AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಪ್ರಸ್ತುತ ಸ್ಥಿತಿ ಪಾಕಿಸ್ತಾನ, ಸಿರಿಯಾದಂತಾಗಿದೆ ಎಂದ ಮೆಹಬೂಬಾ ಮುಫ್ತಿ

ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ(Mehbooba Mufti) ಅವರು ಭಾರತದ ಪ್ರಸ್ತುತ ಸ್ಥಿತಿಯನ್ನು ಕೂಡ ಪಾಕಿಸ್ತಾನ ಹಾಗೂ ಸಿರಿಯಾಗೆ ಹೋಲಿಸಿದ್ದಾರೆ. ಮಣಿಪುರ, ನುಹ್ ಹಿಂಸಾಚಾರದ ಬಗ್ಗೆ ಮಾತನಾಡಿರುವ ಮುಫ್ತಿ, ಹಿಂದೆಂದೂ ಭಾರತದಲ್ಲಿ ಇಂತಹ ಪರಿಸ್ಥಿತಿಯನ್ನು ನೋಡಿರಲಿಲ್ಲ, ಪಾಕಿಸ್ತಾನ, ಸಿರಿಯಾ ಮಾದರಿಯಲ್ಲಿ ಜನರು ಬಂದೂಕುಗಳನ್ನು ಹಿಡಿದು ಒಬ್ಬರನ್ನೊಬ್ಬರು ಕೊಲ್ಲುತ್ತಿದ್ದಾರೆ ಎಂದರು.

ಭಾರತದ ಪ್ರಸ್ತುತ ಸ್ಥಿತಿ ಪಾಕಿಸ್ತಾನ, ಸಿರಿಯಾದಂತಾಗಿದೆ ಎಂದ ಮೆಹಬೂಬಾ ಮುಫ್ತಿ
ಮೆಹಬೂಬಾ ಮುಫ್ತಿ
ನಯನಾ ರಾಜೀವ್
|

Updated on: Aug 18, 2023 | 10:51 AM

Share

ಶ್ರೀನಗರ, ಆಗಸ್ಟ್​ 18: ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ(Mehbooba Mufti) ಅವರು ಭಾರತದ ಪ್ರಸ್ತುತ ಸ್ಥಿತಿಯನ್ನು ಕೂಡ ಪಾಕಿಸ್ತಾನ ಹಾಗೂ ಸಿರಿಯಾಗೆ ಹೋಲಿಸಿದ್ದಾರೆ. ಮಣಿಪುರ, ನುಹ್ ಹಿಂಸಾಚಾರದ ಬಗ್ಗೆ ಮಾತನಾಡಿರುವ ಮುಫ್ತಿ, ಹಿಂದೆಂದೂ ಭಾರತದಲ್ಲಿ ಇಂತಹ ಪರಿಸ್ಥಿತಿಯನ್ನು ನೋಡಿರಲಿಲ್ಲ, ಪಾಕಿಸ್ತಾನ, ಸಿರಿಯಾ ಮಾದರಿಯಲ್ಲಿ ಜನರು ಬಂದೂಕುಗಳನ್ನು ಹಿಡಿದು ಒಬ್ಬರನ್ನೊಬ್ಬರು ಕೊಲ್ಲುತ್ತಿದ್ದಾರೆ ಎಂದರು.

ಸಾಮಾನ್ಯ ಜನರು ಒಬ್ಬರನ್ನೊಬ್ಬರು ಕೊಲ್ಲುವ ಮಟ್ಟಕ್ಕೆ ಇಳಿಯುತ್ತಾರೆ ಎಂದಾದರೆ ಅವರ ಮನಸ್ಥಿತಿ ಎಷ್ಟು ಹಾಳಾಗಿದೆ ಎಂಬುದನ್ನು ಅರ್ಥಮಾಡಿಕೊಳ್ಳಿ, ಸಿರಿಯಾದಲ್ಲಿ ಅಲ್ಲಾ ಹು ಅಕ್ಬರ್ ಎಂದು ಕೂಗುತ್ತಾ ಜನರನ್ನು ಕೊಲ್ಲುತ್ತಾರೆ, ಭಾರತದಲ್ಲಿ ಜೈ ಶ್ರೀರಾಮ್ ಎಂದು ಹೇಳುತ್ತಾ ಕೊಲ್ಲುತ್ತಿದ್ದಾರೆ ಇಬ್ಬರಿಗೂ ಏನು ವ್ಯತ್ಯಾಸವಿದೆ ಮುಫ್ತಿ ಪ್ರಶ್ನಿಸಿದರು. ಈಗ ಭಾರತವು ಪಾಕಿಸ್ತಾನ, ಸಿರಿಯಾದಂತೆ ಕಾಣಿಸುತ್ತಿದೆ.

ಭಾರತ ಮೈತ್ರಿಕೂಟದ ರಚನೆಯ ಕುರಿತು ಪ್ರತಿಕ್ರಿಯಿಸಿದ ಮುಫ್ತಿ, ಇದು ಗೋಡ್ಸೆಯ ಭಾರತ ಮತ್ತು ಗಾಂಧಿ, ನೆಹರು ಮತ್ತು ಸರ್ದಾರ್ ಪಟೇಲ್ ಅವರ ಕಲ್ಪನೆಯ ಭಾರತದ ನಡುವಿನ ಯುದ್ಧವಾಗಲಿದೆ. ಬಿಜೆಪಿಯು ಗೋಡ್ಸೆಯ ಭಾರತವನ್ನು ರಚಿಸಲು ಬಯಸುತ್ತದೆ. ಪ್ರತಿಪಕ್ಷ ನಾಯಕರನ್ನು ಗುರಿಯಾಗಿಸಲು ಬಿಜೆಪಿ ಸರ್ಕಾರಿ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಮತ್ತಷ್ಟು ಓದಿ: ಕೊನೆಗೂ ದಿ ಕಾಶ್ಮೀರ್ ಫೈಲ್ಸ್ ಚಿತ್ರ ಬಗ್ಗೆ ಒಬ್ಬರು ಮಾತಾಡಿದ್ದಾರೆ: ಲ್ಯಾಪಿಡ್ ಹೇಳಿಕೆಗೆ ಸಹಮತ ಸೂಚಿಸಿದ ಮೆಹಬೂಬಾ ಮುಫ್ತಿ

ಪ್ರಧಾನಿ ಮೋದಿ ವಿರುದ್ಧ ಮುಫ್ತಿ ವಾಗ್ದಾಳಿ ನಡೆಸಿ, ಅವರು ಹಿಂದಿನದನ್ನು ಮಾತ್ರ ಮಾತನಾಡುತ್ತಿದ್ದಾರೆ, ಜನರಿಗೆ ಅವರು ಭರವಸೆ ನೀಡಿದ್ದನ್ನು ತೆಗೆದುಕೊಳ್ಳುತ್ತಿಲ್ಲ, ಅವರು ದೇಶದ ಭವಿಷ್ಯದ ಬಗ್ಗೆ ಮೌನವಾಗಿದ್ದಾರೆ ಎಂದು ಹೇಳಿದರು.

ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!