AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೀರತ್ ಕೊಲೆ: ಮಗಳಿಗೆ ಕಾನೂನು ನೆರವು ನೀಡುವುದಿಲ್ಲ, ಅವಳೊಂದಿಗಿನ ಎಲ್ಲಾ ಸಂಬಂಧಗಳು ಕಟ್: ಮುಸ್ಕಾನ್ ತಾಯಿ

ಪ್ರಿಯಕರನ ಜತೆ ಸೇರಿ ಗಂಡನನ್ನು ಕೊಂದು ಜೈಲು ಸೇರಿರುವ ಮುಸ್ಕಾನ್​ಗೆ ಯಾವುದೇ ಕಾನೂನು ನೆರವು ನೀಡುವುದಿಲ್ಲ, ಹಾಗೆಯೇ ಆಕೆಯೊಂದಿಗಿರುವ ಎಲ್ಲಾ ಸಂಬಂಧ ಕಡಿದುಕೊಳ್ಳುವುದಾಗಿ ಮುಸ್ಕಾನ್ ಪೋಷಕರು ಹೇಳಿದ್ದಾರೆ. ಉತ್ತರ ಪ್ರದೇಶದ ಮೀರತ್​ನಲ್ಲಿ ಸೌರಭ್ ರಜಪೂತ್ ಎಂಬುವವರನ್ನು ಅವರ ಪತ್ನಿ ಮುಸ್ಕಾನ್ ತನ್ನ ಪ್ರಿಯಕರ ಸಾಹಿಲ್ ಜತೆ ಸೇರಿ ಕೊಲೆ ಮಾಡಿದ್ದಳು. ಬಳಿಕ 15 ತುಂಡುಗಳಾಗಿ ಕತ್ತರಿಸಿ ಡ್ರಂನೊಳಗಗೆ ಸಿಮೆಂಟ್​ ಜತೆ ಇರಿಸಿ ಸೀಲ್ ಮಾಡಲಾಗಿತ್ತು.

ಮೀರತ್ ಕೊಲೆ: ಮಗಳಿಗೆ ಕಾನೂನು ನೆರವು ನೀಡುವುದಿಲ್ಲ, ಅವಳೊಂದಿಗಿನ ಎಲ್ಲಾ ಸಂಬಂಧಗಳು ಕಟ್: ಮುಸ್ಕಾನ್ ತಾಯಿ
ಸಾಹಿಲ್, ಮುಸ್ಕಾನ್
ನಯನಾ ರಾಜೀವ್
|

Updated on:Mar 25, 2025 | 3:28 PM

Share

ಮೀರತ್, ಮಾರ್ಚ್​ 25: ಪ್ರಿಯಕರನ ಜತೆ ಸೇರಿ ಗಂಡನನ್ನು ಕೊಂದು ಜೈಲು ಸೇರಿರುವ ಮುಸ್ಕಾನ್​ಗೆ ಯಾವುದೇ ಕಾನೂನು ನೆರವು ನೀಡುವುದಿಲ್ಲ, ಹಾಗೆಯೇ ಆಕೆಯೊಂದಿಗಿರುವ ಎಲ್ಲಾ ಸಂಬಂಧ ಕಡಿದುಕೊಳ್ಳುವುದಾಗಿ ಮುಸ್ಕಾನ್ ಪೋಷಕರು ಹೇಳಿದ್ದಾರೆ. ಉತ್ತರ ಪ್ರದೇಶದ ಮೀರತ್​ನಲ್ಲಿ ಸೌರಭ್ ರಜಪೂತ್ ಎಂಬುವವರನ್ನು ಅವರ ಪತ್ನಿ ಮುಸ್ಕಾನ್ ತನ್ನ ಪ್ರಿಯಕರ ಸಾಹಿಲ್ ಜತೆ ಸೇರಿ ಕೊಲೆ ಮಾಡಿದ್ದಳು. ಬಳಿಕ 15 ತುಂಡುಗಳಾಗಿ ಕತ್ತರಿಸಿ ಡ್ರಂನೊಳಗಗೆ ಸಿಮೆಂಟ್​ ಜತೆ ಇರಿಸಿ ಸೀಲ್ ಮಾಡಲಾಗಿತ್ತು.

ಈ ವಿಚಾರ ತಿಳಿದ ಪೋಷಕರು ಆತಂಕಕ್ಕೊಳಗಾಗಿದ್ದು ಆಕೆಯನ್ನು ಗಲ್ಲಿಗೇರಿಸಿ ಎಂದು ಮನವಿ ಮಾಡಿದ್ದಾರೆ, ಅಷ್ಟೇ ಅಲ್ಲ ಆಕೆಗೆ ಯಾವುದೇ ರೀತಿಯ ಕಾನೂನು ನೆರವು ನೀಡುವುದಿಲ್ಲ, ಆಕೆಯೊಂದಿಗಿರುವ ಎಲ್ಲಾ ಸಂಬಂಧಗಳನ್ನು ಕಡಿದುಕೊಳ್ಳುತ್ತೇವೆ ಎಂದು ತಾಯಿ ಕವಿತಾ ತಿಳಿಸಿದ್ದಾರೆ.

ಎಷ್ಟಿದ್ದರೂ ಆಕೆ ತಮ್ಮ ಮಗಳು ಭಾವನಾತ್ಮಕ ಸಂಬಂಧ ಅಷ್ಟು ಬೇಗ ಹೋಗುವಂತಥದ್ದಲ್ಲ ಹಾಗೆಂದ ಮಾತ್ರಕ್ಕೆ ಆಕೆ ಮಾಡಿರುವ ಕೆಲಸವನ್ನು ಬೆಂಬಲಿಸಲು ಸಾಧ್ಯವಿಲ್ಲ. ಸೌರಭ್ ಕುಟುಂಬವು ಮಾಡಿದ ಎಲ್ಲಾ ಆರ್ಥಿಕ ಅಕ್ರಮಗಳ ಆರೋಪಗಳನ್ನು ಮುಸ್ಕಾನ್ ಅವರ ಪೋಷಕರು ನಿರಾಕರಿಸಿದರು. ಈ ವಿಷಯದಲ್ಲಿ ನಮ್ಮ ಪಾತ್ರವೇನಿಲ್ಲ, ಸೌರಭ್​ರಿಂದ ಪಡೆದ 1 ಲಕ್ಷ ರೂ.ನಲ್ಲಿ ಅರ್ಧದಷ್ಟು ಹಣವನ್ನು ಹಿಂಪಡೆಯಲಾಗಿದೆ ಎಂದು ಹೇಳಿದ್ದಾರೆ. ತಮ್ಮ ಆರ್ಥಿಕ ಪರಿಸ್ಥಿತಿ ಚೆನ್ನಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ
Image
ಮೀರತ್ ಕೊಲೆ; ಗಂಡನ ಜೊತೆ ಮುಸ್ಕಾನ್ ಡ್ಯಾನ್ಸ್ ಮಾಡಿದ ಹಳೇ ವಿಡಿಯೋ ವೈರಲ್
Image
ಮಗಳನ್ನು ಗಲ್ಲಿಗೇರಿಸಿ ಎಂದು ಕಣ್ಣೀರಿಟ್ಟ ಆರೋಪಿ ಮಹಿಳೆಯ ಪೋಷಕರು
Image
ಅಮ್ಮನಿಗೆ ಬೈದಿದ್ದಕ್ಕೆ ಮಾವನನ್ನೇ ಕೊಂದ ಪುತ್ರ!
Image
ಮನೆಯ ಬಾವಿಯಲ್ಲಿ 4 ತಿಂಗಳ ಹೆಣ್ಣು ಮಗುವಿನ ಶವ ಪತ್ತೆ, ಕೊಂದಿದ್ಯಾರು?

ಮತ್ತಷ್ಟು ಓದಿ: ಮೀರತ್: ಸೌರಭ್​ನನ್ನು ಕೊಲೆ ಮಾಡಿ ಹಿಮಾಚಲಕ್ಕೆ ಟ್ರಿಪ್​ಗೆ ಹೋಗಿ ಸಾಹಿಲ್, ಮುಸ್ಕಾನ್ ಮಾಡಿದ್ದೇನು?

ಕವಿತಾ ಮುಸ್ಕಾನ್​ರ ಮಲತಾಯಿಯೇ? ಕವಿತಾ ಮುಸ್ಕಾನ್ ಅವರ ಮಲತಾಯಿಯೇ ಎಂದು ಕೇಳಿದಾಗ, ಅವರ ತಂದೆ ಆ ಹೇಳಿಕೆಯನ್ನು ನಿರಾಕರಿಸಿದರು. ನನ್ನ ಹೆಂಡತಿ ಮುಸ್ಕಾನ್ ಅವರ ಮಲತಾಯಿ ಎಂಬುದು ಸುಳ್ಳು. ಅವರು ಪೊಲೀಸ್ ಠಾಣೆಯಲ್ಲಿ ಕೋಪದಿಂದ ಹೀಗೆ ಹೇಳಿದ್ದಾರೆ.ಆದರೆ ಅದರಲ್ಲಿ ಯಾವುದೇ ಸತ್ಯವಿಲ್ಲ.ಮುಸ್ಕಾನ್ ತನ್ನ ಚಿಕ್ಕಮ್ಮನೊಂದಿಗೆ ಹೆಚ್ಚು ಒಡನಾಟ ಹೊಂದಿದ್ದಳು.

ಆಕೆಯನ್ನು ತಾಯಿಯಂತೆ ಕಾಣುತ್ತಿದ್ದಳು. ಆದರೆ ಆಕೆ ಈಗ ಬದುಕಿಲ್ಲ ಎಂದಿದ್ದಾರೆ. ಮುಸ್ಕಾನ್ ಬಿಡುಗಡೆಯಾಗಿ ಬಂದರೂ ಆಕೆಗೆ ಮನೆಗೆ ಪ್ರವೇಶವಿಲ್ಲ ಎಂದಿದ್ದಾರೆ. 2016ರಲ್ಲಿ ಸೌರಭ್ ಹಾಗೂ ಮುಸ್ಕಾನ್ ಪ್ರೀತಿಸಿ ಕುಟುಂಬದವರ ಇಚ್ಛೆಗೆ ವಿರುದ್ಧವಾಗಿ ಮದುವೆಯಾಗಿದ್ದರು. ಇದೀಗ ಮುಸ್ಕಾನ್ ಸರ್ಕಾರಿ ವಕೀಲರ ನೇಮಕದ ಬಗ್ಗೆ ಆಲೋಚಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:26 pm, Tue, 25 March 25

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ