AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಧ್ಯಮಗಳ ವರ್ತನೆ ನಾಚಿಕೆಯಿಂದ ತಲೆ ತಗ್ಗಿಸುವಂತೆ ಮಾಡಿದೆ: ಪ್ರಣಬ್ ಪುತ್ರ ಅಭಿಜಿತ್ ಮುಖರ್ಜಿ

ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಕುರಿತು ಅಸತ್ಯ ಹಾಗೂ ಅಸಹನೀಯ ಸುದ್ದಿಗಳನ್ನು ಬಿತ್ತರಿಸಲಾಗುತ್ತಿದೆ ಎಂದು ಆರೋಪಿಸಿ ಅವರ ಮಗ ಅಭಿಜಿತ್ ಮುಖರ್ಜಿ ಕಿಡಿ ಕಾರಿದ್ದಾರೆ. “ನನ್ನ ತಂದೆ ಶ್ರೀ ಪ್ರಣಬ್ ಮುಖರ್ಜಿ ಅವರು ಇನ್ನೂ ಜೀವಂತವಾಗಿದ್ದಾರೆ ಮತ್ತು ಅವರ ದೇಹದಲ್ಲಿ ಹೃದಯದಿಂದ ಮೆದುಳಿಗೆ ರಕ್ತ ಪರಿಚಲನೆ ಅಡೆತಡೆಯಿಲ್ಲದೆ ನಡೆಯುತ್ತಿದೆ. ಅವರ ಆರೋಗ್ಯದ ಬಗ್ಗೆ ಕೆಲವು ಪ್ರತಿಷ್ಠಿತ ಪತ್ರಕರ್ತರು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಬಿತ್ತರಗೊಳ್ಳುತ್ತಿರುವ ಮತ್ತು ಹರಿದಾಡುತ್ತಿರುವ ಸುಳ್ಳು ಸುದ್ದಿಗಳು, ಭಾರತದ ಮಾಧ್ಯಮ […]

ಮಾಧ್ಯಮಗಳ ವರ್ತನೆ ನಾಚಿಕೆಯಿಂದ ತಲೆ ತಗ್ಗಿಸುವಂತೆ ಮಾಡಿದೆ: ಪ್ರಣಬ್ ಪುತ್ರ ಅಭಿಜಿತ್ ಮುಖರ್ಜಿ
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Aug 13, 2020 | 3:45 PM

Share

ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಕುರಿತು ಅಸತ್ಯ ಹಾಗೂ ಅಸಹನೀಯ ಸುದ್ದಿಗಳನ್ನು ಬಿತ್ತರಿಸಲಾಗುತ್ತಿದೆ ಎಂದು ಆರೋಪಿಸಿ ಅವರ ಮಗ ಅಭಿಜಿತ್ ಮುಖರ್ಜಿ ಕಿಡಿ ಕಾರಿದ್ದಾರೆ.

ನನ್ನ ತಂದೆ ಶ್ರೀ ಪ್ರಣಬ್ ಮುಖರ್ಜಿ ಅವರು ಇನ್ನೂ ಜೀವಂತವಾಗಿದ್ದಾರೆ ಮತ್ತು ಅವರ ದೇಹದಲ್ಲಿ ಹೃದಯದಿಂದ ಮೆದುಳಿಗೆ ರಕ್ತ ಪರಿಚಲನೆ ಅಡೆತಡೆಯಿಲ್ಲದೆ ನಡೆಯುತ್ತಿದೆ. ಅವರ ಆರೋಗ್ಯದ ಬಗ್ಗೆ ಕೆಲವು ಪ್ರತಿಷ್ಠಿತ ಪತ್ರಕರ್ತರು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಬಿತ್ತರಗೊಳ್ಳುತ್ತಿರುವ ಮತ್ತು ಹರಿದಾಡುತ್ತಿರುವ ಸುಳ್ಳು ಸುದ್ದಿಗಳು, ಭಾರತದ ಮಾಧ್ಯಮ ಅಸತ್ಯ ಸುದ್ದಿಗಳ ಕಾರ್ಖಾನೆಯಾಗಿದೆ ಎನ್ನುವುದನ್ನು ಪ್ರತಿಬಿಂಬಿಸುತ್ತದೆ@ABHIJIT_LS,” ಎಂದು ಹೇಳಿದ್ದಾರೆ.

ಮುಂದುವರಿದು ಹೇಳಿರುವ ಆಭಿಜಿತ್, ಕೇವಲ ಪ್ರಚಾರಕ್ಕಾಗಿ ಮತ್ತು ಟಿಆರ್​ಪಿಗಾಗಿ ಮಾಧ್ಯಮಗಳು ಸುಳ್ಳು ಸುದ್ದಿ ಬಿತ್ತರಿಸುವುದನ್ನು ನೋಡುತ್ತಿದ್ದರೆ ನಾಚಿಕೆಯಿಂದ ತಲೆತಗ್ಗಿಸುವಂತಾಗುತ್ತದೆ ಎಂದಿದ್ದಾರೆ.

ಕೇವಲ ಪ್ರಚಾರ ಗಿಟ್ಟಿಸಲು, ಕೆಲವು ಸುದ್ದಿ ಮಾಧ್ಯಮಗಳು, ಪತ್ರಕರ್ತರು, ಸಾಮಾಜಿಕ ಜಾಲತಾಣಗಳು ಉದ್ದೇಶಪೂರ್ವಕವಾಗಿ ಮತ್ತು ಹತಾಷೆಯಿಂದ ಸುಳ್ಳು ಸುದ್ದಿಯನ್ನು ಪ್ರಸಾರ ಮಾಡುತ್ತಿರುವುದನ್ನು ನೋಡುತ್ತಿದ್ದರೆ, ನಾಚಿಕೆಯಿಂದ ತಲೆ ತಾನಾಗೇ ತಗ್ಗುತ್ತದೆ! ಚಿಟಿಕೆ ಹೊಡೆಯುವಷ್ಟರಲ್ಲಿ ಬದುಕಿರುವ ವ್ಯಕ್ತಿಯನ್ನು ಸಾಯಿಸಿಬಿಡುವ ಅವರ ಕೀಳು ಮನಸ್ಥಿತಿ ಹೇವರಿಕೆ ಹುಟ್ಟಿಸುತ್ತದೆ@ABHIJIT_LS,” ಅಂತ ಹೇಳಿದ್ದಾರೆ.

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!