AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮುದಾಯಗಳ ನಡುವಿನ ಘರ್ಷಣೆ; ಮಹಾರಾಷ್ಟ್ರದ ಮೀರಾ ರೋಡ್ ಪ್ರದೇಶದಲ್ಲಿ ಕಟ್ಟಡಗಳನ್ನು ನೆಲಸಮಗೊಳಿಸಿದ ಎಂಬಿಎಂಸಿ

ಭಾನುವಾರದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸರು 13 ವ್ಯಕ್ತಿಗಳನ್ನು ಬಂಧಿಸಿದ್ದಾರೆ. ಮಂಗಳವಾರ ಸಂಜೆ, MBMC ಯ ಅಧಿಕಾರಿಗಳು ಬುಲ್ಡೋಜರ್ ಅನ್ನು ಹಿಂಸಾಚಾರ ನಡೆದ ಸ್ಥಳಕ್ಕೆ ಸಮೀಪವಿರುವ ಹೈದರಿ ಚೌಕ್‌ಗೆ ಕೊಂಡೊಯ್ದು ಕಟ್ಟಡಗಳನ್ನು ನೆಲಸಮಗೊಳಿಸಿದರು

ಸಮುದಾಯಗಳ ನಡುವಿನ ಘರ್ಷಣೆ; ಮಹಾರಾಷ್ಟ್ರದ ಮೀರಾ ರೋಡ್ ಪ್ರದೇಶದಲ್ಲಿ ಕಟ್ಟಡಗಳನ್ನು ನೆಲಸಮಗೊಳಿಸಿದ ಎಂಬಿಎಂಸಿ
ಮೀರಾ ರೋಡ್ ನಲ್ಲಿ ಕಟ್ಟಡ ನೆಲಸಮ
ರಶ್ಮಿ ಕಲ್ಲಕಟ್ಟ
|

Updated on:Jan 23, 2024 | 8:33 PM

Share

ಮುಂಬೈ ಜನವರಿ 23: ಮೀರಾ ರೋಡ್ (Mira Road) ಮುಸ್ಲಿಂ ಪ್ರಾಬಲ್ಯದ ಹೈದರಿ ಚೌಕ್ ( Haidary Chowk) ಪ್ರದೇಶದಲ್ಲಿ ಭಾನುವಾರ ಎರಡು ಸಮುದಾಯಗಳ ಸದಸ್ಯರ ನಡುವೆ ಘರ್ಷಣೆ ಸಂಭವಿಸಿದ ಎರಡು ದಿನಗಳ ನಂತರ ಅಂದರೆ ಇಂದು (ಮಂಗಳವಾರ) ಮೀರಾ ಭಯಂದರ್ ಮುನ್ಸಿಪಲ್ ಕಾರ್ಪೊರೇಷನ್ (Mira Bhayandar Municipal Corporation- MBMC) ಸುಮಾರು ಒಂದು ಡಜನ್ ಕಟ್ಟಡಗಳನ್ನು ನೆಲಸಮಗೊಳಿಸಿದೆ. ಕೇಸರಿ ಧ್ವಜಗಳೊಂದಿಗೆ ತಮ್ಮ ವಾಹನಗಳಲ್ಲಿ “ಜೈ ಶ್ರೀ ರಾಮ್” ಎಂದು ಘೋಷಣೆ ಕೂಗುತ್ತಾ ಗುಂಪು ಹಾದುಹೋಗುತ್ತಿದ್ದಾಗ ಘರ್ಷಣೆ ಸಂಭವಿಸಿದೆ. ಅವರನ್ನು ಸ್ಥಳೀಯ ನಿವಾಸಿಗಳು ತಡೆದಿದ್ದು, ಇನ್ನೊಂದು ಸಮುದಾಯದ ಜನರೊಂದಿಗೆ ವಾಗ್ವಾದ ನಡೆದಿತ್ತು. ಆಮೇಲೆ ಇದು ಹಿಂಸಾಚಾರಕ್ಕೆ ತಿರುಗಿತ್ತು.

ಭಾನುವಾರದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸರು 13 ವ್ಯಕ್ತಿಗಳನ್ನು ಬಂಧಿಸಿದ್ದಾರೆ. ಮಂಗಳವಾರ ಸಂಜೆ, MBMC ಯ ಅಧಿಕಾರಿಗಳು ಬುಲ್ಡೋಜರ್ ಅನ್ನು ಹಿಂಸಾಚಾರ ನಡೆದ ಸ್ಥಳಕ್ಕೆ ಸಮೀಪವಿರುವ ಹೈದರಿ ಚೌಕ್‌ಗೆ ಕೊಂಡೊಯ್ದು ಕಟ್ಟಡಗಳನ್ನು ನೆಲಸಮಗೊಳಿಸಿದರು. ಸುಮಾರು ಒಂದು ಡಜನ್ ಕಟ್ಟಡಗಳನ್ನು ಭಾಗಶಃ ಕೆಡವಲಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ.

ಹಿಂಸಾಚಾರದಲ್ಲಿ ಬಂಧಿತರಾದವರಲ್ಲಿ ಹಲವರು ಹೈದರಿ ಚೌಕ್‌ನ ಸ್ಥಳೀಯರು ಎಂದು ಹೇಳಲಾಗಿದೆ.

ಮೀರಾ ರೋಡ್ ಮೂಲದ ಸಾಮಾಜಿಕ ಕಾರ್ಯಕರ್ತ ಸಾದ್ ಸೈಯದ್, “ಹನ್ನೆರಡು ಕಟ್ಟಡಗಳನ್ನು ಕೆಡವಲಾಗಿದೆ. ನಮಗೆ ತಿಳಿದಿರುವಂತೆ, ಯಾವುದೇ ನೋಟಿಸ್ ನೀಡಲಾಗಿಲ್ಲ. ಘರ್ಷಣೆ ಸಂಭವಿಸಿದ ಒಂದು ದಿನದ ನಂತರ ಒಂದು ನಿರ್ದಿಷ್ಟ ಸಮುದಾಯದ ಕಟ್ಟಡಗಳನ್ನು ಕೆಡವುವ ಮೂಲಕ ನೋಟಿಸ್‌ಗಳನ್ನು ನೀಡಲಾಗಿದ್ದರೂ ಏನು ಸಂದೇಶವನ್ನು ಕಳುಹಿಸಲಾಗುತ್ತಿದೆ? ಅಕ್ರಮ ರಚನೆಗಳಿರುವುದು ನಿರ್ದಿಷ್ಟ ಸಮುದಾಯದ ಪ್ರದೇಶದಲ್ಲಿ ಮಾತ್ರವೇ? ಎಂದು ಕೇಳಿದ್ದಾರೆ. ಇದೇ ವೇಳೆ ಎಂ.ಬಿ.ಎಂ.ಸಿ ಅಧಿಕಾರಿಗಳು ಅಕ್ರಮ ಕಟ್ಟಡಗಳ ಧ್ವಂಸ ಕಾರ್ಯ ಆಗಾಗ್ಗೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಹಿಂಸಾಚಾರ ಭುಗಿಲೆದ್ದ ಕೂಡಲೇ, ಬಿಜೆಪಿ ನಾಯಕ ನಿತೇಶ್ ರಾಣೆ ಅವರು ಸೋಮವಾರ ಬೆಳಗ್ಗೆ ಎಕ್ಸ್‌ನಲ್ಲಿ ನಿನ್ನೆ ಮೀರಾ ರೋಡ್‌ನಲ್ಲಿ ಏನಾಯಿತು.. ಒಂದು ವಿಷಯ ನೆನಪಿಡಿ ಭಾಗಿಯಾಗಿರುವ ಪ್ರತಿಯೊಬ್ಬ ವ್ಯಕ್ತಿಯನ್ನು ಥಳಿಸುತ್ತೇನೆ. ಜೈ ಶ್ರೀ ರಾಮ್ ಎಂದು ಬರೆದಿದ್ದಾರೆ.

ಭಾನುವಾರ ಏನಾಗಿತ್ತು?

50-60 ಜನರ ಗುಂಪೊಂದು ಮೆರವಣಿಗೆಯ ಭಾಗವಾಗಿದ್ದ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿತು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಒಬ್ಬ ವ್ಯಕ್ತಿ ಭಾಗವಹಿಸಿದವರ ಮೇಲೆ ಚಾಕುವಿನಿಂದ ದಾಳಿ ಮಾಡಿದನು. ಘಟನೆಯಲ್ಲಿ 24 ಮಂದಿ ಗಾಯಗೊಂಡಿದ್ದು, ನಾಲ್ವರಿಗೆ ಗಂಭೀರ ಗಾಯಗಳಾಗಿವೆ ಎಂದಿದ್ದಾರೆ ಪೊಲೀಸ್.

ಆರೋಪಿಗಳ ವಿರುದ್ಧ 307 (ಕೊಲೆ ಯತ್ನ), 341 (ತಪ್ಪು ಸಂಯಮ), 295 (ಎ) (ಧಾರ್ಮಿಕ ಭಾವನೆಗಳನ್ನು ಕೆರಳಿಸಲು) , 153(ಎ) (ಪ್ರದೇಶದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 141 (ಕಾನೂನುಬಾಹಿರ ಸಭೆ), 143 (ಕಾನೂನುಬಾಹಿರ ಸಭೆಯ ಸದಸ್ಯ), 147 (ಗಲಭೆ), 149 (ಕಾನೂನುಬಾಹಿರ ವಿಷಯದಲ್ಲಿ ಸಭೆ ಸೇರುವುದು) ಮತ್ತು ಭಾರತೀಯ ದಂಡ ಸಂಹಿತೆಯ 427 (ಆಸ್ತಿಗೆ ಹಾನಿ ಉಂಟುಮಾಡುವ ಕಿಡಿಗೇಡಿತನ) ಅಡಿಯಲ್ಲಿ ಗುಂಪುಗಳ ವಿರುದ್ಧ ನಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ನಯಾನಗರದ ಉಪ ಪೊಲೀಸ್ ಆಯುಕ್ತ ಜಯಂತ್ ಬಜಬಲೆ ತಿಳಿಸಿದ್ದಾರೆ.

ಘಟನೆಯ ನಂತರ ಮೀರಾ ರೋಡ್ ಪ್ರದೇಶದಲ್ಲಿ ಭಾರೀ ಭದ್ರತೆಯನ್ನು ನಿಯೋಜಿಸಲಾಗಿತ್ತು. ಎಎನ್‌ಐ ಪ್ರಕಾರ, ಸ್ಥಳೀಯ ಪೊಲೀಸರು, ಮುಂಬೈ ಪೊಲೀಸರು, ಪಾಲ್ಘರ್ ಪೊಲೀಸ್, ಥಾಣೆ ಗ್ರಾಮಾಂತರ ಪೊಲೀಸ್, ಆರ್‌ಎಎಫ್ (ರಾಪಿಡ್ ಆಕ್ಷನ್ ಫೋರ್ಸ್), ಎಂಎಸ್‌ಎಫ್ (ಮಹಾರಾಷ್ಟ್ರ ಭದ್ರತಾ ಪಡೆ) ಮತ್ತು ಎಸ್‌ಆರ್‌ಪಿಎಫ್ ಅನ್ನು ಈ ಪ್ರದೇಶದಲ್ಲಿ ನಿಯೋಜಿಸಲಾಗಿದೆ.

ಮೀರಾ ಭಯಂದರ್ ನಲ್ಲಿ ಹೆಚ್ಚುವರಿ ಪೊಲೀಸ್ ಆಯುಕ್ತ ಶ್ರೀಕಾಂತ್ ಪಾಠಕ್ ಅವರು ಪ್ರದೇಶದಲ್ಲಿ ಶಾಂತಿ ಕಾಪಾಡುವಂತೆ ಮನವಿ ಮಾಡಿದರು.

ಇದನ್ನೂ ಓದಿ: ರಾಮಮಂದಿರಕ್ಕೆ 3 ಲಕ್ಷ ಭಕ್ತರ ಆಗಮನ, ಮುಂಬರುವ ದಿನಗಳಲ್ಲಿ ಮತ್ತಷ್ಟು ಹೆಚ್ಚಾಗಲಿದೆ: ಅರ್ಚಕರು

“ಘಟನೆಯ ಬಗ್ಗೆ ನಾವು ತನಿಖೆ ನಡೆಸುತ್ತಿದ್ದೇವೆ. ಆರೋಪಿಗಳ ವಿರುದ್ಧ ಮಾತ್ರ ಕ್ರಮ ಕೈಗೊಳ್ಳಲಾಗುವುದು. ಶಾಂತಿ ಕಾಪಾಡುವಂತೆ ನಾನು ಎಲ್ಲರಿಗೂ ಮನವಿ ಮಾಡುತ್ತೇನೆ. ಪೊಲೀಸರು ಸಕಾಲಿಕ ಕ್ರಮ ಕೈಗೊಂಡಿದ್ದಾರೆ. ನಾವು ಸಿಸಿಟಿವಿ ದೃಶ್ಯಾವಳಿಗಳನ್ನು ನೋಡುವ ಮೂಲಕ ನಾವು ಸಂಪೂರ್ಣ ವಿಷಯವನ್ನು ತನಿಖೆ ಮಾಡುತ್ತೇವೆ. ಇನ್ನೂ ಸಣ್ಣ ಕಿಡಿಗೇಡಿಗಳು ಸಮಸ್ಯೆ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಪಾಠಕ್ ಹೇಳಿದ್ದಾರೆ.

ಘಟನೆಯ ಕುರಿತು ಪೊಲೀಸ್ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿರುವುದಾಗಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ.

ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ. ಈ ಪ್ರಕರಣದಲ್ಲಿ ಇದುವರೆಗೆ 13 ಆರೋಪಿಗಳನ್ನು ಬಂಧಿಸಲಾಗಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಇತರ ಆರೋಪಿಗಳನ್ನು ಗುರುತಿಸುವ ಪ್ರಕ್ರಿಯೆ ನಡೆಯುತ್ತಿದೆ. ಮಹಾರಾಷ್ಟ್ರದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಅಡ್ಡಿಪಡಿಸಲು ಪ್ರಯತ್ನಿಸುವ ಯಾರನ್ನೂ ಸಹಿಸಲಾಗುವುದಿಲ್ಲ, ”ಎಂದು ಅವರು ಎಕ್ಸ್‌ನಲ್ಲಿ ಬರೆದಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:55 pm, Tue, 23 January 24

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ