತ್ತು ಆತನ ತಂಗಿ ಕೀರ್ತಿ (16) ತಮ್ಮ ಸಾಕು ನಾಯಿಯನ್ನು ಸ್ಕೂಟರ್ ನಲ್ಲಿ ಕರೆದುಕೊಂಡು ಸಮೀಪದ ಗವೇವಿ ಹೊಂಡಕ್ಕೆ ತೆರಳಿದ್ದರು. ಅಲ್ಲಿ ನಾಯಿಗೆ ಸ್ನಾನ ಮಾಡಿಸುವುದು ಅವರ ಇರಾದೆಯಾಗಿತ್ತು. ಆದರೆ ವಿಧಿ ವಿಪರೀತವಾಗಿ ಅದರ ಆಟವೇ ಬೇರೆಯದ್ದಾಗಿತ್ತು!

ಸಾಕು ನಾಯಿ ಕೆರೆ ಕಡೆ ನೋಡಿ ಒಂದೇ ಸಮನೆ ಬೊಗಳುತ್ತಿತ್ತು! ಯಾಕೆ ಅಂದ್ರೆ ಅಲ್ಲಿ ನಡೆದಿತ್ತು ಹೃದಯ ವಿದ್ರಾವಕ ಘಟನೆ
ಸಾಕು ನಾಯಿ ಕೆರೆ ಕಡೆ ನೋಡಿ ಒಂದೇ ಸಮನೆ ಬೊಗಳುತ್ತಿತ್ತು! ಯಾಕೆ ಅಂದ್ರೆ
Follow us
TV9 Web
| Updated By: ಸಾಧು ಶ್ರೀನಾಥ್​

Updated on: May 29, 2023 | 4:23 PM

ಅಣ್ಣ-ತಂಗಿ ಇಬ್ಬರೂ ಸಾಕು ನಾಯಿಗೆ (bath) ಸ್ನಾನ (bath) ಮಾಡಿಸಬೇಕೆಂದು ಅದನ್ನು ಸಮೀಪದ ಹೊಂಡಕ್ಕೆ (pond) ಕರೆದುಕೊಂಡು ಹೋದರು. ಆದರೆ ಅಲ್ಲಿ ಆ ಮಕ್ಕಳಿಗೆ ಅನಿರೀಕ್ಷಿತವಾದ ಆಘಾತವೊಂದು ಎದುರಾಗಿದೆ. ಅವರಿಬ್ಬರೂ ಕೆರೆಯಲ್ಲಿ ಶವಗಳಾಗಿ ತೇಲುವಂತಾದರು. ಮಹಾರಾಷ್ಟ್ರದ (Maharashtra) ಡೊಂಬಿವಲಿ ದವಾಡಿ ಗ್ರಾಮದಲ್ಲಿ ಭಾನುವಾರ ಮಧ್ಯಾಹ್ನ ಈ ದಾರುಣ ಘಟನೆ ನಡೆದಿದೆ. ಏನಾಯ್ತು? ಮುಂದೆ ಓದಿ.

ಗ್ರಾಮದ ಎಂಬಿಬಿಎಸ್ ವಿದ್ಯಾರ್ಥಿ ರಂಜಿತ್ ರವೀಂದ್ರನ್ (22) ಮತ್ತು ಅವರ ತಂಗಿ ಕೀರ್ತಿ ರವೀಂದ್ರನ್ (16) ಕೆಲಸದ ನಿಮಿತ್ತ ತಮ್ಮ ಪೋಷಕರೊಂದಿಗೆ ಭಾನುವಾರ ಗ್ರಾಮಕ್ಕೆ ತೆರಳಿದ್ದರು. ಅಲ್ಲಿಗೆ ಹೋದ ಮೇಲೆ ಅಣ್ಣ-ತಂಗಿಯರಿಬ್ಬರು ತಮ್ಮ ಸಾಕು ನಾಯಿಯನ್ನು ಸ್ಕೂಟರ್ ನಲ್ಲಿ ಕರೆದುಕೊಂಡು ಸಮೀಪದ ಗವೇವಿ ಹೊಂಡಕ್ಕೆ ತೆರಳಿದ್ದರು. ನಾಯಿಗೆ ಸ್ನಾನ ಮಾಡಿಸುವಾಗ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿದ್ದಾರೆ. ಇಬ್ಬರೂ ಕಣ್ಣೆದುರೇ ನೀರಿನಲ್ಲಿ ಮುಳುಗುತ್ತಿದ್ದಾಗ ನಾಯಿ ಸಹಾಯಕ್ಕಾಗಿ ಜೋರಾಗಿ ಬೊಗಳ ತೊಡಗಿತು.

ಆದರೆ ಅದರ ಪ್ರಯತ್ನಗಳು ವ್ಯರ್ಥವಾಯಿತು. ನಾಯಿ ಕೆರೆಯತ್ತ ಕಣ್ಣು ಹಾಯಿಸಿ ಬೊಗಳುವುದನ್ನು ಆ ಮೂಲಕ ಹೋಗುತ್ತಿದ್ದ ಗ್ರಾಮಸ್ಥರು ಗಮನಿಸಿದ್ದಾರೆ. ಅನುಮಾನಗೊಂಡ ಗ್ರಾಮಸ್ಥರು ಕೆರೆಯೊಳಗೆ ನೋಡಿದಾಗ ಅಣ್ಣ-ತಂಗಿಯರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವುದು ಗಮನಕ್ಕೆ ಬಂದಿದೆ. ಕೂಡಲೇ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲಾಯಿತು.

Also Read:  ಅನಾರೋಗ್ಯದಿಂದ ಸಾವನ್ನಪ್ಪಿದ ಪತಿ.. ಮನೆಯಲ್ಲಿಯೇ ಶವಸಂಸ್ಕಾರ ಮಾಡಿದ ಪತ್ನಿ! ಕಾರಣ ಕೇಳಿ

ಸ್ಥಳಕ್ಕಾಗಮಿಸಿದ ಪೊಲೀಸರು ಎರಡು ಗಂಟೆಗಳ ಕಾಲ ಶೋಧ ನಡೆಸಿ ಇಬ್ಬರ ಮೃತದೇಹಗಳನ್ನು ಹೊರತೆಗೆದಿದ್ದಾರೆ. ನಂತರ, ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಣ್ಣಾ-ತಂಗಿ ವ್ಯಾಸಂಗದಲ್ಲಿ ಅತ್ಯುತ್ತಮರು ಎಂದು ಸ್ಥಳೀಯರು ದುಃಖದಲ್ಲಿ ಮುಳುಗಿ, ಕೊಂಡಾಡಿದ್ದಾರೆ. ಕೀರ್ತಿ 10ನೇ ತರಗತಿಯಲ್ಲಿ ಶೇ. 98 ಅಂಕಗಳೊಂದಿಗೆ ತೇರ್ಗಡೆಯಾಗಿದ್ದು, ರಂಜಿತ್ ಕೂಡ ಎಂಬಿಬಿಎಸ್ ಅಂತಿಮ ವರ್ಷ ಓದುತ್ತಿದ್ದಾನೆ. ನಮ್ಮ ಸಾಕುನಾಯಿಯನ್ನು ತುಂಬಾ ಪ್ರೀತಿಸುತ್ತಿದ್ದರು, ಇಬ್ಬರೂ ಒಂದೇ ಸಮಯದಲ್ಲಿ ಸಾವನ್ನಪ್ಪಿದ್ದಾರೆ ಎಂದು ಕುಟುಂಬಸ್ಥರು ಕಣ್ಣೀರು ಹಾಕಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

RCB ಅಂದ್ರೆ ರಿಯಲ್ ಕಲ್ಪ್ರಿಟ್ ಆಫ್ ಬೆಂಗಳೂರು: ಅಶೋಕ್ ಲೇವಡಿ
RCB ಅಂದ್ರೆ ರಿಯಲ್ ಕಲ್ಪ್ರಿಟ್ ಆಫ್ ಬೆಂಗಳೂರು: ಅಶೋಕ್ ಲೇವಡಿ
ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ
ರೇಣುಕಾಸ್ವಾಮಿ ಹತ್ಯೆಗೆ 1ವರ್ಷ;ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಕುಟುಂಬಸ್ಥರು
ರೇಣುಕಾಸ್ವಾಮಿ ಹತ್ಯೆಗೆ 1ವರ್ಷ;ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಕುಟುಂಬಸ್ಥರು
ರ್‍ಯಾಲಿ ವೇಳೆ ಕೊಲಂಬಿಯಾದ ಅಧ್ಯಕ್ಷೀಯ ಅಭ್ಯರ್ಥಿ ಟರ್ಬೆಗೆ ಗುಂಡೇಟು
ರ್‍ಯಾಲಿ ವೇಳೆ ಕೊಲಂಬಿಯಾದ ಅಧ್ಯಕ್ಷೀಯ ಅಭ್ಯರ್ಥಿ ಟರ್ಬೆಗೆ ಗುಂಡೇಟು
ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್ ಗಿರಿ: ವಿಡಿಯೋ ವೈರಲ್
ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್ ಗಿರಿ: ವಿಡಿಯೋ ವೈರಲ್
ಐತಿಹಾಸಿಕ ಪ್ರವಾಸಿತಾಣ ನಂದಿಗಿರಿಧಾಮ ಫುಲ್ ಟ್ರಾಫಿಕ್ ಜಾಮ್..!
ಐತಿಹಾಸಿಕ ಪ್ರವಾಸಿತಾಣ ನಂದಿಗಿರಿಧಾಮ ಫುಲ್ ಟ್ರಾಫಿಕ್ ಜಾಮ್..!