AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇಘಾಲಯದಲ್ಲಿ ಪ್ರವಾಹ; ಭೂಕುಸಿತದಲ್ಲಿ 7 ಜನ ಮಣ್ಣಿನಡಿ ಸಮಾಧಿ

ಮೇಘಾಲಯದಲ್ಲಿ ಭಾರೀ ಮಳೆ, ಪ್ರವಾಹದಿಂದ ಭೂಕುಸಿತ ಸಂಭವಿಸಿದೆ. ಮಣ್ಣಿನಡಿ ಸಿಲುಕಿ ನಾಪತ್ತೆಯಾದ ಒಂದೇ ಕುಟುಂಬದ 7 ಸದಸ್ಯರಿಗಾಗಿ ಮೇಘಾಲಯದಲ್ಲಿ ಶೋಧ ಮುಂದುವರಿದಿದೆ. ದಾಲು ಮತ್ತು ಬಾಗ್ಮಾರಾ ನಡುವಿನ ರಸ್ತೆ ಸಂಪರ್ಕವು ಭೂಕುಸಿತದಿಂದ ಅಸ್ತವ್ಯಸ್ತವಾಗಿದೆ. ಸಂಚಾರವನ್ನು ಮರುಸ್ಥಾಪಿಸಲು ಪರ್ಯಾಯ ಮಾರ್ಗಗಳನ್ನು ಕಂಡುಹಿಡಿಯಲು ಪ್ರಯತ್ನಿಸಲಾಗುತ್ತಿದೆ.

ಮೇಘಾಲಯದಲ್ಲಿ ಪ್ರವಾಹ; ಭೂಕುಸಿತದಲ್ಲಿ 7 ಜನ ಮಣ್ಣಿನಡಿ ಸಮಾಧಿ
ಮೇಘಾಲಯದಲ್ಲಿ ಭೂಕುಸಿತ
ಸುಷ್ಮಾ ಚಕ್ರೆ
|

Updated on: Oct 05, 2024 | 8:51 PM

Share

ನವದೆಹಲಿ: ಮೇಘಾಲಯದಲ್ಲಿ ಭಾರೀ ಪ್ರವಾಹ, ಭೂಕುಸಿತ ಸಂಭವಿಸಿದೆ. ದಕ್ಷಿಣ ಗಾರೋ ಹಿಲ್ಸ್‌ನ ಹತಿಯಾಸಿಯಾ ಸಾಂಗ್ಮಾದಲ್ಲಿ ಶೋಧ ಕಾರ್ಯಾಚರಣೆಗಳು ನಡೆಯುತ್ತಿವೆ. ವಿನಾಶಕಾರಿ ಭೂಕುಸಿತದಲ್ಲಿ ಜೀವಂತವಾಗಿ ಸಮಾಧಿಯಾದ 7 ಕುಟುಂಬದ ಸದಸ್ಯರ ಮೃತದೇಹಗಳನ್ನು ವಾಪಾಸ್ ಪಡೆಯಲು ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ. ಶುಕ್ರವಾರ ತಡವಾಗಿ ಆರಂಭವಾದ ನಿರಂತರ ಮಳೆಯು ಗಾರೋ ಹಿಲ್ಸ್ ಪ್ರದೇಶದಾದ್ಯಂತ ವ್ಯಾಪಕ ಭೂಕುಸಿತ ಮತ್ತು ಹಠಾತ್ ಪ್ರವಾಹಗಳನ್ನು ಉಂಟುಮಾಡಿದೆ. ಇದರ ಪರಿಣಾಮವಾಗಿ ಒಟ್ಟು 10 ಸಾವುಗಳು ಸಂಭವಿಸಿವೆ ಮತ್ತು ಹಲವಾರು ಮಂದಿ ಗಾಯಗೊಂಡಿದ್ದಾರೆ.

ಇದೇ ರೀತಿಯ ಭೂಕುಸಿತ ಘಟನೆಗಳಿಂದಾಗಿ ಪಶ್ಚಿಮ ಗಾರೋ ಹಿಲ್ಸ್‌ನ ದಾಲುದಲ್ಲಿ ಮೂವರು ವ್ಯಕ್ತಿಗಳು ಪ್ರಾಣ ಕಳೆದುಕೊಂಡಿದ್ದಾರೆ. ಹೆಚ್ಚುತ್ತಿರುವ ಸಾವಿನ ಸಂಖ್ಯೆಗೆ ಪ್ರತಿಕ್ರಿಯೆಯಾಗಿ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ಅವರು ಪರಿಸ್ಥಿತಿಯನ್ನು ನಿರ್ಣಯಿಸಲು ತುರ್ತು ಪರಿಶೀಲನಾ ಸಭೆಯನ್ನು ಕರೆದಿದ್ದಾರೆ. ಈ ಭೂಕುಸಿತ ಎಲ್ಲಾ 5 ಜಿಲ್ಲೆಗಳಲ್ಲಿ ಅದರಲ್ಲೂ ವಿಶೇಷವಾಗಿ ದಕ್ಷಿಣ ಮತ್ತು ಪಶ್ಚಿಮ ಗಾರೋ ಬೆಟ್ಟಗಳ ಮೇಲೆ ತೀವ್ರ ಪರಿಣಾಮ ಬೀರಿದೆ.

ಇದನ್ನೂ ಓದಿ: ಪ್ರವಾಹ ಪೀಡಿತ 14 ರಾಜ್ಯಗಳಿಗೆ ₹ 5,858 ಕೋಟಿ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ

ಮುಖ್ಯಮಂತ್ರಿ ಸಂಗ್ಮಾ ಅವರು ಮೃತರ ಕುಟುಂಬಗಳಿಗೆ ಪರಿಹಾರವನ್ನು ತಕ್ಷಣವೇ ಬಿಡುಗಡೆ ಮಾಡಲು ಆದೇಶಿಸಿದ್ದಾರೆ. ಸ್ಥಳೀಯ ಅಧಿಕಾರಿಗಳು ಸಕಾಲಿಕ ಪರಿಹಾರ ಪ್ರಯತ್ನಗಳಿಗಾಗಿ ಸರ್ಕಾರದ ನೆರವು ಪಡೆಯಲು ಸೂಚಿಸಿದ್ದಾರೆ.

ಪೀಡಿತ ಪ್ರದೇಶಗಳಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಾಗಿ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (NDRF) ನಿಯೋಜನೆ ಮಾಡಲಾಗಿದೆ. ತೀವ್ರ ಹಾನಿಗೊಳಗಾದ ಪ್ರದೇಶಗಳಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ಕೈಗೊಳ್ಳಲು NDRF ಅನ್ನು ನಿಯೋಜಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!