AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾತುಕತೆಗೆ ಪಾಕ್ ಪ್ರಧಾನಿ ಕರೆ; ಅದಕ್ಕಾಗಿ ಭಯೋತ್ಪಾದನೆ ಮತ್ತು ಹಿಂಸಾಚಾರದಿಂದ ಮುಕ್ತ ವಾತಾವರಣ ಇರಬೇಕು ಎಂದ ಭಾರತ

ಮಾಧ್ಯಮವದವರೊಂದಿಗೆ ಮಾತನಾಡಿದ ಬಾಗ್ಚಿ, ಈ ವಿಷಯದ ಬಗ್ಗೆ ಪಾಕಿಸ್ತಾನದ ಪ್ರಧಾನಿಯವರ ಹೇಳಿಕೆ ಕುರಿತು ನಾವು ವರದಿಗಳನ್ನು ನೋಡಿದ್ದೇವೆ. ಪಾಕಿಸ್ತಾನ ಸೇರಿದಂತೆ ನಮ್ಮ ಎಲ್ಲಾ ನೆರೆಯ ದೇಶಗಳೊಂದಿಗೆ ನಾವು ಸಾಮಾನ್ಯ ಸಂಬಂಧವನ್ನು ಬಯಸುತ್ತೇವೆ ಎಂಬುದು ಭಾರತದ ಸ್ಪಷ್ಟ ಮತ್ತು ಸ್ಥಿರವಾದ ನಿಲುವು ಎಲ್ಲರಿಗೂ ತಿಳಿದಿದೆ. ಈ ಪರಿಸರಕ್ಕೆ ಭಯೋತ್ಪಾದನೆ ಮತ್ತು ಹಗೆತನದಿಂದ ಮುಕ್ತವಾಗಿರುವುದು ಅತ್ಯಗತ್ಯ ಎಂದಿದ್ದಾರೆ.

ಮಾತುಕತೆಗೆ ಪಾಕ್ ಪ್ರಧಾನಿ ಕರೆ; ಅದಕ್ಕಾಗಿ ಭಯೋತ್ಪಾದನೆ ಮತ್ತು ಹಿಂಸಾಚಾರದಿಂದ ಮುಕ್ತ ವಾತಾವರಣ ಇರಬೇಕು ಎಂದ ಭಾರತ
ಅರಿಂದಮ್ ಬಾಗ್ಚಿ
ರಶ್ಮಿ ಕಲ್ಲಕಟ್ಟ
|

Updated on:Aug 03, 2023 | 7:54 PM

Share

ದೆಹಲಿ ಆಗಸ್ಟ್ 03: ಭಾರತವು ಪಾಕಿಸ್ತಾನದೊಂದಿಗೆ ಸೌಹಾರ್ದ ಸಂಬಂಧವನ್ನು ಬಯಸಿದೆ.ಆದರೆ ಅಂತಹ ಸಂಬಂಧಕ್ಕಾಗಿ ಭಯೋತ್ಪಾದನೆ ಮತ್ತು ಹಿಂಸಾಚಾರದಿಂದ ಮುಕ್ತ ವಾತಾವರಣ ಇರಬೇಕು ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ (Ministry of External Affairs) ವಕ್ತಾರ ಅರಿಂದಮ್ ಬಾಗ್ಚಿ (Arindam Bagchi) ಗುರುವಾರ ಹೇಳಿದ್ದಾರೆ. ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ (Shehbaz Sharif )ಭಾರತದೊಂದಿಗೆ ಮಾತನಾಡಲು ಇಚ್ಛೆ ವ್ಯಕ್ತಪಡಿಸಿದ ಕೆಲವು ದಿನಗಳ ನಂತರ ಈ ಹೇಳಿಕೆ ಬಂದಿದೆ.

ಮಾಧ್ಯಮವದವರೊಂದಿಗೆ ಮಾತನಾಡಿದ ಬಾಗ್ಚಿ, ಈ ವಿಷಯದ ಬಗ್ಗೆ ಪಾಕಿಸ್ತಾನದ ಪ್ರಧಾನಿಯವರ ಹೇಳಿಕೆ ಕುರಿತು ನಾವು ವರದಿಗಳನ್ನು ನೋಡಿದ್ದೇವೆ. ಪಾಕಿಸ್ತಾನ ಸೇರಿದಂತೆ ನಮ್ಮ ಎಲ್ಲಾ ನೆರೆಯ ದೇಶಗಳೊಂದಿಗೆ ನಾವು ಸಾಮಾನ್ಯ ಸಂಬಂಧವನ್ನು ಬಯಸುತ್ತೇವೆ ಎಂಬುದು ಭಾರತದ ಸ್ಪಷ್ಟ ಮತ್ತು ಸ್ಥಿರವಾದ ನಿಲುವು ಎಲ್ಲರಿಗೂ ತಿಳಿದಿದೆ. ಆದರೆ ಮಾತುಕತೆಗಾಗಿ ಭಯೋತ್ಪಾದನೆ ಮತ್ತು ಹಗೆತನದಿಂದ ಮುಕ್ತವಾಗಿರುವ ವಾತಾವರಣ ಅತ್ಯಗತ್ಯ ಎಂದಿದ್ದಾರೆ.

ಇದಕ್ಕೂ ಮುನ್ನ ಮಂಗಳವಾರ ಪಾಕಿಸ್ತಾನದ ಪ್ರಧಾನಿ ಭಾರತದೊಂದಿಗೆ ಮಾತನಾಡಲು ತಮ್ಮ ಇಚ್ಛೆ ವ್ಯಕ್ತ ಪಡಿಸಿದ್ದು ನಾವು ಯಾರ ವಿರುದ್ಧವೂ ಅಲ್ಲ ಎಂದಿದ್ದರು.

ಇಸ್ಲಾಮಾಬಾದ್‌ನಲ್ಲಿ ನಡೆದ ಖನಿಜ ಶೃಂಗಸಭೆಯ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಶೆಹಬಾಜ್ ಷರೀಫ್, ರಾಷ್ಟ್ರವನ್ನು ನಿರ್ಮಿಸಲು ನಾವು ನೆರೆಹೊರೆಯವರೊಂದಿಗೆ ಮಾತನಾಡಲು ಸಿದ್ಧರಿದ್ದೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಜ್ಞಾನವಾಪಿ ಮಸೀದಿಯೂ ಅಲ್ಲ ಹಿಂದೂ ದೇವಾಲಯವೂ ಅಲ್ಲ, ಅದು ಬೌದ್ಧ ಮಠ: ಸುಪ್ರೀಂಕೋರ್ಟ್‌ನಲ್ಲಿ ಪಿಐಎಲ್

1947 ರಲ್ಲಿ ಸ್ವಾತಂತ್ರ್ಯದ ನಂತರ ಉಭಯ ದೇಶಗಳ ನಡುವಿನ ಉದ್ವಿಗ್ನ ಸಂಬಂಧಗಳ ಇತಿಹಾಸದ ಹೊರತಾಗಿಯೂ, ರಾಷ್ಟ್ರವು ಕೆಲವು ಆರ್ಥಿಕ ತೊಂದರೆಗಳನ್ನು ಎದುರಿಸುತ್ತಿರುವ ಕಾರಣ ಅರ್ಥಪೂರ್ಣ ಸಂಭಾಷಣೆಯನ್ನು ಉತ್ತೇಜಿಸುವ ಗುರಿಯನ್ನು ಪಾಕಿಸ್ತಾನದ ಪ್ರಧಾನಿ ಹೊಂದಿದ್ದಾರೆ.

ನಮ್ಮ ನೆರೆಹೊರೆಯವರೊಂದಿಗೆ ನಾವು ಮಾತನಾಡಲು ಸಿದ್ಧರಿದ್ದೇವೆ. ನೆರೆಯವರು ಮೇಜಿನ ಮೇಲಿರುವ ಗಂಭೀರ ವಿಷಯಗಳ ಬಗ್ಗೆ ಮಾತನಾಡಲು ಗಂಭೀರವಾಗಿರುತ್ತಾರೆ ಏಕೆಂದರೆ ಯುದ್ಧವು ಇನ್ನು ಮುಂದೆ ಆಯ್ಕೆಯಾಗಿಲ್ಲ. ಪಾಕಿಸ್ತಾನವು ಪರಮಾಣು ಶಕ್ತಿಯಾಗಿದ್ದು, ಆಕ್ರಮಣಕಾರಿಯಾಗಿ ಅಲ್ಲ. ಕಳೆದ 75 ವರ್ಷಗಳಲ್ಲಿ ನಾವು ಮೂರು ಯುದ್ಧಗಳನ್ನು ನಡೆಸಿದ್ದೇವೆ. ಇದು ಹೆಚ್ಚು ಬಡತನ, ನಿರುದ್ಯೋಗ ಮತ್ತು ಹಣಕಾಸು, ಶಿಕ್ಷಣ, ಆರೋಗ್ಯ ಮತ್ತು ಜನರ ಯೋಗಕ್ಷೇಮಕ್ಕೆ ಸಂಪನ್ಮೂಲಗಳ ಕೊರತೆಯನ್ನು ಸೃಷ್ಟಿಸುತ್ತದೆ ಎಂದು ಪಾಕ್ ಪ್ರಧಾನಿ ಷರೀಫ್ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:52 pm, Thu, 3 August 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ