AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಂಗ್ಲಾ ಪ್ರವಾಹಕ್ಕೂ ಭಾರತದ ಅಣೆಕಟ್ಟಿನಿಂದ ನೀರು ಬಿಟ್ಟಿದ್ದಕ್ಕೂ ಸಂಬಂಧವಿಲ್ಲ: ಕೇಂದ್ರ ಸರ್ಕಾರ

ಬಾಂಗ್ಲಾದೇಶದಲ್ಲಿ ಉದ್ಭವವಾಗಿರುವ ಪ್ರವಾಹಕ್ಕೂ ಭಾರತದ ಅಣೆಕಟ್ಟಿನಿಂದ ಬಿಟ್ಟಿರುವ ನೀರಿಗೂ ಯಾವುದೇ ಸಂಬಂಧವಿಲ್ಲ ಎಂದು ಭಾರತದ ಸರ್ಕಾರ ಸ್ಪಷ್ಟಪಡಿಸಿದೆ. ಬಾಂಗ್ಲಾದೇಶದಲ್ಲಿ ಇತ್ತೀಚಿನ ವಿನಾಶಕಾರಿ ಪ್ರವಾಹದ ಬಳಿಕ, ದೇಶದಲ್ಲಿ ಭಾರತ ವಿರೋಧಿ ಪ್ರಚಾರವು ವೇಗ ಪಡೆಯುತ್ತಿದೆ.

ಬಾಂಗ್ಲಾ ಪ್ರವಾಹಕ್ಕೂ ಭಾರತದ ಅಣೆಕಟ್ಟಿನಿಂದ ನೀರು ಬಿಟ್ಟಿದ್ದಕ್ಕೂ ಸಂಬಂಧವಿಲ್ಲ: ಕೇಂದ್ರ ಸರ್ಕಾರ
ಬಾಂಗ್ಲಾದೇಶ
ನಯನಾ ರಾಜೀವ್
|

Updated on: Aug 22, 2024 | 11:55 AM

Share

ಬಾಂಗ್ಲಾದೇಶದಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿಗೂ ಭಾರತದ ಅಣೆಕಟ್ಟಿನಿಂದ ನೀರು ಬಿಟ್ಟಿದ್ದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಸ್ಪಷ್ಟಪಡಿಸಿದೆ. ಬಾಂಗ್ಲಾದೇಶದಲ್ಲಿ ಇತ್ತೀಚಿನ ವಿನಾಶಕಾರಿ ಪ್ರವಾಹದ ಬಳಿಕ, ದೇಶದಲ್ಲಿ ಭಾರತ ವಿರೋಧಿ ಪ್ರಚಾರವು ವೇಗ ಪಡೆಯುತ್ತಿದೆ. ಭಾರತದ ತ್ರಿಪುರಾದ ದಂಬೂರ್​ ಜಲವಿದ್ಯುತ್ ಯೋಜನೆಯ ಅಣೆಕಟ್ಟನ್ನು ತೆರೆದಿದ್ದು, ಬಾಂಗ್ಲಾದೇಶದ ಪ್ರವಾಹಕ್ಕೆ ಕಾರಣವಾಯಿತು ಮತ್ತು ಹಲವಾರು ಜಿಲ್ಲೆಗಳಲ್ಲಿ ಭಾರಿ ನಾಶವನ್ನು ಉಂಟುಮಾಡಿದೆ ಎಂದು ಹಲವಾರು ಸಂಘಟನೆಗಳು ಆರೋಪಿಸಿವೆ.

ತ್ರಿಪುರಾದಲ್ಲಿರುವ ದಂಬೂರ್​ ಅಣೆಕಟ್ಟನ್ನು ಹಠಾತ್ತನೆ ತೆರೆಯಲಾಗಿದೆ ಎಂದು ಆರೋಪಿಸಲಾಗಿದೆ. ಇದರಿಂದಾಗಿ ಬಾಂಗ್ಲಾದೇಶದ ಅನೇಕ ತಗ್ಗು ಪ್ರದೇಶಗಳು ಮುಳುಗಿವೆ. ಈ ಆರೋಪದ ಪ್ರಕಾರ, ಭಾರತವು ಯಾವುದೇ ಮುನ್ಸೂಚನೆ ಇಲ್ಲದೆ ಅಣೆಕಟ್ಟಿನ ಗೇಟ್​ಗಳನ್ನು ತೆರೆದಿದೆ. ಇದರಿಂದಾಗಿ ಹೆಚ್ಚಿನ ಭಾಗಗಳು ಜಲಾವೃತಗೊಂಡಿವೆ ಎಂದು ಭಾರತದ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ.

Bangladesh Crisis: ಬಾಂಗ್ಲಾದೇಶದ ಗಡಿಯ ಪರಿಸ್ಥಿತಿ ಗಮನಿಸಲು ಭಾರತ ಸರ್ಕಾರದಿಂದ ಸಮಿತಿ ರಚನೆ; ಅಮಿತ್ ಶಾ ಘೋಷಣೆ

ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಸರ್ಕಾರ ಪತನದ ನಂತರ, ಹೊಸ ಸರ್ಕಾರದ ಮೇಲೆ ಒತ್ತಡ ಹೇರಲು ಭಾರತ ಉದ್ದೇಶಪೂರ್ವಕವಾಗಿ ಈ ಪ್ರವಾಹ ಸೃಷ್ಟಿಸಿದೆ ಎಂದು ಆರೋಪ ಮಾಡಲಾಗುತ್ತಿದೆ. ಬಾಂಗ್ಲಾದೇಶದಲ್ಲಿ ಭಾರತ ವಿರೋಧಿ ಭಾವನೆಗಳನ್ನು ಕೆರಳಿಸಲು ಜಮಾತ್ ಎ ಇಸ್ಲಾಮ್ ಮತ್ತು ಛತ್ರ ಶಿವರ್​ನಂತಹ ಸಂಘಟನೆಗಳು ಈ ಅವಕಾಶಗಳನ್ನು ಬಳಸಿಕೊಂಡಿವೆ. ಈ ಸಂಘಟನೆಗಳು ಬಾಂಗ್ಲಾದೇಶದ ಬಗ್ಗೆ ಭಾರತ ಹಗೆತನದ ಧೋರಣೆ ಅನುಸರಿಸುತ್ತಿದೆ. ಪ್ರವಾಹವು ಪಿತೂರಿಯ ಒಂದು ಭಾಗವಾಗಿದೆ ಎನ್ನುವ ಸಂದೇಶವನ್ನು ಸಾರಿದ್ದಾರೆ.

ಪ್ರತಿಕ್ರಿಯೆ ನೀಡಿದ ಭಾರತ ತ್ರಿಪುರಾದಲ್ಲಿ ದಂಬೂರ್ ಅಣೆಕಟ್ಟಿನಿಂದ ನೀರು ಬಿಡುವುದು ಮುಂಗಾರು ಮಳೆಯ ಸಮಯದಲ್ಲಿ ನೀರನ ಮಟ್ಟ ನಿಯಂತ್ರಿಸಲು ತೆಗೆದುಕೊಳ್ಳುವ ಒಂದು ಕ್ರಮವಷ್ಟೇ ಇದಕ್ಕೂ ಬಾಂಗ್ಲಾದೇಶದ ಪ್ರವಾಹಕ್ಕೂ ಸಂಬಂಧವಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

ಭಾರತ ಹಾಗೂ ಬಾಂಗ್ಲಾದೇಶದ ಮೂಲಕ ಹರಿಯುವ ಗುಮ್ಟಿ ನದಿಯ ಜಲಾನಯನ ಪ್ರದೇಶಗಳು ಕಳೆದ ಕೆಲವು ದಿನಗಳಿಂದ ಭಾರಿ ಮಳೆಗೆ ಸಾಕ್ಷಿಯಾಗಿವೆ. ತಂಬೂರ್ ಅಣೆಕಟ್ಟು ಗಡಿಯಿಂದ ಸಾಕಷ್ಟು ದೂರದಲ್ಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?