ಮೇಕೆದಾಟು ಯೋಜನೆ: ಜುಲೈ 12 ರಂದು ಸರ್ವಪಕ್ಷ ಸಭೆಗೆ ಕರೆ ನೀಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್

Mekedatu dam:ರೈತರ ಹಿತಾಸಕ್ತಿಗಳನ್ನು ಕಾಪಾಡುವ ಸಲುವಾಗಿ ತಮಿಳುನಾಡಿನ ಎಲ್ಲ ವರ್ಗಗಳ ಸರ್ವಾನುಮತದ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವ ಉದ್ದೇಶದಿಂದ ಈ ಸಭೆ ನಡೆಯಲಿದೆ ಎಂದು ಸರ್ಕಾರರ ಮೂಲಗಳು ಹೇಳಿವೆ.

ಮೇಕೆದಾಟು ಯೋಜನೆ: ಜುಲೈ 12 ರಂದು ಸರ್ವಪಕ್ಷ ಸಭೆಗೆ ಕರೆ ನೀಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್
ತಮಿಳುನಾಡು ಸಿ.ಎಂ ಎಂ.ಕೆ.ಸ್ಟಾಲಿನ್
Follow us
| Updated By: ರಶ್ಮಿ ಕಲ್ಲಕಟ್ಟ

Updated on: Jul 09, 2021 | 3:23 PM

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರು ಜುಲೈ 12 ರಂದು ವಿಧಾನಸಭೆಯಲ್ಲಿ ಪ್ರಾತಿನಿಧ್ಯ ಹೊಂದಿರುವ ಎಲ್ಲ ಪಕ್ಷಗಳ ಸಮಾಲೋಚನಾ ಸಭೆ ನಡೆಸಿ ಮೇಕೆದಾಟು ಅಣೆಕಟ್ಟು ಕುರಿತು ಚರ್ಚಿಸಲಿದ್ದಾರೆ. ರೈತರ ಹಿತಾಸಕ್ತಿಗಳನ್ನು ಕಾಪಾಡುವ ಸಲುವಾಗಿ ತಮಿಳುನಾಡಿನ ಎಲ್ಲ ವರ್ಗಗಳ ಸರ್ವಾನುಮತದ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವ ಉದ್ದೇಶದಿಂದ ಈ ಸಭೆ ನಡೆಯಲಿದೆ ಎಂದು ಸರ್ಕಾರರ ಮೂಲಗಳು ಹೇಳಿವೆ. ಈ ವಿಷಯದ ಬಗ್ಗೆ ಸರ್ಕಾರ ಎಲ್ಲಾ ಕಾನೂನು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ.ಕೆಲವು ದಿನಗಳ ಹಿಂದೆ ಸ್ಟಾಲಿನ,ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದು, ಪ್ರಸ್ತಾವಿತ ಅಣೆಕಟ್ಟು ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧವಾಗಿದೆ ಮತ್ತು ತಮಿಳುನಾಡು ರೈತರ ಹಿತಾಸಕ್ತಿಗೆ ಸಹ ಪರಿಣಾಮ ಬೀರುತ್ತದೆ ಎಂದು ಹೇಳಿದ್ದರು.

ಆದ್ದರಿಂದ, ಅಣೆಕಟ್ಟು ನಿರ್ಮಾಣಕ್ಕೆ ತಮಿಳುನಾಡು ಎಂದಿಗೂ ಅವಕಾಶ ನೀಡುವುದಿಲ್ಲ ಮತ್ತು ಇದನ್ನು ಯಡಿಯೂರಪ್ಪ ಅವರಿಗೆ ಸ್ಟಾಲಿನ್ ಬರೆದ ಪತ್ರದಲ್ಲಿ ಕರ್ನಾಟಕಕ್ಕೆ ತಿಳಿಸಲಾಗಿದೆ ಎಂದು ಸರ್ಕಾರದ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

ಮೇಕೆದಾಟು ಅಣೆಕಟ್ಟಿಗೆ ವಿರೋಧ ಬೇಡ ಎಂದು ತಮಿಳುನಾಡು ಸರ್ಕಾರಕ್ಕೆ ಪ್ರತಿಕ್ರಿಯೆಯಾಗಿ ಯಡಿಯೂರಪ್ಪ ಪತ್ರ ಬರೆದಿದ್ದರು.

ಇತ್ತೀಚೆಗೆ ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿದ್ದು ಜಲಸಂಪನ್ಮೂಲ ಸಚಿವ ದುರೈಮುರುಗನ್ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿದರು.

ತಮಿಳುನಾಡಿನ ರೈತರ ಹಿತಾಸಕ್ತಿಗಳನ್ನು ಕಾಪಾಡಬೇಕು ಮತ್ತು ಸೂಕ್ತ ಕ್ರಮಗಳನ್ನು ಕೇಂದ್ರ ಸರ್ಕಾರ ತೆಗೆದುಕೊಳ್ಳಬೇಕು ಎಂದು ಉಭಯ ನಾಯಕರು ಮೋದಿ ಮತ್ತು ಶೇಖಾವತ್ ಅವರನ್ನು ಒತ್ತಾಯಿಸಿದ್ದರು. ಈ ಹಿನ್ನೆಲೆಯಲ್ಲಿ ಸಭೆ ಕರೆಯಲಾಗಿದ್ದು, ವಿಧಾನಸಭೆಯ ಎಲ್ಲಾ ಶಾಸಕಾಂಗ ಪಕ್ಷಗಳಿಗೆ ಸ್ಟಾಲಿನ್ ಆಹ್ವಾನ ನೀಡಿದ್ದಾರೆ ಎಂದು ಸರ್ಕಾರ ತಿಳಿಸಿದೆ.

ಇದನ್ನೂ ಓದಿ:  Mekedatu Project: ಮೇಕೆದಾಟು ವಿವಾದ: ತಮಿಳುನಾಡು ಸಿಎಂ ಸ್ಟಾಲಿನ್​ಗೆ ಅನಗತ್ಯ ಪತ್ರ ಬರೆದು ವಿವಾದಕ್ಕೆ‌ ತುಪ್ಪ ಸುರಿದ ಸಿಎಂ ಯಡಿಯೂರಪ್ಪ

(Mekedatu dam row Tamil Nadu CM M K Stalin has convened a consultative meeting on July 12 )

ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ