AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇಘಾಲಯದಲ್ಲಿ ಕಾಂಗ್ರೆಸ್​ಗೆ ಇನ್ನೊಂದು ಆಘಾತ; ದೋಷ ಹೇಳಿದರೆ ನಿಂದಿಸುತ್ತಾರೆಂದು ಪಕ್ಷ ತೊರೆದ ಯುವ ಘಟಕ ಅಧ್ಯಕ್ಷ

ಕಾಂಗ್ರೆಸ್​ನ ಕಾರ್ಯವೈಖರಿಯಿಂದ ಹಲವು ದಿನಗಳಿಂದಲೂ ನಾನು ಅಸಮಾಧಾನ ಹೊಂದಿದ್ದೇನೆ. ಈ ಪಕ್ಷದಲ್ಲಿ ರಚನಾತ್ಮಕ ದೋಷವಿದೆ ಎಂದು ಮರಕ್​ ತಮ್ಮ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಮೇಘಾಲಯದಲ್ಲಿ ಕಾಂಗ್ರೆಸ್​ಗೆ ಇನ್ನೊಂದು ಆಘಾತ; ದೋಷ ಹೇಳಿದರೆ ನಿಂದಿಸುತ್ತಾರೆಂದು ಪಕ್ಷ ತೊರೆದ ಯುವ ಘಟಕ ಅಧ್ಯಕ್ಷ
ರಿಚರ್ಡ್​ ಎಂ. ಮರಕ್​
TV9 Web
| Edited By: |

Updated on:Dec 04, 2021 | 10:28 AM

Share

ಶಿಲ್ಲೋಂಗ್​: ಇತ್ತೀಚೆಗಷ್ಟೇ ಮೇಘಾಲಯದಲ್ಲಿ ಕಾಂಗ್ರೆಸ್​​ನ ಮುಕುಲ್​ ಸಂಗ್ಮಾ ಸೇರಿ 11 ಶಾಸಕರು ತೃಣಮೂಲ ಕಾಂಗ್ರೆಸ್​ ಸೇರ್ಪಡೆಯಾಗಿ, ಈ ಮೂಲಕ ಪಕ್ಷಕ್ಕೆ ಬಹುದೊಡ್ಡ ಆಘಾತ ನೀಡಿದ್ದರು.  ಇದೀಗ ಇನ್ನೊಂದು ಶಾಕ್​ ಆಗಿದೆ. ಮುಕುಲ್​ ಸಂಗ್ಮಾ ಆಪ್ತರಾಗಿದ್ದ ಮೇಘಾಲಯ ಕಾಂಗ್ರೆಸ್​ ಯುವ ಘಟಕದ ಅಧ್ಯಕ್ಷ ರಿಚರ್ಡ್ ಎಂ ಮರಕ್​ ಕೂಡ ಪಕ್ಷವನ್ನು ತೊರೆದಿದ್ದಾರೆ. ಕಾಂಗ್ರೆಸ್​​ನಲ್ಲಿ ರಚನಾತ್ಮಕ ದೋಷವಿದೆ ಎಂದು ಆರೋಪಿಸಿದ್ದಾರೆ.  ಮರಕ್​ ಅವರು ತಮ್ಮ ರಾಜೀನಾಮೆ ಪತ್ರವನ್ನು, ಭಾರತೀಯ ಯವ ಕಾಂಗ್ರೆಸ್​ ಅಧ್ಯಕ್ಷ ಶ್ರೀನಿವಾಸ್​ ಬಿವಿ ಅವರಿಗೆ ಸಲ್ಲಿಸಿದ್ದಾರೆ.

ಕಾಂಗ್ರೆಸ್​ನ ಕಾರ್ಯವೈಖರಿಯಿಂದ ಹಲವು ದಿನಗಳಿಂದಲೂ ನಾನು ಅಸಮಾಧಾನ ಹೊಂದಿದ್ದೇನೆ. ಈ ಪಕ್ಷದಲ್ಲಿ ರಚನಾತ್ಮಕ ದೋಷವಿದೆ ಎಂದು ಮರಕ್​ ತಮ್ಮ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ನಾನು ಪಕ್ಷದಲ್ಲಿ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಈ ಹಿಂದೆ ಹಲವು ಬಾರಿ ಸಂಬಂಧಪಟ್ಟವರಿಗೆ ಹೇಳಿದ್ದೇನೆ. ಆದರೆ ಅದನ್ನು ಸರಿಪಡಿಸುವ ಪ್ರಯತ್ನಗಳು ಎಲ್ಲಿಂದಲೂ ಆಗಲಿಲ್ಲ. ಅದರ ಬದಲು ದೋಷ ಹೇಳಿದವರನ್ನೇ ನಿಂದಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಅಷ್ಟೇ ಅಲ್ಲ, ಇಡೀ ಮೇಘಾಲಯದಾದ್ಯಂತ ಸುಮಾರು 500 ಕಾಂಗ್ರೆಸ್ ಕಾರ್ಯಕರ್ತರು ಪಕ್ಷವನ್ನು ಬಿಟ್ಟಿದ್ದಾರೆ ಎಂದೂ ಪ್ರತಿಪಾದಿಸಿದ್ದಾರೆ.

ಅಂದಹಾಗೆ ಮೇಘಾಲಯದಲ್ಲಿ ಇಂಥದ್ದೊಂದು ಬೆಳವಣಿಗೆ ಶುರುವಾಗಿದ್ದು, ಶಿಲ್ಲಾಂಗ್​ ಸಂಸದ ವಿನ್ಸೆಂಟ್​ ಎಚ್​.ಪಾಲಾರನ್ನು ಕಾಂಗ್ರೆಸ್​ ರಾಜ್ಯಾಧ್ಯಕ್ಷನನ್ನಾಗಿ ನೇಮಕ ಮಾಡಿದ ಬಳಿಕ.  ಇತ್ತೀಚೆಗೆ 11 ಶಾಸಕರು ಪಕ್ಷ ಬಿಡಲೂ ಕೂಡ ಅದೇ ಕಾರಣವಾಗಿದ್ದು, ಈಗ ರಿಚರ್ಡ್​ ಸಹ, ವಿನ್ಸೆಂಟ್​ ನೇಮಕಾತಿಯ ಬಗ್ಗೆಯೇ ವಿರೋಧ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Konijeti Rosaiah Death: ಆಂಧ್ರಪ್ರದೇಶದ ಮಾಜಿ ಸಿಎಂ ಕೋನಿಜೇಟಿ ರೋಸಯ್ಯ ಇಂದು ನಿಧನ; ಕರ್ನಾಟಕದ ಮಾಜಿ ರಾಜ್ಯಪಾಲರು ಇವರು

Published On - 9:40 am, Sat, 4 December 21

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ