Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರುಣಾಚಲದ ಆಟಗಾರರಿಗೆ ವೀಸಾ ನಿರಾಕರಣೆ; ಚೀನಾ ಏಷ್ಯನ್ ಗೇಮ್ಸ್ ಭೇಟಿ ರದ್ದು ಮಾಡಿದ ಅನುರಾಗ್ ಠಾಕೂರ್

ನಮ್ಮ ದೀರ್ಘಕಾಲದ ಮತ್ತು ಸ್ಥಿರವಾದ ಸ್ಥಾನಕ್ಕೆ ಅನುಗುಣವಾಗಿ, ಭಾರತವು ವಾಸಸ್ಥಳ ಅಥವಾ ಜನಾಂಗೀಯತೆಯ ಆಧಾರದ ಮೇಲೆ ಭಾರತೀಯ ನಾಗರಿಕರನ್ನು ಭೇದಾತ್ಮಕವಾಗಿ ಪರಿಗಣಿಸುವುದನ್ನು ದೃಢವಾಗಿ ತಿರಸ್ಕರಿಸುತ್ತದೆ. ಅರುಣಾಚಲ ಪ್ರದೇಶವು ಭಾರತದ ಅವಿಭಾಜ್ಯ ಅಂಗವಾಗಿಯೇ ಉಳಿಯುತ್ತದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಹೇಳಿದ್ದಾರೆ.

ಅರುಣಾಚಲದ ಆಟಗಾರರಿಗೆ ವೀಸಾ ನಿರಾಕರಣೆ; ಚೀನಾ ಏಷ್ಯನ್ ಗೇಮ್ಸ್ ಭೇಟಿ ರದ್ದು ಮಾಡಿದ ಅನುರಾಗ್ ಠಾಕೂರ್
ಅನುರಾಗ್ ಠಾಕೂರ್
Follow us
ರಶ್ಮಿ ಕಲ್ಲಕಟ್ಟ
|

Updated on:Sep 22, 2023 | 5:38 PM

ದೆಹಲಿ ಸೆಪ್ಟೆಂಬರ್ 22: ಬೀಜಿಂಗ್ (Beijing) ಅರುಣಾಚಲ ಪ್ರದೇಶದ (Arunachal Pradesh) ಅಥ್ಲೀಟ್‌ಗಳಿಗೆ ವೀಸಾ ಮತ್ತು ಮಾನ್ಯತೆಯನ್ನು ನಿರಾಕರಿಸಿದ ನಂತರ ಕ್ರೀಡಾಪಟುಗಳಿಗೆ ಉದ್ದೇಶಪೂರ್ವಕವಾಗಿ ಮತ್ತು ನಿರ್ದಿಷ್ಟವಾಗಿ ಅದೇ ರಾಜ್ಯದ ಕ್ರೀಡಾಪಟುಗಳಿಗೆ ಈ ರೀತಿ ತಡೆಯೊಡ್ಡಿದ್ದನ್ನು ಖಂಡಿಸಿ ಭಾರತ ಚೀನಾ(China) ವಿರುದ್ಧ ಶುಕ್ರವಾರ ಔಪಚಾರಿಕ ಪ್ರತಿಭಟನೆಯನ್ನು ದಾಖಲಿಸಿದೆ. ಕೇಂದ್ರ ಸಚಿವ ಅನುರಾಗ್ ಠಾಕೂರ್  ಚೀನಾ ಪ್ರವಾಸವನ್ನು ರದ್ದುಗೊಳಿಸಿದ್ದಾರೆ ಎಂದು ಸರ್ಕಾರ ತಿಳಿಸಿದೆ.

ಚೀನಾದ ಹ್ಯಾಂಗ್‌ಝೌನಲ್ಲಿ ನಡೆದ 19ನೇ ಏಷ್ಯನ್ ಗೇಮ್ಸ್‌ಗೆ ಅರುಣಾಚಲ ಪ್ರದೇಶದ ಕೆಲವು ಭಾರತೀಯ ಕ್ರೀಡಾಪಟುಗಳಿಗೆ ಮಾನ್ಯತೆ ಮತ್ತು ಪ್ರವೇಶವನ್ನು ನಿರಾಕರಿಸುವ ಮೂಲಕ ಚೀನಾದ ಅಧಿಕಾರಿಗಳು ಉದ್ದೇಶಪೂರ್ವಕವಾಗಿ ಮತ್ತು ಪೂರ್ವಭಾವಿಯಾಗಿ ತಾರತಮ್ಯ ಮಾಡಿದ್ದಾರೆ ಎಂದು ಭಾರತ ಸರ್ಕಾರದ ಗಮನಕ್ಕೆ ಬಂದಿದೆ ಎಂದು ಸರ್ಕಾರ ಇಂದು ಹೇಳಿದೆ.

ನಮ್ಮ ದೀರ್ಘಕಾಲದ ಮತ್ತು ಸ್ಥಿರವಾದ ಸ್ಥಾನಕ್ಕೆ ಅನುಗುಣವಾಗಿ, ಭಾರತವು ವಾಸಸ್ಥಳ ಅಥವಾ ಜನಾಂಗೀಯತೆಯ ಆಧಾರದ ಮೇಲೆ ಭಾರತೀಯ ನಾಗರಿಕರನ್ನು ಭೇದಾತ್ಮಕವಾಗಿ ಪರಿಗಣಿಸುವುದನ್ನು ದೃಢವಾಗಿ ತಿರಸ್ಕರಿಸುತ್ತದೆ. ಅರುಣಾಚಲ ಪ್ರದೇಶವು ಭಾರತದ ಅವಿಭಾಜ್ಯ ಅಂಗವಾಗಿಯೇ ಉಳಿಯುತ್ತದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಹೇಳಿದ್ದಾರೆ.

ಭಾರತೀಯ ಅಥ್ಲೀಟ್‌ಗಳಿಗೆ ಚೀನಾದ “ಉದ್ದೇಶಪೂರ್ವಕ ಮತ್ತು ನಿರ್ದಿಷ್ಟ ಅಡಚಣೆ”ಯ ಬಗ್ಗೆ ಸರ್ಕಾರವು ನವದೆಹಲಿ ಮತ್ತು ಬೀಜಿಂಗ್‌ನಲ್ಲಿ ಬಲವಾದ ಪ್ರತಿಭಟನೆಯನ್ನು ಸಲ್ಲಿಸಿದೆ ಎಂದು ಬಾಗ್ಚಿ ಹೇಳಿದ್ದಾರೆ. ಈ ಕ್ರಮಗಳು “ಏಷ್ಯನ್ ಗೇಮ್ಸ್‌ನ ಉತ್ಸಾಹ ಮತ್ತು ಅವರ ನಡವಳಿಕೆಯನ್ನು ನಿಯಂತ್ರಿಸುವ ನಿಯಮಗಳೆರಡನ್ನೂ ಉಲ್ಲಂಘಿಸುತ್ತವೆ” ಎಂದು ಸರ್ಕಾರ ಗಮನಿಸಿದೆ ಎಂದು ಅವರು ಹೇಳಿದರು. ಭಾರತ ತನ್ನ ಹಿತಾಸಕ್ತಿಗಳನ್ನು ಕಾಪಾಡಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ಬಾಗ್ಚಿ ಹೇಳಿದ್ದಾರೆ.

ದಕ್ಷಿಣ ಟಿಬೆಟ್ ಎಂದು ಕರೆಯುವ ಅರುಣಾಚಲ ಪ್ರದೇಶವನ್ನು ಚೀನಾ ತನ್ನ ಭೂಪ್ರದೇಶವೆಂದು ಹೇಳಿಕೊಂಡಿದೆ. ಕಳೆದ ತಿಂಗಳು, ಅಂತರರಾಷ್ಟ್ರೀಯ ಟೀಕೆಗೆ ಗುರಿಯಾದ ಕ್ರಮದಲ್ಲಿ, ಚೀನಾ ಸರ್ಕಾರವು ಈಶಾನ್ಯ ರಾಜ್ಯ ಮತ್ತು ಪೂರ್ವ ಲಡಾಖ್‌ನಲ್ಲಿರುವ ಅಕ್ಸಾಯ್ ಚಿನ್ ಪ್ರದೇಶವನ್ನು ತನ್ನ ಗಡಿಯೊಳಗೆ ಒಳಗೊಂಡಿರುವ ಹೊಸ “ಪ್ರಮಾಣಿತ” ನಕ್ಷೆಯನ್ನು ಬಿಡುಗಡೆ ಮಾಡಿತ್ತು.

ಇದನ್ನೂ ಓದಿ:  ಹರ್ದೀಪ್ ನಿಜ್ಜರ್ ಹತ್ಯೆ ವಿವಾದ: ಭಾರತ ಮತ್ತು ಕೆನಡಾ ಸಂಬಂಧ ಹೇಗಿದೆ? ಅಂಕಿ ಅಂಶಗಳಲ್ಲಿ ನೋಡೋಣ

ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು “ನಕ್ಷೆ”ಯನ್ನು ತಳ್ಳಿ ಹಾಕಿದ್ದು, ಬೀಜಿಂಗ್ ಅಂತಹ ನಕ್ಷೆಗಳನ್ನು ಬಿಡುಗಡೆ ಮಾಡುವ “ಅಭ್ಯಾಸ” ಹೊಂದಿದೆ ಎಂದು ಎನ್​​ಡಿಟಿವಿಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಹೇಳಿದ್ದಾರೆ. ಇದು ಯಾವುದರಲ್ಲೂ ಬದಲಾಗುವುದಿಲ್ಲ. ನಮ್ಮ ಪ್ರದೇಶ ಯಾವುದು (ಅದು) ಎಂಬುದರ ಬಗ್ಗೆ ನಮ್ಮ ಸರ್ಕಾರವು ತುಂಬಾ ಸ್ಪಷ್ಟವಾಗಿದೆ” ಎಂದು ಅವರು ಹೇಳಿದು ಚೀನಾದ ವಾದ “ಅಸಂಬದ್ಧ” ಎಂದು ಹೇಳಿದ್ದಾರೆ.

ವಿವಾದಾತ್ಮಕ ನಕ್ಷೆಯು “ಕಾನೂನಿಗೆ ಅನುಸಾರವಾಗಿ ಸಾರ್ವಭೌಮತ್ವದ ಸಾಮಾನ್ಯ ಪ್ರಕ್ರಿಯೆ” ಎಂದು ಘೋಷಿಸುವ ಮೂಲಕ ಚೀನಾ ಈ ಹಿಂದೆ ಭಾರತದ ಆಕ್ಷೇಪಣೆಗಳಿಗೆ ಪ್ರತಿಕ್ರಿಯಿಸಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:37 pm, Fri, 22 September 23

ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್