AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಿಬಿಯಾದಲ್ಲಿ ಹದಗೆಟ್ಟ ಭದ್ರತಾ ಸ್ಥಿತಿ; ಬೆಂಗಾಜಿಯಲ್ಲಿ ಸಿಲುಕಿದ್ದ 18 ಭಾರತೀಯರ ರಕ್ಷಣೆ

ಲಿಬಿಯಾದಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಬೆಂಗಾಜಿಯಿಂದ 18 ಭಾರತೀಯ ಪ್ರಜೆಗಳನ್ನು ಭಾರತಕ್ಕೆ ವಾಪಾಸ್ ಕಳುಹಿಸಲು ಅನುಕೂಲ ಮಾಡಿಕೊಟ್ಟಿದೆ. ಈ 18 ಜನ ಹಲವಾರು ವಾರಗಳಿಂದ ಬೆಂಗಾಜಿ ನಗರದಲ್ಲಿ ಸಿಲುಕಿಕೊಂಡಿದ್ದರು ಎಂದು ಭಾರತದ ವಿದೇಶಾಂಗ ಸಚಿವಾಲಯ ತಿಳಿಸಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಅವರು ಲಿಬಿಯಾದಲ್ಲಿ ಸಿಲುಕಿಕೊಂಡಿದ್ದ 18 ಭಾರತೀಯರು ಹಿಂತಿರುಗಿರುವುದನ್ನು ದೃಢಪಡಿಸಿದ್ದಾರೆ.

ಲಿಬಿಯಾದಲ್ಲಿ ಹದಗೆಟ್ಟ ಭದ್ರತಾ ಸ್ಥಿತಿ; ಬೆಂಗಾಜಿಯಲ್ಲಿ ಸಿಲುಕಿದ್ದ 18 ಭಾರತೀಯರ ರಕ್ಷಣೆ
18 Indians Rescued From Libya
ಸುಷ್ಮಾ ಚಕ್ರೆ
|

Updated on: Feb 06, 2025 | 3:09 PM

Share

ನವದೆಹಲಿ: ಲಿಬಿಯಾದ ಬೆಂಗಾಜಿಯಿಂದ 18 ಭಾರತೀಯ ಪ್ರಜೆಗಳನ್ನು ಹಿಂದಿರುಗಿಸಲು ಲಿಬಿಯಾದಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಅನುಕೂಲ ಮಾಡಿಕೊಟ್ಟಿದೆ. ಅವರು ಇಂದು ಭಾರತಕ್ಕೆ ಆಗಮಿಸಿದ್ದಾರೆ ಎಂದು ಭಾರತೀಯ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಎಕ್ಸ್​ನ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. ಈ 18 ಭಾರತೀಯರು ಲಿಬಿಯಾದಲ್ಲಿ ಕೆಲಸಕ್ಕೆ ಹೋಗಿದ್ದರು. ಅಲ್ಲಿನ ಭದ್ರತಾ ಪರಿಸ್ಥಿತಿ ಹದಗೆಟ್ಟಿದ್ದರಿಂದ ಹಲವಾರು ವಾರಗಳ ಕಾಲ ಸಿಕ್ಕಿಹಾಕಿಕೊಂಡಿದ್ದರು. ರಾಯಭಾರ ಕಚೇರಿ ಸ್ಥಳೀಯ ಅಧಿಕಾರಿಗಳೊಂದಿಗೆ ಸಂಪರ್ಕಿಸಿ, ಅಗತ್ಯವಿರುವ ಅಧಿಕಾರ ಮತ್ತು ಪ್ರಯಾಣ ದಾಖಲೆಗಳೊಂದಿಗೆ ಭಾರತೀಯ ಕಾರ್ಮಿಕರಿಗೆ ಸಹಾಯ ಮಾಡಿತು” ಎಂದು ಅವರು ಹೇಳಿದ್ದಾರೆ.

ಲಿಬಿಯಾದ ಬೆಂಗಾಜಿಯಲ್ಲಿ ಹಲವು ವಾರಗಳ ಕಾಲ ಸಿಲುಕಿಕೊಂಡಿದ್ದ ಒಟ್ಟು 18 ಭಾರತೀಯರು ದೇಶಕ್ಕೆ ಮರಳಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ) ತಿಳಿಸಿದೆ. ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಎಂಇಎ ವಕ್ತಾರ ರಣಧೀರ್ ಜೈಸ್ವಾಲ್, ಲಿಬಿಯಾದಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಕೆಲಸಕ್ಕಾಗಿ ಲಿಬಿಯಾಕ್ಕೆ ಹೋಗಿ ಹಲವಾರು ವಾರಗಳ ಕಾಲ ಸಿಲುಕಿಕೊಂಡಿದ್ದ ಭಾರತೀಯರ ಮರಳುವಿಕೆಯನ್ನು ಸುಗಮಗೊಳಿಸಿದೆ ಎಂದು ಹೇಳಿದರು. ರಾಯಭಾರ ಕಚೇರಿಯು ಭಾರತೀಯರೊಂದಿಗೆ ಸಂಪರ್ಕದಲ್ಲಿರುತ್ತದೆ ಎಂದು ಜೈಸ್ವಾಲ್ ಹೇಳಿದ್ದಾರೆ. ಲಿಬಿಯಾ ಅಧಿಕಾರಿಗಳ ಬೆಂಬಲ ಮತ್ತು ಸಹಕಾರಕ್ಕಾಗಿ ಜೈಸ್ವಾಲ್ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ.

ಇದನ್ನೂ ಓದಿ: ಲಿಬಿಯಾ ಕರಾವಳಿಯಲ್ಲಿ ದೋಣಿ ಮುಳುಗಿ 60ಕ್ಕೂ ಹೆಚ್ಚು ಮಂದಿ ವಲಸಿಗರು ಸಾವು

“ರಾಯಭಾರ ಕಚೇರಿಯು ಲಿಬಿಯಾದಲ್ಲಿ ಸಿಲುಕಿದ್ದವರ ಯೋಗಕ್ಷೇಮವನ್ನು ನೋಡಿಕೊಳ್ಳಲು ಅವರೊಂದಿಗೆ ನಿರಂತರ ಸಂಪರ್ಕದಲ್ಲಿತ್ತು. ಅವರಿಗೆ ದೈನಂದಿನ ಜೀವನಕ್ಕೆ ಬೇಕಾದ ವಸ್ತುಗಳನ್ನು ಪೂರೈಸಿತು. ರಾಯಭಾರ ಕಚೇರಿಯ ಸಹಾಯದಿಂದ ಅದೇ ಗುಂಪಿನ ಇತರ ಮೂವರು ಭಾರತೀಯ ಪ್ರಜೆಗಳು ಕಳೆದ ಅಕ್ಟೋಬರ್‌ನಲ್ಲಿ ಭಾರತಕ್ಕೆ ಮರಳಿದ್ದರು” ಎಂದು ಜೈಸ್ವಾಲ್ ತಮ್ಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

2014ರಲ್ಲಿ ಪ್ರಾರಂಭವಾದ ಅಂತರ್ಯುದ್ಧದ ನಂತರ ಲಿಬಿಯಾದಲ್ಲಿ ಭದ್ರತಾ ಪರಿಸ್ಥಿತಿ ಹದಗೆಡುತ್ತಿದೆ. ಇದಕ್ಕೂ ಮೊದಲು, ಭಾರತ ಸರ್ಕಾರವು ಭಾರತೀಯ ಪ್ರಜೆಗಳ ಮೇಲೆ ಲಿಬಿಯಾಕ್ಕೆ ಪ್ರಯಾಣ ನಿಷೇಧವನ್ನು ವಿಧಿಸಿತು. ಇತ್ತೀಚಿನ ತಿಂಗಳುಗಳಲ್ಲಿ ಅಲ್ಲಿನ ಭದ್ರತಾ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿದೆ. ಭಾರತ ಮತ್ತು ಲಿಬಿಯಾವನ್ನು ಸಂಪರ್ಕಿಸುವ ಯಾವುದೇ ನೇರ ವಿಮಾನಗಳಿಲ್ಲ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ