AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ಉಚಿತ ವಿದ್ಯುತ್ ಪೂರೈಕೆಯನ್ನು ನಿಲ್ಲಿಸಲು ಬಿಜೆಪಿ ಬಯಸುತ್ತಿದೆ: ಅರವಿಂದ ಕೇಜ್ರಿವಾಲ್

ಎಎಪಿಗೆ ಒಂದು ಅವಕಾಶ ನೀಡಿ. ನಾವು ಉಚಿತವಾಗಿ ವಿದ್ಯುತ್ ಮತ್ತು ನೀರು ಸರಬರಾಜು ಮಾಡಿದಂತೆ,  ಕಸದ ಸಮಸ್ಯೆಯನ್ನು ಸಹ ನಿಭಾಯಿಸುತ್ತೇವೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.

ದೆಹಲಿಯಲ್ಲಿ ಉಚಿತ ವಿದ್ಯುತ್ ಪೂರೈಕೆಯನ್ನು ನಿಲ್ಲಿಸಲು ಬಿಜೆಪಿ ಬಯಸುತ್ತಿದೆ: ಅರವಿಂದ ಕೇಜ್ರಿವಾಲ್
ಅರವಿಂದ ಕೇಜ್ರಿವಾಲ್
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Nov 20, 2022 | 2:55 PM

Share

ದೆಹಲಿ: ದೆಹಲಿಯಲ್ಲಿ ಉಚಿತ ವಿದ್ಯುತ್ ಪೂರೈಕೆಯನ್ನು ನಿಲ್ಲಿಸಲು ಬಿಜೆಪಿ (BJP) ಬಯಸುತ್ತಿದೆ. ಆದರೆ ಅದು ಯಶಸ್ವಿಯಾಗುವುದಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್(Arvind Kejriwal) ಹೇಳಿದ್ದಾರೆ. ದೆಹಲಿಯ ಪಹರ್‌ಗಂಜ್‌ನಲ್ಲಿ ಮುಂಬವರುವ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಗೆ ಪ್ರಚಾರ ನಡೆಸಿದ ಕೇಜ್ರಿವಾಲ್, ಡಿಸೆಂಬರ್ 4 ರಂದು ನಡೆಯಲಿರುವ ನಾಗರಿಕ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ, ಅವರು ನಗರದ ಎಲ್ಲಾ ಅಭಿವೃದ್ಧಿ ಕಾರ್ಯಗಳನ್ನು ನಿಲ್ಲಿಸುತ್ತಾರೆ ಎಂದು ಹೇಳಿದ್ದಾರೆ. ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ (MCD) ನಲ್ಲಿ ಬಿಜೆಪಿ ಅಧಿಕಾರದಲ್ಲಿದೆ. “ಅವರು ಅದನ್ನು ಉಚಿತ ವಿದ್ಯುತ್ (freebie) ಎಂದು ಕರೆಯುತ್ತಾರೆ. ನಾವು ಯಾಚಕರು, ಅವರು ನಮಗೆ ಉಪಕಾರ ಮಾಡುತ್ತಿರುವಂತೆ ವರ್ತಿಸುತ್ತಾರೆ. ಅವರು ಅದನ್ನು ಬಿಟ್ಟಿ ಎಂದು ಏಕೆ ಕರೆಯುತ್ತಾರೆ? ಏಕೆಂದರೆ ಅವರು ದೆಹಲಿಯಲ್ಲಿ ಉಚಿತ ವಿದ್ಯುತ್ ಪೂರೈಕೆಯನ್ನು ನಿಲ್ಲಿಸಲು ಬಯಸುತ್ತಾರೆ. ಆದರೆ ಕೇಜ್ರಿವಾಲ್ ಬದುಕಿರುವವರೆಗೂ ವಿದ್ಯುತ್ ಸರಬರಾಜು ಉಚಿತವಾಗಿರುತ್ತದೆ ಎಂದು ಮುಖ್ಯಮಂತ್ರಿ ಹೇಳಿದರು.

ಕೇಜ್ರಿವಾಲ್ ಅವರು 2019 ರಲ್ಲಿ ದೆಹಲಿಯಲ್ಲಿ ಉಚಿತ ವಿದ್ಯುತ್ ಯೋಜನೆಯನ್ನು ಘೋಷಿಸಿದ್ದರು. ಮುಂಬರುವ ಗುಜರಾತ್ ಚುನಾವಣೆಯಲ್ಲಿ ಇದೇ ರೀತಿಯ ಭರವಸೆಗಳನ್ನು ಎಎಪಿ ನೀಡುತ್ತಿದೆ.  ಕಸ ನಿರ್ವಹಣೆ ಬಿಜೆಪಿಯ ಜವಾಬ್ದಾರಿಯಾಗಿದ್ದು, ಎಂಸಿಡಿಯಲ್ಲಿ ಎಎಪಿ ಅಧಿಕಾರಕ್ಕೆ ಬಂದ ನಂತರ ಅದನ್ನು ನಿಭಾಯಿಸುತ್ತದೆ ಎಂದು ದೆಹಲಿ ಮುಖ್ಯಮಂತ್ರಿ ಹೇಳಿದ್ದಾರೆ.

ಎಎಪಿಗೆ ಒಂದು ಅವಕಾಶ ನೀಡಿ. ನಾವು ಉಚಿತವಾಗಿ ವಿದ್ಯುತ್ ಮತ್ತು ನೀರು ಸರಬರಾಜು ಮಾಡಿದಂತೆ,  ಕಸದ ಸಮಸ್ಯೆಯನ್ನು ಸಹ ನಿಭಾಯಿಸುತ್ತೇವೆ ಎಂದು ಅವರು ಹೇಳಿದರು. ಕಸದ ವಿಲೇವಾರಿ ಬಗ್ಗೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಕೇಜ್ರಿವಾಲ್, “ಕೆಲವು ಲ್ಯಾಂಡ್‌ಫಿಲ್ ಸೈಟ್ ಬರಲಿದೆ ಎಂದು ನಾನು ಕೇಳಿದ್ದೇನೆ” ಎಂದು ಹೇಳಿದರು.

ಎಎಪಿ ಎಮ್‌ಸಿಡಿಯಲ್ಲಿ 250 ಸ್ಥಾನಗಳಲ್ಲಿ 230 ಸ್ಥಾನಗಳನ್ನು ಪಡೆಯಬೇಕು. ಹಾಗಾದರೆ ಎಎಪಿ ರಾಜ್ಯ ಮತ್ತು ನಾಗರಿಕ ಸಂಸ್ಥೆಯಲ್ಲಿ ಅಧಿಕಾರಕ್ಕೆ ಬಂದಂತಾಗುತ್ತದೆ ಎಂದು ಕೇಜ್ರಿವಾಲ್ ಹೇಳಿದರು.

ಬಿಜೆಪಿ ಗೆದ್ದರೆ, ಎಲ್ಲಾ ಅಭಿವೃದ್ಧಿ ಕೆಲಸಗಳು ನಿಲ್ಲುತ್ತವೆ, ಅವರು ಈಗ ಮಾಡುತ್ತಿರುವಂತೆ ಪ್ರತಿದಿನ ನಮ್ಮೊಂದಿಗೆ ಜಗಳವಾಡುತ್ತಾರೆ. ಎಎಪಿ ಎರಡೂ ಸ್ಥಳಗಳಲ್ಲಿ ಅಧಿಕಾರದಲ್ಲಿರಬೇಕು, ಕೇಜ್ರಿವಾಲ್ ಮಾತ್ರ ಕೆಲಸ ಆಗುವುದನ್ನು ಖಚಿತಪಡಿಸುತ್ತಾರೆ ಎಂದಿದ್ದಾರೆ ದೆಹಲಿ ಮುಖ್ಯಮಂತ್ರಿ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ