Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೀರತ್: ಸೌರಭ್​ನನ್ನು ಕೊಲೆ ಮಾಡಿ ಹಿಮಾಚಲಕ್ಕೆ ಟ್ರಿಪ್​ಗೆ ಹೋಗಿ ಸಾಹಿಲ್, ಮುಸ್ಕಾನ್ ಮಾಡಿದ್ದೇನು?

ಉತ್ತರ ಪ್ರದೇಶದ ಮೀರತ್‌ನಲ್ಲಿ ಪತಿ ಸೌರಭ್ ರಜಪೂತ್ ಹತ್ಯೆಯ ನಂತರ ಹಿಮಾಚಲ ಪ್ರದೇಶಕ್ಕೆ ಮುಸ್ಕಾನ್ ರಸ್ತೋಗಿ ಮತ್ತು ಆಕೆಯ ಪ್ರಿಯಕರ ಸಾಹಿಲ್ ಶುಕ್ಲಾ ಕ್ಯಾಬ್​ನಲ್ಲಿ ಪ್ರಯಾಣಿಸಿದ್ದರು. ಕ್ಯಾಬ್ ಚಾಲಕ ಪ್ರಯಾಣದ ಎಲ್ಲಾ ವಿವರಗಳನ್ನು ಹಂಚಿಕೊಂಡಿದ್ದಾರೆ ಎಂದು ವರದಿಯಾಗಿದೆ. ಅವರ ನಡವಳಿಕೆಯನ್ನು ನೋಡಿದರೆ ಯಾರನ್ನೂ ಕೊಲೆ ಮಾಡಿದಂತೆ ಅನ್ನಿಸುತ್ತಿರಲಿಲ್ಲ, ಪ್ರಯಾಣದುದ್ದಕ್ಕೂ ಮುಸ್ಕಾನ್ ರಸ್ತೋಗಿ ಮತ್ತು ಸಾಹಿಲ್ ಶುಕ್ಲಾ ಪರಸ್ಪರ ಹೆಚ್ಚು ಮಾತನಾಡಿರಲಿಲ್ಲ. ಪ್ರವಾಸದ ಸಮಯದಲ್ಲಿ ಮುಸ್ಕಾನ್ ತನ್ನ ತಾಯಿಯಿಂದ ಕೇವಲ ಎರಡು ಕರೆಗಳನ್ನು ಮಾತ್ರ ಸ್ವೀಕರಿಸಿದರು. ಮುಸ್ಕಾನ್ ಮತ್ತು ಸಾಹಿಲ್ ಶುಕ್ಲಾ ಈ ಭೀಕರ ಕೃತ್ಯ ಎಸಗಿದ ನಂತರ ಆರು ದಿನಗಳ ಕಾಲ ಹಿಮಾಚಲದ ಕಸೋಲ್‌ನಲ್ಲಿ ತಂಗಿದ್ದರು.

ಮೀರತ್: ಸೌರಭ್​ನನ್ನು ಕೊಲೆ ಮಾಡಿ ಹಿಮಾಚಲಕ್ಕೆ ಟ್ರಿಪ್​ಗೆ ಹೋಗಿ ಸಾಹಿಲ್, ಮುಸ್ಕಾನ್ ಮಾಡಿದ್ದೇನು?
ಸಾಹಿಲ್, ಮುಸ್ಕಾನ್ Image Credit source: Hindustan Times
Follow us
ನಯನಾ ರಾಜೀವ್
|

Updated on:Mar 23, 2025 | 8:33 AM

ಮೀರತ್​, ಮಾರ್ಚ್​ 23: ಉತ್ತರ ಪ್ರದೇಶದ ಮೀರತ್‌ನಲ್ಲಿ ನಡೆದ ಸೌರಭ್ ರಜಪೂತ್ ಕೊಲೆ ಪ್ರಕರಣದಲ್ಲಿ ನಿತ್ಯ ಹಲವು ಹೊಸ ವಿಚಾರಗಳು ಬಹಿರಂಗಗೊಳ್ಳುತ್ತಿವೆ. ಸೌರಭ್ ರಜಪೂತ್ ಹತ್ಯೆ ಮಾಡಿ, ಆರೋಪಿ ಮುಸ್ಕನ್ ರಸ್ತೋಗಿ ಮತ್ತು ಆಕೆಯ ಪ್ರೇಮಿ ಸಾಹಿಲ್ ಶುಕ್ಲಾ ಹಿಮಾಚಲ ಪ್ರದೇಶಕ್ಕೆ ಟ್ರಿಪ್​ಗೆ ಹೋಗಿದ್ದರು. ಅಲ್ಲಿ ಅವರೇನು ಮಾಡಿದ್ದಾರೆ ಎನ್ನುವ ಬಗ್ಗೆ ಕ್ಯಾಬ್​ ಚಾಲಕ ಅಜಬ್ ಸಿಂಗ್ ಮಾಹಿತಿ ನೀಡಿದ್ದಾರೆ. ಇಬ್ಬರ ನಡವಳಿಕೆಯೂ ಸಾಮಾನ್ಯವಾಗಿತ್ತು, ಅವರು ಯಾವುದೋ ಘೋರ ಅಪರಾಧ ಮಾಡಿದ್ದಾರೆಂದು ತೋರುತ್ತಿರಲಿಲ್ಲ ಎಂದು ಹೇಳಿದ್ದಾರೆ.

ಇಂಡಿಯಾ ಟುಡೇ ಜತೆಗೆ ಮಾತನಾಡಿದ ಚಾಲಕ, ಶಿಮ್ಲಾ ಮತ್ತು ಮನಾಲಿಗೆ ಪ್ರವಾಸ ಮಾಡುವಾಗ ಮುಸ್ಕಾನ್ ಮತ್ತು ಸಾಹಿಲ್ ಪರಸ್ಪರ ಹೆಚ್ಚು ಮಾತನಾಡಲಿಲ್ಲ. ಮುಸ್ಕಾನ್ ಗೆ ತನ್ನ ತಾಯಿಯಿಂದ ಎರಡು ಬಾರಿ ಮಾತ್ರ ಕರೆ ಬಂದಿತ್ತು. ಹಿಲ್ ಪ್ರತಿದಿನ ಎರಡು ಬಾಟಲಿ ಮದ್ಯ ಕುಡಿಯುತ್ತಿದ್ದರೆ, ಮುಸ್ಕಾನ್ ಮೂರು ಕ್ಯಾನ್ ಬಿಯರ್ ಕುಡಿಯುತ್ತಿದ್ದರು ಎಂದು ಕ್ಯಾಬ್ ಚಾಲಕ ಮಾಹಿತಿ ನೀಡಿದ್ದಾರೆ.

ಇಬ್ಬರೂ ಕೂಡ ಹೋಳಿ ಹಬ್ಬವನ್ನು ಬಹಳ ಉತ್ಸಾಹದಿಂದ ಆಚರಿಸಿದರು. ಅವರು ಹೋಳಿ ಆಚರಿಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಪೊಲೀಸರು ಈ ಸಂಪೂರ್ಣ ಪ್ರಕರಣದ ತನಿಖೆ ನಡೆಸುತ್ತಿದ್ದು, ಕೊಲೆಯ ಹಿಂದಿನ ಸತ್ಯವನ್ನು ಹೊರಗೆಳೆಯಲು ಪ್ರಯತ್ನಿಸುತ್ತಿದ್ದಾರೆ.

ಇದನ್ನೂ ಓದಿ
Image
ಮೀರತ್ ಕೊಲೆ; ಗಂಡನ ಜೊತೆ ಮುಸ್ಕಾನ್ ಡ್ಯಾನ್ಸ್ ಮಾಡಿದ ಹಳೇ ವಿಡಿಯೋ ವೈರಲ್
Image
ಮಗಳನ್ನು ಗಲ್ಲಿಗೇರಿಸಿ ಎಂದು ಕಣ್ಣೀರಿಟ್ಟ ಆರೋಪಿ ಮಹಿಳೆಯ ಪೋಷಕರು
Image
ಅಮ್ಮನಿಗೆ ಬೈದಿದ್ದಕ್ಕೆ ಮಾವನನ್ನೇ ಕೊಂದ ಪುತ್ರ!
Image
ಮನೆಯ ಬಾವಿಯಲ್ಲಿ 4 ತಿಂಗಳ ಹೆಣ್ಣು ಮಗುವಿನ ಶವ ಪತ್ತೆ, ಕೊಂದಿದ್ಯಾರು?

ಮತ್ತಷ್ಟು ಓದಿ: ಮೀರತ್‌: ಪ್ರಿಯಕರನ ಜತೆ ಸೇರಿ ಪತಿಯ ಕೊಲೆಗೈದ ಮಹಿಳೆ, ದೇಹವನ್ನು 15 ತುಂಡುಗಳಾಗಿ ಕತ್ತರಿಸಿ ಡ್ರಮ್‌ನಲ್ಲಿ ಸೀಲ್

ಮಾರ್ಚ್ 4 ರಂದು ಮೀರತ್‌ನಲ್ಲಿ ಮರ್ಚೆಂಟ್ ನೇವಿ ಅಧಿಕಾರಿ ಸೌರಭ್ ರಜಪೂತ್ ಅವರನ್ನು ಕ್ರೂರವಾಗಿ ಹತ್ಯೆ ಮಾಡಲಾಗಿತ್ತು. ಅದೇ ದಿನ, ಆರೋಪಿ ಮುಸ್ಕಾನ್ ರಸ್ತೋಗಿ ಮತ್ತು ಆಕೆಯ ಪ್ರೇಮಿ ಸಾಹಿಲ್ ಶುಕ್ಲಾ ಸ್ವಿಫ್ಟ್ ಡಿಜೈರ್ ಕ್ಯಾಬ್ ಬುಕ್ ಮಾಡಿ ಶಿಮ್ಲಾ-ಮನಾಲಿಗೆ 15 ದಿನಗಳ ಪ್ರವಾಸಕ್ಕೆ ತೆರಳಿದರು.

ಇಬ್ಬರೂ 54,000 ರೂ.ಗೆ ಕಾರನ್ನು ಬುಕ್ ಮಾಡಿದ್ದರು. ಪ್ರವಾಸದ ಸಮಯದಲ್ಲಿ, ಮುಸ್ಕಾನ್ ಅವರಿಗೆ ವಾಟ್ಸಾಪ್‌ನಲ್ಲಿ ಸಂದೇಶ ಕಳುಹಿಸಿದರು, ಶಿಮ್ಲಾದ ಹೋಟೆಲ್‌ನಲ್ಲಿ ಸಾಹಿಲ್‌ನ ಹುಟ್ಟುಹಬ್ಬಕ್ಕೆ ಕೇಕ್ ತರಲು ಕೇಳಿದ್ದರು. ಸಾಹಿಲ್ ಪ್ರತಿದಿನ ಸಂಜೆ ಮದ್ಯಪಾನ ಮಾಡುತ್ತಿದ್ದನು ಆದರೆ ಮುಸ್ಕಾನ್ ಕುಡಿದಿದ್ದನ್ನು ಅವನು ಎಂದಿಗೂ ನೋಡಿಲ್ಲ. ಆದಾಗ್ಯೂ, ಅವರು ಮೀರತ್‌ಗೆ ಹಿಂತಿರುಗುತ್ತಿರುವಾಗ ಮುಸ್ಕಾನ್ ಮದ್ಯಪಾನ ಮಾಡುವುದನ್ನು ನೋಡಿದ್ದೇನೆ ಎಂದಿದ್ದಾರೆ.

ಮುಸ್ಕಾನ್ ಮತ್ತು ಸಾಹಿಲ್ ವಿಚಾರಣೆಯ ಸಮಯದಲ್ಲಿ ಮಾರ್ಚ್ 4 ರಂದು ಸೌರಭ್‌ನನ್ನು ಕೊಂದಿದ್ದಾಗಿ ಒಪ್ಪಿಕೊಂಡರು. ಕೊಲೆಯ ನಂತರ, ಅವರು ಅವರ ದೇಹವನ್ನು ತುಂಡುಗಳಾಗಿ ಕತ್ತರಿಸಿ, ಡ್ರಮ್‌ನಲ್ಲಿ ಇರಿಸಿ ಸಿಮೆಂಟ್‌ನಿಂದ ಮುಚ್ಚಿದರು. ಇದಾದ ನಂತರ ಇಬ್ಬರೂ ಶಿಮ್ಲಾ-ಮನಾಲಿಗೆ ಭೇಟಿ ನೀಡಲು ಹೋದರು. ಪ್ರಸ್ತುತ ಪೊಲೀಸರು ಆರೋಪಿಗಳಿಬ್ಬರನ್ನೂ ಬಂಧಿಸಿದ್ದು, ಪ್ರಕರಣದ ತನಿಖೆ ಮುಂದುವರೆದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:29 am, Sun, 23 March 25

ರಜತ್ ಕಿಶನ್ ರೀಲ್ಸ್ ಕೇಸ್: ಪೊಲೀಸ್ ಠಾಣೆಗೆ ಅಲೆದಾಡಿದ ಪತ್ನಿ ಅಕ್ಷಿತಾ
ರಜತ್ ಕಿಶನ್ ರೀಲ್ಸ್ ಕೇಸ್: ಪೊಲೀಸ್ ಠಾಣೆಗೆ ಅಲೆದಾಡಿದ ಪತ್ನಿ ಅಕ್ಷಿತಾ
ಹೇಳಿದ ಸತ್ಯವನ್ನು ಬಿಜೆಪಿಗೆ ಜೀರ್ಣಿಸಿಕೊಳ್ಳಲಾಗುತ್ತಿಲ್ಲ: ಶಿವಕುಮಾರ್
ಹೇಳಿದ ಸತ್ಯವನ್ನು ಬಿಜೆಪಿಗೆ ಜೀರ್ಣಿಸಿಕೊಳ್ಳಲಾಗುತ್ತಿಲ್ಲ: ಶಿವಕುಮಾರ್
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ರಾಜಣ್ಣ ದೂರು ನೀಡಿದರೆ ಸರ್ಕಾರ ತನಿಖೆ ಮಾಡಿಸಲು ಸಿದ್ಧವಿದೆ: ಚಲುವರಾಯಸ್ವಾಮಿ
ರಾಜಣ್ಣ ದೂರು ನೀಡಿದರೆ ಸರ್ಕಾರ ತನಿಖೆ ಮಾಡಿಸಲು ಸಿದ್ಧವಿದೆ: ಚಲುವರಾಯಸ್ವಾಮಿ