AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇಘಾಲಯದಲ್ಲಿ ಪ್ರವಾಹ; ಭೂಕುಸಿತದಲ್ಲಿ 7 ಜನ ಮಣ್ಣಿನಡಿ ಸಮಾಧಿ

ಮೇಘಾಲಯದಲ್ಲಿ ಭಾರೀ ಮಳೆ, ಪ್ರವಾಹದಿಂದ ಭೂಕುಸಿತ ಸಂಭವಿಸಿದೆ. ಮಣ್ಣಿನಡಿ ಸಿಲುಕಿ ನಾಪತ್ತೆಯಾದ ಒಂದೇ ಕುಟುಂಬದ 7 ಸದಸ್ಯರಿಗಾಗಿ ಮೇಘಾಲಯದಲ್ಲಿ ಶೋಧ ಮುಂದುವರಿದಿದೆ. ದಾಲು ಮತ್ತು ಬಾಗ್ಮಾರಾ ನಡುವಿನ ರಸ್ತೆ ಸಂಪರ್ಕವು ಭೂಕುಸಿತದಿಂದ ಅಸ್ತವ್ಯಸ್ತವಾಗಿದೆ. ಸಂಚಾರವನ್ನು ಮರುಸ್ಥಾಪಿಸಲು ಪರ್ಯಾಯ ಮಾರ್ಗಗಳನ್ನು ಕಂಡುಹಿಡಿಯಲು ಪ್ರಯತ್ನಿಸಲಾಗುತ್ತಿದೆ.

ಮೇಘಾಲಯದಲ್ಲಿ ಪ್ರವಾಹ; ಭೂಕುಸಿತದಲ್ಲಿ 7 ಜನ ಮಣ್ಣಿನಡಿ ಸಮಾಧಿ
ಮೇಘಾಲಯದಲ್ಲಿ ಭೂಕುಸಿತ
ಸುಷ್ಮಾ ಚಕ್ರೆ
|

Updated on: Oct 05, 2024 | 8:51 PM

Share

ನವದೆಹಲಿ: ಮೇಘಾಲಯದಲ್ಲಿ ಭಾರೀ ಪ್ರವಾಹ, ಭೂಕುಸಿತ ಸಂಭವಿಸಿದೆ. ದಕ್ಷಿಣ ಗಾರೋ ಹಿಲ್ಸ್‌ನ ಹತಿಯಾಸಿಯಾ ಸಾಂಗ್ಮಾದಲ್ಲಿ ಶೋಧ ಕಾರ್ಯಾಚರಣೆಗಳು ನಡೆಯುತ್ತಿವೆ. ವಿನಾಶಕಾರಿ ಭೂಕುಸಿತದಲ್ಲಿ ಜೀವಂತವಾಗಿ ಸಮಾಧಿಯಾದ 7 ಕುಟುಂಬದ ಸದಸ್ಯರ ಮೃತದೇಹಗಳನ್ನು ವಾಪಾಸ್ ಪಡೆಯಲು ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ. ಶುಕ್ರವಾರ ತಡವಾಗಿ ಆರಂಭವಾದ ನಿರಂತರ ಮಳೆಯು ಗಾರೋ ಹಿಲ್ಸ್ ಪ್ರದೇಶದಾದ್ಯಂತ ವ್ಯಾಪಕ ಭೂಕುಸಿತ ಮತ್ತು ಹಠಾತ್ ಪ್ರವಾಹಗಳನ್ನು ಉಂಟುಮಾಡಿದೆ. ಇದರ ಪರಿಣಾಮವಾಗಿ ಒಟ್ಟು 10 ಸಾವುಗಳು ಸಂಭವಿಸಿವೆ ಮತ್ತು ಹಲವಾರು ಮಂದಿ ಗಾಯಗೊಂಡಿದ್ದಾರೆ.

ಇದೇ ರೀತಿಯ ಭೂಕುಸಿತ ಘಟನೆಗಳಿಂದಾಗಿ ಪಶ್ಚಿಮ ಗಾರೋ ಹಿಲ್ಸ್‌ನ ದಾಲುದಲ್ಲಿ ಮೂವರು ವ್ಯಕ್ತಿಗಳು ಪ್ರಾಣ ಕಳೆದುಕೊಂಡಿದ್ದಾರೆ. ಹೆಚ್ಚುತ್ತಿರುವ ಸಾವಿನ ಸಂಖ್ಯೆಗೆ ಪ್ರತಿಕ್ರಿಯೆಯಾಗಿ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ಅವರು ಪರಿಸ್ಥಿತಿಯನ್ನು ನಿರ್ಣಯಿಸಲು ತುರ್ತು ಪರಿಶೀಲನಾ ಸಭೆಯನ್ನು ಕರೆದಿದ್ದಾರೆ. ಈ ಭೂಕುಸಿತ ಎಲ್ಲಾ 5 ಜಿಲ್ಲೆಗಳಲ್ಲಿ ಅದರಲ್ಲೂ ವಿಶೇಷವಾಗಿ ದಕ್ಷಿಣ ಮತ್ತು ಪಶ್ಚಿಮ ಗಾರೋ ಬೆಟ್ಟಗಳ ಮೇಲೆ ತೀವ್ರ ಪರಿಣಾಮ ಬೀರಿದೆ.

ಇದನ್ನೂ ಓದಿ: ಪ್ರವಾಹ ಪೀಡಿತ 14 ರಾಜ್ಯಗಳಿಗೆ ₹ 5,858 ಕೋಟಿ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ

ಮುಖ್ಯಮಂತ್ರಿ ಸಂಗ್ಮಾ ಅವರು ಮೃತರ ಕುಟುಂಬಗಳಿಗೆ ಪರಿಹಾರವನ್ನು ತಕ್ಷಣವೇ ಬಿಡುಗಡೆ ಮಾಡಲು ಆದೇಶಿಸಿದ್ದಾರೆ. ಸ್ಥಳೀಯ ಅಧಿಕಾರಿಗಳು ಸಕಾಲಿಕ ಪರಿಹಾರ ಪ್ರಯತ್ನಗಳಿಗಾಗಿ ಸರ್ಕಾರದ ನೆರವು ಪಡೆಯಲು ಸೂಚಿಸಿದ್ದಾರೆ.

ಪೀಡಿತ ಪ್ರದೇಶಗಳಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಾಗಿ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (NDRF) ನಿಯೋಜನೆ ಮಾಡಲಾಗಿದೆ. ತೀವ್ರ ಹಾನಿಗೊಳಗಾದ ಪ್ರದೇಶಗಳಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ಕೈಗೊಳ್ಳಲು NDRF ಅನ್ನು ನಿಯೋಜಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ ವಸತಿ ಭಾಗ್ಯ ಇಲ್ಲ
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ ವಸತಿ ಭಾಗ್ಯ ಇಲ್ಲ