AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mehul Choksi: ರಕ್ಷಣೆಗಾಗಿ ಮೆಹುಲ್ ಚೋಕ್ಸಿ ಆಂಟಿಗುವಾ ಅಧಿಕಾರಿಗಳಿಗೆ ಲಂಚ ನೀಡಿರುವುದು ಬಯಲು

ಆಂಟಿಗುವಾದ ಹಿರಿಯ ಪೊಲೀಸ್ ಅಧಿಕಾರಿ ಅಡೋನಿಸ್ ಹೆನ್ರಿ ಸೇರಿದಂತೆ ಸರ್ಕಾರಿ ಅಧಿಕಾರಿಗಳಿಗೆ ಲಂಚ ನೀಡುವ ಮೂಲಕ ನ್ಯಾಯಾಲಯದ ಪ್ರಕ್ರಿಯೆಯನ್ನು ಕಾನೂನುಬಾಹಿರವಾಗಿ ವಿಸ್ತರಿಸಲು ಚೋಕ್ಸಿ ಕುತಂತ್ರ ಮಾಡುತ್ತಿದ್ದಾರೆ ಎನ್ನಲಾಗಿದೆ.

Mehul Choksi: ರಕ್ಷಣೆಗಾಗಿ ಮೆಹುಲ್ ಚೋಕ್ಸಿ ಆಂಟಿಗುವಾ ಅಧಿಕಾರಿಗಳಿಗೆ ಲಂಚ ನೀಡಿರುವುದು ಬಯಲು
ಮೆಹುಲ್ ಚೋಕ್ಸಿ
TV9 Web
| Updated By: ಸುಷ್ಮಾ ಚಕ್ರೆ|

Updated on: Jan 13, 2023 | 11:20 AM

Share

ನವದೆಹಲಿ: ಭಾರತದ 40 ಬ್ಯಾಂಕ್​ಗಳಿಗೆ 6,748 ಕೋಟಿ ರೂ.ಗಳನ್ನು ವಂಚನೆ ಮಾಡಿದ ಆರೋಪ ಹೊತ್ತಿರುವ ಆರ್ಥಿಕ ಅಪರಾಧಿ ಮೆಹುಲ್ ಚೋಕ್ಸಿ (Mehul Choksi) ಭಾರತದಿಂದ ಪರಾರಿಯಾಗಿದ್ದಾರೆ. ಭಾರತದ ಮೋಸ್ಟ್ ವಾಂಟೆಡ್ ದೇಶಭ್ರಷ್ಟ ಉದ್ಯಮಿಗಳಲ್ಲಿ ಒಬ್ಬರಾದ ಮೆಹುಲ್ ಚೋಕ್ಸಿ ಆಂಟಿಗುವಾದಲ್ಲಿ ಹಲವಾರು ಅಧಿಕಾರಿಗಳಿಗೆ ಲಂಚ ನೀಡುವ ಮೂಲಕ ರಕ್ಷಣೆಯನ್ನು ಪಡೆದಿದ್ದಾರೆ ಎಂದು ಹೆಸರಾಂತ ಆರ್ಥಿಕ ಅಪರಾಧಗಳ ತನಿಖಾಧಿಕಾರಿ ಕೆನ್ನೆತ್ ರಿಜಾಕ್ ತನಿಖೆ ನಡೆಸಿದ್ದಾರೆ.

ಆಂಟಿಗುವಾದಲ್ಲಿ ಮೆಹುಲ್ ಚೋಕ್ಸಿಯ ಲಂಚ ಮತ್ತು ಪಿತೂರಿಯ ವಿರುದ್ಧ ಬ್ಲಾಗರ್‌ನಲ್ಲಿನ ಸುದ್ದಿ ಲೇಖನದಲ್ಲಿ ರಿಜಾಕ್ ಈ ಆಘಾತಕಾರಿ ಸಂಗತಿಯನ್ನು ಬಹಿರಂಗಪಡಿಸಿದ್ದಾರೆ. ಆಂಟಿಗುವಾದಲ್ಲಿ ಮೆಹುಲ್ ಚೋಕ್ಸಿಯನ್ನು ಅಧಿಕಾರಿಗಳು ಭಾರತಕ್ಕೆ ಹಸ್ತಾಂತರಿಸಲು ಇಂಟರ್‌ಪೋಲ್‌ನ ಪ್ರಯತ್ನಗಳಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎನ್ನಲಾಗಿದೆ.

ಪಂಜಾಬ್ ನ್ಯಾಷನಲ್ ಬ್ಯಾಂಕ್ ಮತ್ತು ಇತರೆ ಬ್ಯಾಂಕ್​ಗಳಿಗೆ ಮೆಹುಲ್ ಚೋಕ್ಸಿ 6,748 ಕೋಟಿ ರೂ. ಹಣವನ್ನು ವಂಚಿಸಿದ್ದರು. ಆಂಟಿಗುವಾದ ಹಿರಿಯ ಪೊಲೀಸ್ ಅಧಿಕಾರಿ ಅಡೋನಿಸ್ ಹೆನ್ರಿ ಸೇರಿದಂತೆ ಸರ್ಕಾರಿ ಅಧಿಕಾರಿಗಳಿಗೆ ಲಂಚ ನೀಡುವ ಮೂಲಕ ಆಂಟಿಗುವಾದಲ್ಲಿ ನ್ಯಾಯಾಲಯದ ಪ್ರಕ್ರಿಯೆಯನ್ನು ಕಾನೂನುಬಾಹಿರವಾಗಿ ವಿಸ್ತರಿಸಲು ಚೋಕ್ಸಿ ಕುತಂತ್ರ ಮಾಡುತ್ತಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Mehul Choksi: ಭಾರತಕ್ಕೆ ವಾಪಾಸ್ ಹೋಗಬೇಕೆಂದುಕೊಂಡಿದ್ದೆ, ಇನ್ನೆಂದೂ ಅಲ್ಲಿಗೆ ಕಾಲಿಡುವುದಿಲ್ಲ; ಮೆಹುಲ್ ಚೋಕ್ಸಿ

ಚೋಕ್ಸಿ ಮತ್ತು ಇನ್ಸ್‌ಪೆಕ್ಟರ್ ಹೆನ್ರಿ ಅವರು ಚೋಕ್ಸಿ ಒಡೆತನದ ಜಾಲಿ ಹಾರ್ಬರ್ ರೆಸ್ಟೋರೆಂಟ್ ಅಲ್ ಪೋರ್ಟೊದಲ್ಲಿ ದಿನಕ್ಕೆ ಕನಿಷ್ಠ 3 ಬಾರಿ ಭೇಟಿಯಾಗುತ್ತಿದ್ದಾರೆ ಎಂದು ಹಲವು ಸಾಕ್ಷಿಗಳು ಸಿಕ್ಕಿವೆ. ಈ ಬಗ್ಗೆ ರಿಜಾಕ್ ತಮ್ಮ ಆರ್ಥಿಕ ಅಪರಾಧ ಬ್ಲಾಗ್‌ನಲ್ಲಿ ಬರೆದಿದ್ದಾರೆ. ವಜ್ರದ ವ್ಯಾಪಾರಿ ಚೋಕ್ಸಿ ಆಂಟಿಗುವಾದಿಂದ ಕ್ಯೂಬಾಕ್ಕೆ ಓಡಿಹೋಗಲು ಹೇಗೆ ವಿಫಲರಾದರು ಮತ್ತು ನಂತರ ಅಪಹರಣದ ಸನ್ನಿವೇಶವನ್ನು ಹೇಗೆ ರೂಪಿಸಿದರು ಎಂಬುದನ್ನು ಕೂಡ ಅವರು ತಮ್ಮ ಬ್ಲಾಗ್​ನಲ್ಲಿ ವಿವರವಾಗಿ ಬರೆದಿದ್ದಾರೆ.

ಆಂಟಿಗುವಾ ನ್ಯಾಯಾಲಯವು ಚೋಕ್ಸಿಯನ್ನು ಅವರ ಸ್ಥಳೀಯ ಭಾರತಕ್ಕೆ ಹಸ್ತಾಂತರಿಸುವಂತೆ ಆದೇಶಿಸಿದರೂ, ಅಲ್ಲಿ ಅವರು ಲಕ್ಷಾಂತರ ಡಾಲರ್‌ಗಳಿಗೆ ಸಮಾನವಾದ ಹಣವನ್ನು ಕದ್ದಿದ್ದಾರೆಂದು ಹೇಳಲಾಗಿದ್ದರೂ, ಆಂಟಿಗುವಾದ ಭ್ರಷ್ಟ ಸರ್ಕಾರಿ ಅಧಿಕಾರಿಗಳು, ನ್ಯಾಯಾಧೀಶರು ಮತ್ತು ಕಾನೂನು ಜಾರಿ ಏಜೆಂಟ್‌ಗಳು ಅವರಿಂದ ಲಂಚ ಪಡೆದು ವಿಚಾರಣೆಯನ್ನು ವಿಳಂಬಗೊಳಿಸುತ್ತಿದ್ದಾರೆ.

ಇದನ್ನೂ ಓದಿ: ವಿಜಯ್ ಮಲ್ಯ, ನೀರವ್ ಮೋದಿ, ಚೋಕ್ಸಿಯಿಂದ ಬ್ಯಾಂಕ್​ಗಳಿಗೆ 18,000 ಕೋಟಿ ರೂ. ಹಿಂತಿರುಗಿಸಲಾಗಿದೆ; ಸುಪ್ರೀಂ ಕೋರ್ಟ್​​ಗೆ ಸರ್ಕಾರ ಮಾಹಿತಿ

2018ರಲ್ಲಿ ದೇಶದಿಂದ ಪರಾರಿಯಾಗುವ ಮೊದಲು ಭಾರತದಲ್ಲಿ ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣದಲ್ಲಿ ಭಾಗಿಯಾಗಿದ್ದ ಮೆಹುಲ್ ಚೋಕ್ಸಿ ವಿರುದ್ಧ ಇಂಟರ್‌ಪೋಲ್ ರೆಡ್ ನೋಟಿಸ್ ಜಾರಿ ಮಾಡಿದೆ. ರೆಡ್ ನೋಟಿಸ್ ಎನ್ನುವುದು ಒಬ್ಬ ವ್ಯಕ್ತಿಯನ್ನು ಹಸ್ತಾಂತರಿಸಲು ಬಾಕಿಯಿರುವ ವ್ಯಕ್ತಿಯನ್ನು ಪತ್ತೆಹಚ್ಚಲು ಮತ್ತು ತಾತ್ಕಾಲಿಕವಾಗಿ ಬಂಧಿಸುವ ವಿನಂತಿಯಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ