ಹಾಸ್ಟೆಲ್ ರೂಂ ಬಾಗಿಲು ಲಾಕ್, ಕರೆಗಳಿಗೆ ಉತ್ತರವಿಲ್ಲ, ನೇಣು ಬಿಗಿದ ಸ್ಥಿತಿಯಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಪತ್ತೆ

ಹಾಸ್ಟೆಲ್(Hostel) ಕೋಣೆಯಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ದುರ್ಗಾಪುರದ ಖಾಸಗಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿ ಯಾಗಿದ್ದ ಲಾವನ್ಯ ಪ್ರತಾಪ್ ಸಾವನ್ನಪ್ಪಿದ್ದಾರೆ. ಹಾಸ್ಟೆಲ್ ಕೋಣೆಯ ಬಾಗಿಲ್ ಲಾಕ್ ಆಗಿತ್ತು, ಸ್ನೇಹಿತರು ಕರೆ ಮಾಡಿದರೂ ಆಕೆ ಉತ್ತರಿಸದ ಕಾರಣ ಅನುಮಾನ ಬಂದು ಬಾಗಿಲು ಒಡೆದು ನೋಡಿದಾಗ ಆತ ನೇಣಿಗೆ ಶರಣಾಗಿರುವುದು ಕಂಡುಬಂದಿದೆ.

ಹಾಸ್ಟೆಲ್ ರೂಂ ಬಾಗಿಲು ಲಾಕ್, ಕರೆಗಳಿಗೆ ಉತ್ತರವಿಲ್ಲ, ನೇಣು ಬಿಗಿದ ಸ್ಥಿತಿಯಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಪತ್ತೆ
ಸಾವು
Image Credit source: iStock

Updated on: Feb 15, 2026 | 2:40 PM

ಕೋಲ್ಕತ್ತಾ, ಫೆಬ್ರವರಿ 13: ಹಾಸ್ಟೆಲ್(Hostel) ಕೋಣೆಯಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ದುರ್ಗಾಪುರದ ಖಾಸಗಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿ ಯಾಗಿದ್ದ ಲಾವನ್ಯ ಪ್ರತಾಪ್ ಸಾವನ್ನಪ್ಪಿದ್ದಾರೆ. ಹಾಸ್ಟೆಲ್ ಕೋಣೆಯ ಬಾಗಿಲ್ ಲಾಕ್ ಆಗಿತ್ತು, ಸ್ನೇಹಿತರು ಕರೆ ಮಾಡಿದರೂ ಆಕೆ ಉತ್ತರಿಸದ ಕಾರಣ ಅನುಮಾನ ಬಂದು ಬಾಗಿಲು ಒಡೆದು ನೋಡಿದಾಗ ಆತ ನೇಣಿಗೆ ಶರಣಾಗಿರುವುದು ಕಂಡುಬಂದಿದೆ.

ಮಾಹಿತಿ ಪಡೆದ ನಂತರ ದುರ್ಗಾಪುರ ಪೊಲೀಸ್ ಠಾಣೆಯ ಪೊಲೀಸರು ಕ್ಯಾಂಪಸ್‌ಗೆ ತಲುಪಿ ಹಾಸ್ಟೆಲ್ ಕೊಠಡಿಯಿಂದ ಶವವನ್ನು ವಶಪಡಿಸಿಕೊಂಡರು. ಆಸ್ಪತ್ರೆಯಲ್ಲಿ ಇರಿಸಿ ನಂತರ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಯಿತು. ಭಾನುವಾರದ ಹೊತ್ತಿಗೆ ಕ್ಯಾಂಪಸ್​​ನಲ್ಲಿ ನೀರವ ಮೌನ ಆವರಿಸಿಕೊಂಡಿತ್ತು. ಪ್ರತಾಪ್ ತಂದೆ ಅನಿಲ್ ಕುಮಾರ್, ಕಾಲೇಜು ಆಡಳಿತದ ವಿರುದ್ಧ ಗಂಭೀರ ಆರೋಪಗಳನ್ನು ಹೊರಿಸಿದ್ದು, ಘಟನೆಯ ಬಗ್ಗೆ ಕುಟುಂಬಕ್ಕೆ ಮಾಹಿತಿ ನೀಡಿರಲಿಲ್ಲ ಎಂದು ಆರೋಪಿಸಿದ್ದಾರೆ.

ಪೊಲೀಸ್ ಮೂಲಗಳ ಪ್ರಕಾರ, ಮೃತರನ್ನು ಬಿಹಾರದ ಪಾಟ್ನಾ ನಿವಾಸಿ ಲಾವಣ್ಯ ಪ್ರತಾಪ್ ಎಂದು ಗುರುತಿಸಲಾಗಿದೆ. ಅವರು ವೈದ್ಯಕೀಯ ಅಧ್ಯಯನ ಮಾಡುವಾಗ ಕಾಲೇಜು ಹಾಸ್ಟೆಲ್‌ನಲ್ಲಿ ತಂಗಿದ್ದರು. ಕಳೆದ ಕೆಲವು ಸೆಮಿಸ್ಟರ್‌ಗಳಲ್ಲಿ ಅನುತ್ತೀರ್ಣರಾದ ನಂತರ ವಿದ್ಯಾರ್ಥಿ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದ ಎಂದು ಅವರ ಸ್ನೇಹಿತರು ತನಿಖಾಧಿಕಾರಿಗಳಿಗೆ ತಿಳಿಸಿದ್ದಾರೆ. ಈ ಸಾವು ಆತ್ಮಹತ್ಯೆಯೇ ಅಥವಾ ಬೇರೆ ಯಾವುದೇ ಅಂಶಗಳು ಒಳಗೊಂಡಿವೆಯೇ ಎಂದು ಪೊಲೀಸರು ಪರಿಶೀಲಿಸುತ್ತಿದ್ದಾರೆ.

ಮತ್ತಷ್ಟು ಓದಿ: Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ

ಶನಿವಾರ ರಾತ್ರಿ ಸಹ ವಿದ್ಯಾರ್ಥಿಗಳು ಹಾಸ್ಟೆಲ್ ಶೌಚಾಲಯದಲ್ಲಿ ನೇತಾಡುತ್ತಿರುವ ಅವರ ಶವವನ್ನು ಕಂಡು ಅಧಿಕಾರಿಗಳಿಗೆ ಮಾಹಿತಿ ನೀಡಿದಾಗ ಈ ಘಟನೆ ಬೆಳಕಿಗೆ ಬಂದಿತು. ದುರ್ಗಾಪುರ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ತಲುಪಿ, ಶವವನ್ನು ಹೊರತೆಗೆದು, ಭಾನುವಾರ ಮರಣೋತ್ತರ ಪರೀಕ್ಷೆಗೆ ಕಳುಹಿಸಿದರು.

ಕಳೆದ ವರ್ಷ ವೈದ್ಯಕೀಯ ವಿದ್ಯಾರ್ಥಿನಿಯ ಮೇಲಿನ ಸಾಮೂಹಿಕ ಅತ್ಯಾಚಾರದ ಘಟನೆ ಇದೇ ಕಾಲೇಜಿನಲ್ಲಿ ನಡೆದಿತ್ತು. ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಈ ಪ್ರಕರಣವು ಆ ಸಮಯದಲ್ಲಿ ರಾಜ್ಯಾದ್ಯಂತ ವ್ಯಾಪಕ ಪ್ರತಿಭಟನೆ ನಡೆದಿತ್ತು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

 

Follow Us