AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಯಾಮರಣ ಕೋರಿ ರಾಷ್ಟ್ರಪತಿ ರಾಮನಾಥ ಕೋವಿಂದ್​ರಿಗೆ ಪತ್ರ ಬರೆದ 12 ಮಂದಿ ವೈದ್ಯಕೀಯ ವಿದ್ಯಾರ್ಥಿಗಳು

ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಗ್ಲೋಕಲ್​ ಯೂನಿವರ್ಸಿಟಿ ಉಪಕುಲಪತಿ ಅಕೀಲ್​ ಅಹ್ಮದ್​, ಮೆಡಿಕಲ್​ ಕೌನ್ಸಿಲ್​ ಆಫ್ ಇಂಡಿಯಾ ನಮ್ಮ ಯೂನಿವರ್ಸಿಟಿಯನ್ನು ಅಮಾನ್ಯ ಮಾಡಿದ್ದರೂ, ನಾವು ನಮ್ಮ ವಿದ್ಯಾರ್ಥಿಗಳ ಪದವಿ ಪೂರ್ಣಗೊಳ್ಳಲಿ ಎಂದುಕೊಂಡೆವು ಎಂದು ಹೇಳಿದ್ದಾರೆ.

ದಯಾಮರಣ ಕೋರಿ ರಾಷ್ಟ್ರಪತಿ ರಾಮನಾಥ ಕೋವಿಂದ್​ರಿಗೆ ಪತ್ರ ಬರೆದ 12 ಮಂದಿ ವೈದ್ಯಕೀಯ ವಿದ್ಯಾರ್ಥಿಗಳು
ಗ್ಲೋಕಲ್​ ಕಾಲೇಜು
TV9 Web
| Updated By: Lakshmi Hegde|

Updated on:Feb 02, 2022 | 3:51 PM

Share

ಉತ್ತರ ಪ್ರದೇಶದ ಶಹರನ್​ಪುರದ ವೈದ್ಯಕೀಯ ವಿದ್ಯಾರ್ಥಿಗಳು ರಾಷ್ಟ್ರಪತಿ ರಾಮನಾಥ ಕೋವಿಂದ್​ ಅವರಿಗೆ ಪತ್ರ ಬರೆದು, ನಮಗೆಲ್ಲ ದಯಾಮರಣಕ್ಕೆ ಅನುಮತಿ ಕೊಡಿ ಎಂದು ಬೇಡಿಕೊಂಡಿದ್ದಾರೆ. ಕಲಿಕೆ ಸ್ಥಗಿತಗೊಂಡಿದ್ದರಿಂದ ತುಂಬ ಸಮಸ್ಯೆ ಉಂಟಾಗಿದೆ. ಹೀಗಾಗಿ ನಮಗೆ ದಯಾಮರಣಕ್ಕೆ ಅನುಮತಿಸಿ ಎಂದು  ಕೇಳಿಕೊಂಡಿದ್ದಾರೆ.

ಶಹರನ್​​ಪುರದ ಗ್ಲೋಕಲ್​ ವೈದ್ಯಕೀಯ ಕಾಲೇಜು ಎಂಬಿಬಿಎಸ್​ ಕೋರ್ಸ್​​​ಗಾಗಿ  66 ವಿದ್ಯಾರ್ಥಿಗಳನ್ನು ನೋಂದಣಿ ಮಾಡಿಕೊಂಡಿತ್ತು. ಆದರೆ ಮೂರೇ ತಿಂಗಳ ನಂತರ ಈ ಕಾಲೇಜನ್ನು ಭಾರತದ ವೈದ್ಯಕೀಯ ಮಂಡಳಿ (MCI-Medical Council Of India) ಅಮಾನ್ಯಗೊಳಿಸಿತು. ಆದರೆ ಕಾಲೇಜು ಆಡಳಿತ ಮಂಡಳಿ ಇದನ್ನು ನಮಗೆ ತಿಳಿಸಲೇ ಇಲ್ಲ. ನಾವು ಅಲ್ಲಿಂದ 2021ರವರೆಗೆ 5ವರ್ಷಗಳ ಕಾಲ ಅಲ್ಲಿಯೇ ಎಂಬಿಬಿಎಸ್ ಮಾಡಿದೆವು. ನಂತರ ಕಾಲೇಜು ಅಮಾನ್ಯಗೊಂಡ ವಿಚಾರ ನಮಗೆ ಗೊತ್ತಾಗಿದೆ.  ಅಲಹಾಬಾದ್ ಹೈಕೋರ್ಟ್​ ಮೆಟ್ಟಿಲೇರಿದೆವು. ಅದೂ ಕೂಡ ಪ್ರಯೋಜನವಾಗಲಿಲ್ಲ. ನಮಗೆ ಈಗ ಯಾವುದೇ ಭರವಸೆ ಉಳಿದಿಲ್ಲ. ಇಷ್ಟು ವರ್ಷ ಕಾಲ ಶಿಕ್ಷಣ ಪಡೆದೂ ಅದನ್ನು ಸರಿಯಾಗಿ ಮುಂದುವರಿಸಲು ಆಗಲಿಲ್ಲ. ಇದರಿಂದ ಜೀವನವೇ ಸಾಕೆನಿಸಿದೆ ಎಂದು ವಿದ್ಯಾರ್ಥಿಗಳು ಪತ್ರ ಬರೆದಿದ್ದಾರೆ ಎಂದು ಹಿಂದುಸ್ತಾನ್​ ಟೈಮ್ಸ್​ ವರದಿ ಮಾಡಿದೆ.

66 ವಿದ್ಯಾರ್ಥಿಗಳಲ್ಲಿ ಒಟ್ಟು 12 ಮಂದಿ ಸೇರಿ ರಾಷ್ಟ್ರಪತಿಗೆ ಪತ್ರ ಬರೆದಿದ್ದಾರೆ.  ವಿದ್ಯಾರ್ಥಿಗಳ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಗ್ಲೋಕಲ್​ ಯೂನಿವರ್ಸಿಟಿ ಉಪಕುಲಪತಿ ಅಕೀಲ್​ ಅಹ್ಮದ್​, ಮೆಡಿಕಲ್​ ಕೌನ್ಸಿಲ್​ ಆಫ್ ಇಂಡಿಯಾ ನಮ್ಮ ಯೂನಿವರ್ಸಿಟಿಯನ್ನು ಅಮಾನ್ಯ ಮಾಡಿದ್ದರೂ, ನಾವು ನಮ್ಮ ವಿದ್ಯಾರ್ಥಿಗಳ ಪದವಿ ಪೂರ್ಣಗೊಳ್ಳಲಿ ಎಂದುಕೊಂಡೆವು.  ಈ ವಿದ್ಯಾರ್ಥಿಗಳ ಮನವಿ ಮೇರೆಗೆ ಎಂಸಿಐ ನಿರಾಕ್ಷೇಪಣಾ ಪತ್ರವನ್ನು (No Objection Certificate) ಕೂಡ ರದ್ದುಗೊಳಿಸಿತು. ವಿದ್ಯಾರ್ಥಿಗಳು ಹೈಕೋರ್ಟ್​​ನಲ್ಲಿ ರಿಟ್​ ಅರ್ಜಿ ಸಲ್ಲಿಸಿದರು. ಬಳಿಕ ಸುಪ್ರೀಂಕೋರ್ಟ್​ಗೆ ಹೋದರು. ಅಲ್ಲೆಲ್ಲ ಕಡೆಗಳಲ್ಲೂ ಅರ್ಜಿ ವಜಾಗೊಂಡಿದೆ. ಇಷ್ಟೆಲ್ಲ ಆದರೂ ನಾವು ನಮ್ಮ ವಿದ್ಯಾರ್ಥಿಗಳ ಬೆಂಬಲಕ್ಕೆ ನಿಂತಿದ್ದೇವೆ ಎಂದಿದ್ದಾರೆ.

ಅಂದಹಾಗೇ, ಗ್ಲೋಕಲ್​ ಮೆಡಿಕಲ್​ ಕಾಲೇಜಿನಲ್ಲಿ ಮೂಲಸೌಕರ್ಯಗಳು, ಸವಲತ್ತುಗಳು ಅತ್ಯಂತ ಕಳಪೆಮಟ್ಟದಲ್ಲಿ ಇದ್ದ ಕಾರಣ ಎಂಸಿಐ ಅದನ್ನು ಅಮಾನ್ಯ ಮಾಡಿತ್ತು ಎಂದು ಹೇಳಲಾಗಿದೆ. 2020ರಲ್ಲಿ ಉತ್ತರ ಪ್ರದೇಶ ರಾಜ್ಯ ಸರ್ಕಾರ ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯಕ್ಕೆ ಪತ್ರ ಬರೆದು, ಈ ಕಾಲೇಜಿನ ವೈದ್ಯಕೀಯ ವಿದ್ಯಾರ್ಥಿಗಳಿಗೆ ಸೂಕ್ತ ವ್ಯವಸ್ಥೆ ಮಾಡುವ ಬಗ್ಗೆ ನಿರ್ದೇಶನ ನೀಡಿ ಎಂದು ಕೇಳಿತ್ತು.

ಇದನ್ನೂ ಓದಿ: ವೈದ್ಯರ ಕಳ್ಳಾಟ ಪತ್ತೆ ಹಚ್ಚಲು ದಿನದಲ್ಲಿ 3 ಬಾರಿ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯ ಮಾಡಿದ ವೈದ್ಯಕೀಯ ಶಿಕ್ಷಣ ಇಲಾಖೆ

Published On - 3:50 pm, Wed, 2 February 22

ಆಳಂದ ಮತಗಳ್ಳತನ: ಚಾರ್ಜ್​ಶೀಟ್ ಬಗ್ಗೆ ಸುಭಾಷ್ ಗುತ್ತೇದಾರ್ ಮಗ ಹೇಳಿದ್ದೇನು?
ಆಳಂದ ಮತಗಳ್ಳತನ: ಚಾರ್ಜ್​ಶೀಟ್ ಬಗ್ಗೆ ಸುಭಾಷ್ ಗುತ್ತೇದಾರ್ ಮಗ ಹೇಳಿದ್ದೇನು?
ರಾಶಿಕಾ ಕ್ಯಾಪ್ಟನ್ ಆಗಿದ್ದು ಇಷ್ಟ ಆಗಿಲ್ಲ ಎಂದ ಸೂರಜ್; ಆಪ್ತರಲ್ಲೇ ಕಿತ್ತಾಟ
ರಾಶಿಕಾ ಕ್ಯಾಪ್ಟನ್ ಆಗಿದ್ದು ಇಷ್ಟ ಆಗಿಲ್ಲ ಎಂದ ಸೂರಜ್; ಆಪ್ತರಲ್ಲೇ ಕಿತ್ತಾಟ
ರಾಶಿಗಳಿಗನುಗುಣವಾಗಿ ಕಷ್ಟಗಳಿಂದ ಪಾರಾಗುವುದು ಹೇಗೆ ಗೊತ್ತಾ?
ರಾಶಿಗಳಿಗನುಗುಣವಾಗಿ ಕಷ್ಟಗಳಿಂದ ಪಾರಾಗುವುದು ಹೇಗೆ ಗೊತ್ತಾ?
ಇಂದು ಈ ರಾಶಿಯವರು ಎಚ್ಚರಿಕೆಯಿಂದಿರಬೇಕು
ಇಂದು ಈ ರಾಶಿಯವರು ಎಚ್ಚರಿಕೆಯಿಂದಿರಬೇಕು
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..