Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಹುಲ್ ಚೋಕ್ಸಿ ಹಸ್ತಾಂತರ ಕೋರಿ ಬೆಲ್ಜಿಯಂಗೆ ಭಾರತ ಮನವಿ

ಬಂಧನಕ್ಕೊಳಗಾಗಿರುವ ಭಾರತೀಯ ಉದ್ಯಮಿ ಮೆಹುಲ್ ಚೋಕ್ಸಿಯ ಹಸ್ತಾಂತರಕ್ಕೆ ಭಾರತ ಬೆಲ್ಜಿಯಂಗೆ ಮನವಿ ಮಾಡಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ಅಧಿಕಾರಿಗಳು ಬೆಲ್ಜಿಯಂಗೆ ಪ್ರಯಾಣಿಸುವ ಸಾಧ್ಯತೆಯಿದೆ. ಮೆಹುಲ್ ಚೋಕ್ಸಿ ಎದುರಿಸಲಿರುವ ಮುಂದಿನ ಕಾನೂನು ಪ್ರಕ್ರಿಯೆಗಳಿಗೆ ಬೆಲ್ಜಿಯಂ ಅಧಿಕಾರಿಗಳು ಸಿದ್ಧತೆ ನಡೆಸುತ್ತಿದ್ದಾರೆ. ಹಾಗೇ, ಅವರಿಗೆ ಕಾನೂನು ಸಲಹೆಯನ್ನು ಸಹ ನೀಡಲಾಗುವುದು. ಮೆಹುಲ್ ಚೋಕ್ಸಿ ಪ್ರಸ್ತುತ ಬೆಲ್ಜಿಯಂ ಜೈಲಿನಲ್ಲಿದ್ದಾರೆ. ಅವರ ಜಾಮೀನು ಅರ್ಜಿಯ ವಿಚಾರಣೆ ಒಂದು ವಾರದ ನಂತರ ನಡೆಯಲಿದೆ.

ಮೆಹುಲ್ ಚೋಕ್ಸಿ ಹಸ್ತಾಂತರ ಕೋರಿ ಬೆಲ್ಜಿಯಂಗೆ ಭಾರತ ಮನವಿ
Mehul Choksi Image
Follow us
ಸುಷ್ಮಾ ಚಕ್ರೆ
|

Updated on: Apr 14, 2025 | 6:35 PM

ನವದೆಹಲಿ, ಏಪ್ರಿಲ್ 14: ಏಪ್ರಿಲ್ 12ರಂದು ಬಂಧಿಸಲ್ಪಟ್ಟ, ಭಾರತದಿಂದ ಪರಾರಿಯಾಗಿರುವ ಉದ್ಯಮಿ ಮೆಹುಲ್ ಚೋಕ್ಸಿಯನ್ನು (Mehul Choksi) ಹಸ್ತಾಂತರಿಸುವಂತೆ ಭಾರತ ವಿನಂತಿಸಿದೆ ಎಂದು ಬೆಲ್ಜಿಯಂ ಫೆಡರಲ್ ಪಬ್ಲಿಕ್ ಸರ್ವಿಸ್ ಆಫ್ ಜಸ್ಟೀಸ್ ಇಂದು ತಿಳಿಸಿದೆ. ಮೆಹುಲ್ ಚೋಕ್ಸಿ ವಿರುದ್ಧದ ಹಸ್ತಾಂತರ ಪ್ರಕ್ರಿಯೆಗಳು ಸಾಧ್ಯವಾದಷ್ಟು ಬೇಗ ಪ್ರಾರಂಭವಾಗುವಂತೆ ನೋಡಿಕೊಳ್ಳಲು ಭಾರತೀಯ ಅಧಿಕಾರಿಗಳ ತಂಡವು ಬೆಲ್ಜಿಯಂಗೆ ಭೇಟಿ ನೀಡಲಿದೆ ಎನ್ನಲಾಗಿದೆ. ಮೆಹುಲ್ ಚೋಕ್ಸಿ ಎದುರಿಸಲಿರುವ ಮುಂದಿನ ಕಾನೂನು ಪ್ರಕ್ರಿಯೆಗಳಿಗೆ ಬೆಲ್ಜಿಯಂ ಅಧಿಕಾರಿಗಳು ಸಿದ್ಧತೆ ನಡೆಸುತ್ತಿದ್ದಾರೆ. ಅಗತ್ಯವಿದ್ದಲ್ಲಿ ಭಾರತೀಯ ಅಧಿಕಾರಿಗಳಿಗೆ ಕಾನೂನು ಸಲಹೆಯನ್ನು ಸಹ ನೀಡಲಾಗುವುದು ಎಂದು ಬೆಲ್ಜಿಯಂ ಹೇಳಿದೆ.

“ಮೆಹುಲ್ ಚೋಕ್ಸಿಯನ್ನು ಶನಿವಾರ (ಏಪ್ರಿಲ್ 12) ಬಂಧಿಸಲಾಯಿತು. ಮುಂದಿನ ನ್ಯಾಯಾಂಗ ಪ್ರಕ್ರಿಯೆಗಳ ನಿರೀಕ್ಷೆಯಲ್ಲಿ ಅವರನ್ನು ಬಂಧಿಸಲಾಗುತ್ತಿದೆ. ಅವರ ಕಾನೂನು ಸಲಹೆಗಾರರು ಚೋಕ್ಸಿ ಪರವಾಗಿ ಕಾನೂನು ಪ್ರಕ್ರಿಯೆಗಳನ್ನು ನಡೆಸಿದ್ದಾರೆ. ಭಾರತೀಯ ಅಧಿಕಾರಿಗಳು ಚೋಕ್ಸಿಯನ್ನು ಹಸ್ತಾಂತರಿಸಲು ವಿನಂತಿಸಿದ್ದಾರೆ” ಎಂದು ಬೆಲ್ಜಿಯಂ ಫೆಡರಲ್ ಪಬ್ಲಿಕ್ ಸರ್ವಿಸ್ ಆಫ್ ಜಸ್ಟೀಸ್ ದೃಢಪಡಿಸಿದೆ.

ಪಂಜಾಬ್ ನ್ಯಾಷನಲ್ ಬ್ಯಾಂಕ್ (PNB) ಸಾಲ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಾರಿಯಾಗಿದ್ದ ವಜ್ರ ವ್ಯಾಪಾರಿ ಮೆಹುಲ್ ಚೋಕ್ಸಿಯನ್ನು ಬೆಲ್ಜಿಯಂ ಪೊಲೀಸರು ಬಂಧಿಸಿದ್ದಾರೆ ಎಂದು ಚೋಕ್ಸಿ ಅವರ ಪರ ವಕೀಲರು ದೃಢಪಡಿಸಿದರು. ಮೆಹುಲ್ ಚೋಕ್ಸಿ ವೈದ್ಯಕೀಯ ಚಿಕಿತ್ಸೆಗಾಗಿ ಸ್ವಿಜರ್ಲೆಂಡ್‌ಗೆ ಪಲಾಯನ ಮಾಡಲು ಯೋಜಿಸುತ್ತಿದ್ದಾಗಲೇ ಮೆಹುಲ್ ಚೋಕ್ಸಿಯ ಬಂಧನ ನಡೆದಿದೆ.

ಇದನ್ನೂ ಓದಿ
Image
ಅಂಬೇಡ್ಕರ್ ಆಶಯಕ್ಕೆ ವಿರುದ್ಧವಾಗಿ ಕಾಂಗ್ರೆಸ್ ವಕ್ಫ್​ ಕಾನೂನು ರೂಪಿಸಿತ್ತು
Image
135 ದಿನಗಳ ಬಳಿಕ ಸಮಾಧಿಯಿಂದ ಮಹಿಳೆಯ ಶವ ಹೊರಕ್ಕೆ
Image
ಹೆಣ್ಣುಮಗುವಿಗೆ ಜನ್ಮಕೊಟ್ಟಿದ್ದಕ್ಕೆ ಪತ್ನಿಗೆ ಚಿತ್ರಹಿಂಸೆ
Image
ಅಪ್ರಾಪ್ತ ಬಾಲಕಿ ಜತೆ ಪ್ರೀತಿ, ಯುವಕನನ್ನು ವಿವಸ್ತ್ರಗೊಳಿಸಿ ಥಳಿಸಿದ ಜನ

ಇದನ್ನೂ ಓದಿ: PNB Scam: ಮೆಹುಲ್ ಚೋಕ್ಸಿ, ನೀರವ್ ಮೋದಿ 13,000 ಕೋಟಿ ರೂ ಪಂಗನಾಮ ಹಾಕಿ ದೇಶ ಬಿಟ್ಟುಹೋದ ಕಥೆ

ಮೂಲಗಳ ಪ್ರಕಾರ, ಮೆಹುಲ್ ಚೋಕ್ಸಿ ಪ್ರಕರಣದ ಮುಂದಿನ ವಿಚಾರಣೆಗಾಗಿ ಭಾರತೀಯ ಅಧಿಕಾರಿಗಳು ಬೆಲ್ಜಿಯಂಗೆ ಪ್ರಯಾಣಿಸಲು ಸಜ್ಜಾಗಿದ್ದಾರೆ. ಅವರು ಜೈಲಿನಲ್ಲಿಯೇ ಇರುವಂತೆ ನೋಡಿಕೊಳ್ಳಲು ಮತ್ತು ಹಸ್ತಾಂತರ ಪ್ರಕ್ರಿಯೆಗಳು ಪ್ರಾರಂಭವಾಗುವಂತೆ ಅವರು ಈಗಾಗಲೇ ಕಾನೂನು ಕಾರ್ಯತಂತ್ರವನ್ನು ಸಿದ್ಧಪಡಿಸುತ್ತಿದ್ದಾರೆ.

ಸಾಕ್ಷ್ಯಾಧಾರಗಳ ಆಧಾರದ ಮೇಲೆ, ಪರಾರಿಯಾಗಿರುವ ಉದ್ಯಮಿ ಮೆಹುಲ್ ಚೋಕ್ಸಿ ವಿರುದ್ಧ ಹಸ್ತಾಂತರ ಪ್ರಕ್ರಿಯೆಗಾಗಿ ಬೆಲ್ಜಿಯಂ ನ್ಯಾಯಾಲಯವು ತಮ್ಮ ವಿನಂತಿಯನ್ನು ಸ್ವೀಕರಿಸುತ್ತದೆ ಎಂದು ಭಾರತೀಯ ಅಧಿಕಾರಿಗಳು ಆಶಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಚೋಕ್ಸಿ ಅವರ ವಿರುದ್ಧ ಮೆಹುಲ್ ಚೋಕ್ಸಿಯ ಸೋದರಳಿಯ ನೀರವ್ ಮೋದಿ, ಅವರ ಪತ್ನಿ ಅಮಿ ಮೋದಿ ಮತ್ತು ಅವರ ಸಹೋದರ ನೀಶಾಲ್ ಮೋದಿ ಅವರೊಂದಿಗೆ ಸರ್ಕಾರಿ ಸ್ವಾಮ್ಯದ ಪಂಜಾಬ್ ನ್ಯಾಷನಲ್ ಬ್ಯಾಂಕಿನಲ್ಲಿ 12,636 ಕೋಟಿ ರೂ. ವಂಚನೆ ಆರೋಪ ಹೊರಿಸಲಾಗಿದೆ. 2018ರಲ್ಲಿ ಮೆಹುಲ್ ಚೋಕ್ಸಿ ಭಾರತದಿಂದ ಪಲಾಯನ ಮಾಡಿ ಆಂಟಿಗುವಾದಲ್ಲಿ ಪೌರತ್ವ ಪಡೆದರು.

ಇದನ್ನೂ ಓದಿ: ಸ್ವಿಜರ್ಲೆಂಡ್​ಗೆ ಪರಾರಿಯಾಗುವ ಮೆಹುಲ್ ಚೋಕ್ಸಿಯ ಪ್ಲಾನ್ ಭಾರತದಿಂದ ವಿಫಲಗೊಂಡಿದ್ದು ಹೇಗೆ?

ಪೌರತ್ವ-ಹೂಡಿಕೆ ಕಾರ್ಯಕ್ರಮದ ಮೂಲಕ ಆಂಟಿಗುವಾದಲ್ಲಿ ನೆಲೆಸಿದ್ದ ಚೋಕ್ಸಿ ಕಳೆದ ವರ್ಷ ನವೆಂಬರ್ 15ರಂದು ಬೆಲ್ಜಿಯಂನಿಂದ ಎಫ್ ರೆಸಿಡೆನ್ಸಿ ಕಾರ್ಡ್ ಪಡೆಯುವಲ್ಲಿ ಯಶಸ್ವಿಯಾದರು. ಅವರು ಬೆಲ್ಜಿಯಂ ಪ್ರಜೆಯಾಗಿರುವ ತಮ್ಮ ಪತ್ನಿ ಪ್ರೀತಿ ಚೋಕ್ಸಿಗೆ ಸೇರಿದ ದಾಖಲೆಗಳನ್ನು ಬಳಸಿದರು.

ಮೆಹುಲ್ ಚೋಕ್ಸಿ ಪ್ರಸ್ತುತ ಬೆಲ್ಜಿಯಂ ಜೈಲಿನಲ್ಲಿದ್ದಾರೆ. ಅವರ ಜಾಮೀನು ಅರ್ಜಿಯ ವಿಚಾರಣೆ ಒಂದು ವಾರದ ನಂತರ ನಡೆಯಲಿದೆ. ಈ ಅವಧಿಗೆ ಅವರು ಜೈಲಿನಲ್ಲಿರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ
ಹಿಂದಿ ಬದಲು ಇಂಗ್ಲಿಷ್​​ನಲ್ಲೇ ಭಯೋತ್ಪಾದನೆ ವಿರುದ್ಧ ಮೋದಿ ಸಂದೇಶ ರವಾನೆ
ಹಿಂದಿ ಬದಲು ಇಂಗ್ಲಿಷ್​​ನಲ್ಲೇ ಭಯೋತ್ಪಾದನೆ ವಿರುದ್ಧ ಮೋದಿ ಸಂದೇಶ ರವಾನೆ