AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಪ್ರಸ್ತುತ ಸ್ಥಿತಿ ಪಾಕಿಸ್ತಾನ, ಸಿರಿಯಾದಂತಾಗಿದೆ ಎಂದ ಮೆಹಬೂಬಾ ಮುಫ್ತಿ

ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ(Mehbooba Mufti) ಅವರು ಭಾರತದ ಪ್ರಸ್ತುತ ಸ್ಥಿತಿಯನ್ನು ಕೂಡ ಪಾಕಿಸ್ತಾನ ಹಾಗೂ ಸಿರಿಯಾಗೆ ಹೋಲಿಸಿದ್ದಾರೆ. ಮಣಿಪುರ, ನುಹ್ ಹಿಂಸಾಚಾರದ ಬಗ್ಗೆ ಮಾತನಾಡಿರುವ ಮುಫ್ತಿ, ಹಿಂದೆಂದೂ ಭಾರತದಲ್ಲಿ ಇಂತಹ ಪರಿಸ್ಥಿತಿಯನ್ನು ನೋಡಿರಲಿಲ್ಲ, ಪಾಕಿಸ್ತಾನ, ಸಿರಿಯಾ ಮಾದರಿಯಲ್ಲಿ ಜನರು ಬಂದೂಕುಗಳನ್ನು ಹಿಡಿದು ಒಬ್ಬರನ್ನೊಬ್ಬರು ಕೊಲ್ಲುತ್ತಿದ್ದಾರೆ ಎಂದರು.

ಭಾರತದ ಪ್ರಸ್ತುತ ಸ್ಥಿತಿ ಪಾಕಿಸ್ತಾನ, ಸಿರಿಯಾದಂತಾಗಿದೆ ಎಂದ ಮೆಹಬೂಬಾ ಮುಫ್ತಿ
ಮೆಹಬೂಬಾ ಮುಫ್ತಿ
ನಯನಾ ರಾಜೀವ್
|

Updated on: Aug 18, 2023 | 10:51 AM

Share

ಶ್ರೀನಗರ, ಆಗಸ್ಟ್​ 18: ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ(Mehbooba Mufti) ಅವರು ಭಾರತದ ಪ್ರಸ್ತುತ ಸ್ಥಿತಿಯನ್ನು ಕೂಡ ಪಾಕಿಸ್ತಾನ ಹಾಗೂ ಸಿರಿಯಾಗೆ ಹೋಲಿಸಿದ್ದಾರೆ. ಮಣಿಪುರ, ನುಹ್ ಹಿಂಸಾಚಾರದ ಬಗ್ಗೆ ಮಾತನಾಡಿರುವ ಮುಫ್ತಿ, ಹಿಂದೆಂದೂ ಭಾರತದಲ್ಲಿ ಇಂತಹ ಪರಿಸ್ಥಿತಿಯನ್ನು ನೋಡಿರಲಿಲ್ಲ, ಪಾಕಿಸ್ತಾನ, ಸಿರಿಯಾ ಮಾದರಿಯಲ್ಲಿ ಜನರು ಬಂದೂಕುಗಳನ್ನು ಹಿಡಿದು ಒಬ್ಬರನ್ನೊಬ್ಬರು ಕೊಲ್ಲುತ್ತಿದ್ದಾರೆ ಎಂದರು.

ಸಾಮಾನ್ಯ ಜನರು ಒಬ್ಬರನ್ನೊಬ್ಬರು ಕೊಲ್ಲುವ ಮಟ್ಟಕ್ಕೆ ಇಳಿಯುತ್ತಾರೆ ಎಂದಾದರೆ ಅವರ ಮನಸ್ಥಿತಿ ಎಷ್ಟು ಹಾಳಾಗಿದೆ ಎಂಬುದನ್ನು ಅರ್ಥಮಾಡಿಕೊಳ್ಳಿ, ಸಿರಿಯಾದಲ್ಲಿ ಅಲ್ಲಾ ಹು ಅಕ್ಬರ್ ಎಂದು ಕೂಗುತ್ತಾ ಜನರನ್ನು ಕೊಲ್ಲುತ್ತಾರೆ, ಭಾರತದಲ್ಲಿ ಜೈ ಶ್ರೀರಾಮ್ ಎಂದು ಹೇಳುತ್ತಾ ಕೊಲ್ಲುತ್ತಿದ್ದಾರೆ ಇಬ್ಬರಿಗೂ ಏನು ವ್ಯತ್ಯಾಸವಿದೆ ಮುಫ್ತಿ ಪ್ರಶ್ನಿಸಿದರು. ಈಗ ಭಾರತವು ಪಾಕಿಸ್ತಾನ, ಸಿರಿಯಾದಂತೆ ಕಾಣಿಸುತ್ತಿದೆ.

ಭಾರತ ಮೈತ್ರಿಕೂಟದ ರಚನೆಯ ಕುರಿತು ಪ್ರತಿಕ್ರಿಯಿಸಿದ ಮುಫ್ತಿ, ಇದು ಗೋಡ್ಸೆಯ ಭಾರತ ಮತ್ತು ಗಾಂಧಿ, ನೆಹರು ಮತ್ತು ಸರ್ದಾರ್ ಪಟೇಲ್ ಅವರ ಕಲ್ಪನೆಯ ಭಾರತದ ನಡುವಿನ ಯುದ್ಧವಾಗಲಿದೆ. ಬಿಜೆಪಿಯು ಗೋಡ್ಸೆಯ ಭಾರತವನ್ನು ರಚಿಸಲು ಬಯಸುತ್ತದೆ. ಪ್ರತಿಪಕ್ಷ ನಾಯಕರನ್ನು ಗುರಿಯಾಗಿಸಲು ಬಿಜೆಪಿ ಸರ್ಕಾರಿ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಮತ್ತಷ್ಟು ಓದಿ: ಕೊನೆಗೂ ದಿ ಕಾಶ್ಮೀರ್ ಫೈಲ್ಸ್ ಚಿತ್ರ ಬಗ್ಗೆ ಒಬ್ಬರು ಮಾತಾಡಿದ್ದಾರೆ: ಲ್ಯಾಪಿಡ್ ಹೇಳಿಕೆಗೆ ಸಹಮತ ಸೂಚಿಸಿದ ಮೆಹಬೂಬಾ ಮುಫ್ತಿ

ಪ್ರಧಾನಿ ಮೋದಿ ವಿರುದ್ಧ ಮುಫ್ತಿ ವಾಗ್ದಾಳಿ ನಡೆಸಿ, ಅವರು ಹಿಂದಿನದನ್ನು ಮಾತ್ರ ಮಾತನಾಡುತ್ತಿದ್ದಾರೆ, ಜನರಿಗೆ ಅವರು ಭರವಸೆ ನೀಡಿದ್ದನ್ನು ತೆಗೆದುಕೊಳ್ಳುತ್ತಿಲ್ಲ, ಅವರು ದೇಶದ ಭವಿಷ್ಯದ ಬಗ್ಗೆ ಮೌನವಾಗಿದ್ದಾರೆ ಎಂದು ಹೇಳಿದರು.

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್