ಕೋಲ್ಕತ್ತದಲ್ಲಿ ಮಮತಾ ಬ್ಯಾನರ್ಜಿ-ರಾಕೇಶ್​ ಟಿಕಾಯತ್​ ಸಭೆ; ಎಲ್ಲ ಸಮಸ್ಯೆಗಳಿಗೂ ಕೇಂದ್ರ ಸರ್ಕಾರವೇ ಮೂಲವೆಂದ ದೀದಿ

ಇನ್ನು ರಾಕೇಶ್​ ಟಿಕಾಯಿತ್​ ಅವರೂ ಸಹ ಸಭೆಯ ಬಳಿಕ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರಿಗೆ ಧನ್ಯವಾದ ಹೇಳಿದ್ದಾರೆ. ಇನ್ನು ರಾಕೇಶ್​ ಟಿಕಾಯಿತ್​ ಅವರೂ ಸಹ ಸಭೆಯ ಬಳಿಕ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರಿಗೆ ಧನ್ಯವಾದ ಹೇಳಿದ್ದಾರೆ.

ಕೋಲ್ಕತ್ತದಲ್ಲಿ ಮಮತಾ ಬ್ಯಾನರ್ಜಿ-ರಾಕೇಶ್​ ಟಿಕಾಯತ್​ ಸಭೆ; ಎಲ್ಲ ಸಮಸ್ಯೆಗಳಿಗೂ ಕೇಂದ್ರ ಸರ್ಕಾರವೇ ಮೂಲವೆಂದ ದೀದಿ
ಮಮತಾ ಬ್ಯಾನರ್ಜಿ ಮತ್ತು ರಾಕೇಶ್​ ಟಿಕಾಯತ್​ ಸಭೆ
Follow us
| Edited By: Lakshmi Hegde

Updated on: Jun 09, 2021 | 5:46 PM

ದೆಹಲಿ: ಕೇಂದ್ರದ ಮೂರು ಕೃಷಿಕಾಯ್ದೆಗಳ ವಿರುದ್ಧ ಪ್ರತಿಭಟನೆ ಮಾಡುತ್ತಿರುವ ರೈತರಿಗೆ ನನ್ನ ಬೆಂಬಲ ಸದಾ ಇದೆ ಎಂದು ತೃಣಮೂಲ ಕಾಂಗ್ರೆಸ್​ ಮುಖ್ಯಸ್ಥೆ, ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪುನರುಚ್ಚರಿಸಿದ್ದಾರೆ. ನಾವು ಕೃಷಿ ಕಾಯ್ದೆಗಳ ವಿರುದ್ಧ ನಿರ್ಣಯ ಅಂಗೀಕರಿಸಿದ್ದೇವೆ. ರೈತರೊಂದಿಗೆ ಸದಾ ಇರುತ್ತೇವೆ. ರೈತರ ಬೇಡಿಕೆ ಈಡೇರುವವರೆಗೂ ಅವರ ಪ್ರತಿಭಟನೆಗೆ ನಾವು ಬೆಂಬಲ ನೀಡುತ್ತೇವೆ ಎಂದು ತಿಳಿಸಿದ್ದಾರೆ.

ಇಂದು ರೈತ ಮುಖಂಡ ರಾಕೇಶ್​ ಟಿಕಾಯತ್​ ಕೋಲ್ಕತ್ತದಲ್ಲಿ ಮಮತಾ ಬ್ಯಾನರ್ಜಿಯವರನ್ನು ಭೇಟಿ ಮಾಡಿದ್ದಾರೆ. ಕೇಂದ್ರದ ವಿರುದ್ಧದ ಪ್ರತಿಭಟನೆಯನ್ನು ತೀವ್ರಗೊಳಿಸುವ ಸಂಬಂಧ ಯೋಜನೆ ರೂಪಿಸಲು ಚರ್ಚೆ ನಡೆಸಿದ್ದಾರೆ. ಈ ವೇಳೆ ಶಿಕ್ಷಣ, ಆರೋಗ್ಯ, ಸ್ಥಳೀಯ ರೈತರ ಹಿತದ ಬಗ್ಗೆಯೂ ಮಾತುಕತೆ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಮಮತಾ ಬ್ಯಾನರ್ಜಿ, ಈಗ ಕೈಗಾರಿಕೆಗಳು ಸಂಕಷ್ಟದಲ್ಲಿವೆ. ಔಷಧಗಳ ಮೇಲೆಯೂ ಜಿಎಸ್​ಟಿ ವಿಧಿಸಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ.

ರೈತರು ಪ್ರತಿಭಟನೆ ನಡೆಸಲು ಶುರುಮಾಡಿ ಏಳು ತಿಂಗಳಾದವು. ಆದರೂ ಕೇಂದ್ರ ಸರ್ಕಾರ ಅವರೊಂದಿಗೆ ಸರಿಯಾಗಿ ಮಾತುಕತೆ ನಡೆಸಿ, ಕೃಷಿ ಕಾಯ್ದೆಗಳನ್ನು ವಾಪಸ್​ ಪಡೆಯುವ ಬಗ್ಗೆ ಚಿಂತನೆ ನಡೆಸುತ್ತಿಲ್ಲ. ಇನ್ನೊಂದೆಡೆ ಪ್ರಾಕೃತಿಕ ವಿಕೋಪಗಳೂ ಸಂಭವಿಸುತ್ತಿವೆ. ಆದರೆ ಕೇಂದ್ರ ಸರ್ಕಾರ ಮಾತ್ರ ಯಾವುದಕ್ಕೂ ತಲೆ ಕೆಡಿಸಿಕೊಳ್ಳುತ್ತಿಲ್ಲ ಎಂದು ಸಿಎಂ ಮಮತಾ ಬ್ಯಾನರ್ಜಿ ಕಿಡಿಕಾರಿದ್ದಾರೆ.

ಮಮತಾ ಬ್ಯಾನರ್ಜಿಗೆ ಕೃತಜ್ಞತೆ ಇನ್ನು ರಾಕೇಶ್​ ಟಿಕಾಯಿತ್​ ಅವರೂ ಸಹ ಸಭೆಯ ಬಳಿಕ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರಿಗೆ ಧನ್ಯವಾದ ಹೇಳಿದ್ದಾರೆ. ಮಮತಾ ಬ್ಯಾನರ್ಜಿಯವರು ರೈತರಿಗೆ ಸದಾ ಬೆಂಬಲ ನೀಡುತ್ತ ಬಂದಿದ್ದಾರೆ. ಹಾಗೇ, ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ಅವರು ಕೇಂದ್ರಕ್ಕೆ ಪತ್ರ ಬರೆಯಲಿ ಎಂಬುದು ನಮ್ಮ ಒತ್ತಾಯ. ಹಾಗೇ ರಾಷ್ಟ್ರೀಯ ಸಮಸ್ಯೆಗಳ ಬಗ್ಗೆ ಅವರು ಗಮನಹರಿಸಬೇಕಾದ ಅಗತ್ಯವಿದೆ ಎಂದು ಟಿಕಾಯತ್ ಹೇಳಿದ್ದಾರೆ. ಹಾಗೇ, ಕೇಂದ್ರ ಸರ್ಕಾರ ನಮ್ಮ ಬೇಡಿಕೆ ಈಡೇರಿಸುವವರೆಗೂ ಪ್ರತಿಭಟನೆ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:Electricity Price Hike: ಕರ್ನಾಟಕದಲ್ಲಿ ವಿದ್ಯುತ್ ದರ ಹೆಚ್ಚಳಕ್ಕೆ ಕೆಇಆರ್​ಸಿ ಅನುಮೋದನೆ

Meeting Between Rakesh Tikait and Mamata Banerjee in kolkata

ತಾಜಾ ಸುದ್ದಿ
ತುಕಾಲಿಯ ಡ್ಯಾನ್ಸ್​ ನೋಡಿ ಬೆಚ್ಚಿ ಬಿದ್ದ ಮನೆ ಮಂದಿ
ತುಕಾಲಿಯ ಡ್ಯಾನ್ಸ್​ ನೋಡಿ ಬೆಚ್ಚಿ ಬಿದ್ದ ಮನೆ ಮಂದಿ
ಕಾಮಸಮುದ್ರ ಅರಣ್ಯದತ್ತ ಆಗಮಿಸಿದ 50ಕ್ಕೂ ಹೆಚ್ಚು ಕಾಡಾನೆಗಳು
ಕಾಮಸಮುದ್ರ ಅರಣ್ಯದತ್ತ ಆಗಮಿಸಿದ 50ಕ್ಕೂ ಹೆಚ್ಚು ಕಾಡಾನೆಗಳು
ಬಸವಣ್ಣನ ವಚನ ಹೇಳಿ ನೆರೆದವರಿಗೆ ಶಾಕ್ ನೀಡಿದ ಪೂಜಾ ಗಾಂಧಿ
ಬಸವಣ್ಣನ ವಚನ ಹೇಳಿ ನೆರೆದವರಿಗೆ ಶಾಕ್ ನೀಡಿದ ಪೂಜಾ ಗಾಂಧಿ
ಕರುಳಿ‌ನ ಕುಡಿ ರಕ್ಷಣೆಗೆ ತಾಯಿ ಆಕಳು ಹೋರಾಟ; ಇಲ್ಲಿದೆ ಮನಕಲುಕುವ ದೃಶ್ಯ
ಕರುಳಿ‌ನ ಕುಡಿ ರಕ್ಷಣೆಗೆ ತಾಯಿ ಆಕಳು ಹೋರಾಟ; ಇಲ್ಲಿದೆ ಮನಕಲುಕುವ ದೃಶ್ಯ
ಕರಿಬಸವೇಶ್ವರ ಜಾತ್ರೆಯಲ್ಲಿದೆ ವಿಶೇಷ; ಮಹಿಳೆಯರೇ ರಥ ಎಳೆಯುವ ಸಂಪ್ರದಾಯ
ಕರಿಬಸವೇಶ್ವರ ಜಾತ್ರೆಯಲ್ಲಿದೆ ವಿಶೇಷ; ಮಹಿಳೆಯರೇ ರಥ ಎಳೆಯುವ ಸಂಪ್ರದಾಯ
1 ಆಧಾರ್​ ಕಾರ್ಡ್​ನ 2 ಪ್ರತಿ ತೋರಿಸಿ KSRTCಯಲ್ಲಿ ಇಬ್ಬರು ಮಹಿಳೆಯರ ಪ್ರಯಾಣ
1 ಆಧಾರ್​ ಕಾರ್ಡ್​ನ 2 ಪ್ರತಿ ತೋರಿಸಿ KSRTCಯಲ್ಲಿ ಇಬ್ಬರು ಮಹಿಳೆಯರ ಪ್ರಯಾಣ
ಭಾರತ-ಆಫ್ರಿಕಾ ಟಿ20 ಟ್ರೋಫಿ ಫೋಟೋ ಶೂಟ್​ನಲ್ಲಿ ಮಿಂಚಿದ ಸೂರ್ಯ: ವಿಡಿಯೋ
ಭಾರತ-ಆಫ್ರಿಕಾ ಟಿ20 ಟ್ರೋಫಿ ಫೋಟೋ ಶೂಟ್​ನಲ್ಲಿ ಮಿಂಚಿದ ಸೂರ್ಯ: ವಿಡಿಯೋ
‘ನನಗೆ ಯುವರಾಜ್​ ಅಂತ ಅವರೇ ಹೆಸರು ಇಟ್ಟಿದ್ದು’: ಲೀಲಾವತಿ ಮೊಮ್ಮಗನ ಮಾತು
‘ನನಗೆ ಯುವರಾಜ್​ ಅಂತ ಅವರೇ ಹೆಸರು ಇಟ್ಟಿದ್ದು’: ಲೀಲಾವತಿ ಮೊಮ್ಮಗನ ಮಾತು
ಆನೆ ಭೀಮ ಮತ್ತೆ ಗ್ರಾಮಕ್ಕೆ ಎಂಟ್ರಿ, ಗಾಂಭೀರ್ಯ ನಡಿಗೆ ನೋಡಿ
ಆನೆ ಭೀಮ ಮತ್ತೆ ಗ್ರಾಮಕ್ಕೆ ಎಂಟ್ರಿ, ಗಾಂಭೀರ್ಯ ನಡಿಗೆ ನೋಡಿ
ರಿಂಕು ಸಿಂಗ್ ಬಗ್ಗೆ ದ್ರಾವಿಡ್ ಏನೆಲ್ಲ ಹೇಳಿದ್ದಾರೆ ಗೊತ್ತೇ?: ವಿಡಿಯೋ ನೋಡಿ
ರಿಂಕು ಸಿಂಗ್ ಬಗ್ಗೆ ದ್ರಾವಿಡ್ ಏನೆಲ್ಲ ಹೇಳಿದ್ದಾರೆ ಗೊತ್ತೇ?: ವಿಡಿಯೋ ನೋಡಿ