AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಕ್ರೇನ್​​ನಿಂದ ಮರಳಿದ ವೈದ್ಯಕೀಯ ವಿದ್ಯಾರ್ಥಿಗಳಿಂದ ಉಪವಾಸ ಸತ್ಯಾಗ್ರಹ; ಸರ್ಕಾರದ ಮಧ್ಯಪ್ರವೇಶಕ್ಕೆ ಒತ್ತಾಯ

ಜೂನ್ 23ರಂದು ರಾಮಲೀಲಾ ಮೈದಾನದಲ್ಲಿ ಪ್ರತಿಭಟನೆ ಆರಂಭವಾಗಿದ್ದು ಜುಲೈ 27ರ ವರೆಗೆ ಮುಂದುವರಿಯಲಿದೆ. ವಿದ್ಯಾರ್ಥಿಗಳ ಜತೆ ಹೆತ್ತವರೂ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.

ಉಕ್ರೇನ್​​ನಿಂದ ಮರಳಿದ ವೈದ್ಯಕೀಯ ವಿದ್ಯಾರ್ಥಿಗಳಿಂದ ಉಪವಾಸ ಸತ್ಯಾಗ್ರಹ; ಸರ್ಕಾರದ ಮಧ್ಯಪ್ರವೇಶಕ್ಕೆ ಒತ್ತಾಯ
ವಿದ್ಯಾರ್ಥಿಗಳ ಪ್ರತಿಭಟನೆ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Jul 24, 2022 | 6:13 PM

Share

ದೆಹಲಿ: ಯುದ್ಧ ಪೀಡಿತ ಉಕ್ರೇನ್​​ನಿಂದ ಮರಳಿ ಬಂದ ವೈದ್ಯಕೀಯ ವಿದ್ಯಾರ್ಥಿಗಳು (Medical students) ದೆಹಲಿಯಲ್ಲಿ ಐದು ದಿನಗಳ ಉಪವಾಸ ಸತ್ಯಾಗ್ರಹ (hunger strike) ನಡೆಸುತ್ತಿದ್ದಾರೆ. ಭಾರತದ ವೈದ್ಯಕೀಯ ಕಾಲೇಜುಗಳಲ್ಲಿ ಪ್ರವೇಶ ನೀಡಬೇಕೆಂಬುದು ಈ ವಿದ್ಯಾರ್ಥಿಗಳ ಬೇಡಿಕೆ. ಖಿನ್ನತೆ, ಉದ್ವೇಗ ಮತ್ತು ಮಾನಸಿಕ ಒತ್ತಡ ಅನುಭವಿಸುತ್ತಿರುವ ಈ ವಿದ್ಯಾರ್ಥಿಗಳು ತಮ್ಮ ಭವಿಷ್ಯಲನ್ನು ಉಳಿಸಿ ಎಂದು ಪ್ರಧಾನಿ ನರೇಂದ್ರ ಮೋದಿಯವರಲ್ಲಿ (Narendra Modi) ಮನವಿ ಮಾಡಿದ್ದಾರೆ. ನಮ್ಮನ್ನು  ಭಾರತದ ಕಾಲೇಜುಗಳಿಗೆ ಸೇರಿಸಿಕೊಳ್ಳಿ. ಸರ್ಕಾರ ನಮಗೆ ಸಹಾಯ ಮಾಡಬೇಕು. ಪ್ರಧಾನಿ ಮೋದಿಯವರಲ್ಲಿ ನಮಗೆ ಭರವಸೆ ಇದೆ ಎಂದು ಉಕ್ರೇನ್​​ನಲ್ಲಿ ಮೂರನೇ ವರ್ಷದ ವಿದ್ಯಾರ್ಥಿಯಾಗಿರುವ ಮುಹ್ಮದ್ ಅಖಿಲ್ ರಾಜಾ ಹೇಳಿದ್ದಾರೆ. ಜೂನ್ 23ರಂದು ರಾಮಲೀಲಾ ಮೈದಾನದಲ್ಲಿ ಪ್ರತಿಭಟನೆ ಆರಂಭವಾಗಿದ್ದು ಜುಲೈ 27ರ ವರೆಗೆ ಮುಂದುವರಿಯಲಿದೆ. ವಿದ್ಯಾರ್ಥಿಗಳ ಜತೆ ಹೆತ್ತವರೂ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಈ ವಿದ್ಯಾರ್ಥಿಗಳು ಎಲ್ಲವನ್ನೂ ಅಲ್ಲೇ ಬಿಟ್ಟು ಯುದ್ಧ ಪೀಡಿತ ಉಕ್ರೇನ್ ನಿಂದ ಭಾರತಕ್ಕೆ ಬಂದಿದ್ದರು. ನಾವು ಅವರನ್ನು ಮತ್ತೆ ವಾಪಸ್ ಕಳಿಸುವುದಿಲ್ಲ.ಅವರಿಗೆ ಇಲ್ಲಿನ ವೈದ್ಯಕೀಯ ಕಾಲೇಜಿನಲ್ಲಿ ಪ್ರವೇಶ ನೀಡಿ ಸಹಾಯ ಮಾಡಬೇಕು ಎಂದು ನಾನು ಸರ್ಕಾರಕ್ಕೆ ವಿನಂತಿ ಮಾಡುತ್ತಿದ್ದೇವೆ ಎಂದು ಪೋಷಕರೊಬ್ಬರು ಹೇಳಿದ್ದಾರೆ.

ಇದಕ್ಕಿಂತ ಮುಂಚೆ ಪೇರೆಂಟ್ಸ್ ಅಸೋಸಿಯೇಷನ್ ಆಫ್ ಉಕ್ರೇನ್ ಎಂಬಿಬಿಎಸ್ ಸ್ಟೂಡೆಂಟ್ಸ್ (PAUMS), ಒಂದಕ್ಕಿಂತ ಹೆಚ್ಚು ಪ್ರತಿಭಟನೆಗಳನ್ನು ನಾವು ನಡೆಸಿದ್ದು, ಪ್ರಧಾನಿ ಕಚೇರಿಗೂ ಪತ್ರ ಬರೆದಿದ್ದೆವು. ಆದರೆ ಏನೂ ಪ್ರಯೋಜನವಾಗಿಲ್ಲ ಎಂದಿದೆ.

ಕಳೆದ ತಿಂಗಳು ಹಲವಾರು ವಿದ್ಯಾರ್ಥಿಗಳು ಜಂತರ್ ಮಂತರ್​​ನಲ್ಲಿ ಉಪವಾಸ ಸತ್ಯಾಗ್ರಹ ಕೂತು ತಮಗೆ ವೈದ್ಯಕೀಯ ಕಾಲೇಜಿನಲ್ಲಿ ಪ್ರವೇಶ ನೀಡಬೇಕೆಂದು ಒತ್ತಾಯಿಸಿದ್ದರು. ನಾವು ಜಂತರ್ ಮಂತರ್ ಮೂರು ಬಾರಿ ಮತ್ತು ದ್ವಾರಕದಲ್ಲಿರುವ ನ್ಯಾಷನಲ್ ಮೆಡಿಕಲ್ ಕಮಿಷನ್ ಕಚೇರಿಯಲ್ಲಿಯೂ ಎರಡು ಬಾರಿ ಪ್ರತಿಭಟನೆ ನಡೆಸಿದ್ದೆವು. ಪ್ರಧಾನಿ ಕಚೇರಿಗೆ, ಆರೋಗ್ಯ ಸಚಿವಾಲಯ, ಶಿಕ್ಷಣ ಸಚಿವಾಲಯ, ಎನ್ ಎಂಸಿ ಮತ್ತು ರಾಷ್ಟ್ರಪತಿಗಳಿಗೂ ನಾವು ಬೇಡಿಕೆ ಸಲ್ಲಿಸಿದ್ದೇವೆ. ಆದರೆ ಇಲ್ಲಿಯವರೆಗೆ ಯಾವುದೇ ಭರವಸೆ ಸಿಕ್ಕಿಲ್ಲ. ಹಾಗಾಗಿ ವಿದ್ಯಾರ್ಥಿಗಳು ಉಪವಾಸ ಸತ್ಯಾಗ್ರಹ ಕೂರಲು ನಿರ್ಧರಿಸಿದ್ದಾರೆ ಎಂದು ಪ್ರಕಟಣೆಯಲ್ಲಿ ಹೇಳಿದೆ. ಸರಿಸುಮಾರು 12,000 ವಿದ್ಯಾರ್ಥಿಗಳಿದ್ದು 600 ಮೆಡಿಕಲ್ ಕಾಲೇಜುಗಳಲ್ಲಿ 20 ವಿದ್ಯಾರ್ಥಿಗಳಂತೆ ಪ್ರವೇಶ ನೀಡಬೇಕು ಎಂದು ಇವರು ಬೇಡಿಕೆಯೊಡ್ಡಿದ್ದಾರೆ.

ಉಕ್ರೇನ್​​ನ ವಿವಿಧ ಕಾಲೇಜುಗಳಲ್ಲಿ ಕಲಿಯುತ್ತಿದ್ದ ಕನಿಷ್ಠ ಪಕ್ಷ 18,000 ವಿದ್ಯಾರ್ಥಿಳು ಫೆಬ್ರುವರಿಯಲ್ಲಿ ಭಾರತಕ್ಕೆ ಮರಳಿದ್ದರು. ಏಪ್ರಿಲ್ ತಿಂಗಳಲ್ಲಿ ಸರ್ಕಾರದ ಮಧ್ಯಪ್ರವೇಶ ಒತ್ತಾಯಿಸಿ ವಿದ್ಯಾರ್ಥಿಗಳ ಪೋಷಕರು ಜಂತರ್ ಮಂತರ್​​ನಲ್ಲಿ ಪ್ರತಿಭಟನೆ ನಡೆಸಿದ್ದರು.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ