AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಿಬಿಯಾದಲ್ಲಿ ಹದಗೆಟ್ಟ ಭದ್ರತಾ ಸ್ಥಿತಿ; ಬೆಂಗಾಜಿಯಲ್ಲಿ ಸಿಲುಕಿದ್ದ 18 ಭಾರತೀಯರ ರಕ್ಷಣೆ

ಲಿಬಿಯಾದಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಬೆಂಗಾಜಿಯಿಂದ 18 ಭಾರತೀಯ ಪ್ರಜೆಗಳನ್ನು ಭಾರತಕ್ಕೆ ವಾಪಾಸ್ ಕಳುಹಿಸಲು ಅನುಕೂಲ ಮಾಡಿಕೊಟ್ಟಿದೆ. ಈ 18 ಜನ ಹಲವಾರು ವಾರಗಳಿಂದ ಬೆಂಗಾಜಿ ನಗರದಲ್ಲಿ ಸಿಲುಕಿಕೊಂಡಿದ್ದರು ಎಂದು ಭಾರತದ ವಿದೇಶಾಂಗ ಸಚಿವಾಲಯ ತಿಳಿಸಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಅವರು ಲಿಬಿಯಾದಲ್ಲಿ ಸಿಲುಕಿಕೊಂಡಿದ್ದ 18 ಭಾರತೀಯರು ಹಿಂತಿರುಗಿರುವುದನ್ನು ದೃಢಪಡಿಸಿದ್ದಾರೆ.

ಲಿಬಿಯಾದಲ್ಲಿ ಹದಗೆಟ್ಟ ಭದ್ರತಾ ಸ್ಥಿತಿ; ಬೆಂಗಾಜಿಯಲ್ಲಿ ಸಿಲುಕಿದ್ದ 18 ಭಾರತೀಯರ ರಕ್ಷಣೆ
18 Indians Rescued From Libya
Follow us
ಸುಷ್ಮಾ ಚಕ್ರೆ
|

Updated on: Feb 06, 2025 | 3:09 PM

ನವದೆಹಲಿ: ಲಿಬಿಯಾದ ಬೆಂಗಾಜಿಯಿಂದ 18 ಭಾರತೀಯ ಪ್ರಜೆಗಳನ್ನು ಹಿಂದಿರುಗಿಸಲು ಲಿಬಿಯಾದಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಅನುಕೂಲ ಮಾಡಿಕೊಟ್ಟಿದೆ. ಅವರು ಇಂದು ಭಾರತಕ್ಕೆ ಆಗಮಿಸಿದ್ದಾರೆ ಎಂದು ಭಾರತೀಯ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಎಕ್ಸ್​ನ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. ಈ 18 ಭಾರತೀಯರು ಲಿಬಿಯಾದಲ್ಲಿ ಕೆಲಸಕ್ಕೆ ಹೋಗಿದ್ದರು. ಅಲ್ಲಿನ ಭದ್ರತಾ ಪರಿಸ್ಥಿತಿ ಹದಗೆಟ್ಟಿದ್ದರಿಂದ ಹಲವಾರು ವಾರಗಳ ಕಾಲ ಸಿಕ್ಕಿಹಾಕಿಕೊಂಡಿದ್ದರು. ರಾಯಭಾರ ಕಚೇರಿ ಸ್ಥಳೀಯ ಅಧಿಕಾರಿಗಳೊಂದಿಗೆ ಸಂಪರ್ಕಿಸಿ, ಅಗತ್ಯವಿರುವ ಅಧಿಕಾರ ಮತ್ತು ಪ್ರಯಾಣ ದಾಖಲೆಗಳೊಂದಿಗೆ ಭಾರತೀಯ ಕಾರ್ಮಿಕರಿಗೆ ಸಹಾಯ ಮಾಡಿತು” ಎಂದು ಅವರು ಹೇಳಿದ್ದಾರೆ.

ಲಿಬಿಯಾದ ಬೆಂಗಾಜಿಯಲ್ಲಿ ಹಲವು ವಾರಗಳ ಕಾಲ ಸಿಲುಕಿಕೊಂಡಿದ್ದ ಒಟ್ಟು 18 ಭಾರತೀಯರು ದೇಶಕ್ಕೆ ಮರಳಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ) ತಿಳಿಸಿದೆ. ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಎಂಇಎ ವಕ್ತಾರ ರಣಧೀರ್ ಜೈಸ್ವಾಲ್, ಲಿಬಿಯಾದಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಕೆಲಸಕ್ಕಾಗಿ ಲಿಬಿಯಾಕ್ಕೆ ಹೋಗಿ ಹಲವಾರು ವಾರಗಳ ಕಾಲ ಸಿಲುಕಿಕೊಂಡಿದ್ದ ಭಾರತೀಯರ ಮರಳುವಿಕೆಯನ್ನು ಸುಗಮಗೊಳಿಸಿದೆ ಎಂದು ಹೇಳಿದರು. ರಾಯಭಾರ ಕಚೇರಿಯು ಭಾರತೀಯರೊಂದಿಗೆ ಸಂಪರ್ಕದಲ್ಲಿರುತ್ತದೆ ಎಂದು ಜೈಸ್ವಾಲ್ ಹೇಳಿದ್ದಾರೆ. ಲಿಬಿಯಾ ಅಧಿಕಾರಿಗಳ ಬೆಂಬಲ ಮತ್ತು ಸಹಕಾರಕ್ಕಾಗಿ ಜೈಸ್ವಾಲ್ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ.

ಇದನ್ನೂ ಓದಿ: ಲಿಬಿಯಾ ಕರಾವಳಿಯಲ್ಲಿ ದೋಣಿ ಮುಳುಗಿ 60ಕ್ಕೂ ಹೆಚ್ಚು ಮಂದಿ ವಲಸಿಗರು ಸಾವು

“ರಾಯಭಾರ ಕಚೇರಿಯು ಲಿಬಿಯಾದಲ್ಲಿ ಸಿಲುಕಿದ್ದವರ ಯೋಗಕ್ಷೇಮವನ್ನು ನೋಡಿಕೊಳ್ಳಲು ಅವರೊಂದಿಗೆ ನಿರಂತರ ಸಂಪರ್ಕದಲ್ಲಿತ್ತು. ಅವರಿಗೆ ದೈನಂದಿನ ಜೀವನಕ್ಕೆ ಬೇಕಾದ ವಸ್ತುಗಳನ್ನು ಪೂರೈಸಿತು. ರಾಯಭಾರ ಕಚೇರಿಯ ಸಹಾಯದಿಂದ ಅದೇ ಗುಂಪಿನ ಇತರ ಮೂವರು ಭಾರತೀಯ ಪ್ರಜೆಗಳು ಕಳೆದ ಅಕ್ಟೋಬರ್‌ನಲ್ಲಿ ಭಾರತಕ್ಕೆ ಮರಳಿದ್ದರು” ಎಂದು ಜೈಸ್ವಾಲ್ ತಮ್ಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

2014ರಲ್ಲಿ ಪ್ರಾರಂಭವಾದ ಅಂತರ್ಯುದ್ಧದ ನಂತರ ಲಿಬಿಯಾದಲ್ಲಿ ಭದ್ರತಾ ಪರಿಸ್ಥಿತಿ ಹದಗೆಡುತ್ತಿದೆ. ಇದಕ್ಕೂ ಮೊದಲು, ಭಾರತ ಸರ್ಕಾರವು ಭಾರತೀಯ ಪ್ರಜೆಗಳ ಮೇಲೆ ಲಿಬಿಯಾಕ್ಕೆ ಪ್ರಯಾಣ ನಿಷೇಧವನ್ನು ವಿಧಿಸಿತು. ಇತ್ತೀಚಿನ ತಿಂಗಳುಗಳಲ್ಲಿ ಅಲ್ಲಿನ ಭದ್ರತಾ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿದೆ. ಭಾರತ ಮತ್ತು ಲಿಬಿಯಾವನ್ನು ಸಂಪರ್ಕಿಸುವ ಯಾವುದೇ ನೇರ ವಿಮಾನಗಳಿಲ್ಲ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ವಿನಯ್ ರಾಜ್​ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ
ವಿನಯ್ ರಾಜ್​ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ
ದಸರಾ ಮಹೋತ್ಸವ-2025 ಹನ್ನೊಂದು ದಿನಗಳ ಕಾಲ ನಡೆಯಲಿದೆ: ಸಿದ್ದರಾಮಯ್ಯ
ದಸರಾ ಮಹೋತ್ಸವ-2025 ಹನ್ನೊಂದು ದಿನಗಳ ಕಾಲ ನಡೆಯಲಿದೆ: ಸಿದ್ದರಾಮಯ್ಯ
ಮಧುಗಿರಿ ಜಮೀನು ಒತ್ತುವರಿ ಪ್ರಕರಣ ತನಿಖೆಗೊಪ್ಪಿಸಲಾಗಿದೆ: ರಾಜಣ್ಣ
ಮಧುಗಿರಿ ಜಮೀನು ಒತ್ತುವರಿ ಪ್ರಕರಣ ತನಿಖೆಗೊಪ್ಪಿಸಲಾಗಿದೆ: ರಾಜಣ್ಣ
ವಿಶ್ವಪ್ರಸಿದ್ಧ ಜಗನ್ನಾಥ ರಥಯಾತ್ರೆಯಲ್ಲಿ ಪತ್ನಿ ಪ್ರೀತಿ ಜೊತೆ ಗೌತಮ್ ಅದಾನಿ
ವಿಶ್ವಪ್ರಸಿದ್ಧ ಜಗನ್ನಾಥ ರಥಯಾತ್ರೆಯಲ್ಲಿ ಪತ್ನಿ ಪ್ರೀತಿ ಜೊತೆ ಗೌತಮ್ ಅದಾನಿ