AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಡಿ ಸಂಘರ್ಷವನ್ನು ಅಸ್ಸಾಂ ಸಿಎಂ ಪ್ರತಿಷ್ಠೆಯ ವಿಷಯವನ್ನಾಗಿ ಪರಿಗಣಿಸಿದ್ದಾರೆ: ಪ್ರಧಾನಿಗೆ ಪತ್ರ ಬರೆದ ಕಾಂಗ್ರೆಸ್​ ಸಂಸದ

ಮಿಜೋರಾಂನ ಕೊಲಾಸಿಬ್​ ಜಿಲ್ಲೆಯ ವೈರಂಗ್ಟೆ ಪಟ್ಟಣದಲ್ಲಿ ಜುಲೈ 26ರಂದು ಹಿಂಸಾಚಾರ ನಡೆದ ಬೆನ್ನಲ್ಲೇ ಗಡಿಭಾಗದಲ್ಲಿ ಉದ್ವಿಗ್ನತೆ ಮುಂದುವರಿದಿದೆ. ಇದುವರೆಗೆ ಏನಿಲ್ಲವೆಂದರೂ ಅಸ್ಸಾಂನ ಆರು ಪೊಲೀಸರು ಸೇರಿ ಏಳು ಮಂದಿ ಮೃತಪಟ್ಟಿದ್ದಾರೆ.

ಗಡಿ ಸಂಘರ್ಷವನ್ನು ಅಸ್ಸಾಂ ಸಿಎಂ ಪ್ರತಿಷ್ಠೆಯ ವಿಷಯವನ್ನಾಗಿ ಪರಿಗಣಿಸಿದ್ದಾರೆ: ಪ್ರಧಾನಿಗೆ ಪತ್ರ ಬರೆದ ಕಾಂಗ್ರೆಸ್​ ಸಂಸದ
ವಿನ್ಸೆಂಟ್ ಪಾಲಾ ಮತ್ತು ಹಿಮಂತ ಬಿಸ್ವಾ ಶರ್ಮಾ
TV9 Web
| Updated By: Lakshmi Hegde|

Updated on: Aug 02, 2021 | 12:52 PM

Share

ಅಸ್ಸಾಂ ಮತ್ತು ಮಿಜೋರಾಂ ಗಡಿ ಸಂಘರ್ಷದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮೇಘಾಲಯ ಕಾಂಗ್ರೆಸ್ ಸಂಸದ ವಿನ್ಸೆಂಟ್​ ಪಾಲಾ, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಂಘರ್ಷವನ್ನು ಅಸ್ಸಾಂ ಮುಖ್ಯಮಂತ್ರಿ ಪ್ರತಿಷ್ಠೆಯ ವಿಷಯವನ್ನಾಗಿ ಪರಿಗಣಿಸಿದ್ದಾರೆ ಎಂದು ಹೇಳಿದ್ದಾರೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಪಾಲಾ ಪತ್ರವನ್ನೂ ಬರೆದು, ಕೂಡಲೇ ಸಮಸ್ಯೆ ಬಗೆಹರಿಸಿ ಎಂದಿದ್ದಾರೆ.

ಪಿಎಂ ನರೇಂದ್ರ ಮೋದಿಗೆ ಪತ್ರ ಬರೆದಿರುವ ಪಾಲಾ, ಕೆಲವು ಕಾರಣಗಳಿಂದಾಗಿ ಇಂಥ ಸಂಘರ್ಷಗಳು ಹೆಚ್ಚಾಗುವುದರ ಜತೆಗೆ, ಅತ್ಯಂತ ಆಕ್ರಮಣಕಾರಿ ತಿರುವು ಪಡೆದುಕೊಂಡು, ಹಿಂಸಾತ್ಮಕ ರೂಪ ತಳೆಯುತ್ತಿವೆ. ಆ ಕಾರಣಗಳು ಯಾವವು ಎಂದು ಬಿಜೆಪಿ ಸರ್ಕಾರಕ್ಕೂ ಗೊತ್ತಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಈ ಬಗ್ಗೆ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಕಾಂಗ್ರೆಸ್​ ಸಂಸದ ವಿನ್ಸೆಂಟ್​ ಪಾಲಾ, ಸಂಘರ್ಷವನ್ನು ಅಸ್ಸಾಂ ಮುಖ್ಯಮಂತ್ರಿ ಪ್ರತಿಷ್ಠೆಯ ವಿಷಯವನ್ನಾಗಿ ಪರಿಗಣಿಸಿದ್ದಾರೆ. ಶರ್ಮಾ ಅವರು ತುಂಬ ಎತ್ತರಕ್ಕೆ ಇದ್ದಾರೆ. ಹಾಗಂತ ಅವರ ತಲೆ ಭುಜದ ಮೇಲೆಯೇ ಇರಬೇಕು. ತುಂಬ ಆಕ್ರಮಣಕಾರಿ ಮನೋಭಾವ ತೋರಿಸಬಾರದು ಎಂದೂ ಹೇಳಿದ್ದಾರೆ.

ಮಿಜೋರಾಂನ ಕೊಲಾಸಿಬ್​ ಜಿಲ್ಲೆಯ ವೈರಂಗ್ಟೆ ಪಟ್ಟಣದಲ್ಲಿ ಜುಲೈ 26ರಂದು ಹಿಂಸಾಚಾರ ನಡೆದ ಬೆನ್ನಲ್ಲೇ ಗಡಿಭಾಗದಲ್ಲಿ ಉದ್ವಿಗ್ನತೆ ಮುಂದುವರಿದಿದೆ. ಇದುವರೆಗೆ ಏನಿಲ್ಲವೆಂದರೂ ಅಸ್ಸಾಂನ ಆರು ಪೊಲೀಸರು ಸೇರಿ ಏಳು ಮಂದಿ ಮೃತಪಟ್ಟಿದ್ದಾರೆ. ಇಲ್ಲಿ ಕೇಂದ್ರ ಸರ್ಕಾರ ಸಿಆರ್​ಪಿಎಫ್​ ಯೋಧರನ್ನು ನಿಯೋಜಿಸಿದೆ. ಈ ಸಂಘರ್ಷದ ಬಗ್ಗೆ ಕಾಂಗ್ರೆಸ್​ ತೀವ್ರ ಅಸಮಾಧಾನಗೊಂಡಿದೆ. ಮೊದಲೇ ಈಶಾನ್ಯ ರಾಜ್ಯಗಳಿಗೆ ಕಷ್ಟದ ಪರಿಸ್ಥಿತಿ ಇದೆ. ಇಲ್ಲಿ ಶಾಂತಿ, ಸಾಮರಸ್ಯ ಕಾಪಾಡಿಕೊಳ್ಳುವುದು ನಮ್ಮೆಲ್ಲರ ಮೊದಲ ಆದ್ಯತೆ ಆಗಿರಬೇಕು. ಕೂಡಲೇ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ, ಕ್ರಮ ಕೈಗೊಳ್ಳಬೇಕು ಎಂದೂ ಸಂಸದ ಪಾಲಾ ಪ್ರಧಾನಿ ಮೋದಿಯವರಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: CBSE 10th Results 2021: ಸಿಬಿಎಸ್​ಇ 10ನೇ ತರಗತಿ ಫಲಿತಾಂಶ ಇಂದು ಪ್ರಕಟವಾಗುವುದಿಲ್ಲ; ಹೊಸ ದಿನಾಂಕ, ಸಮಯದ ಮಾಹಿತಿ ಇಲ್ಲಿದೆ

ಹಾಸನ: ಅನುಮಾನಾಸ್ಪದ ರೀತಿಯಲ್ಲಿ 3 ನವಿಲುಗಳು ಸಾವು; ವಿಷ ಹಾಕಿ ಕೊಂದಿರುವ ಶಂಕೆ

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ