AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಪ್ರಸ್ತುತ ಸ್ಥಿತಿ ಪಾಕಿಸ್ತಾನ, ಸಿರಿಯಾದಂತಾಗಿದೆ ಎಂದ ಮೆಹಬೂಬಾ ಮುಫ್ತಿ

ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ(Mehbooba Mufti) ಅವರು ಭಾರತದ ಪ್ರಸ್ತುತ ಸ್ಥಿತಿಯನ್ನು ಕೂಡ ಪಾಕಿಸ್ತಾನ ಹಾಗೂ ಸಿರಿಯಾಗೆ ಹೋಲಿಸಿದ್ದಾರೆ. ಮಣಿಪುರ, ನುಹ್ ಹಿಂಸಾಚಾರದ ಬಗ್ಗೆ ಮಾತನಾಡಿರುವ ಮುಫ್ತಿ, ಹಿಂದೆಂದೂ ಭಾರತದಲ್ಲಿ ಇಂತಹ ಪರಿಸ್ಥಿತಿಯನ್ನು ನೋಡಿರಲಿಲ್ಲ, ಪಾಕಿಸ್ತಾನ, ಸಿರಿಯಾ ಮಾದರಿಯಲ್ಲಿ ಜನರು ಬಂದೂಕುಗಳನ್ನು ಹಿಡಿದು ಒಬ್ಬರನ್ನೊಬ್ಬರು ಕೊಲ್ಲುತ್ತಿದ್ದಾರೆ ಎಂದರು.

ಭಾರತದ ಪ್ರಸ್ತುತ ಸ್ಥಿತಿ ಪಾಕಿಸ್ತಾನ, ಸಿರಿಯಾದಂತಾಗಿದೆ ಎಂದ ಮೆಹಬೂಬಾ ಮುಫ್ತಿ
ಮೆಹಬೂಬಾ ಮುಫ್ತಿ
ನಯನಾ ರಾಜೀವ್
|

Updated on: Aug 18, 2023 | 10:51 AM

Share

ಶ್ರೀನಗರ, ಆಗಸ್ಟ್​ 18: ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ(Mehbooba Mufti) ಅವರು ಭಾರತದ ಪ್ರಸ್ತುತ ಸ್ಥಿತಿಯನ್ನು ಕೂಡ ಪಾಕಿಸ್ತಾನ ಹಾಗೂ ಸಿರಿಯಾಗೆ ಹೋಲಿಸಿದ್ದಾರೆ. ಮಣಿಪುರ, ನುಹ್ ಹಿಂಸಾಚಾರದ ಬಗ್ಗೆ ಮಾತನಾಡಿರುವ ಮುಫ್ತಿ, ಹಿಂದೆಂದೂ ಭಾರತದಲ್ಲಿ ಇಂತಹ ಪರಿಸ್ಥಿತಿಯನ್ನು ನೋಡಿರಲಿಲ್ಲ, ಪಾಕಿಸ್ತಾನ, ಸಿರಿಯಾ ಮಾದರಿಯಲ್ಲಿ ಜನರು ಬಂದೂಕುಗಳನ್ನು ಹಿಡಿದು ಒಬ್ಬರನ್ನೊಬ್ಬರು ಕೊಲ್ಲುತ್ತಿದ್ದಾರೆ ಎಂದರು.

ಸಾಮಾನ್ಯ ಜನರು ಒಬ್ಬರನ್ನೊಬ್ಬರು ಕೊಲ್ಲುವ ಮಟ್ಟಕ್ಕೆ ಇಳಿಯುತ್ತಾರೆ ಎಂದಾದರೆ ಅವರ ಮನಸ್ಥಿತಿ ಎಷ್ಟು ಹಾಳಾಗಿದೆ ಎಂಬುದನ್ನು ಅರ್ಥಮಾಡಿಕೊಳ್ಳಿ, ಸಿರಿಯಾದಲ್ಲಿ ಅಲ್ಲಾ ಹು ಅಕ್ಬರ್ ಎಂದು ಕೂಗುತ್ತಾ ಜನರನ್ನು ಕೊಲ್ಲುತ್ತಾರೆ, ಭಾರತದಲ್ಲಿ ಜೈ ಶ್ರೀರಾಮ್ ಎಂದು ಹೇಳುತ್ತಾ ಕೊಲ್ಲುತ್ತಿದ್ದಾರೆ ಇಬ್ಬರಿಗೂ ಏನು ವ್ಯತ್ಯಾಸವಿದೆ ಮುಫ್ತಿ ಪ್ರಶ್ನಿಸಿದರು. ಈಗ ಭಾರತವು ಪಾಕಿಸ್ತಾನ, ಸಿರಿಯಾದಂತೆ ಕಾಣಿಸುತ್ತಿದೆ.

ಭಾರತ ಮೈತ್ರಿಕೂಟದ ರಚನೆಯ ಕುರಿತು ಪ್ರತಿಕ್ರಿಯಿಸಿದ ಮುಫ್ತಿ, ಇದು ಗೋಡ್ಸೆಯ ಭಾರತ ಮತ್ತು ಗಾಂಧಿ, ನೆಹರು ಮತ್ತು ಸರ್ದಾರ್ ಪಟೇಲ್ ಅವರ ಕಲ್ಪನೆಯ ಭಾರತದ ನಡುವಿನ ಯುದ್ಧವಾಗಲಿದೆ. ಬಿಜೆಪಿಯು ಗೋಡ್ಸೆಯ ಭಾರತವನ್ನು ರಚಿಸಲು ಬಯಸುತ್ತದೆ. ಪ್ರತಿಪಕ್ಷ ನಾಯಕರನ್ನು ಗುರಿಯಾಗಿಸಲು ಬಿಜೆಪಿ ಸರ್ಕಾರಿ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಮತ್ತಷ್ಟು ಓದಿ: ಕೊನೆಗೂ ದಿ ಕಾಶ್ಮೀರ್ ಫೈಲ್ಸ್ ಚಿತ್ರ ಬಗ್ಗೆ ಒಬ್ಬರು ಮಾತಾಡಿದ್ದಾರೆ: ಲ್ಯಾಪಿಡ್ ಹೇಳಿಕೆಗೆ ಸಹಮತ ಸೂಚಿಸಿದ ಮೆಹಬೂಬಾ ಮುಫ್ತಿ

ಪ್ರಧಾನಿ ಮೋದಿ ವಿರುದ್ಧ ಮುಫ್ತಿ ವಾಗ್ದಾಳಿ ನಡೆಸಿ, ಅವರು ಹಿಂದಿನದನ್ನು ಮಾತ್ರ ಮಾತನಾಡುತ್ತಿದ್ದಾರೆ, ಜನರಿಗೆ ಅವರು ಭರವಸೆ ನೀಡಿದ್ದನ್ನು ತೆಗೆದುಕೊಳ್ಳುತ್ತಿಲ್ಲ, ಅವರು ದೇಶದ ಭವಿಷ್ಯದ ಬಗ್ಗೆ ಮೌನವಾಗಿದ್ದಾರೆ ಎಂದು ಹೇಳಿದರು.

Follow Us
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ